Breaking News

ಬೆಳಗಾವಿ ಜಿಲ್ಲೆಯಾದ್ಯಾಂತ ಆದ ಭಾರಿ ಮಳೆಯಿಂದಾಗಿ ರೈತರ ಬೆಳೆ ಸಂಪೂರ್ಣವಾಗಿ ನಾಶ

Spread the love

ಬೆಳಗಾವಿ ಜಿಲ್ಲೆಯಾದ್ಯಾಂತ ಆದ ಭಾರಿ ಮಳೆಯಿಂದಾಗಿ ರೈತರ ಬೆಳೆ ಸಂಪೂರ್ಣವಾಗಿ ನಾಶವಾಗಿದ್ದು, ಬೆಳೆಹಾನಿಗೆ ಎಕರೆಗೆ ₹25,000 ಪರಿಹಾರ ನೀಡುವಂತೆ ಭಾರತೀಯ ಕಿಸಾನ್ ಸಂಘ, ಕರ್ನಾಟಕ ಪ್ರದೇಶ ಬೆಳಗಾವಿ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಇಂದು ಬೆಳಗಾವಿ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಆಗಮಿಸಿದ ಭಾರತೀಯ ಕಿಸಾನ್ ಸಂಘ, ಕರ್ನಾಟಕ ಪ್ರದೇಶ ಬೆಳಗಾವಿ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಸಂಘದ ಜಿಲ್ಲಾ ಅಧ್ಯಕ್ಷ ಶಿವಾನಂದ ಸರದಾರ ಮಾತನಾಡುತ್ತಾ,ಪ್ರತೀ ವರ್ಷವಂತೆಯೇ ಈ ವರ್ಷವೂ ಜಿಲ್ಲೆಯಾದ್ಯಂತ ಅತೀವೃಷ್ಟಿ ಉಂಟಾಗಿ, ಉದ್ದು, ಹೇಸರು, ಗೋವಿನ ಜೋಳ, ಸೋಯಾಬೀನ್ ಮತ್ತು ಹಣ್ಣಿನಂತಹ ಪ್ರಮುಖ ಬೆಳೆಗಳು ಹಾನಿಗೀಡಾಗಿವೆ. ಇದರಿಂದಾಗಿ ರೈತರು ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದ್ದಾರೆ. “ಅತೀವೃಷ್ಟಿಯಿಂದ ರೈತರ ಪಾಲಿಗೆ ಭಾರೀ ನಷ್ಟ ಉಂಟಾಗಿದೆ.
ಇದಕ್ಕೆ ಪಸಲ್ ಬೀಮಾ ಯೋಜನೆಯಲ್ಲಿನ ಲೋಪದೋಷಗಳು ಪ್ರಮುಖ ಕಾರಣವಾಗಿದ್ದು, ಜಿಲ್ಲೆಯ ರೈತರು ಸರಿಯಾದ ವಿಮಾ ಪರಿಹಾರದಿಂದ ವಂಚಿತರಾಗುತ್ತಿದ್ದಾರೆ. ಸರ್ಕಾರ ರೈತರ ಸಂಕಷ್ಟವನ್ನು ಗುರುತಿಸಿ ತಕ್ಷಣ ಪ್ರತಿ ಎಕರೆಗೆ ₹25,000 ಪರಿಹಾರ ಘೋಷಿಸಬೇಕು” ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಭಾರತೀಯ ಕಿಸಾನ್ ಸಂಘದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿದ್ಧರು.

Spread the love

About Laxminews 24x7

Check Also

ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾದರು

Spread the loveಸನ್ಮಾನ್ಯ ಸತೀಶ್ ಜಾರಕಿಹೊಳಿ ಲೋಕೋಪಯೋಗಿ ಹಾಗೂ ಬೆಳಗಾವಿ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ