ಬೆಂಗಳೂರು: ಕೊರೊನಾ ಸೋಂಕು ಯಾವುದೇ ಜಾತಿ, ಧರ್ಮ ನೋಡಿ ಬರಲ್ಲ. ಒಂದು ಸಮುದಾಯದತ್ತ ಬೆರಳು ಮಾಡಿ ತೋರಿಸಬೇಡಿ ಎಂದು ವಿಧಾನಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಮನವಿ ಮಾಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇಡೀ ಜಗತ್ತಿಗೆ ಮಾಹಾಮಾರಿ ಕೊರೊನಾ ಕಂಟಕವಾಗಿದೆ. ಲಾಕ್ಡೌನ್ ಆದೇಶವನ್ನು ನಾವೆಲ್ಲರೂ ಅನುಸರಿಸುತ್ತಿದ್ದೇವೆ. ನಾವ್ಯಾರು ಮಸೀದಿ ಕಡೆ ತಲೆ ಹಾಕುತ್ತಿಲ್ಲ. ಮನೆಗಳಲ್ಲೇ ನಮಾಜ್ ಮಾಡ್ತಿದ್ದೇವೆ. ಮುಂಬರುವ ರಂಜಾನ್ ಹಬ್ಬವನ್ನೂ ನಾವು ಮನೆಯಲ್ಲೇ ಮಾಡಿಕೊಳ್ತೇವೆ. ಇದನ್ನ …
Read More »Daily Archives: ಏಪ್ರಿಲ್ 7, 2020
ಬುಲೇಟ್ ಪ್ರಕಾಶ ಅವರ ಅಂತ್ಯಕ್ರಿಯೆ ಹೆಬ್ಬಾಳದಲ್ಲಿ ನಡೆಯುವಾಗ ಶವ ಪೆಟ್ಟಿಗೆ ಮೇಲೆ ಕುಳಿತ ಟೈಸನ್ ಕೆಳಗಿಳಿಯಲಿಲ್
ಬೆಂಗಳೂರು- ನಿನ್ನೆ ನಿಧನರಾದ ಹಾಸ್ಯ ನಟ ಬುಲೇಟ್ ಪ್ರಕಾಶ ಅವರ ಅಂತ್ಯಕ್ರಿಯೆ ಹೆಬ್ಬಾಳದಲ್ಲಿ ನಡೆಯುವಾಗ ಕಣ್ಣೀರು ಕಪಾಳಕ್ಕೆ ಸುರಿಸುವ, ಘಟನೆಯೊಂದು ನಡೆಯಿತು. ಬುಲೇಟ್ ಪ್ರಕಾಶ್ ಅವರು ಅತ್ಯಂತ ಮುದ್ದಿನಿಂದ ಸಾಕಿದ ನಾಯಿ ಶವ ಪೆಟ್ಟಿಗೆಯ ಮೇಲೆ ಕುಳಿತಾಗ ಅಲ್ಲಿ ನೆರೆದಿದ್ದ ನೂರಾರು ಜನ ಕಣ್ಣೀರು ಸುರಿಸಿದರು ಶವ ಪೆಟ್ಟಿಗೆ ಮೇಲೆ ಕುಳಿತ ಟೈಸನ್ ಕೆಳಗಿಳಿಯಲಿಲ್ಲ,ಬುಲೇಟ್ ಪ್ರಕಾಶ್ ಅವರ ಪ್ರೀತಿಯ ಸಂಕೋಲೆಯಿಂದ ಟೈಸನ್ ನನ್ನು ಬಿಡಿಸಲು ಪರದಾಡಬೇಕಾಯಿತು. ಒದ್ದಾಡುತ್ತಲೇ ಟೈಸನ್ ತನ್ನ …
Read More »ಮೈಸೂರಿನಲ್ಲಿ ಹೋಂ ಕ್ವಾರಂಟೈನ್ನಲ್ಲಿದ್ದಾರೆ 1533 ಮಂದಿ..!
ಮೈಸೂರು, ಏ.7- ಕೊರೊನಾ ಅಟ್ಟಹಾಸದಿಂದ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಕ್ವಾರಂಟೈನ್ಗೆ ಒಳಪಡುವವರ ಸಂಖ್ಯೆ ಕಡಿಮೆಯಾಗಿದ್ದರೂ ಈಗಾಗಲೇ ಕ್ವಾರಂಟೈನ್ಗೆ ಒಳಪಟ್ಟಿರುವವರು ಹಾಗೂ ವಿದೇಶದಿಂದ ಬಂದವರಲ್ಲಿ 1533 ಮಂದಿ ಹೋಂ ಕ್ವಾರಂಟೈನ್ನಲ್ಲಿದ್ದಾರೆ. ದೆಹಲಿ ಹಾಗೂ ಜ್ಯುಬಿಲಿಯಂಟ್ ಕಾರ್ಖಾನೆ ಸಿಬ್ಬಂದಿಯೇ ಹೆಚ್ಚಾಗಿ ಹೋಂ ಕ್ವಾರಂಟೈನ್ನಲ್ಲಿದ್ದಾರೆ. ಒಟ್ಟಾರೆ 1334 ಮಂದಿಯನ್ನು ಹೋಂ ಕ್ವಾರಂಟೈನ್ನಲ್ಲಿರಿಸಲಾಗಿದೆ. ಇವರ ಪೈಕಿ 287 ಮಂದಿಯ ಗಂಟಲು ದ್ರವ ಪರೀಕ್ಷೆ ಮಾಡಲಾಗಿದ್ದು, ಈ ಪೈಕಿ 35 ಮಂದಿಗೆ ಪಾಸಿಟೀವ್ ಬಂದರೆ …
Read More »ಎಲ್ಲಿ ಮಲಗಿದ್ದಾರೋ’ ಎಂದ ಡಿಕೆಶಿಗೆ ತಿರುಗೇಟು ನೀಡಿದ ಸಚಿವ ಈಶ್ವರಪ್ಪ
ಬೆಂಗಳೂರು,ಏ.7- ರಾಜ್ಯದ 49 ಬರಪೀಡಿತ ತಾಲ್ಲೂಕುಗಳಲ್ಲಿ ಕುಡಿಯುವ ನೀರಿಗಾಗಿ ತಾಲ್ಲೂಕಿಗೆ ತಲಾ ಒಂದು ಕೋಟಿ ರೂ ಅನುದಾನ ಒದಗಿಸಲಾಗಿದೆ ಎಂದು ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಗ್ರಾಮ ಪಂಚಾಯ್ತಿಗಳಲ್ಲಿ ಕೊರೋನಾ ಟಾಸ್ಕ್ ಫೋರ್ಸ್ ರಚನೆ ಮಾಡಿದ್ದೇವೆ. ಗ್ರಾಮಗಳಲ್ಲೂ ಸಮಿತಿಗಳನ್ನು ಮಾಡಿ ಕೊರೋನಾ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದರು. ನರೇಗಾ ಯೋಜನೆಯಲ್ಲಿ ಕೇಂದ್ರದಿಂದ 1,861 ಕೋಟಿ …
Read More »ಆನ್ಲೈನ್ನಲ್ಲಿ ದ್ರಾಕ್ಷಿ ಮಾರಾಟಕ್ಕೆ ವ್ಯವಸ್ಥೆ : ಸಚಿವ ಬಿ.ಸಿ.ಪಾಟೀಲ್
ವಿಜಯಪುರ, ಏ. 7: ರೈತ ಸಮುದಾಯಕ್ಕಾಗುವ ತೊಂದರೆ ಇಡೀ ದೇಶಕ್ಕಾಗುವ ತೊಂದರೆಯಿದ್ದಂತೆ.ಹೀಗಾಗಿ ರೈತ ಸಮುದಾಯಕ್ಕೆ ಅನುಕೂಲವಾಗಲೆಂದು ಕೃಷಿ ಉತ್ಪನ್ನಗಳ ಸುಲಲಿತ ಮಾರಾಟಕ್ಕೆ ಅಂತರಾಜ್ಯ ನಿರ್ಬಂಧಗಳನ್ನು ಸಹ ತೆಗೆದುಹಾಕಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ವಿಜಯಪುರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೃಷಿ ಸಚಿವರು ಕೊರೊನಾ ಹಿನ್ನಲೆಯಲ್ಲಿ ರೈತ ಮತ್ತು ಕೃಷಿ ಚಟುವಟಿಕೆಗಳ ಕುರಿತು ಜಿಲ್ಲಾ ಕೃಷಿ, ತೋಟಗಾರಿಕೆ, ಆರೋಗ್ಯ, ಪೊಲೀಸ್ ಸೇರಿದಂತೆ ಇತರೆ ಇಲಾಖೆಗಳ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು. …
Read More »ಕಾರ್ಡ್ ಇಲ್ಲದ ಮಂದಿಗೂ ಪಡಿತರ ಕಿಟ್ – ಯಾವುದೇ ತರಕಾರಿ ತಗೆದುಕೊಂಡ್ರು ಕೆಜಿಗೆ 10 ರೂ. ಮಾತ್ರ
ಮೈಸೂರು: ಪಡಿತರ ಕಾರ್ಡ್ ಇರೋರಿಗೆ ಪಡಿತರ ಕೊಡ್ತಾರೆ ಆದರೆ ಕಾರ್ಡ್ ಇಲ್ಲದೆ ಇರೋರ ಗತಿ ಏನೂ ಎಂದು ಬಹಳಷ್ಟು ಜನ ಪ್ರಶ್ನಿಸಿದ್ದರು. ಈಗ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಆ ಪ್ರಶ್ನೆಗೆ ಸ್ಥಳೀಯ ಶಾಸಕ ಜಿ.ಟಿ ದೇವೇಗೌಡ ಉತ್ತರ ನೀಡಿದ್ದು, ಡಿಸಿಸಿ ಬ್ಯಾಂಕ್ ಜೊತೆಗೂಡಿ ಪಡಿತರ ಕಾರ್ಡ್ ಇಲ್ಲದವರ ನೆರವಿಗೆ ಧಾವಿಸಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಒಟ್ಟು 5 ಸಾವಿರ ಜನರ ಬಳಿ ಯಾವುದೇ ಪಡಿತರ ಕಾರ್ಡ್ ಇಲ್ಲ. ಹೀಗಾಗಿ ಇವರಿಗೆ 10 …
Read More »ಶಂಕಿತ ಕೊರೊನಾಗೆ ಮಗು ಹಂಸಲೇಖ ಬಲಿ
ಶಂಕಿತ ಕೊರೊನಾಗೆ ಮಗು ಹಂಸಲೇಖ ಬಲಿ ಯಾದಗಿರಿ, ಶಹಾಪುರಃ ಕೊರೊನಾ ವೈರಸ್ ಶಂಕಿತ ಕ್ವಾರಂಟೈನ್ ನಲ್ಲಿದ್ದ ಮಗುವೊಂದ ಕೆಮ್ಮು, ಜ್ವರದಿಂದ ಬಳಲಿ ಅಸುನೀಗದ ಘಟನೆ ಜಿಲ್ಲೆಯ ಶಹಾಾಪುರ ತಾಲೂಕಿನ ಕೊಂಗಂಡಿ ಗ್ರಾಮದಲ್ಲಿ ನಡೆದಿದೆ. ಹಂಸಲೇಖ ತಂದೆ ರಾಮಪ್ಪ ಹೊಸಮನಿ (4) ಎಂಬ ಮಗುವೇ ಶಂಕಿತ ಕೊರೊನಾದಿಂದ ಮೃತಪಟ್ಟಿದೆ ಎನ್ನಲಾಗಿದೆ. ಮಗುವಿನ ಪಾಲಕರು ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದು, ಕೊರೊನಾ ಹಾವಳಿಗೆ ಇಡಿ ದೇಶ ಲಾಕ್ ಡೌನ್ ಆದ ಹಿನ್ನೆಲೆ ಅವರು ಏಪ್ರೀಲ್ …
Read More »ಕ್ವಾರಂಟೈನ್ ಕೋಣೆ ಮುಂದೆಯೇ ಮಲವಿಸರ್ಜಿಸಿ ವಿಕೃತಿ – ತಬ್ಲಿಘಿಗಳ ವಿರುದ್ಧ ಕೇಸ್
ನವದೆಹಲಿ: ಕೊರೊನಾ ಕ್ವಾರಂಟೈನ್ ಕೋಣೆಯ ಮುಂದೆಯೇ ದೆಹಲಿ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದ ಇಬ್ಬರು ತಬ್ಲಿಘಿಗಳು ಕ್ವಾರಂಟೈನ್ ಕೊಠಡಿಯ ಮುಂದೆಯೇ ಮಲವಿಸರ್ಜನೆ ಮಾಡಿ ವಿಕೃತಿ ಮರೆದಿರುವಂತಹ ಘಟನೆ ನರೇಲಾ ಕ್ವಾರಂಟೈನ್ ಕೇಂದ್ರದಲ್ಲಿ ನಡೆದಿದೆ. ಈ ಬಗ್ಗೆ ಮಾಹಿತಿ ನೀಡಿರುವ ದೆಹಲಿ ಪೊಲೀಸರು, ಕ್ವಾರಂಟೈನ್ ಕೋಣೆಯ ಮುಂದೆ ಮುಲವಿಸರ್ಜನೆ ಮಾಡಿದ ಇಬ್ಬರ ಮೇಲೆ ದೂರು ದಾಖಲಾಗಿದೆ. ಈ ಇಬ್ಬರು ಆರೋಪಿಗಳು ಉತ್ತರ ಪ್ರದೇಶದ ಬರಾಬಂಕಿ ನಿವಾಸಿಗಳಾಗಿದ್ದು, ಕಳೆದ ತಿಂಗಳು ದೆಹಲಿಯ ನಿಜಾಮುದ್ದೀನ್ನಲ್ಲಿ ನಡೆದ …
Read More »ಪ್ರಾಣದ ಹಂಗು ತೊರೆದು ಪೇಂಟರ್ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ನೆಲಮಂಗಲ: ಬಣ್ಣ ಬಳಿಯಲು ಹೋಗಿ ಸುಮಾರು 12 ಅಡಿ ಆಳದ ನೀರಿನ ಸಂಪ್ಗೆ ಬಿದ್ದು ಉಸಿರಾಟದ ತೊಂದರೆಯಿಂದ ನರಳಾಡುತ್ತಿದ್ದ ಪೇಂಟರ್ ಹಾಗೂ ಆತನ ರಕ್ಷಣೆಗೆ ಇಳಿದಿದ್ದವರನ್ನು ಅಗ್ನಿಶಾಮಕ ಸಿಬ್ಬಂದಿ ರೇವಣ್ಣ ಪ್ರಾಣದ ಹಂಗು ತೊರೆದು ರಕ್ಷಿಸಿ ಹೀರೋ ಆಗಿದ್ದಾರೆ. ಬೆಂಗಳೂರು ಹೊರವಲಯದ ನೆಲಮಂಗಲ ನಗರದ ಸುಭಾಷ್ ನಗರದಲ್ಲಿ ಘಟನೆ ನಡೆದಿದ್ದು, ಉಸಿರಾಟದ ತೊಂದರೆಯಿಂದ ನರಳಾಡುತ್ತಿದ್ದ ಪೇಂಟರ್ ಹಾಗೂ ಆತನ ರಕ್ಷಣೆಗೆ ಇಳಿದಿದ್ದ ವ್ಯಕ್ತಿ ಒಟ್ಟು ಇಬ್ಬರನ್ನು ಅಗ್ನಿಶಾಮಕ ಸಿಬ್ಬಂದಿ ರೇವಣ್ಣ …
Read More »ಮದ್ಯ ಮಾರಾಟಕ್ಕೆ ಅನುಮತಿ ಕೋರಿದ್ದ ವೈದ್ಯರಿಗೆ 10 ಸಾವಿರ ದಂಡ
ಬೆಂಗಳೂರು: ಲಾಕ್ಡೌನ್ ವೇಳೆ ಮದ್ಯ ಮಾರಾಟಕ್ಕೆ ಅನುಮತಿ ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಸಲ್ಲಿಸಿದ್ದ ಮನೋವೈದ್ಯರಿಗೆ ಹೈಕೋರ್ಟ್ 10 ಸಾವಿರ ರೂ. ದಂಡ ವಿಧಿಸಿ ಅರ್ಜಿ ವಜಾಗೊಳಿಸಿದೆ. ಕೊರೊನಾ ವೈರಸ್ ಹಾವಳಿ ತಡೆಗಟ್ಟುವ ಸಂಬಂಧ ದೇಶದಲ್ಲಿ ಲಾಕ್ಡೌನ್ ಜಾರಿಯಾಗಿದ್ದು ಎಲ್ಲ ರಾಜ್ಯ ಸರ್ಕಾರಗಳು ಮದ್ಯ ಮಾರಾಟಕ್ಕೆ ನಿಷೇಧ ಹೇರಿದೆ. ಕರ್ನಾಟಕದಲ್ಲೂ ನಿಷೇಧ ಹೇರಿದ್ದನ್ನು ಪ್ರಶ್ನಿಸಿ ಹುಬ್ಬಳ್ಳಿಯ ಖ್ಯಾತ ಮನೋವೈದ್ಯ ವಿನೋದ್ ಕುಲಕರ್ಣಿ ಮದ್ಯ ಮಾರಾಟಕ್ಕೆ ಅನುಮತಿ ಕೋರಿ ಪಿಐಎಲ್ ಸಲ್ಲಿಸಿದ್ದರು. …
Read More »
Laxmi News 24×7