ಬೆಳಗಾವಿ: ಕೊರೊನಾ ಸೋಂಕು ಹರಡುವಿಕೆ ತಡೆಗಟ್ಟುವ ಹಿನ್ನೆಲೆಯಲ್ಲಿ ಕ್ವಾರಂಟೈನ್ ಇರುವ ವ್ಯಕ್ತಿಗಳು ಸಾರ್ವಜನಿಕ ಸ್ಥಳದಲ್ಲಿ ಕಂಡು ಬಂದರೆ ತಕ್ಷಣ ಅವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಜಿಲ್ಲೆಯ ಎಲ್ಲ ತಾಲ್ಲೂಕಗಳ ಅಧಿಕಾರಿಗಳ ಜತೆ ನಡೆದ ವಿಡಿಯೋ ಸಂವಾದದಲ್ಲಿ ಮಾತನಾಡಿದರು. ಕ್ವಾರಂಟೈನ್ ಒಳಪಟ್ಟಿರುವ ವ್ಯಕ್ತಿಗಳು ಸಾರ್ವಜನಿಕ ಪ್ರದೇಶಗಳಲ್ಲಿ ಸಂಚರಿಸುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ಅದೇ ರೀತಿ ಸ್ಟ್ಯಾಂಪಿಂಗ್ ಎಲ್ಲರಿಗೂ ಆಗಿಲ್ಲ …
Read More »Monthly Archives: ಮಾರ್ಚ್ 2020
ಕೂಡ್ಲಿಗಿ ತಾಂಡಾಗಳಲ್ಲಿ ಜಾಗೃತಿ:ಕೊರೋನಾ ಭಯ ಬಿಡಿ,ಮುಂಜಾಗೃತ ಕ್ರಮಗಳನ್ನು ಪಾಲಿಸಿ-ಸ್ವರೂಪಾನಂದ
ಕೂಡ್ಲಿಗಿ ತಾಂಡಾಗಳಲ್ಲಿ ಜಾಗೃತಿ:ಕೊರೋನಾ ಭಯ ಬಿಡಿ,ಮುಂಜಾಗೃತ ಕ್ರಮಗಳನ್ನು ಪಾಲಿಸಿ-ಸ್ವರೂಪಾನಂದ ಎಮ್.<->ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲೂಕಿನ ಬಿ.ಬಿ.ತಾಂಡಾ ಹಾಗು ದೂಪದಳ್ಳಿ ತಾಂಡಾಗಳಲ್ಲಿ ಜನತೆಗೆ ಆರೋಗ್ಯ ಇಲಾಖೆ.ಪೊಲೀಸ್ ಇಲಾಖೆ ಸಹಯೋಗದೊಂದಿಗೆ ತಾಲೂಕು ಆಡಳಿತ ಕೊರೋನಾ ವೈರಸ್ ಕುರಿತು ಜಾಗೃತಿ ಮೂಡಿಸಲಾಯಿತು. ಕೊರೋನಾ ಕುರಿತು ಬರಹಗಾರ ಹಾಗು ಪೊಲೀಸ್ ಪೇದೆ ಸ್ವರೂಪನಂದ ಎಮ್.ಕೊಟ್ಟೂರು ಮಾತನಾಡಿದರು.ರೋಗದ ಬಗ್ಗೆ ಅನಗತ್ಯ ಆತಂಕ ಭಯ ಪಡಬಾರದು.ಅಗತ್ಯ ಮುಂಜಾಗೃತ ಕ್ರಮಗಳನ್ನು ಎಲ್ಲರೂ ಪಾಲಿಸಲೇಬೇಕು ಅಂದಾಗ ರೋಗದ ವಿರುದ್ಧ ಜಯ ಸಾಧಿಸಲು …
Read More »ಚಿತ್ರದುರ್ಗ ಜಿಲ್ಲೆಯಲ್ಲಿ ಓರ್ವರಿಗೆ ಕೋವಿಡ್-19 ಸೊಂಕು , ಭೀಮಸಮುದ್ರ ಸುತ್ತ 5 ಕಿ.ಮೀ. ವ್ಯಾಪ್ತಿಯಲ್ಲಿ ಕಟ್ಟೆಚ್ಚರ : ವಿನೋತ್ ಪ್ರಿಯಾ
ಚಿತ್ರದುರ್ಗ, (ಮಾ. 24) : ಚಿತ್ರದುರ್ಗ ಜಿಲ್ಲೆಯ ಭೀಮಸಮುದ್ರದಲ್ಲಿ ಓರ್ವ ಮಹಿಳೆಗೆ ಕೋವಿಡ್-19 ಸೋಂಕು ತಾತ್ಕಾಲಿಕ ಪಾಸಿಟಿವ್ ಆಗಿದೆ ಎಂಬುದಾಗಿ ವರದಿ ಬಂದಿದ್ದು, ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಭೀಮಸಮುದ್ರದ 5 ಕಿ.ಮೀ. ವ್ಯಾಪ್ತಿಯ ಪ್ರದೇಶವನ್ನು ಬಫರ್ ಜೋನ್ ಎಂದು ಗುರುತಿಸಿ, ಈ ವ್ಯಾಪ್ತಿಯಲ್ಲಿ ಸೋಂಕು ಹರಡದಂತೆ ಸಂಪೂರ್ಣ ಕಟ್ಟೆಚ್ಚರ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಅವರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ 19 ಸೋಂಕು ಸ್ಥಿತಿಗತಿ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿ …
Read More »2 ರೂ.ಗೆ ಗೋಧಿ, 3 ರೂ.ಗೆ ಅಕ್ಕಿ, 80 ಕೋಟಿ ಜನರಿಗೆ ಪಡಿತರ – ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ವ ನಿರ್ಣಯ
ನವದೆಹಲಿ: ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಭಾರತ ಬಂದ್ ಮಾಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನಿರ್ಧಾರ ಸರಿಯಾಗಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವೇಡ್ಕರ್ ಪ್ರತಿಕ್ರಿಸಿದ್ದಾರೆ. ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಅವರು, ದೇಶದ ಹಿತ ದೃಷ್ಟಿಯಿಂದ ಈ ನಿರ್ಧಾರ ಸರಿಯಾಗಿದೆ. ಅಲ್ಲದೇ ಸಾಮಾಜಿಕ ಸಂಪರ್ಕದಿಂದ ಅಂತರ ಕಾಯ್ದುಕೊಳ್ಳುವುದು ಅತಿ ಮುಖ್ಯ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ …
Read More »ಸಾಮಾಜಿಕ ಅಂತರ ಕಾಯ್ದುಕೊಳ್ಳೋಣ, ನವ ಭಾರತ ಕಟ್ಟೋಣ” ಸೌ. ಶಶಿಕಲಾ ಜೊಲ್ಲೆ
ಚಿಕ್ಕೋಡಿ “ಸಾಮಾಜಿಕ ಅಂತರ ಕಾಯ್ದುಕೊಳ್ಳೋಣ, ನವ ಭಾರತ ಕಟ್ಟೋಣ”ಬೆಂಗಳೂರಿನಲ್ಲಿ ನಡೆದ ವಿಧಾನ ಸಭೆಯ ಅಧಿವೇಶನ ಮುಗಿಸಿ ಬಂದ ತಕ್ಷಣ, ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕೊರೋನಾ ವೈರಾಣು ಹರಡುವುದನ್ನು ತಪ್ಪಿಸುವ ಸಲುವಾಗಿ, ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಕೊಂಡು, ಒಬ್ಬರಿಗೊಬ್ಬರು ಅಂತರ ಕಾಯ್ದುಕೊಂಡು ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಹಾಗೂ ಚಿಕ್ಕೋಡಿ …
Read More »ಹೋಂ ಕ್ವಾರಂಟೈನ್ನಲ್ಲಿದ್ದ ವ್ಯಕ್ತಿ ಕಾನೂನು ಉಲ್ಲಂಘನೆ- ಮಡಿಕೇರಿಯಲ್ಲಿ ಮೊದಲ ಪ್ರಕರಣ ದಾಖಲು
ಮಡಿಕೇರಿ: ಮಹಾಮಾರಿ ಕೊರೊನಾ ವೈರಸ್ ನಿಯಂತ್ರಣಕ್ಕೆ ದೇಶವನ್ನೇ ಲಾಕ್ಡೌನ್ ಮಾಡಲಾಗಿದೆ. ಆದರೆ ದುಬೈನಿಂದ ಬಂದು ಹೋಂ ಕ್ವಾರಂಟೈನ್ಗೆ ಒಳಗಾಗಿದ್ದರೂ ಸಾಮಾನ್ಯನಂತೆ ಓಡಾಡಿಕೊಂಡಿದ್ದ ವ್ಯಕ್ತಿಯ ವಿರುದ್ಧ ಕೊಡಗಿನಲ್ಲಿ ಮೊದಲ ಪ್ರಕರಣ ದಾಖಲಾಗಿದೆ. ಮಡಿಕೇರಿ ನಗರದ ಗಣಪತಿ ಬೀದಿಯ 39 ವರ್ಷದ ವ್ಯಕ್ತಿ ಕಳೆದ ಒಂದು ವಾರದ ಹಿಂದೆ ದುಬೈನಿಂದ ಬಂದಿದ್ದನು. ಬಳಿಕ ಆಸ್ಪತ್ರೆಯಲ್ಲಿ ಪರಿಶೀಲನೆಗೆ ಒಳಪಟ್ಟು ಹೋಂ ಕ್ವಾರಂಟೈನ್ ನಲ್ಲಿದ್ದನು. ಆದರೆ ಆ ವ್ಯಕ್ತಿ ಮನೆಯಲ್ಲಿ ಸುಮ್ಮನಿರುವುದು ಬಿಟ್ಟು ಮಡಿಕೇರಿಯಲ್ಲಿ ಓಡಾಡಿಕೊಂಡಿದ್ದನು …
Read More »ಮನೆ ಬಾಗಿಲಿಗೆ ತರಕಾರಿ, ಹೂ, ಹಣ್ಣು ಬರುತ್ ಮಾರ್ಕೆಟ್ಗೆ ಯಾರೂ ಬರಬೇಡಿತ:ಗದಗ ಎಸ್.ಪಿ ಯತೀಶ್
ಗದಗ: ಲಾಕ್ಡೌನ್ ಮುಗಿಯುವರೆಗೆ ತರಕಾರಿ ಮಾರ್ಕೆಟ್ ಬಂದ್ ಮಾಡಲಾಗಿದ್ದು, ವ್ಯಾಪಾರಸ್ಥರು ತಳ್ಳುವ ಗಾಡಿ ಮೂಲಕ ನಗರದ ವಾರ್ಡ್ಗಳಿಗೆ ಸಂಚರಿಸಿ ಮಾರಾಟ ಮಾಡಬೇಕು ಎಂದು ಎಸ್.ಪಿ ಯತೀಶ್ ತಿಳಿಸಿದರು. ನಗರಸಭೆ ಆವರಣದಲ್ಲಿ ತರಕಾರಿ ಹಾಗೂ ಬೀದಿಬದಿ ವ್ಯಾಪಾರಸ್ಥರೊಂದಿಗೆ ಸಭೆ ನಡೆಸಿದರು. ಈ ಸಭೆನಲ್ಲಿ ಅಧಿಕಾರಿಗಳು ಹಾಗೂ ವ್ಯಾಪಾರಸ್ಥರು ಅಂತರ ಕಾಯ್ದುಕೊಂಡಿದ್ದರು. ಪ್ರತಿ ವಾರ್ಡ್ಗೆ ಎಂಟು ಜನ ತರಕಾರಿ ಮಾರಾಟಗಾರರನ್ನು ನೇಮಕ ಮಾಡಲಾಗುತ್ತದೆ. ಯಾರ್ಯಾರು ಯಾವ ಯಾವ ಏರಿಯಾ ಎಂಬುದನ್ನು ತರಕಾರಿ ಹಾಗೂ …
Read More »ಕೊರೋನಾಗೆ ಸವಾಲ್ ಹಾಕಿದ ಜನರು
ಶಿಂದಿಕುರಬೇಟ :ಶಿಂದಿಕುರಬೇಟ್ ಗ್ರಾಮದಲ್ಲಿ ಕಿರಾಣಿ ಅಂಗಡಿ ಮುಂಭಾಗದಲ್ಲಿ ಗುಂಪಿನಲ್ಲಿ ಬಂದರೆ ಕೊರೋನಾ ವೈರಸ್ ಒಬ್ಬರಿಂದ ಮತ್ತೊಬ್ಬರಿಗೆ ಬರುತ್ತೆ ಅಂತ ಪೊಲೀಸ್ ಸಹಾಯದಿಂದ ಸರದಿ ಸಾಲಿನಲ್ಲಿ ನಿಂತು ಸಾಮಗ್ರಿಗಳನ್ನು ತಗೆದುಕೊಂಡು ಹೋಗುತ್ತಿದ್ದಾರೆ ಕೊರೋನಾ ವೈರಸ್ಗೆ ನಮ್ಮ ಜನ ಸವಾಲ್ ಹಾಕಿದ್ದಾರೆ
Read More »ಉಡುಪಿ ಡಿಸಿ ಕೈ ಸೇರಿದ ವೈದ್ಯಕೀಯ ವರದಿ – ಕೊರೊನಾ ದೃಢ
ಉಡುಪಿ: ಜಿಲ್ಲೆಯಲ್ಲಿ ಪ್ರಥಮ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಪ್ರಾಥಮಿಕ ಮಾಹಿತಿಯಲ್ಲಿ ಕೊರೊನಾ ಇರುವುದು ಸ್ಪಷ್ಟವಾಗಿದ್ದು, ಹಾಸನದಿಂದ ಬಂದ ವರದಿ ಕೂಡ ವ್ಯಕ್ತಿಯನ್ನು ಕೊರೊನಾ ಪಾಸಿಟಿವ್ ಎಂಬುದನ್ನು ದೃಢ ಮಾಡಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಜಿಲ್ಲಾಧಿಕಾರಿ ಜಿ.ಜಗದೀಶ್, ರಾಜ್ಯದ ನೋಡೆಲ್ ಅಧಿಕಾರಿ ಜೊತೆ ನಾನು ಮಾತನಾಡಿದ್ದೇನೆ. ಡಾಕ್ಟರ್ ಅರುಂಧತಿ ಚಂದ್ರಶೇಖರ್ ಜೊತೆ ಸಂಪರ್ಕದಲ್ಲಿದ್ದೇನೆ. ಆ ವ್ಯಕ್ತಿಯ ಚಲನವಲನಗಳನ್ನು ಟ್ರ್ಯಾಕ್ ಮಾಡುತ್ತಿದ್ದೇವೆ. ಆತ ಬಂದ ವಿಮಾನದ ಬಗ್ಗೆ ಕೂಡ ಪರಿಶೀಲನೆ …
Read More »ಆಹಾರ, ತರಕಾರಿ ಸುಗಮ ಸರಬರಾಜಿಗೆ ವ್ಯವಸ್ಥೆ – ಡಿಸಿ ಕೆ.ಬಿ ಶಿವಕುಮಾರ್
ಶಿವಮೊಗ್ಗ: ಜಿಲ್ಲೆಯ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹಾಪ್ಕಾಮ್ಸ್ ನೆರವಿನಿಂದ ಪ್ರತಿ ವಾರ್ಡಿನಲ್ಲಿ ತರಕಾರಿ ಮಾರಾಟ ಮಾಡಲು ಹಾಗೂ ಪ್ಯಾಕ್ಡ್ ಆಹಾರ ಮನೆ ಬಾಗಿಲಿಗೆ ಸರಬರಾಜು ಮಾಡಲು ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಉನ್ನತ ಮಟ್ಟದ ಸಮಿತಿಯ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ ತರಕಾರಿ, ಹಾಲು ಹಣ್ಣು, ಮೀನು, ಮಾಂಸ, ದಿನಸಿ ವಸ್ತುಗಳಂತಹ ಅವಶ್ಯಕ ವಸ್ತುಗಳ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಕೋಳಿ ಜ್ವರ …
Read More »
Laxmi News 24×7