Breaking News

ಮಾರಕಾಸ್ತ್ರಗಳಿಂದ ವ್ಯಕ್ತಿಯನ್ನು ಕೊಚ್ಚಿ ಕೊಲೆ ಮಾಡಿದ 16 ಜನರು

Spread the love

ಬೆಳಗಾವಿ: ಹಳೆ ದ್ವೇಶದ ಹಿನ್ನೆಲೆಯಲ್ಲಿ ಕಳೆದ ರಾತ್ರಿ 16 ಜನರು ಕುಡಿಕೊಂಡು ವ್ಯಕ್ತಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿಮ ಹಣ್ಣಿಕೇರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ..ಸಂಗನಗೌಡ ಬಸನಗೌಡ ಪಾಟೀಲ್ (50) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.

ಕೊಲೆ ಮಾಡಿದ ಆರೋಪಿಗಳ ನಡುವೆ ಕಳೆದ ಕೆಲ ವರ್ಷಗಳಿಂದ ಕಲಹ ನಡೆಯುತ್ತಿತ್ತು. ಶ್ರೀ ಸಿದ್ದೇಶ್ವರ ಜಾತ್ರೆಯಲ್ಲಿ ವ್ಯಕ್ತಿಯೋರ್ವ ಮದ್ಯಪಾನ ಮಾಡಿ ಡ್ಯಾನ್ಸ್ ಮಾಡುವ ವೇಳೆ ಸುಮಾರು 16 ಜನರಿಂದ ಭೀಕರವಾಗಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ.

ಬೈಲಹೊಂಗಲ ತಾಲೂಕಿನ ಸಿದ್ದೇಶ್ವರ ಜಾತ್ರೆಯ ನಡೆಯುವ ವೇಳೆ ಮದ್ಯಪಾನ ಮಾಡಿ ಡ್ಯಾನ್ಸ್‌ ಮಾಡುತ್ತ ಬರುತ್ತಿದ್ದ ಸಂಗನಗೌಡನ ಮೇಲೆ 16 ಜನರ ತಂಡ ದಾಳಿ ಮಾಡಿ ರಾಡ್ ನಿಂದ ದಾಳಿ ನಡೆಸಿ ಕೊಲೆ ಮಾಡಿದ್ದಾರೆ. ಸದ್ಯ ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ.


Spread the love

About Laxminews 24x7

Check Also

ಬೆಳಗಾವಿ:ಬಾಯ್ ಪ್ರೇಂಡ್ ಜೊತೆಗೆ ಸೇರಿ ಪತಿಯ ಭೀಕರ ಹತ್ಯೆ ಮಾಡಿಸಿದ ಪತ್ನಿ

Spread the loveಬೆಳಗಾವಿಯ ಟಿಳಕವಾಡಿ ಪೊಲೀಸರಿಂದ ರೋಚಕ ಪ್ರಕರಣ ಬಯಲು ಖಾಸಗಿ ಆಯುರ್ವೇದಿಕ್ ಕಾಲೇಜಿನ ಥೆರಪಿಸ್ಟ್ ಅವಿನಾಶ ಸೂಪ್ಪಣ್ಣವರ (40) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ