ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಕಾರಣದಿಂದಾಗಿ ಇಡೀ ದೇಶವೇ ಲಾಕ್ಡೌನ್ ಆಗಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಬಡವರು, ನಿರ್ಗತಿಕರು ಹಾಗೂ ರೈತರ ಬದುಕು ಅಸ್ತವ್ಯಸ್ತವಾಗಿದೆ. ರೈತರ ಬದುಕು ಸಂಕಷ್ಟಕ್ಕೆ ಸಿಲುಕಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಸೋಂಪುರ ಹೋಬಳಿಯ ಲಕ್ಕೂರು ಗ್ರಾಮದ ರೈತ ಕೆಂಪರಾಜು ಅವರು ಬೇರೆಯವರ ಜಮೀನನ್ನು ಗುತ್ತಿಗೆ ಪಡೆದು ವ್ಯವಸಾಯ ಮಾಡುತ್ತಿದ್ದಾರೆ. ಈ ಗುತ್ತೆಗೆ ಪಡೆದ ಜಮೀನಿನಲ್ಲಿ ಚೆಂಡು ಹೂವು ಬೆಳೆದು, ಸರಿಯಾದ ಮಾರುಕಟ್ಟೆ ಇಲ್ಲದೇ …
Read More »Daily Archives: ಏಪ್ರಿಲ್ 27, 2020
ಮೇ 15ರವರೆಗೂ ಲಾಕ್ಡೌನ್ ವಿಸ್ತರಣೆ ಸಾಧ್ಯತೆ – ರಾಜ್ಯಗಳ ಬೇಡಿಕೆ ಏನು?
ನವದೆಹಲಿ: ಲಾಕ್ಡೌನ್ ವಿಸ್ತರಣೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ವಿಡಿಯೋ ಕಾನ್ಫೆರೆನ್ಸ್ ಮೂಲಕ ಸಭೆ ನಡೆಸಿದ್ದು ಸಭೆ ಬಳಿಕ ಲಾಕ್ಡೌನ್ ಮುಂದುವರಿಸುವ ತೀರ್ಮಾನಕ್ಕೆ ಬರಲಾಗಿದೆ ಎಂದು ಮೂಲಗಳು ಹೇಳಿವೆ. ಮತ್ತಷ್ಟು ವಿನಾಯ್ತಿಗಳೊಂದಿಗೆ ಮೇ 15ರವರೆಗೂ ಲಾಕ್ಡೌನ್ ಮುಂದುವರಿಸುವ ಸಾಧ್ಯತೆ ಇದ್ದು, ಈ ಬಗ್ಗೆ ಅಧಿಕೃತ ಆದೇಶ ಹೊರ ಬರಬೇಕಿದೆ. ಈ ವಾರದ ಅಂತ್ಯದಲ್ಲಿ ಪ್ರಧಾನಿ ಮೋದಿ ದೇಶದ ಜನರನ್ನುದ್ದೇಶಿಸಿ ಐದನೇ ಬಾರಿ ಮಾತನಾಡಿಲಿದ್ದು, ಈ …
Read More »ಹುಬ್ಬಳ್ಳಿಯ ಮಾಧ್ಯಮ ಪ್ರತಿನಿಧಿಗಳಿಗೆ ಆರೋಗ್ಯ ತಪಾಸಣೆ……..
ಹುಬ್ಬಳ್ಳಿ: ಜಿಲ್ಲಾ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಪ್ರತಿನಿಧಿಗಳಿಗೆ ಕೋವಿಡ್-19 ಆರೋಗ್ಯ ತಪಾಸಣೆಯನ್ನು ನಗರದ ಕಿಮ್ಸ್ ನ ಪಿಎಂಎಸ್ಎಸ್ ವೈ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಾಡಲಾಯಿತು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಪತ್ರಕರ್ತರಿಗೆ ಕೋವಿಡ್ ಆರೋಗ್ಯ ತಪಾಸಣೆ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಮಟ್ಟದ ಎಲ್ಲ ಮಾಧ್ಯಮ ಪ್ರತಿನಿಧಿಗಳಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡಿ, ಗಂಟಲು ದ್ರವ ಸಂಗ್ರಹಿಸಲಾಯಿತು. ರಾಜ್ಯದಲ್ಲಿ ಕೋವಿಡ್-19 ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, …
Read More »ಜೀವ ಮತ್ತು ಜೀವನ ಉಳಿಸಿಕೊಳ್ಳಲು ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ: ಲಕ್ಷ್ಮಣ್ ಸವದಿ
ರಾಯಚೂರು: ಜನಪ್ರತಿನಿಧಿಗಳು ಜಾತಿ, ರಾಜಕೀಯ ಬಿಟ್ಟು ನಿಜವಾಗಿ ಕಷ್ಟದಲ್ಲಿರುವವರಿಗೆ ಸ್ಪಂದಿಸಬೇಕಿದೆ. ಎಲ್ಲವೂ ಸರ್ಕಾರದಿಂದ ಸಾಧ್ಯವಿಲ್ಲ. ಅಧಿಕಾರಿಗಳು, ಜನಪ್ರತಿನಿಧಿಗಳು ಜೀವ ಮತ್ತು ಜೀವನ ಉಳಿಸಲು ಹಾಗೂ ಉಳಿಸಿಕೊಳ್ಳಲು ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಕರೆ ನೀಡಿದ್ದಾರೆ. ರಾಯಚೂರು ಜಲ್ಲೆಯಲ್ಲಿ ಡಿಸಿಎಂ ಅಕಾಲಿಕ ಮಳೆಯಿಂದಾಗಿ ಹಾನಿಯಾದ ಬೆಳೆ ವೀಕ್ಷಣೆ ಮಾಡಿದರೆ. ಬಳಿಕ ನಗರದ ಜಿ.ಪಂ ಸಭಾಂಗಣದಲ್ಲಿ ನಡೆದ ಕೊರೊನಾ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ಹಸಿರು …
Read More »ಮೂಟೆ ಹೊತ್ತು ಸುಸ್ತಾಗುವ ನಮ್ಗೆ ಎಣ್ಣೆ ಇಲ್ಲದಿದ್ರೆ ಹೇಗೆ: ಹಮಾಲಿಗಳು ಆಕ್ರೋಶ………..
ರಾಯಚೂರು: ಲಾಕ್ಡೌನ್ ಹಿನ್ನೆಲೆ ಮದ್ಯಪ್ರಿಯರಿಗೆ ಬಹಿರಂಗವಾಗಿ ಹೇಳಿಕೊಳ್ಳಲು ಆಗದಿರುವಷ್ಟು ಪರಿಸ್ಥಿತಿ ಗಂಭೀರವಾಗಿದೆ. ಹೀಗಾಗಿ ಕೆಲವರು ದುಬಾರಿ ಬೆಲೆಗೆ ಅಕ್ರಮ ಮದ್ಯವನ್ನು ಕೊಂಡು ಕುಡಿಯುತ್ತಿದ್ದಾರೆ. ರಾಯಚೂರಿನ ಎಪಿಎಂಸಿ ಹಮಾಲಿಗಳು ಮಾತ್ರ ಮದ್ಯ ಬಂದ್ ಆಗಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮದ್ಯ ಸಿಗದಿರುವುದಕ್ಕೆ ಕೆಲವರು ಸಿಎಚ್ ಪೌಡರ್ ಕಲಬೆರಕೆ ಸೇಂದಿಗೆ ದಾಸರಾಗಿದ್ದಾರೆ. ಸೇಂದಿ ಬೆಲೆ ಸಹ ಲಾಕ್ಡೌನ್ ಹಿನ್ನೆಲೆ ಡಬಲ್ ಆಗಿದೆಯಂತೆ. ಲಾಕ್ಡೌನ್ನಿಂದ ಸಿಎಚ್ ಪೌಡರ್ ಸಹ ಸಿಗದಿರುವುದರಿಂದ ಅದರಲ್ಲೂ ನಕಲಿ ಸೇಂದಿ …
Read More »ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಮಾಸ್ಕ್ ಧರಿಸುವಂತೆ ಹೇಳಿದ್ದಕ್ಕೆ ಕರ್ತವ್ಯ ನಿರತ ಪೊಲೀಸರು ಸಿ.ಆರ್.ಪಿ.ಎಫ್ ಯೋಧನ ಮೇಲೆ ಹಲ್ಲೆ ನಡೆಸಿ ಬೇಡಿ ತೋಡಿಸಿದ್ದು ಈಗ ಚರ್ಚೆಗೆ ಗ್ರಾಸವಾಗಿದೆ.
ಚಿಕ್ಕೋಡಿ (ಬೆಳಗಾವಿ): ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಮಾಸ್ಕ್ ಧರಿಸುವಂತೆ ಹೇಳಿದ್ದಕ್ಕೆ ಕರ್ತವ್ಯ ನಿರತ ಪೊಲೀಸರು ಸಿ.ಆರ್.ಪಿ.ಎಫ್ ಯೋಧನ ಮೇಲೆ ಹಲ್ಲೆ ನಡೆಸಿ ಬೇಡಿ ತೋಡಿಸಿದ್ದು ಈಗ ಚರ್ಚೆಗೆ ಗ್ರಾಸವಾಗಿದೆ. ಏಪ್ರಿಲ್ 23ರಂದು ಈ ಘಟನೆ ನಡೆದಿದ್ದು, ಯೋಧ ಸಚಿನ ಸಾವಂತ್ ಅವರನ್ನು ಪೊಲೀಸ್ ಠಾಣೆಯಲ್ಲಿ ಕೈಗೆ ಬೇಡಿ ಹಾಕಿ ಕೂರಿಸಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಸದಲಾಗ ಪೊಲೀಸ್ ಠಾಣೆಯಲ್ಲಿ ಸಿ.ಆರ್.ಪಿ.ಎಫ್ ಕೋಬ್ರಾ ಕಮಾಂಡೋ ಯೋಧನಿಗೆ ಬೇಡಿ ಹಾಕಿ ಕೂರಿಸಿದ್ದ …
Read More »ಲಾಕ್ ಡೌನ್: 794 ಅಬಕಾರಿ ದಾಳಿ- ಮದ್ಯ, ವಾಹನ ಸೇರಿದಂತೆ 1.10 ಕೋಟಿ ಮೌಲ್ಯದ ವಸ್ತು ಜಪ್ತಿ
ಬೆಳಗಾವಿ, ಏ.೨೭(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಕೊರೋನಾ ವೈರಸ್ ಸೋಂಕನ್ನು ತಡೆಗಟ್ಟುವ ಮತ್ತು ಹರಡುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ ಹೊರಡಿಸಿರುವುದರಿಂದ ಜಿಲ್ಲೆಯಾದ್ಯಂತ ಕಳ್ಳಭಟ್ಟ ಸಾರಾಯಿ ತಯಾರಿಕೆ ಹಾಗೂ ಮಾರಾಟ ಹೆಚ್ಚಾಗುವ ಸಂಭವ ಇರುವುದರಿಂದ ಅಕ್ರಮ ಚಟುವಟಿಕೆಗಳು ನಡೆಯದಂತೆ ಅಬಕಾರಿ ತಂಡಗಳನ್ನು ರಚಿಸಿರುತ್ತದೆ. ದಿನಾಂಕ 24-03-2020 ರಿಂದ ಇಲ್ಲಿಯವರೆಗೆ ಅಕ್ರಮ ಕೇಂದ್ರಗಳಲ್ಲಿ ನಿರಂತರವಾಗಿ ಅಬಕಾರಿ ದಾಳಿ, ಹಗಲು- ರಾತ್ರಿ ಗಸ್ತು, ರಸ್ತೆಗಾವಲು ನಡೆಸಿ, ವಾಹನಗಳನ್ನು ತಪಾಸಣೆ ನಡೆಸಿ, ಕ್ರಮ ಕೈಗೊಳ್ಳಲಾಗಿರುತ್ತದೆ. …
Read More »ಕಾಂಗ್ರೆಸ್ ಭವನದಲ್ಲಿ ಆಶಾ ಕಾರ್ಯಕರ್ತೆಯರು, ದಾದಿಯರು, ಪೌರ ಕಾರ್ಮಿಕರಿಗೆ ಪಿಪಿಎ ಕಿಟ್ ವಿತರಣೆ: ಡಿ.ಕೆ ಶಿವಕುಮಾರ್
ಬೆಂಗಳೂರು: ಜೀವನವನ್ನು ಪಣಕ್ಕಿಟ್ಟು ಕೊರೊನಾ ಸೋಂಕಿನ ವಿರುದ್ಧ ಹೋರಾಡುವ ವೈದ್ಯರಿಗೆ ಹೊರತು ಪಡಿಸಿ ಉಳಿದ ಕೆಲವರಿಗೆ ಪಿಪಿಎ ಕಿಟ್ ಸಿಗುತ್ತಿಲ್ಲ. ಹೀಗಾಗಿ ಇಂದು ಪಿಪಿಇ ಕಿಟ್ ವಿರತರಣೆ ಮಾಡುತ್ತಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ. ಕಾಂಗ್ರೆಸ್ ಭವನದಲ್ಲಿ ಆಶಾ ಕಾರ್ಯಕರ್ತೆಯರು, ದಾದಿಯರು, ಪೌರ ಕಾರ್ಮಿಕರಿಗೆ ಪಿಪಿಎ ಕಿಟ್ ವಿತರಣೆ ಮಾಡಿ ಮಾತನಾಡಿದ ಅವರು, ವೈದ್ಯರನ್ನ ಹೊರತುಪಡಿಸಿ ಉಳಿದವರಿಗೆ ಪಿಪಿಎ ಕಿಟ್ ವಿತರಣೆ ಮಾಡಿದ್ದೇವೆ. ಜನ ಲಾಕ್ …
Read More »ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ತಾರತಮ್ಯ ಸಲ್ಲದು: ಸತೀಶ ಜಾರಕಿಹೊಳಿ
ಚಿಕ್ಕೋಡಿ: ಕೆಪಿಸಿಸಿ ಕಾರ್ಯಾದ್ಯಕ್ಷ ಸತೀಶ ಜಾರಕಿಹೊಳಿ ಅವರು ಕೊರೋನಾ ಸೋಂಕು ಕುರಿತು ಜಾಗೃತಿ ಬಗ್ಗೆ ಹಾಗೂ ಕಾರ್ಯಚಟುವಟಿಕೆಗಳ ಬಗ್ಗೆ ಯಾವ ರೀತಿ ನಾವು ಶ್ರಮಿಸಬೇಕು ಪಕ್ಷದ ಕಾರ್ಯಕರ್ತರು ಹೇಗೆಲ್ಲ ಸ್ಪಂದನೆ ನೀಡಬೇಕು ಎಂಬುದರ ಕುರಿತು ಇಲ್ಲಿನ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಭೆ ನಡೆಸಿದರು. ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ತಾರತಮ್ಯ ಸಲ್ಲದು ಎಂದು ಹರಿಹಾಯ್ದರು. ಕೇಂದ್ರ ಸರ್ಕಾರ ನೇರವಾಗಿ ವಿವಿಧ ಯೊಜನೆಗಳ ಫಲಾನುಭವಿಗಳಿಗೆ ಹಣ ನೀಡುವ …
Read More »ಲಾಕ್ ಡೌನ್ ಮೇ.15ರವರೆಗೆ ಮುಂದುವರೆಯುವುದು ಬಹುತೇಕ ಖಚಿತವಾಗಿದೆ.,,,,,,,,,,,,,”
ಬೆಂಗಳೂರು: ರಾಜ್ಯದ ಜನರು ಮೇ.3 ಬಳಿಕ ಲಾಕ್ ಡೌನ್ ಮುಕ್ತಾಯವಾಗಲಿದೆ ಎಂದುಕೊಂಡಿದ್ದರು. ಆದರೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿವರೊಂದಿಗೆ ನಡೆದ ವಿಡಿಯೋ ಕಾನ್ಪರೆನ್ಸ್ ನಲ್ಲಿ ಲಾಕ್ ಡೌನ್ ಮುಂದುವರೆಸಲಾಗುವುದು ಎಂಬ ಸುಳಿವು ಕೊಟ್ಟಿದ್ದಾರೆ. ದೇಶದಲ್ಲಿ ಕೊರೊನಾ ಸೋಂಕು ಹರಡುತ್ತಲೆ ಇದೆ. ಇದರಿಂದ ಲಾಕ್ ಡೌನ್ ಮೇ.15ರವರೆಗೆ ಮುಂದುವರೆಯುವುದು ಬಹುತೇಕ ಖಚಿತವಾಗಿದೆ. ಪ್ರಧಾನಿ ಮೋದಿ ವಿಡಿಯೋ ಕಾನ್ಪರೆನ್ಸ್ ನಲ್ಲಿ ತಮ್ಮ ಪ್ಲ್ಯಾನ್ ಬಗ್ಗೆ ವಿವರಿಸಿದ್ದಾರೆ. ಕೊರೊನಾ …
Read More »
Laxmi News 24×7