Breaking News

Daily Archives: ಏಪ್ರಿಲ್ 22, 2020

ಬೆಂಗಳೂರಲ್ಲಿ ಲಾಕ್‍ಡೌನ್ ಮತ್ತಷ್ಟು ಟೈಟ್ : ರಸ್ತೆಗಿಳಿದರೆ ವಾಹನ ಸೀಜ್ ಆಗುತ್ತೆ ಹುಷಾರ್..!

ಬೆಂಗಳೂರು, ಏ.22- ಬೇಕಾಬಿಟ್ಟಿ ವಾಹನ ಸಂಚಾರದಿಂದ ನಿನ್ನೆ ನಗರದಲ್ಲಿ ವಾಹನ ದಟ್ಟಣೆ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಸಂಚಾರಿ ಪೊಲೀಸರು ಇಂದು ನಗರದಲ್ಲಿ ಲಾಕ್‍ಡೌನ್ ಬಿಗಿಗೊಳಿಸಿದ್ದಾರೆ. ಬೆಳ್ಳಂಬೆಳಗ್ಗೆ ಕಾರ್ಯಾಚರಣೆಗಿಳಿದ ಪೊಲೀಸರು ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್‍ಗಳನ್ನು ಹಾಕಿ ಪ್ರತಿಯೊಂದು ವಾಹನಗಳ ತಪಾಸಣೆ ನಡೆಸಿ ಅನಗತ್ಯವಾಗಿ ಓಡಾಡುತ್ತಿದ್ದ 1000ಕ್ಕೂ ಹೆಚ್ಚು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಇದುವರೆಗೂ 759 ವಾಹನಗಳನ್ನು ವಶಪಡಿಸಿಕೊಂಡಿದ್ದು, ತಪಾಸಣೆ ಮುಂದುವರಿಸಿರುವ ಪೊಲೀಸರು ರಸ್ತೆಯಲ್ಲಿ ಓಡಾಡುವ ಪ್ರತಿಯೊಂದು ವಾಹನಗಳ ನಂಬರ್ ನೋಟ್ ಮಾಡಿಕೊಳ್ಳುತ್ತಿದ್ದು, ವಾಹನ …

Read More »

BIG BREAKING : ಭಾರತದಲ್ಲೂ ಮೇ.3ಕ್ಕೆ ಮುಗಿಯಲ್ಲ ಲಾಕ್‍ಡೌನ್‍..!

ನವದೆಹಲಿ, ಏ.22- ವಿಶ್ವಾದ್ಯಂತ ಕಾಡಿರುವ ಕೊರೊನಾ ಸೋಂಕನ್ನು ಹಿಮ್ಮೆಟ್ಟಿರುವ ನಿಟ್ಟಿನಲ್ಲಿ ಈಗಾಗಲೇ ಹಲವಾರು ರಾಷ್ಟ್ರಗಳಲ್ಲಿ ಲಾಕ್‍ಡೌನ್‍ಅನ್ನು ಜೂನ್‍ವರೆಗೂ ಮುಂದುವರಿಸಲಾಗಿದೆ. ಇದರ ನಡುವೆ ಭಾರತದಲ್ಲೂ ಮೇ 3ರ ನಂತರ ಮತ್ತೆ ಇದೇ ಪರಿಸ್ಥಿತಿ ಮುಂದುವರಿಯಲಿದೆಯೇ ಎಂಬ ಚರ್ಚೆ ಶುರುವಾಗಿದೆ. ಅಮೆರಿಕ, ಸ್ಪೇನ್, ಇಟಲಿ, ಫ್ರಾನ್ಸ್, ರಷ್ಯಾ ಸೇರಿದಂತೆ ಮುಂದುವರಿದ ರಾಷ್ಟ್ರಗಳು ಕೊರೊನಾ ಹತೋಟಿಗೆ ತರಲು ಲಾಕ್‍ಡೌನ್‍ಅನ್ನು ಕಟ್ಟುನಿಟ್ಟಾಗಿ ಜಾರಿಗೆ ತಂದು ಮುಂಬರುವ ಮೇ ಅಂತ್ಯದವರೆಗೆ ಯಾವುದೇ ರೀತಿಯಲ್ಲೂ ಸೋಂಕು ಹರಡದಂತೆ ಮುನ್ನೆಚ್ಚರಿಕೆ …

Read More »

ರಂಜನಿ ಅವರ ಪೋಸ್ಟ್ ಇದೀಗ ಚರ್ಚೆಗೆ ಕಾರಣವಾಗಿದೆ. ಅದೇನಪ್ಪಾ ಅಂದ್ರೆ ಪುಟ್ಟಗೌರಿಗೆ ಕೆಲಸ ಬೇಕಂತೆ.

ಬೆಂಗಳೂರು: ಪುಟ್ಟಗೌರಿ ಮದುವೆ ನಂತರ ‘ಕನ್ನಡತಿ’ ಧಾರಾವಾಹಿ ಮೂಲಕ ಮನೆ ಮಾತಾಗಿರುವ ರಂಜನಿ ರಾಘವನ್ ಏನ್ ಮಾಡ್ತಿದ್ದಾರೆ ಅಂತ ಅಭಿಮಾನಿಗಳು ತಲೆ ಕೆಡಿಸಿಕೊಂಡಿದ್ದಾರೆ. ಲಾಕ್‍ಡೌನ್ ಹಿನ್ನೆಲೆ ಧಾರಾವಾಹಿಗಳ ಚಿತ್ರೀಕರಣಕ್ಕೆ ಬ್ರೇಕ್ ಬಿದ್ದಿದ್ದು, ಎಲ್ಲ ವಾಹಿನಿಗಳು ಸಂಚಿಕೆಗಳನ್ನು ಮರು ಪ್ರಸಾರ ಮಾಡುತ್ತಿವೆ. ಹೀಗಿರುವಾಗ ರಂಜನಿ ಅವರ ಪೋಸ್ಟ್ ಇದೀಗ ಚರ್ಚೆಗೆ ಕಾರಣವಾಗಿದೆ. ಅದೇನಪ್ಪಾ ಅಂದ್ರೆ ಪುಟ್ಟಗೌರಿಗೆ ಕೆಲಸ ಬೇಕಂತೆ. ಧಾರಾವಾಹಿ ಹಾಗೂ ಸಿನಿಮಾಗಳಲ್ಲಿ ಸಖತ್ ಬ್ಯುಸಿಯಾಗಿರುತ್ತಿದ್ದ ನಟಿ ರಂಜನಿ ರಾಘವನ್ ಇದೀಗ …

Read More »

ಬೆಳಗಾವಿಯ ಕೊರೋನಾ ವೈರಾಣು ಟೆಸ್ಟಿಂಗ್ ಲ್ಯಾಬ್ ಟೆಸ್ಟಿಂಗ್ ಪ್ರಾರಂಭ..

ಬೆಳಗಾವಿ- ಬೆಳಗಾವಿಯ ಕೆ ಎಲ್ ಈ ಆಸ್ಪತ್ರೆ ಎದುರಿನ ಪಾರಂಪರಿಕ ಔಷಧಿ ಸಂಶೋಧನಾ ಕೇಂದ್ರದಲ್ಲಿ ಕೊರೋನಾ ವೈರಾಣು ಟೆಸ್ಟ್ ಮಾಡುವ ಲ್ಯಾಬ್ ಸೆಟಲ್ ಮಾಡುವ ಕೆಲಸ ಅಹೋರಾತ್ರಿ ನಡೆಯುತ್ತಿದೆ. ಬೆಳಗಾವಿಯ ಲ್ಯಾಬ್ ನಲ್ಲಿ ಈಗ ಶಂಕಿತರ ಗಂಟಲು ದ್ರವಗಳನ್ನು ಟೆಸ್ಟ್ ಮಾಡುವ ಟ್ರೈಲ್ ನಡೆಯುತ್ತಿದ್ದು.ಬಹುಶ ನಾಳೆಯಿಂದ ಬೆಳಗಾವಿಯ ಲ್ಯಾಬ್ ಪೂರ್ಣ ಪ್ರಮಾಣದಲ್ಲಿ ಕಾರ್ಯ ನಿರ್ವಹಿಸಲಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ . ಬೆಳಗಾವಿಯ ಪ್ರಯೋಗಾಲಯ ಪೂರ್ಣ ಪ್ರಮಾಣದಲ್ಲಿ ನಾಳೆಯಿಂದ …

Read More »

ಬುಧವಾರ ಯಾವುದೇ ಪಾಸಿಟಿವ್ ಬೆಳಗಾವಿಯಲ್ಲಿ ಇಲ್ಲ

ಬೆಳಗಾವಿ – ಬುಧವಾರ ಬೆಳಗಿನ ಹಲ್ತ ಬುಲಿಟೀನ್ ಬಿಡುಗಡೆಯಾಗಿದ್ದು ,ಬೆಳಗಾವಿಯ ಯಾವುದೇ ಪಾಸಿಟೀವ್ ಕೇಸ್ ಪತ್ತೆ ಆಗಿಲ್ಲ. ಹೀಗಾಗಿ ಬುಧವಾರ ಬೆಳಗಿನ ಬುಲಿಟೀನ್ ಬೆಳಗಾವಿ ಪಾಲಿಗೆ ಲಕ್ಕೀ… ರ್ರೀ ರಾಜ್ಯದ ವಿವಿಧ ಜಿಲ್ಲೆಗಳ 7 ಪಾಸಿಟೀವ್ ಕೇಸ್ ಗಳು ಬೆಳಕಿಗೆ ಬಂದಿವೆ ಆದ್ರೆ ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಪಾಸಿಟೀವ್ ಪ್ರಕರಣಗಳು ಬೆಳಕಿಗೆ ಬಂದಿಲ್ಲ .ಹೀಗಾಗಿ ಬೆಳಗಾವಿ ಜಿಲ್ಲೆ ದಿನದಿಂದ ದಿನಕ್ಕೆ ಕೊರೊನಾ ಮಹಾಮಾರಿಯಿಂದ ದೂರ ಸರಿಯುತ್ತಿದೆ ಬೆಳಗಾವಿ ಜಿಲ್ಲೆಯಲ್ಲಿ ಈ …

Read More »

ಪೊಲೀಸ್ ಅಧಿಕಾರಿಗಳಿಗೆ ಶಾಸಕ ನಡಹಳ್ಳಿ ಖಡಕ್ ನಿರ್ದೇಶನ

ವಿಜಯಪುರ: ಕೊರೊನಾ ವೈರಸ್ ಭೀತಿಯಿಂದ ಇಡೀ ದೇಶವೇ ಲಾಕ್ ಡೌನ್ ಮಾಡಲಾಗಿದೆ. ಈ ಮಧ್ಯೆ ಕೊರೊನಾ ವಾರಿಯರ್ಸ್ ಮೇಲೆ ರಾಜ್ಯದಲ್ಲಿ ಆಗಾಗ ಹಲ್ಲೆಗಳು ನಡೆಯುತ್ತಲೇ ಇವೆ. ಈ ಹಿನ್ನೆಲೆಯಲ್ಲಿ ಮುದ್ದೇಬಿಹಾಳ ಶಾಸಕ ಎ.ಎಸ್ ಪಾಟೀಲ್ ನಡಹಳ್ಳಿ ಅವರು ಪೊಲೀಸ್ ಅಧಿಕಾರಿಗಳಿಗೆ ಖಡಕ್ ನಿರ್ದೇಶನ ನೀಡಿದ್ದಾರೆ. ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ನಡೆಸಿದ್ರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಿ. ನನ್ನ ತಾಲೂಕಿನ ಆಶಾ ಕಾರ್ಯಕರ್ತೆ, ವೈದ್ಯರ ಮೇಲೆ ಹಲ್ಲೆ ನಡೆಸಿದ್ರೆ ಅಂಥವರ …

Read More »

ಲಾಕ್‍ಡೌನ್ ನಡ್ವೆ ಪೊಲೀಸರ ಮೊಬೈಲ್ ಕದ್ದ ಕಳ್ಳರು………..

ಬೆಂಗಳೂರು: ಲಾಕ್‍ಡೌನ್ ನಡುವೆಯೇ ಕಳ್ಳರು ತಮ್ಮ ಕೈಚಳಕ ತೋರಿಸಿದ್ದು, ಪೊಲೀಸ್ ಪೇದೆಗಳಿಬ್ಬರ ಮೊಬೈಲ್ ಕದ್ದಿದ್ದಾರೆ. ಪಾದರಾಯನಪುರದಲ್ಲಿ ಅನಾವಶ್ಯಕವಾಗಿ ರಸ್ತೆಯಲ್ಲಿ ಓಡಾಡುತ್ತಿದ್ದ ಸ್ಥಳೀಯರನ್ನು ತಡೆದು ಪೊಲೀಸರು ವಾಪಸ್ ಕಳುಹಿಸುತ್ತಿದ್ದರು. ಈ ವೇಳೆ ಕೆಲವರು ಪೊಲೀಸರ ಜೊತೆ ವಾಗ್ವಾದಕ್ಕೆ ಇಳಿದಿದ್ರು. ಈ ಸಮಯದಲ್ಲಿಯೇ ಕಳ್ಳ ಪೇದೆಗಳಿಬ್ಬರ ಮೊಬೈಲ್ ಕದ್ದು ಪರಾರಿಯಾಗಿದ್ದಾನೆ. ಸದ್ಯ ಕಳ್ಳತನ ನಡೆದ ಸ್ಥಳದ ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದಾರೆ. ಲಾಕ್‍ಡೌನ್ ಇದ್ರೂ ಬೆಂಗಳೂರಿನ ರಸ್ತೆಗಳಲ್ಲಿ ಹೆಚ್ಚು ಬೈಕ್ ಗಳು ರಸ್ತೆಗಿಳಿದಿವೆ. ಬೆಂಗಳೂರು-ತುಮಕೂರು …

Read More »

ಅನಗತ್ಯವಾಗಿ ಸಂಚರಿಸುತ್ತಿದ್ದವರ ವಾಹನ ಸೀಜ್- ಸಿಲಿಕಾನ್‍ ಸಿಟಿಯಲ್ಲಿ ಮಿಂಚಿನ ಕಾರ್ಯಾಚರಣೆ

ಬೆಂಗಳೂರು: ಕಳೆದ ಎರಡ್ಮೂರು ದಿನಗಳಿಂದ ಸಿಲಿಕಾನ್ ಸಿಟಿಯಲ್ಲಿ ವಾಹನ ಸಂಚಾರ ಹೆಚ್ಚಾಗಿದ್ದು, ವಿವಿಧೆಡೆ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದೆ. ಹೀಗಾಗಿ ಸರ್ಕಾರ ಲಾಕ್‍ಡೌನ್ ಬಿಗಿಗೊಳಿಸಿದ್ದು, ಪೊಲೀಸರೂ ಸಷ್ಟೇ ಕಾರ್ಯಪ್ರವೃತ್ತರಾಗಿದ್ದಾರೆ. ಅನಗತ್ಯವಾಗಿ ಸಂಚರಿಸುವ ವಾಹನಗಳನ್ನು ಸೀಜ್ ಮಾಡುತ್ತಿದ್ದಾರೆ. ಬೆಂಗಳೂರು ತುಮಕೂರು ಹೆದ್ದಾರಿಯ ಎಸ್‌ಆರ್‌ಎಸ್ ಬಸ್ ನಿಲ್ದಾಣದ ಬಳಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಮಿಂಚಿನ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಅನಗತ್ಯವಾಗಿ ಸಂಚರಿಸುವ ಬೈಕ್ ಹಾಗೂ ಕಾರುಗಳನ್ನು ಸೀಜ್ ಮಾಡುತ್ತಿದ್ದಾರೆ. ಮಂಗಳವಾರ ಮೆಜೆಸ್ಟಿಕ್, ಕೆ.ಆರ್.ಮಾರ್ಕೆಟ್, ಆನಂದರಾವ್ ಸರ್ಕಲ್ …

Read More »

ಕರ್ತವ್ಯ ನಿರತ ಪೋಲಿಸರು,ಆಶಾ ಅಂಗನವಾಡಿ ಕಾರ್ಯಕರ್ತೆಯರು,ಕಾರ್ಮಿಕರಿಗೆ ಅಲ್ಪೋಪಹಾರ ವ್ಯವಸ್ಥೆ

ಗೋಕಾಕ ತಾಲೂಕಿನ ಮಲ್ಲಾಪೂರ ಪಿಜಿ ಪಟ್ಟಣದಲ್ಲಿ ಭಾರತೀಯ ಕೃಷಿಕ ಸಮಾಜದ ದೇಶಾದ್ಯಂತ ಕೊರೋನ ಸೋಂಕು ವ್ಯಾಪಕವಾಗಿ ಹರಡಿರುವ ಹಿನ್ನೆಲೆಯಲ್ಲಿ ಹಗಲಿರುಳು ಸೇವೆಯಲ್ಲಿ ತೊಡಗಿರುವ ಪೋಲಿಸರು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು,ಮಲ್ಲಾಪೂರ ಪಿಜಿ ಪ.ಪಂ ಪೌರ ಕಾರ್ಮಿಕರಿಗೆ ಮುಂಜಾನೆಯ ಅಲ್ಪೋಪಹಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಭಾರತೀಯ ಕೃಷಿಕ ಸಮಾಜ ರಾಜ್ಯ ಉಪಾಧ್ಯಕ್ಷ ಕೊಟ್ರೇಶ.ಕೆ.ಪಟ್ಟಣಶೆಟ್ಟಿ. ಕಾರ್ಯದರ್ಶಿ ಮಾರುತಿ ಸಿಂಗಾರಿ.ಕರ್ನಾಟಕ ನವ ನಿರ್ಮಾಣ ಸೇನೆಯ ತಾಲೂಕ ಉಪಾಧ್ಯಕ್ಷೆ ಸವಿತಾ ಪಟ್ಟಣಶೆಟ್ಟಿ. ಲಕ್ಷ್ಮೀ ಮಡಿವಾಳ. ಶಾರದಾ …

Read More »

ನಾಡಿಗೆ ಬಂದು ಬಾವಿಗೆ ಬಿದ್ದ ಚಿರತೆ ರಕ್ಷಣೆ

ಮಂಗಳೂರು: ಲಾಕ್‍ಡೌನ್ ಹಿನ್ನೆಲೆ ಜನದಟ್ಟಣೆ ಕಡಿಮೆಯಾಗಿರುವುದರಿಂದ ಆಹಾರ ಹುಡುಕಿಕೊಂಡು ಕಾಡಿನಿಂದ ನಾಡಿಗೆ ಬಂದಿದ್ದ ಚಿರತೆಯೊಂದು ಬಾವಿಗೆ ಬಿದ್ದಿದ್ದು, ನಂತರ ರಕ್ಷಣೆ ಮಾಡಿ ಕಾಡಿಗೆ ಬಿಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ತುಂಬೆಯಲ್ಲಿ ಘಟನೆ ನಡೆದಿದ್ದು, ಮಜಿ ಮೋನಪ್ಪ ಅವರ ಜಮೀನಿನಲ್ಲಿರುವ ಸುಮಾರು 6 ಅಡಿ ಆಳದ ಬಾವಿಗೆ ಚಿರತೆ ಬಿದ್ದು ಆತಂಕ ಸೃಷ್ಟಿಸಿತ್ತು. ಬಾವಿಯಿಂದ ಮೇಲಕ್ಕೆ ಬರಲು ಸಾಧ್ಯವಾಗದೆ ಹೊರಳಾಡುತ್ತಿತ್ತು. ರಾತ್ರಿ ವೇಳೆ ಕಾಣದೆ ಚಿರತೆ ಬಾವಿಯಲ್ಲಿ ಬಿದ್ದಿದ್ದು, …

Read More »