Breaking News

Daily Archives: ಮಾರ್ಚ್ 17, 2020

ಕೊಲ್ಲೂರು ಮೂಕಾಂಬಿಕಾ ದೇವಿಯ ರಥೋತ್ಸವಕ್ಕೆ ಕೊರೊನಾ ವೈರಸ್ ಅಡ್ಡಿ……:

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಿಯ ರಥೋತ್ಸವಕ್ಕೆ ಕೊರೊನಾ ವೈರಸ್ ಅಡ್ಡಿಯಾಗಿದೆ. ಕರ್ನಾಟಕದಲ್ಲಿ ಕೊರೊನಾ ಹೈ ಅಲರ್ಟ್ ಇರುವುದರಿಂದ ಅದ್ಧೂರಿ ರಥೋತ್ಸವ ನಡೆಸದೇ ಇರಲು ದೇವಸ್ಥಾನ ತೀರ್ಮಾನಿಸಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿರುವ ಮೂಕಾಂಬಿಕೆಯ ಕ್ಷೇತ್ರ ದಕ್ಷಿಣ ಭಾರತದ ದೇವಿ ದೇವಸ್ಥಾನಗಳಲ್ಲಿ ಬಹಳ ಪ್ರಸಿದ್ಧಿ ಕ್ಷೇತ್ರ. ಮೂಕಾಂಬಿಕೆಯ ವಾರ್ಷಿಕ ರಥೋತ್ಸವಕ್ಕೆ ಸಾವಿರಾರು ಮಂದಿ ಸ್ಥಳೀಯ, ರಾಜ್ಯದ ಬೇರೆ ಬೇರೆ ಭಾಗದ ಮತ್ತು ಹೊರ ರಾಜ್ಯದ ಭಕ್ತರು ಸೇರುತ್ತಾರೆ. ರಾಜ್ಯದಲ್ಲಿ ಕೊರೊನಾ ಎಮರ್ಜೆನ್ಸಿ …

Read More »

ಉಡುಪಿಯಲ್ಲಿ ಗರ್ಭಿಣಿಗೆ ಕೊರೊನಾ ಶಂಕೆ……………..?

ಉಡುಪಿ/ಮಂಗಳೂರು: ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಶಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇದೀಗ ಉಡುಪಿಯಲ್ಲಿ ಗರ್ಭಿಣಿಗೆ ಕೊರೊನಾ ಸೋಂಕಿನ ಲಕ್ಷಣ ಕಾಣಿಸಿಕೊಂಡಿದೆ. ಗರ್ಭಿಣಿಯನ್ನು ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಹಿಳೆ ಮೂರು ದಿನಗಳ ಹಿಂದೆ ದುಬೈನಿಂದ ಬಂದಿದ್ದರು. ಕೆಮ್ಮು, ನೆಗಡಿ ಮತ್ತು ಶೀತ ಇದ್ದ ಕಾರಣ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಿಶೇಷ ವಾರ್ಡ್ ನಲ್ಲಿ ಮಹಿಳೆಗೆ ಚಿಕಿತ್ಸೆ ನೀಡಲಾಗುತ್ತಿದೆ. ಶಿವಮೊಗ್ಗ ಲ್ಯಾಬ್‍ಗೆ ಗರ್ಭಿಣಿಯ ಗಂಟಲಿನ ದ್ರವ ರವಾನೆ ಮಾಡಲಾಗಿದೆ. …

Read More »

ವೈರಸ್‍ಗೆ ಜಾತಿ ಇಲ್ಲ. ಹಾಗಾಗಿ ಒಂದು ವಾರ ಮಂದಿರ, ಮಸೀದಿಗಳಿಗೆ ದಯವಿಟ್ಟು ಹೋಗಬೇಡಿ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಮನವಿ ಮಾಡಿಕೊಂಡಿದ್ದಾರೆ.

ಬೆಂಗಳೂರು: ವೈರಸ್‍ಗೆ ಜಾತಿ ಇಲ್ಲ. ಹಾಗಾಗಿ ಒಂದು ವಾರ ಮಂದಿರ, ಮಸೀದಿಗಳಿಗೆ ದಯವಿಟ್ಟು ಹೋಗಬೇಡಿ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಮನವಿ ಮಾಡಿಕೊಂಡಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯ ಅಧೀಕ್ಷಕರ ಜೊತೆ ವೈದ್ಯಕೀಯ ಶಿಕ್ಷಣ ಸಚಿವರು ಇಂದು ಸಭೆ ನಡೆಸಿದರು. ಬಳಿಕ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಅವರು, ನಿನ್ನೆ ಸಿಕ್ಕಿರುವ ಮಾಹಿತಿ ಪ್ರಕಾರ ವಿದೇಶದಿಂದ ಬಂದಿರುವ ಓರ್ವ ವಿದ್ಯಾರ್ಥಿನಿ ಹಾಗೂ ಅವರನ್ನು ಕರೆದುಕೊಂಡ ಬಂದ ವೈದ್ಯರೊಬ್ಬರಿಗೆ ವೈರಸ್ ಸೋಂಕು …

Read More »

ಪೊಲೀಸರ ಸೋಗಿನಲ್ಲಿ ಹಾಗೂ ಪತ್ರಕರ್ತರ ಸೋಗಿನಲ್ಲಿ ಡಕಾಯಿತಿಗೆ ಯತ್ನಿಸಿದ 10 ಮಂದಿ ಖದೀಮರು ಅಂದರ್

ಚಿಕ್ಕಬಳ್ಳಾಪುರ: ಪೊಲೀಸರು ಹಾಗೂ ಪತ್ರಕರ್ತರ ಸೋಗಿನಲ್ಲಿ ಡಕಾಯಿತಿಗೆ ಯತ್ನಿಸಿದ 10 ಮಂದಿ ಕಳ್ಳ ಖದೀಮರು ಜೈಲು ಸೇರಿದ್ದಾರೆ. ಬಂಧಿತರನ್ನು ಬೆಂಗಳೂರು ಮೂಲದ ಉಸ್ಮಾನ್ ಘನಿ, ತಮಿಳುನಾಡು ಮೂಲದ ಕಾರ್ತಿಕೇಯನ್, ಬೆಂಗಳೂರು ಮೂಲದ ಕಾರುಚಾಲಕ ಕಿರುಬಾಕರನ್, ರಘುನಂದನ್, ಚಿಂತಾಮಣಿ ಮೂಲದ ಸೈಯದ್ ಅಹಮದ್, ಕೋಲಾರದ ಸುನಿಲ್, ಬೆಂಗಳೂರಿನ ಸಲೀಂ, ನದೀಮ್ ಬಾಷಾ, ಕೋಲಾರದ ಕೆ ಸಿ ಕೃಷ್ಣ, ಹಾಗೂ ರಾಜೇಶ್ ಎಂದು ಗುರುತಿಸಲಾಗಿದೆ. ಮಾರ್ಚ್ 13ರಂದು ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ …

Read More »

ಥಂಬ್ ಹಾಕಲು ಬಂದಾಗ ಸೊಂಟ ಮುಟ್ಟಿ ಕಂಪ್ಯೂಟರ್ ಆಪರೇಟರ್‌ನಿಂದ ಕಿರುಕುಳ

ದಾವಣಗೆರೆ: ಕಂಪ್ಯೂಟರ್ ಆಪರೇಟರ್ ಅಟೆಂಡರ್ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ದಾವಣಗೆರೆ ತಾಲೂಕಿನ ಹೊನ್ನೂರು ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ. ಕಂಪ್ಯೂಟರ್ ಆಪರೇಟರ್ ವೆಂಕಟೇಶ್ ಮಹಿಳೆಗೆ ಲೈಂಗಿಕ ಕಿರುಕುಳ ಕೊಟ್ಟ ವ್ಯಕ್ತಿ. ಕಳೆದ ಫೆಬ್ರವರಿ 15 ಮತ್ತು 18 ರಂದು ನಡೆದ ಲೈಂಗಿಕ ಕಿರುಕುಳ ವಿಡಿಯೋ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವಿಡಿಯೋ ವೈರಲ್ ಆಗಿದ್ದು, ವೆಂಕಟೇಶ್ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮಹಿಳೆ ಹೊನ್ನೂರು ಗ್ರಾಮ ಪಂಚಾಯಿತಿಯಲ್ಲಿ ಅಟೆಂಡರ್ …

Read More »

ಮಾಸ್ಕ್ ಹಾಕಿಕೊಂಡು ಡಿಸಿ ಭೇಟಿ ಮಾಡಿದ ಅರ್ಜುನ್ ಇಟಗಿ

ಕೊಪ್ಪಳ: ಗಾಯಕ ಅರ್ಜುನ್ ಇಟಗಿಗೂ ಕೊರೊನಾ ಭೀತಿ ಎದುರಾಗಿದೆ. ಹೀಗಾಗಿ ಇಂದು ಅರ್ಜುನ್ ಮಾಸ್ಕ್ ಹಾಕಿಕೊಂಡು ಬಂದು ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿದ್ದಾರೆ. ಕೊಪ್ಪಳ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿರುವ ಅರ್ಜುನ್ ಇಟಗಿ, ಡಿಸಿ ಸುನೀಲ್ ಕುಮಾರ್ ಭೇಟಿ ಮಾಡಿದ್ದಾರೆ. ಕಾರ್ಯಕ್ರಮವೊಂದಕ್ಕೆ ಅನುಮತಿ ಪಡೆಯಲು ಅರ್ಜುನ್ ತನ್ನ ತಂದೆಯೊಂದಿಗೆ ಆಗಮಿಸಿದ್ದಾರೆ. ಅರ್ಜುನ್ ಜೊತೆಗೆ ತಂದೆ ಕೂಡ ಮಾಸ್ಕ್ ಹಾಕಿಕೊಂಡು ಬಂದಿದ್ದಾರೆ. ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ತಾನು ಮಾಸ್ಕ್ ಹಾಕಿಕೊಂಡು ಬಂದಿರುವ ಅರ್ಜುನ್, …

Read More »

ಜರ್ಮನಿಯಿಂದ ಬಂದ ಯುವತಿಗೆ ಜ್ವರ- ರಾಮನಗರ ಜಿಲ್ಲಾಸ್ಪತ್ರೆಗೆ ದಾಖಲು

ರಾಮನಗರ: ರೇಷ್ಮೆನಗರಿ ರಾಮನಗರ ಜಿಲ್ಲೆಯಲ್ಲಿ ಇದೀಗ ಕೊರೊನಾ ಭೀತಿ ಶುರುವಾಗಿದ್ದು, ಜರ್ಮನಿಯಿಂದ ವಾಪಸ್ ಬಂದ ಯುವತಿ ಆಸ್ಪತ್ರೆಗೆ ದಾಖಲಾಗಿರುವುದು ಸಾರ್ವಜನಿಕರ ಆತಂಕವನ್ನುಂಟು ಮಾಡಿದೆ. ಚನ್ನಪಟ್ಟಣ ನಗರದ ಯುವತಿ ಕಳೆದ ಒಂದು ವರ್ಷದಿಂದ ಉನ್ನತ ವ್ಯಾಸಂಗಕ್ಕಾಗಿ ಜರ್ಮನಿಯಲ್ಲಿದ್ದಳು. ವ್ಯಾಸಂಗ ಮುಗಿಸಿ ಕಳೆದ ಮೂರು ದಿನಗಳ ಹಿಂದೆ ಪಟ್ಟಣಕ್ಕೆ ಆಗಮಿಸಿದ್ದಳು. ಭಾನುವಾರ ಸಂಜೆ ಯುವತಿಗೆ ಜ್ವರ ಕಾಣಿಸಿಕೊಂಡಿದೆ. ಹೀಗಾಗಿ ಯುವತಿಯ ತಂದೆಯೇ ಸ್ವತಃ ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಿರಂಜನ್‍ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. …

Read More »

ಕೊರೊನಾ ತುರ್ತು ಪರಿಸ್ಥಿತಿಯನ್ನೇ ಬಂಡವಾಳ ಮಾಡ್ಕೊಂಡ್ರೆ ಜೈಲಿಗೆ ಕಳಿಸ್ತೀವಿ’

ಬೀದರ್: ಕೊರೊನಾ ತುರ್ತು ಪರಿಸ್ಥಿತಿಯನ್ನು ಉಪಯೋಗಿಸಿಕೊಂಡು ಲಾಭ ಮಾಡಲು ಹೊರಟರೆ ಮುಲಾಜಿಲ್ಲದೆ ಜೈಲಿಗೆ ಕಳುಹಿಸುವುದಾಗಿ ಜಿಲ್ಲಾಧಿಕಾರಿ ಫಾರ್ಮಸಿ ಅಂಗಡಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜಿಲ್ಲಾಧಿಕಾರಿ ಎಚ್.ಆರ್ ಮಹಾದೇವ, ವಿಶ್ವದಾದ್ಯಂತ ಕೊರೊನಾ ವೃಸ್ ಭೀತಿ ಹೆಚ್ಚಾಗುತ್ತಿದೆ. ಇದರಿಂದ ತಪ್ಪಿಸಿಕೊಳ್ಳಬೇಕು ಅಂತ ಎಲ್ಲರೂ ಮಾಸ್ಕ್ ಮೊರೆ ಹೋಗುತ್ತಿದ್ದಾರೆ. ಹೀಗಾಗಿ ಕೆಲ ಫಾರ್ಮಸಿ ಅಂಗಡಿಗಳು ಮಾಸ್ಕ್ ಗೆ ದುಪ್ಪಟ್ಟು ಹಣ ಪಡೆಯುತ್ತಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. …

Read More »

ಮೈಸೂರು ಜಿಲ್ಲೆಯಾಧ್ಯಂತ 2ವಾರಗಳ ಕಾಲ 144 ಸೆಕ್ಷನ್ ಜಾರಿ

ಮೈಸೂರು, ಮಾ.17- ನಗರದಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕೋಳಿಗಳ ಮಾರಾಟ ಸ್ಥಗಿತಗೊಳಿಸುವಂತೆ ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ತಿಳಿಸಿದ್ದಾರೆ. ನಗರದಲ್ಲಿ ಇತ್ತೀಚೆಗೆ ಪಕ್ಷಿಗಳು ಸಾವನ್ನಪ್ಪಿದ್ದವು. ಪರೀಕ್ಷೆಗಾಗಿ ಇವುಗಳ ಮೃತದೇಹ ಕಳುಹಿಸಲಾಗಿತ್ತು. ಈ ಹಕ್ಕಿಗಳು ಹಕ್ಕಿ ಜ್ವರದಿಂದಲೇ ಮೃತಪಟ್ಟಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಇದೀಗ ಮೈಸೂರಿನಲ್ಲಿ ಕೊಳಿ ಮಾಂಸ ಮಾರಾಟಕ್ಕೆ ಜಿಲ್ಲಾಡಳಿತ ನಿಷೇಧ ಹೇರಿದೆ. ಕುಂಬಾರಕೊಪ್ಪಲಿನ ಸುತ್ತಮುತ್ತಲಿನ 10ಕಿ.ಮೀ. ವ್ಯಾಪ್ತಿಯಲ್ಲಿ ಇಂದಿನಿಂದ ಕೋಳಿ ಮಾಂಸ ಹಾಗೂ ಕೋಳಿ ಮಾರಾಟ ಬಂದ್‍ಗೆ …

Read More »

ಕೊರೊನಾ ಭಯ : ಹಾಸ್ಟೆಲ್-ಪಿಜಿ ಬಿಟ್ಟು ಮನೆಗಳಿಗೆ ವಾಪಸಾಗುವಂತೆ ಸೂಚನೆ.

ಬೆಂಗಳೂರು, ಮಾ.17- ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಾಸ್ಟೆಲ್ ಮತ್ತು ಪಿಜಿಯಲ್ಲಿರುವವರು ತಮ್ಮ ಮನೆಗಳಿಗೆ ವಾಪಸಾಗುವಂತೆ ಬಿಬಿಎಂಪಿ ಮನವಿ ಮಾಡಿಕೊಂಡಿದೆ. ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದ್ದು, ಹೊರ ಊರಿನಿಂದ ಆಗಮಿಸಿ ನಗರದ ಹಾಸ್ಟೆಲ್ ಮತ್ತು ಪಿಜಿಯಲ್ಲಿ ತಂಗಿರುವವರು ಕೂಡಲೇ ತಮ್ಮ ಊರುಗಳಿಗೆ ಹಿಂದಿರುಗುವಂತೆ ಬಿಬಿಎಂಪಿ ಆಯುಕ್ತ ಅನಿಲ್‍ಕುಮಾರ್ ಮನವಿ ಮಾಡಿಕೊಂಡಿದ್ದಾರೆ. ಊರಿಗೆ ತೆರಳಲು ಸಾಧ್ಯವಾಗದೆ ಹಾಸ್ಟೆಲ್‍ನಲ್ಲೇ ತಂಗಿರುವ ವಿದ್ಯಾರ್ಥಿಗಳು ವೈಯಕ್ತಿಕ ಶುಚಿತ್ವಕ್ಕೆ ಹೆಚ್ಚು ಒತ್ತು ನೀಡಬೇಕು ಎಂದು ಅನಿಲ್‍ಕುಮಾರ್ …

Read More »