Breaking News

ಗೃಹ ಇಲಾಖೆಯಲ್ಲಿ ಅಮೂಲಾಗ್ರ ಸುಧಾರಣೆ ತರುತ್ತೇನೆ: ಅರಗ ಜ್ಞಾನೇಂದ್ರ

Spread the love

ತುಮಕೂರು: ಗೃಹ ಇಲಾಖೆಯಲ್ಲಿ ಅಮೂಲಾಗ್ರ ಬದಲಾವಣೆ ತರಲು ಪ್ರಯತ್ನ ಪಡುತ್ತೇನೆ ಎಂದು ನೂತನ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ.

ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೃಹ ಇಲಾಖೆ ಜವಾಬ್ದಾರಿ ನನಗೆ ಹೊಸದು. ನಾಳೆ ಇಲಾಖೆಯ ಅಧಿಕಾರಿಗಳ ಸಭೆ ನಡೆಸುತ್ತೆನೆ. ಆ ಮೂಲಕ ಅಧಿಕೃತವಾಗಿ ಚಾರ್ಜ್ ತೆಗೆದುಕೊಳ್ಳುತ್ತೇನೆ ಎಂದರು.

ಪೊಲೀಸ್ ಇಲಾಖೆ ಸಶಕ್ತವಾಗಿ ಕೆಲಸ ಮಾಡುವ ಹಾಗೆ ಶಕ್ತಿ ತುಂಬಬೇಕೆಂದು ಯೋಚನೆ ಮಾಡಿದ್ದು, ಅಧಿಕಾರಿಗಳ ಜೊತೆ ಚರ್ಚೆ ಮಾಡಿ ಇಲಾಖೆಯಲ್ಲಿ ಇಷ್ಟು ವರ್ಷ ತರಲಾಗದೇ ಇದ್ದ ಏನಾದರೊಂದು ಬದಲಾವಣೆ ತರಲು ಪ್ರಯತ್ನ ಮಾಡುತ್ತೇನೆ. ಜೊತೆಗೆ ಔರಾದ್ಕರ್ ವರದಿ ಅಧ್ಯಯನ ಮಾಡಿ ಪೊಲೀಸರಿಗೆ ಅನುಕೂಲವಾಗುವ ರೀತಿಯಲ್ಲಿ ಕ್ರಮ ತೆಗೆದುಕೊಳ್ಳಲು ಪ್ರಯತ್ನ ಪಡುತ್ತೆನೆ ಎಂದು ಭರವಸೆ ನೀಡಿದರು.


Spread the love

About Laxminews 24x7

Check Also

ಕುರುಬಗಟ್ಟಿ ಗ್ರಾಮದಲ್ಲಿ ನೂತನವಾಗಿ ಸ್ಥಾಪಿಸಲಾದ ‘ಹಾಲು ಉತ್ಪಾದಕರ ಸಹಕಾರಿ ಸಂಘ’ದ ಉದ್ಘಾಟನಾ

Spread the love ಕುರುಬಗಟ್ಟಿ ಗ್ರಾಮದಲ್ಲಿ ನೂತನವಾಗಿ ಸ್ಥಾಪಿಸಲಾದ ‘ಹಾಲು ಉತ್ಪಾದಕರ ಸಹಕಾರಿ ಸಂಘ’ದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು, ಉದ್ಘಾಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ