ನವದೆಹಲಿ: ನಿರ್ಭಯಾ ಅತ್ಯಾಚಾರ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಒಳಗಾಗಿರುವ ಅಪರಾಧಿಗಳ ಪೈಕಿ ಒಬ್ಬನಾಗಿರುವ ವಿನಯ್ ಶರ್ಮಾ ತಿಹಾರ್ ಜೈಲಿನಲ್ಲಿ ಹೈ ಡ್ರಾಮಾ ನಡೆಸಿದ್ದು, ಗೋಡೆಗೆ ತಲೆ ಚಚ್ಚಿಕೊಳ್ಳುವ ಮೂಲಕ ನಾಟಕವಾಡಿದ್ದಾನೆ. ಈ ಕುರಿತು ಜೈಲಿನ ಮೂಲಗಳು ಮಾಹಿತಿ ನೀಡಿದ್ದು, ಫೆಬ್ರವರಿ 16ರಂದು ಈ ಘಟನೆ ನಡೆದಿದೆ. ತಕ್ಷಣವೇ ಜೈಲು ಅಧಿಕಾರಿಗಳು ತಡೆದಿದ್ದಾರೆ. ಗೋಡೆಗೆ ಬಲವಾಗಿ ತಲೆ ಚಚ್ಚಿಕೊಂಡಿದ್ದರಿಂದ ವಿನಯ್ ಶರ್ಮಾಗೆ ಗಾಯವಾಗಿದೆ. ಚಿಕಿತ್ಸೆ ಕೊಡಿಸಲಾಗಿದೆ ಎಂದು ತಿಳಿದು ಬಂದಿದೆ. ನಿರ್ಭಯಾ ಅತ್ಯಾಚಾರಿಗಳ …
Read More »Daily Archives: ಫೆಬ್ರವರಿ 20, 2020
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಎಐಸಿಸಿ ಅಧ್ಯಕ್ಷೆ ಸೋನಿಯಾ ಅವರನ್ನು ಭೇಟಿ ಮಾಡಿ ಚರ್ಚೆ :
ಬೆಂಗಳೂರು,ಫೆ.20-ಕೆಪಿಸಿಸಿ ಅಧ್ಯಕ್ಷರ ನೇಮಕಾತಿಗೆ ಸಂಬಂಧಪಟ್ಟಂತೆ ಪ್ರಕ್ರಿಯೆಗಳನ್ನು ಆರಂಭಿಸಿರುವ ಕಾಂಗ್ರೆಸ್ ವರಿಷ್ಠರು ಹಂತ ಹಂತವಾಗಿ ರಾಜ್ಯದ ನಾಯಕರುಗಳನ್ನು ಭೇಟಿ ಮಾಡುತ್ತಿದ್ದಾರೆ. ಇಂದು ಬೆಳಗ್ಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಎಐಸಿಸಿ ಅಧ್ಯಕ್ಷೆ ಸೋನಿಯಾ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ನಿನ್ನೆ ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಸೋನಿಯಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಭಕ್ತ ಚರಣದಾಸ್ ಮತ್ತು ಮಧುಸೂದನ ಮಿಸ್ತ್ರಿ ವರದಿಯನ್ನು ಅನುಷ್ಠಾನಕ್ಕೆ ತರಬೇಕೆಂದು ಒತ್ತಡ ಹೇರಿದರು. ಆ …
Read More »ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಕೇಂದ್ರಕ್ಕೆ ಹಸ್ತಾಂತರಿಸುವುದಿಲ್ಲ: ಸಿಎಂ ಉದ್ದವ್ ಠಾಕ್ರೆ
ಮುಂಬೈ: ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಕೇಂದ್ರಕ್ಕೆ ಹಸ್ತಾಂತರಿಸುವುದಿಲ್ಲ ಎಂದು ಮಹಾರಾಷ್ಟ್ರ ಸಿಎಂ ಉದ್ದವ್ ಠಾಕ್ರೆ ಸ್ಪಷ್ಟಪಡಿಸಿದ್ದು, ಕೋರೆಗಾಂವ್ ಗಲಭೆಯ ವೇಳೆ ದಲಿತ ಸಮುದಾಯದ ಮೇಲಿನ ದೌರ್ಜನ್ಯವು “ದುರದೃಷ್ಟಕರ” ಎಂದು ಹೇಳಿದ್ದಾರೆ. ಈ ಕುರಿತು ಇಂದು ಟ್ವೀಟ್ ಮಾಡಿರುವ ಉದ್ದವ್ ಠಾಕ್ರೆ, ಎಲ್ಗರ್ ಮತ್ತು ಭೀಮಾ ಕೋರೆಗಾಂವ್ ಎರಡೂ ಪ್ರತ್ಯೇಕ ಪ್ರಕರಣಗಳಾಗಿವೆ, ದಲಿತ ಸಹೋದರರು ಭೀಮಾ ಕೋರೆಗಾಂವ್ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಇದರ ತನಿಖೆಯನ್ನು ಕೇಂದ್ರ ಸರ್ಕಾರಕ್ಕೆ ಹಸ್ತಾಂತರ ಮಾಡುವುದಿಲ್ಲ. ದಲಿತ …
Read More »ಕಾರ್ಬನ್ ಡೈಆಕ್ಸೈಡ್ನಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಬಿರುಕು
ಮೈಸೂರು, ಫೆ.20- ನಗರದ ಹೃದಯ ಭಾಗದಲ್ಲಿರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆಯಲ್ಲಿ ಕಾಣಿಸಿಕೊಂಡಿರುವ ಬಿರುಕಿನಿಂದ ಸದ್ಯಕ್ಕೆ ಯಾವುದೇ ತೊಂದರೆ ಆಗುವುದಿಲ್ಲ ಎಂದು ಇತಿಹಾಸ ತಜ್ಞ ಡಾ.ರಂಗರಾಜು ತಿಳಿಸಿದರು. ಪ್ರತಿಮೆ ಬಿರುಕು ಬಿಟ್ಟಿರುವ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ ಸೂಕ್ಷ್ಮವಾಗಿ ಪ್ರತಿಮೆಯನ್ನು ಪರೀಕ್ಷಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಮೆಯ ಕಲ್ಲಿನಲ್ಲಿನ ದೋಷದಿಂದ ಸಣ್ಣ ಪ್ರಮಾಣದ ಬಿರುಕು ಕಾಣಿಸಿಕೊಂಡಿದೆ ಎಂದರು. ಇದು ನಗರದ ಪ್ರಮುಖ ವೃತ್ತವಾಗಿರುವುದರಿಂದ ವಾಹನ ದಟ್ಟಣೆ ಹೆಚ್ಚಾಗಿರುತ್ತದೆ. ವಾಹನಗಳಿಂದ …
Read More »
Laxmi News 24×7