Breaking News

ಗೋಲಿಹಳ್ಳಿಯ ಶ್ರೀ ಶಿವ ಮಂದಿರದಲ್ಲಿ ನೂತನ ಶಿವ ಮುಖವಾಡ ಮತ್ತು ನಂದಿ ಮೂರ್ತಿ ಪ್ರತಿಷ್ಠಾಪನೆ

Spread the love

ಗೋಲಿಹಳ್ಳಿಯ ಶ್ರೀ ಶಿವ ಮಂದಿರದಲ್ಲಿ ನೂತನ ಶಿವ ಮುಖವಾಡ ಮತ್ತು ನಂದಿ ಮೂರ್ತಿ ಪ್ರತಿಷ್ಠಾಪನೆ
ಖಾನಾಪೂರ ತಾಲೂಕಿನ ಗೋಲಿಹಳ್ಳಿ ಗ್ರಾಮದಲ್ಲಿ ನೆಲೆಯೂರಿರುವ ಶ್ರೀ ಶಿವ ಮಂದಿರದಲ್ಲಿ ನೂತನ ಶಿವ ಮುಖವಾಡ ಹಾಗೂ ನಂದಿ ಮೂರ್ತಿಯ ಪ್ರತಿಷ್ಠಾಪನೆ ಶ್ರದ್ಧಾ-ಭಕ್ತಿಯಿಂದ ನೆರವೇರಿಸಲಾಯಿತು.
ಈ ಧಾರ್ಮಿಕ ಕಾರ್ಯಕ್ರಮವನ್ನು ಮಾಜಿ ಶಾಸಕ ಹಾಗೂ ಬಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಅರವಿಂದ್ ಪಾಟೀಲ ಅವರ ನೇತೃತ್ವದಲ್ಲಿ ಭಕ್ತಿಭಾವದಿಂದ ಜರುಗಿತು.
ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ಪೂಜೆ-ಪುನಸ್ಕಾರಗಳು ಕೈಗೊಂಡು, ಶ್ರದ್ಧಾ ಗೌರವದಿಂದ ಶಿವಮೂರ್ತಿಯ ಪ್ರತಿಷ್ಠಾಪನೆಯು ನೇರವೇರಿತು.
ಈ ಸಂದರ್ಭ ಅರವಿಂದ್ ಪಾಟೀಲರನ್ನು ದೇವಸ್ಥಾನದ ಪಂಚ ಕಮಿಟಿಯ ಪದಾಧಿಕಾರಿಗಳು ಹಾಗೂ ಗ್ರಾಮದ ಹಿರಿಯರು ಆತ್ಮೀಯವಾಗಿ ಸತ್ಕರಿಸಿದರು. ಕಾರ್ಯಕ್ರಮದಲ್ಲಿ ಗ್ರಾಮಸ್ಥರು, ಭಕ್ತಾದಿಗಳು ಬಹುಸಂಖ್ಯೆಯಲ್ಲಿ ಭಾಗವಹಿಸಿದ್ದರು.

Spread the love

About Laxminews 24x7

Check Also

ಇವತ್ತು ನೀರು ಕಡಿಮೆಯಾಗುತ್ತೆ:ಉಪವಿಭಾಗಧಿಕಾರಿ ಸುಭಾಷ ಸಂಪಗಾವಿ ನದಿತೀರದ ಜನರಲ್ಲಿ ಅಭಯ

Spread the love ಇವತ್ತು ನೀರು ಕಡಿಮೆಯಾಗುತ್ತೆ:ಉಪವಿಭಾಗಧಿಕಾರಿ ಸುಭಾಷ ಸಂಪಗಾವಿ ನದಿತೀರದ ಜನರಲ್ಲಿ ಅಭಯ ಚಿಕ್ಕೋಡಿ: ಕೃಷ್ಣಾ ಸೇರಿದಂತೆ ದೂಧಗಂಗಾ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ