Breaking News

ಸ್ವಾತಂತ್ರ್ಯೋತ್ಸವ ಆಚರಣೆ ಸಂದರ್ಭದಲ್ಲಿ ರಾಷ್ಟ್ರಧ್ವಜಕ್ಕೆ ಆಗುವ ಅಪಮಾನ ತಡೆಗಟ್ಟಿ

Spread the love

ಆಗಸ್ಟ್ 15ರಂದು ಸ್ವಾತಂತ್ರ್ಯೋತ್ಸವ ಆಚರಣೆ ಸಂದರ್ಭದಲ್ಲಿ ರಾಷ್ಟ್ರಧ್ವಜಕ್ಕೆ ಆಗುವ ಅಪಮಾನ ತಡೆಗಟ್ಟಿ ರಾಷ್ಟ್ರದ ಗೌರವವನ್ನು ರಕ್ಷಿಸುವಂತೆ ಹಿಂದೂ ಜನಜಾಗೃತಿ ಸಮಿತಿಯ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಮಂಗಳವಾರ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಹಿಂದೂ ಜನಜಾಗೃತಿ ಸಮಿತಿಯ ಪದಾಧಿಕಾರಿಗಳು ಆಗಸ್ಟ್ 15ರಂದು ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ ಆಗುವ ಘಟನೆಗಳು ನಡೆಯುತ್ತವೆ.

ಹೀಗಾಗಿ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು. ಯಾವುದೇ ರೀತಿ ರಾಷ್ಟ್ರ ಧ್ವಜಕ್ಕೆ ಅಪಮಾನ ಆಗದಂತೆ ನೋಡಿಕೊಳ್ಳಬೇಕು ಎಂದು ಮನವಿ ಸಲ್ಲಿಸಿದರು. ಜಿಲ್ಲಾಧಿಕಾರಿಗಳ ಪರವಾಗಿ ಶಿರಸ್ತೇದಾರ ಮನವಿ ಸ್ವೀಕರಿಸಿದರು.

ಈ ವೇಳೆ ಋಷಿಕೇಶ ಗುರ್ಜರ, ಸುಧೀರ ಹೇರೆಕರ, ಸವಿತಾ ಗಣೇಶ, ಅರ್ಚನಾ ಲಿಮಯೆ, ಮಾರುತಿ ಸುತಾರ, ಸದಾನಂದ ಮಾಸೇಕರ, ಗೋಪಿನಾಥ ಸೇರಿದಂತೆ ಉಪಸ್ಥಿತರಿದ್ದರು.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ