Breaking News

Daily Archives: ಏಪ್ರಿಲ್ 8, 2020

ಕೊರೊನಾ ಭೀತಿ ನಡುವೆ ರಕ್ತದಾನ- ದಾನಿಗಳಿಗೆ ಆರೋಗ್ಯ ಸಚಿವರಿಂದ ಮೆಚ್ಚುಗೆ

ಚಾಮರಾಜನಗರ: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ರಕ್ತದ ಕೊರತೆ ಎದುರಾಗಿದೆ. ಲಾಕ್‍ಡೌನ್ ಹಾಗೂ ಕೊರೊನಾ ಬರುತ್ತೆ ಎಂಬ ತಪ್ಪು ಕಲ್ಪನೆಯಿಂದ ರಕ್ತದಾನಿಗಳು ರಕ್ತದಾನಕ್ಕೆ ಮುಂದೆ ಬಾರದೆ ರಕ್ತನಿಧಿ ಕೇಂದ್ರದಲ್ಲಿ ರಕ್ತ ಸಂಗ್ರಹ ಕಡಿಮೆಯಾಗಿದೆ. ಇದರಿಂದ ಸಿಜೇರಿಯನ್ ನಂತಹ ಪ್ರಕರಣಗಳಲ್ಲಿ ರಕ್ತ ಇಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ರಕ್ತದಾನ ಮಾಡುವ ಮೂಲಕ ಜಿಲ್ಲಾ ಸರ್ಕಾರಿ ನೌಕರರು ಮಾನವೀಯತೆ ಮೆರೆದಿದ್ದಾರೆ. ರಕ್ತನಿಧಿ ಕೇಂದ್ರದಲ್ಲಿ ರಕ್ತದ ಕೊರತೆ ಇರುವುದನ್ನು ಅರಿತ …

Read More »

ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಜಂಟಿಯಾಗಿ ರು. 5 ಕೋಟಿ ಮೊತ್ತದ ಚೆಕ್ ಅನ್ನು ಹಸ್ತಾಂತರಿಸಿದರು.

ಬೆಂಗಳೂರು:ಕೋವಿಡ್ 19 ಸೋಂಕು ನಿವಾರಣೆಗೆ ರಾಜ್ಯ ಸರ್ಕಾರದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್) ವತಿಯಿಂದ ಬುಧವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಹಕಾರ ಸಚಿವ ಎಸ್ ಟಿ ಸೋಮಶೇಖರ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಜಂಟಿಯಾಗಿ ರು. 5 ಕೋಟಿ ಮೊತ್ತದ ಚೆಕ್ ಅನ್ನು ಹಸ್ತಾಂತರಿಸಿದರು. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೊರೋನಾದಿಂದ ನರಳುತ್ತಿರುವವರಿಗೆ ಹಾಗೂ ಇತರರಿಗೆ ಸಹಾಯಕವಾಗಲು ಮುಖ್ಯಮಂತ್ರಿಗಳ ನಿಧಿಗೆ …

Read More »

ಚಿಕ್ಕೋಡಿ ಪಟ್ಟಣದಲ್ಲಿ ಬುಧುವಾರ 52 ದ್ವಿಚಕ್ರವಾಹಗಳನ್ನು ಸೀಜ್ ಮಾಡಿದ್ದಾರೆ.

ಚಿಕ್ಕೋಡಿ : ಲಾಕ್‍ಡೌನ್ ಇದ್ದರೂ ಮನೆಯಿಂದ ಹೊರಗೆ ಬರಬೇಡಿ ಎಂದು ಪೊಲೀಸರು ಮನವಿ ಮಾಡಿಕೊಂಡರೂ ಕೇಳದೇ ಅನಾವಶ್ಯಕವಾಗಿ ರಸ್ತೆಯಲ್ಲಿ ಅಡ್ಡಾಡಿ ಲಾಕ್‍ಡೌನ್ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಚಿಕ್ಕೋಡಿ ಪಟ್ಟಣದಲ್ಲಿ ಬುಧುವಾರ 52 ದ್ವಿಚಕ್ರವಾಹಗಳನ್ನು ಸೀಜ್ ಮಾಡಿದ್ದಾರೆ. ಇಡೀ ವಿಶ್ವವನ್ನೇ ತಲ್ಲಣಗೊಳಿಸಿರುವ ಮಹಾಮಾರಿ ಕೊರೊನಾ ತೊಲಗಿಸುವ ನಿಟ್ಟಿನಲ್ಲಿ ಲಾಕ್‍ಡೌನ್ ಹೇರಲಾಗಿದೆ. ಸಾರ್ವಜನಿಕರು ಮನೆಯಲ್ಲಿಯೇ ಇರುವ ಮೂಲಕ ಲಾಕ್‍ಡೌನ್ ಪಾಲಿಸಿ ಎಂದು ಪೊಲೀಸರು ಮನವಿ ಮಾಡಿದರೂ ಕೇಳದ ಹಿನ್ನೆಲೆಯಲ್ಲಿ ಬುಧೂವಾರ ಡಿವೈಎಸ್ಪಿ ಮನೋಜ ನಾಯಿಕ …

Read More »

ಕೊರೋನಾ ವೈರಸ್ ವಿರುದ್ಧ ಹೋರಾಟಕ್ಕಾಗಿ ಆರೋಗ್ಯ ನಿರೀಕ್ಷಕರ ಸಂಘದಿಂದ ಹಣ ಸಹಾಯ ಮಾಡಿದರು

ಗೋಕಾಕ :ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕಾಗಿ ಆರೋಗ್ಯ ನಿರೀಕ್ಷಕರ ಸಂಘ ಗೋಕಾಕ ತಾಲ್ಲೂಕು ವತಿಯಿಂದ ಪ್ರದಾನಮಂತ್ರಿ ವಿಪತ್ತು ಪರಿಹಾರ ನಿಧಿಗೆ 10ಸಾವಿರ ರೂಪಾಯಿ ನೀಡಲಾಯಿತು. ಗೋಕಾಕ ತಾಲೂಕಿನ ಆರೋಗ್ಯ ನಿರೀಕ್ಷಕರ ಸಂಘದಿಂದ ಕೊರೋನಾ ವೈರಸ್ ಹಿನ್ನಲೆಯಲ್ಲಿ ಕೇಂದ್ರಸರ್ಕಾರ ಕೋರಿರುವ ಆರ್ಥಿಕ ನೆರವಿಗೆ ತಾಲ್ಲೂಕು ಆರೋಗ್ಯ ಅಧಿಕಾರಿಗಳಾದ ಡಾ॥ಅಂಟಿನ್ ಸರ್ ಮುಖಾಂತರ ಹತ್ತು ಸಾವಿರ ರೂಪಾಯಿಗಳನ್ನು ಸಂದಾಯ ಮಾಡಲಾಯಿತು . ಈ ಸಂದರ್ಭದಲ್ಲಿ ತಾಲೂಕಾ ಆರೋಗ್ಯ ನಿರೀಕ್ಷಕರ ಸಂಘದ ಪದಾಧಿಕಾರಿಗಳಾದ ಶ್ರೀ …

Read More »

ಲಾಕ್‌ಡೌನ್ ಹಂತಹಂತವಾಗಿ ತೆರವು ಗೊಳಿಸಲು ಕೇಂದ್ರ ಕ್ರಮ‌ ಕೈಗೊಳ್ಳಬೇಕು‌ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ‌ ಹೇಳಿದರು.

ಗೋಕಾಕ: ದೇಶದ ಆರ್ಥಿಕ ಪರಿಸ್ಥಿತಿಯನ್ನು ಕೂಡ ಗಮನದಲ್ಲಿಟ್ಟುಕೊಂಡು ಏಪ್ರಿಲ್ 14 ರ ನಂತರ ಲಾಕ್‌ಡೌನ್ ಹಂತಹಂತವಾಗಿ ತೆರವು ಗೊಳಿಸಲು ಕೇಂದ್ರ ಕ್ರಮ‌ ಕೈಗೊಳ್ಳಬೇಕು‌ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ‌ ಹೇಳಿದರು. ಇಂದು ಇಲ್ಲಿನ‌ ಗೃಹ ಕಚೇರಿ ಹಿಲ್‌ ಗಾರ್ಡನ್ ನಲ್ಲಿ ಪತ್ರಕರ್ತರಿಗೆ ಮತ್ತು ನಗರಸಭೆ ಸದಸ್ಯರಿಗೆ ಸ್ಯಾನಿಟೈಜರ್ ಮತ್ತು ಮಾಸ್ಕ್ ವಿತರಿಸಿದ ಬಳಿಕ ಅವರು ಮಾತನಾಡಿದರು. ಕೊರೋನಾ ಸೊಂಕು ಹರಡದಂತೆ ಲಾಕ್ ಡೌನ್ ಒಂದೇ ಉಪಾಯವಾಗಿದ್ದು ಸಹ ದೇಶದ …

Read More »

ಮುಂಬೈನಲ್ಲಿ ಮಾಸ್ಕ್ ಕಡ್ಡಾಯ – ಧರಿಸದೇ ಹೊರಬಂದರೆ ಅರೆಸ್ಟ್

ಮುಂಬೈ: ಭಾರತದಲ್ಲಿ ಕೊರೊನಾ ವೈರಸ್ ನ ಹಾಟ್‍ಸ್ಪಾಟ್ ಆಗಿರುವ ಮುಂಬೈನಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ. ಒಂದೇ ವೇಳೆ ಮಾಸ್ಕ್ ಧರಿಸದೇ ಹೊರಬಂದರೆ ಅಂತವರನ್ನು ಅರೆಸ್ಟ್ ಮಾಡಲಾಗುವುದು ಎಂದು ಮಹಾನಗರ ಪಾಲಿಕೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಜನರು ಧರಿಸುವ ಮಾಸ್ಕ್ ಗಳು ಕೆಮಿಕಲ್ ಇರುವ ಉತ್ತಮ ಗುಣಮಟ್ಟದ್ದು ಆಗಿರಬಹುದು ಅಥವಾ ಮನೆಯಲ್ಲಿ ತಯಾರಿಸಿದ ತೊಳೆಯಬಹುದಾದ ಮಾಸ್ಕ್ ಗಳನ್ನಾದರು ಧರಿಸಬಹುದು. ಆದರೆ ಎಲ್ಲಾ ಸಾರ್ವಜನಿಕ ಸ್ಥಳಗಳು, ಕಚೇರಿಗಳು, ಸಭೆಗಳು ಮತ್ತು ವಾಹನಗಳ ಒಳಗೂ …

Read More »

ಯುಪಿ 15 ಜಿಲ್ಲೆಗಳು ಏ.30ರವರೆಗೂ ಲಾಕ್‍ಡೌನ್ – ಮನೆಯಿಂದ ಯಾರೂ ಹೊರಬರುವಂತಿಲ್

ಲಕ್ನೋ: ಹೆಮ್ಮಾರಿ ಕೊರೊನಾ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಲಕ್ನೋ, ನೋಯ್ಡಾ, ಆಗ್ರಾ, ವಾರಣಾಸಿ, ಗಾಜಿಯಾಬಾದ್, ಮೀರತ್ ಸೇರಿದಂತೆ 15 ಜಿಲ್ಲೆಗಳಲ್ಲಿ ಏಪ್ರಿಲ್ 30ರವರೆಗೂ ಲಾಕ್‍ಡೌನ್ ವಿಸ್ತರಿಸಲಾಗಿದೆ. ಈ ಕುರಿತು ಸ್ಪಷ್ಟನೆ ನೀಡಿರುವ ಉತ್ತರ ಪ್ರದೇಶ ಸರ್ಕಾರದ ಮುಖ್ಯ ಕಾರ್ಯದರ್ಶಿ ಆರ್.ಕೆ. ತಿವಾರಿ, ರಾಜ್ಯದ ಲಕ್ನೋ, ಆಗ್ರಾ, ಗಾಜಿಯಾಬಾದ್, ಗೌತಂಬುದ್ ನಗರ, ಕಾನ್ಪುರ, ವಾರಣಾಸಿ, ಶಾಮ್ಲಿ, ಮೀರತ್, ಬರೇಲಿ, ಬುಲಂದ್‍ಶಹರ್, ಫಿರೋಜಾಬಾದ್, ಮಹಾರಾಜಗಂಜ್, ಸೀತಾಪುರ, ಸಹರಾನ್‍ಪುರ ಹಾಗೂ ಬಸ್ತಿ …

Read More »

ತಬ್ಲಿಘಿ ಜಮಾತ್‍ಗೆ ಕರ್ನಾಟಕದಿಂದ 1,300ಕ್ಕೂ ಹೆಚ್ಚು ಜನರು ಭಾಗಿ – ಸಿಎಂ ಮಾಹಿತಿ

ಬೆಂಗಳೂರು: ದೆಹಲಿಯ ನಿಜಾಮುದ್ದೀನ್‍ನಲ್ಲಿ ತಬ್ಲಿಘಿ ಜಮಾತ್‍ನ ಪ್ರಾರ್ಥನಾ ಸಭೆಯಲ್ಲಿ ಕರ್ನಾಟಕದಿಂದ 1,300ಕ್ಕೂ ಹೆಚ್ಚು ಜನರು ತೆರಳಿದ್ದರು ಎಂದು ಮುಖ್ಯಮಂತ್ರಿ ಸಿಎಂ ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ. ಸಿಎಂ ಯಡಿಯೂರಪ್ಪ ಅವರು ದೆಹಲಿ ಜಮಾತ್ ಕಾರ್ಯಕ್ರಮಕ್ಕೆ ಹೋದವರ ಕುರಿತು ಟ್ಟಿಟ್ಟರಿನಲ್ಲಿ ಮಾಹಿತಿ ನೀಡಿದ್ದಾರೆ. “ದೆಹಲಿಯ ನಿಜಾಮುದ್ದೀನ್‍ನ ತಬ್ಲಿಘಿ ಜಮಾತ್‍ನ ಪ್ರಾರ್ಥನಾ ಸಭೆಯಲ್ಲಿ ಭಾಗವಹಿಸಿದವರನ್ನು ಗುರುತಿಸಿ ಕ್ವಾರಂಟೈನ್ ನಲ್ಲಿರಿಸಲಾಗಿದೆ. ಇತರ ರಾಜ್ಯಗಳಿಗೆ ತೆರಳಿದವರ ಕುರಿತು ಸಹ ಮಾಹಿತಿ ಸಂಗ್ರಹಿಸಲಾಗಿದೆ” ಎಂದು ಟ್ವಿಟ್ಟರಿನಲ್ಲಿ ಬರೆದುಕೊಂಡಿದ್ದಾರೆ. ಅಷ್ಟೇ …

Read More »

ಪಟ್ಟಣ ಶಾಂತಿ ಸೌಹಾರ್ದತೆ , ಐಕ್ಯತೆಗೆ ಹೆಸರುವಾಸಿ

ಮೂಡಲಗಿ ಪಟ್ಟಣ ಶಾಂತಿ ಸೌಹಾರ್ದತೆ , ಐಕ್ಯತೆಗೆ ಹೆಸರುವಾಸಿಯಾಗಿದ್ದು ಮಾದರಿ ಕೂಡ ವಾಗಿದೆ. ಈಗ ಕರೋನಾ ಕಂಟಕದಿಂದ ದೇಶ ಗಂಡಾಂತರದಲ್ಲಿದೆ ಆದ್ದರಿಂದ ಎಲ್ಲರೂ ಒಗ್ಗಟ್ಟಿನಿಂದ ಈ ಮಹಾ ಮಾರಿಯನ್ನು ಓಡಿಸಲು ನಮಗೆ ಸಹಕಾರ ನೀಡಿ . ದಿನದಿಂದ ದಿನಕ್ಕೆ ಕೊರೋನಾ ಸೋಂಕು ನಿರಂತರ ಹರಡುತ್ತಿದೆ ಆದ ಕಾರಣ ಮುಸ್ಲಿಂ ಬಾಂಧವರು ನಾಳೆ ದಿ.9ರಂದು ಆಚರಿಸುವ ಶಭೆ ಏ ಬಾರಾತ ನ್ನು ಮಸೀದಿ ಕಬ್ರಸ್ಥಾನಗಳಿಗೆ ಹೋಗದೆ ತಮ್ಮ ತಮ್ಮ ಮನೆಯಲ್ಲಿ ನಮಾಜ …

Read More »

‘ಗುಂಡಿಕ್ಕಿ ಕೊಲ್ಲಿ’ ಎಂದ ಶಾಸಕರ ವಿರುದ್ಧ ಕ್ರಿಮಿನಲ್ ಕೇಸ್ ಹಾಕಿ ಅರೆಸ್ಟ್ ಮಾಡಿ : ಸಿದ್ದರಾಮಯ್ಯ

ಬೆಂಗಳೂರು, ಏ.8- ರಾಜಕೀಯ ಷಡ್ಯಂತ್ರದಿಂದ ಒಂದು ಸಮುದಾಯವನ್ನು ಗುರಿಯಾಸಿ ಹೇಳಿಕೆ ನೀಡಿರುವ ಮತ್ತು ಗುಂಡಿಕ್ಕಿಕೊಲ್ಲಿ ಎಂದು ಪ್ರಚೋದನಾಕಾರಿ ಮಾತನಾಡಿರುವ ಬಿಜೆಪಿಯ ಇಬ್ಬರು ಶಾಸಕರ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಿ, ಕೂಡಲೇ ಬಂಧಿಸುವಂತೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ವಿಡಿಯೋ ಸಂದೇಶದ ಮೂಲಕ ರಾಜ್ಯ ಸರ್ಕಾರವನ್ನು ಆಗ್ರಹ ಮಾಡಿರುವ ಅವರು, ಹೊನ್ನಾಳ್ಳಿ ಕ್ಷೇತ್ರದ ಶಾಸಕರಾದ ಎಂ.ಪಿ.ರೇಣುಕಾಚಾರ್ಯ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಂವಿಧಾನದ ಮೇಲೆ ಪ್ರಮಾಣ ಮಾಡಿ ಶಾಸನ ರಚಿಸುವ …

Read More »