Breaking News

Daily Archives: ಏಪ್ರಿಲ್ 21, 2020

ಶಿವಮೊಗ್ಗ/ಬೆಳಗಾವಿ:ಬಿರುಗಾಳಿ ಸಹಿತ ಭಾರೀ ಮಳೆ – ಶಿವಮೊಗ್ಗದಲ್ಲಿ ಅವಾಂತರ ಸೃಷ್ಟಿ

ಶಿವಮೊಗ್ಗ/ಬೆಳಗಾವಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಭೀತಿ ಹೆಚ್ಚಾಗುತ್ತಿದೆ. ಇತ್ತ ಶಿವಮೊಗ್ಗ ಮತ್ತು ಬೆಳಗಾವಿ ಜಿಲ್ಲೆಯಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರೀ ಮಳೆಯಾಗಿದೆ. ಶಿವಮೊಗ್ಗದಲ್ಲಿ ಇಂದು ಸಂಜೆ ಅರ್ಧ ಗಂಟೆಗಳ ಕಾಲ ಭರ್ಜರಿ ಮಳೆಯಾಗಿದ್ದು, ಮಳೆಗೆ ಹಲವು ಅವಾಂತರ ಸಹ ಸೃಷ್ಟಿಯಾಗಿದೆ. ನಗರದ ಹಲವೆಡೆ ರಸ್ತೆಗೆ ಅಡ್ಡಲಾಗಿ ವಿದ್ಯುತ್ ಕಂಬ ಮರಗಳು ಉರುಳಿ ಬಿದ್ದಿದ್ರೆ, ಕೆಲವು ಮನೆ ಮೇಲೂ ಮರಗಳು ಉರುಳಿ ಬಿದ್ದಿದೆ. ಅಲ್ಲದೇ ಮನೆ ಮುಂದೆ ನಿಲ್ಲಿಸಿದ್ದ …

Read More »

ಮಸೀದಿಯಲ್ಲಿ ಅಗಡಿಕೊಂಡಿದ್ದ ಪ್ರೊಫೆಸರ್ ಸೇರಿದಂತೆ 30 ಮಂದಿ ತಬ್ಲಿಘಿಗಳು ಅರೆಸ್ಟ್….

ಲಕ್ನೋ: ದೆಹಲಿಯಲ್ಲಿ ಕಳೆದ ತಿಂಗಳು ನಡೆದ ತಬ್ಲಿಘಿ ಜಮಾತ್ ಕಾರ್ಯಕ್ರಮಕ್ಕೆ ಹೋಗಿ ಮಸೀದಿಯಲ್ಲಿ ಬಚ್ಚಿಟ್ಟುಕೊಂಡಿದ್ದ ಅಲಹಾಬಾದ್ ವಿಶ್ವವಿದ್ಯಾಲಯದ ಪ್ರೊಫೆಸರ್, 16 ವಿದೇಶಿಯರನ್ನು ಸೇರಿದಂತೆ ಒಟ್ಟು 30 ಮಂದಿಯನ್ನು ಉತ್ತರ ಪ್ರದೇಶದ ಪೊಲೀಸರು ಬಂಧಿಸಿದ್ದಾರೆ. ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪ್ರೊಫೆಸರ್ ಮೊಹಮ್ಮದ್ ಶಾಹಿದ್, ಲಾಕ್‍ಡೌನ್ ಘೋಷಿಸಿದ ನಂತರವೂ ಪ್ರಯಾಗರಾಜ್‍ನ ಮಸೀದಿಯಲ್ಲಿ ತಮ್ಮ `ಅಕ್ರಮ’ ವಾಸ್ತವ್ಯವನ್ನು ಏರ್ಪಡಿಸಿದ್ದರು. ಈ ಮೂಲಕ ವಿದೇಶಿಗರಿಗೆ ಉದ್ದೇಶಪೂರ್ವಕವಾಗಿ ಸಹಾಯ ಮಾಡಿದ್ದರು. ಹೀಗಾಗಿ ಅವರನ್ನು ಪ್ರಯಾಗರಾಜ್ ಪೊಲೀಸರು …

Read More »

ಪಬ್ಲಿಕ್ ಟಿವಿ ವರದಿಗಾರ ಹನುಮಂತು ನಿಧನಕ್ಕೆ ಸಿಎಂ ಸಂತಾಪ

ಬೆಂಗಳೂರು: ರಸ್ತೆ ಅಪಘಾತದಲ್ಲಿ ಇಂದು ಮೃತಪಟ್ಟ ಪಬ್ಲಿಕ್ ಟಿವಿಯ ರಾಮನಗರ ಜಿಲ್ಲಾ ವರದಿಗಾರ ಹನುಮಂತು ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ. ಟ್ವೀಟ್ ಮಾಡಿರುವ ಸಿಎಂ ಯಡಿಯೂರಪ್ಪ ಅವರು, ಭಗವಂತನು ಹನುಮಂತು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಅಕಾಲಿಕ ನಿಧನದ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಅವರ ಕುಟುಂಬದವರಿಗೆ ನೀಡಲಿ ಎಂದು ಪ್ರಾರ್ಥಿಸುವುದಾಗಿ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. ಸಂಸದ ಡಿ.ಕೆ.ಸುರೇಶ್ ಟ್ವೀಟ್ ಮಾಡಿ, ಪಬ್ಲಿಕ್ ಟಿವಿಯ ರಾಮನಗರ …

Read More »

ಪ್ರಾಣದ ಹಂಗು ತೊರೆದು ಕೆಲಸ ಮಾಡುತ್ತಿರುವ ಕೊರೋನಾವಾರಿಯರ್ಸ್ ಗೆ ಪತ್ರ ಬರೆದು ಸನ್ಮಾನಿಸಿದ ಸತೀಶ ಜಾರಕಿಹೊಳಿ

ಬೆಳಗಾವಿ – ಶಾಸಕ ಸತೀಶ ಜಾರಕಿಹೊಳಿ ಅವರ ನೇತೃತ್ವದಲ್ಲಿ ಯಮಕನಮರಡಿ ಕ್ಷೇತ್ರದಲ್ಲಿ ಕೊರೋನಾ ವಿರುದ್ದ ಹೋರಾಟದಲ್ಲಿ ಪ್ರಾಣದ ಹಂಗು ತೊರೆದು ಜನರ ರಕ್ಷಣೆಯಲ್ಲಿ ನಿರತರಾಗಿರುವ ಆರೋಗ್ಯ ಸಿಬ್ಬಂದಿ, ಪಂಚಾಯಿತಿ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ, ಆಶಾ ಕಾರ್ಯಕರ್ತರಿಗೆ, ಸ್ವಚ್ಚತಾ ಕಾರ್ಮಿಕರಿಗೆ ಮತ್ತು ಜನಪ್ರತಿನಿಧಿಗಳಿಗೆ ಖುದ್ದು ಶಾಸಕರು ಪತ್ರ ಬರೆದು ಅಭಿನಂದನೆಗಳನ್ನು ತಿಳಿಸಿದ್ದಾರೆ. ಜನರ ರಕ್ಷಣೆಗಾಗಿ ಕುಟುಂಬವನ್ನು ಬಿಟ್ಟು ನಿರತರಾಗಿರುವ ನಿಮ್ಮ ಅಮೂಲ್ಯವಾದ ಸೇವೆ ಮತ್ತು ಸಹನೆಗೆ ಬೆಲೆ ಕಟ್ಟಲಾಗದು ನಿಮ್ಮ ಶ್ರಮ ಶ್ಲಾಘನೀಯ. …

Read More »

ಬೆಳಗಾವಿ –ನಗರ ಮಧ್ಯೆಯೇ ಕಂಟೈನ್ಮೆಂಟ್ ಝೋನ್ ವಕ್ಕರಿಸಿದೆ…….

ಬೆಳಗಾವಿ – ಈವರೆಗೆ ಕ್ಯಾಂಪ್ ಪ್ರದೇಶ, ಪೀರನವಾಡಿ ಮತ್ತು ಯಳ್ಳೂರು ಕಂಟೈನ್ಮೆಂಟ್ ಝೋನ್ ಆಗಿದ್ದರೂ ಬೆಳಗಾವಿ ನಗರಕ್ಕೆ ಅದರ ಪರಿಣಾಮ ಅಷ್ಟಾಗಿರಲಿಲ್ಲ. ಇಂದು ಬಂದಿರುವ ವರದಿ ಪ್ರಕಾರ ಆಝಾದ್ ನಗರದ ಯುವತಿಗೆ ಕೊರೋನಾ ಸೋಂಕು ದೃಢಪಟ್ಟಿರುವುದರಿಂದ ನಗರ ಮಧ್ಯೆಯೇ ಕಂಟೈನ್ಮೆಂಟ್ ಝೋನ್ ವಕ್ಕರಿಸಿದೆ. ಪೂರ್ವಕ್ಕೆ ಹಳೆ ಪಿಬಿ ರಸ್ತೆ, ಪಶ್ಚಿಮಕ್ಕೆ ಬಾತಖಾಂಡೆ ಗಲ್ಲಿ, ಉತ್ತರಕ್ಕೆ ಖಡೇಬಜಾರ್, ದಕ್ಷಿಣಕ್ಕೆ ರವಿವಾರ ಪೇಟೆ ಬಸವೇಶ್ವರ ಕೋ ಆಪರೇಟಿವ್ ಬ್ಯಾಂಕ್ ಒಳಗೊಂಡ ಪ್ರದೇಶ ಇಂದು …

Read More »

ಫೇಸ್‍ಬುಕ್ ಮೂಲಕ ಮದ್ಯ ಮಾರಾಟ: ಜಾಹೀರಾತಿಗೆ ಮರುಳಾದ್ರೆ ಪಂಗನಾಮ ಫಿಕ್ಸ್

ರಾಯಚೂರು: ಲಾಕ್‍ಡೌನ್ ಹಿನ್ನೆಲೆ ಮದ್ಯ ಮಾರಾಟಕ್ಕೆ ಸಂಪೂರ್ಣ ಬ್ರೇಕ್ ಬಿದ್ದಿರುವುದು ಎಣ್ಣೆ ಪ್ರಿಯರನ್ನ ಚಡಪಡಿಸುವಂತೆ ಮಾಡಿದೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಕೆಲವರು ಆನ್‍ಲೈನ್ ವಂಚನೆಗೆ ಮುಂದಾಗಿದ್ದಾರೆ. ಎಲ್ಲಿ ಹೇಳಿದ್ರೂ ಮದ್ಯವನ್ನು ಹೋಂ ಡೆಲಿವರಿ ಮಾಡುತ್ತೇವೆ ಅಂತ ಜಾಹೀರಾತು ಹಾಕಿಕೊಂಡಿದ್ದಾರೆ. ಇದನ್ನು ನಂಬಿ ಅವರ ಖಾತೆಗೆ ಹಣ ಹಾಕಿದ್ರೆ ಪಂಗನಾಮ ಗ್ಯಾರಂಟಿ. ರಾಯಚೂರಿನ ಅಮೃತ ವೈನ್‍ಶಾಪ್‍ನಿಂದ ಎಲ್ಲಾ ಬ್ರಾಂಡ್‍ನ ಮದ್ಯ ಹೋಂ ಡೆಲಿವರಿ ಇದೆ. ನಗರದ ಕೆ.ಇ.ಬಿ ಕಾಲೋನಿ, ನಿಜಲಿಂಗಪ್ಪ ಕಾಲೋನಿ …

Read More »

ಅಂಬುಲೆನ್ಸ್‌ನಲ್ಲಿ ಮದ್ಯ ಸಾಗಣೆ- ನಾಲ್ವರು ಅಂದರ್……..

ಚಿತ್ರದುರ್ಗ: ಅಂಬುಲೆನ್ಸ್‌ನಲ್ಲಿ ಮದ್ಯ ಸಾಗಿಸುತ್ತಿದ್ದ ನಾಲ್ವರನ್ನು ಹೊಳಲ್ಕೆರೆ ತಾಲೂಕಿನ ಚಿತ್ರಹಳ್ಳಿ ಠಾಣೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಆರೋಗ್ಯ ಸಚಿವ ಶ್ರೀರಾಮುಲು ಅವರ ತವರು ಜಿಲ್ಲೆಯಲ್ಲೇ ಇಂತಹ ಕೃತ್ಯ ನಡೆದಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಅಂಬುಲೆನ್ಸ್ ಚಾಲಕ ಸುಬಾನ್, ಲ್ಯಾಬ್ ಟೆಕ್ನಿಶಿಯನ್ ಸಂತೋಷ್, ಶಿವಗಂಗಾ ಗ್ರಾಮದ ಜೀವನ್ ಹಾಗೂ ಗಿರೀಶ್ ಬಂಧಿತರು. ಆರೋಪಿಗಳು ಮದ್ಯವನ್ನುಅಂಬುಲೆನ್ಸ್‌ನಿಂದ ಓಮಿನಿ ವ್ಯಾನ್‍ಗೆ ಶಿಫ್ಟ್ ಮಾಡುತ್ತಿದ್ದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಾರೆ. ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಪಿಎಸ್‍ಐ …

Read More »

ಜಮೀರ್ ಅಹಮ್ಮದ್‍ರನ್ನ ಗೂಂಡಾ ಕಾಯ್ದೆಯಡಿ ಬಂಧಿಸಿ: ಕಟೀಲ್

ಮಂಗಳೂರು: ಶಾಸಕ, ಮಾಜಿ ಸಚಿವ ಜಮೀರ್ ಅಹ್ಮದ್ ಅವರನ್ನ ಗೂಂಡಾ ಕಾಯ್ದೆಯಡಿ ಬಂಧಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಗ್ರಹಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಪಾದರಾಯನಪುರ ಗಲಾಟೆ ವಿಚಾರದಲ್ಲಿ ಶಾಸಕ ಜಮೀರ್ ಅಹ್ಮದ್ ನೀಡಿದ ಹೇಳಿಕೆ ವಿಚಾರ ಹಾಗೂ ನಡೆದುಕೊಂಡ ರೀತಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಈ ಘಟನೆ ನಡೆದಾಗ ಶಾಸಕ ಜಮೀರ್ ತೆಗೆದುಕೊಂಡ ನಿರ್ಧಾರ ಮತ್ತು ವರ್ತನೆ ಕಾನೂನು ಬಾಹಿರವಾಗಿದೆ. ಅಲ್ಲಿನ ಗೂಂಡಾಗಿರಿಗೆ ಶಾಸಕನಾಗಿ ಬೆಂಗಾವಲಾಗಿ ನಿಂತಿರುವುದು …

Read More »

ಪಾದರಾಯನಪುರದ ಗಲಭೆ ಮುಂದಿನ ಅನಾಹುತಗಳಿಗೆ ಸಂಬಂಧಿಸಿದ ಅಧಿಕಾರಿಗಳು ಮತ್ತು ರಾಜ್ಯ ಸರ್ಕಾರವೇ ನೇರ ಹೊಣೆ.

ಬೆಂಗಳೂರಿನ ಪಾದರಾಯನಪುರದ ಗಲಭೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ಐವತ್ತನಾಲ್ಕು ಮಂದಿ ಪುಂಡರನ್ನು ರಾಮನಗರ ಜಿಲ್ಲಾ ಕಾರಾಗೃಹದಲ್ಲಿ ಇರಿಸುವುದರಿಂದಾಗುವ ಮುಂದಿನ ಅನಾಹುತಗಳಿಗೆ ಸಂಬಂಧಿಸಿದ ಅಧಿಕಾರಿಗಳು ಮತ್ತು ರಾಜ್ಯ ಸರ್ಕಾರವೇ ನೇರ ಹೊಣೆ. ಬೆಂಗಳೂರಿನಲ್ಲಿ ಕ್ವಾರಂಟೈನ್ ಗೆ ಒಳಗಾಗಬೇಕಿದ್ದ ಗಲಭೆಕೋರರನ್ನು ಕರೋನ ಸೋಂಕಿನ ವಿಷಯದಲ್ಲಿ ಹಸಿರು ವಲಯವಾಗಿರುವ ರಾಮನಗರದ ಜೈಲಿನಲ್ಲಿರಿಸುವುದು ವಿವೇಕಯುತ ನಿರ್ಧಾರವಲ್ಲ. ಚೋದ್ಯವೆಂದರೆ ರಾಮನಗರ ಜೈಲಿನ ಖೈದಿಗಳನ್ನು ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರಿಸಿ, ಪಾದರಾಯನಪುರದ ಪುಂಡರನ್ನು ರಾಮನಗರದ ಕಾರಗೃಹದಲ್ಲಿ ಹದಿನೈದಕ್ಕೂ ಹೆಚ್ಚು ಮಂದಿಯನ್ನು …

Read More »

ಸಂಗೀತ ಮಾಂತ್ರಿಕ ಹಂಸಲೇಖ ಅವರು ರಸ್ತೆ ಗುಂಡಿ ಮುಚ್ಚಿ ಸಾಮಾಜಿಕ ಕಾಳಜಿ ಮೆರೆದಿದ್ದಾರೆ.

ಬೆಂಗಳೂರು: ಲಾಕ್‍ಡೌನ್ ಸಮಯದಲ್ಲಿ ಸಂಗೀತ ಮಾಂತ್ರಿಕ ಹಂಸಲೇಖ ಅವರು ರಸ್ತೆ ಗುಂಡಿ ಮುಚ್ಚಿ ಸಾಮಾಜಿಕ ಕಾಳಜಿ ಮೆರೆದಿದ್ದಾರೆ. ಮಹಾಲಕ್ಷ್ಮೀ ಲೇಔಟ್‍ನಲ್ಲಿರುವ ಹಂಸಲೇಖ ಅವರ ಮನೆ ಪಕ್ಕದಲ್ಲಿರುವ ಪಾರ್ಕಿಗೆ ಬಿಬಿಎಂಪಿಯವರು ಪೈಪ್ ಲೈನ್ ಹಾಕಲು ರಸ್ತೆಯಲ್ಲಿ ಗುಂಡಿ ತೆಗೆದಿದ್ದರು. ಕಾಮಗಾರಿ ಮುಗಿದ ಬಳಿಕ ಮಣ್ಣು ಹಾಕಲಾಗಿತ್ತು. ಆದರೆ ಗುಂಡಿ ಹಾಗೆ ಉಳಿದಿದ್ದರಿಂದ ಸವಾರರಿಗೆ ಕಿರಿಕಿರಿ ಉಂಟಾಗಿತ್ತು. ಅಷ್ಟೇ ಅಲ್ಲದೆ ಅಪಾಯ ಸಂಭವಿಸುವ ಸಾಧ್ಯತೆ ಇತ್ತು. ರಸ್ತೆಯಲ್ಲಿ ಗುಂಡಿ ಇರುವುದನ್ನು ಗಮನಿಸಿದ ಹಂಸಲೇಖ …

Read More »