Breaking News

Monthly Archives: ಏಪ್ರಿಲ್ 2020

ಇದ್ದಕ್ಕಿದ್ದಂತೆ ಜಾನುವಾರಗಳ ಸಾವು – ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

ಯಾದಗಿರಿ: ಸದ್ಯ ಕೊರೊನಾ ಗ್ರೀನ್ ಜೋನ್‍ನಲ್ಲಿರುವ ಯಾದಗಿರಿಗೆ ಮತ್ತೊಂದು ಆತಂಕ ಎದುರಾಗಿದೆ. ಜಿಲ್ಲೆಯಲ್ಲಿ ಕೆಳದ ಮೂರು ದಿನಗಳಿಂದ ದನ-ಕರುಗಳು ಇದ್ದಕ್ಕಿದ್ದಂತೆ ಸಾವನ್ನಪ್ಪುತ್ತಿವೆ. ಜಿಲ್ಲೆಯ ಯಾದಗಿರಿ ತಾಲೂಕಿನ ನಗಲಾಪುರ ಗ್ರಾಮದಲ್ಲಿ ಕಳೆದ ಮೂರು ದಿನದಲ್ಲಿ ಆರು ದನಗಳು ಸಾವನ್ನಪ್ಪಿದ್ದು, ಗ್ರಾಮಸ್ಥರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ದನಗಳ ಸಾವಿಗೆ ಯಾವುದೇ ಕಾರಣವಿಲ್ಲ ಮತ್ತು ಅವುಗಳಲ್ಲಿ ಯಾವುದೇ ರೋಗ ಲಕ್ಷಣಗಳು ಕಂಡುಬಂದಿಲ್ಲ. ಮೇಯಿಯಲು ಹೊರಗಡೆ ತಿರುಗಾಡಿ ಮನೆಗೆ ಬಂದು ನೀರು ಕುಡಿದ ತಕ್ಷಣವೇ ದನಗಳು …

Read More »

ಯಮ, ಕಿಂಕರರು ಹಾಗೂ ಕೊರೊನಾ ವೈರಸ್ ವೇಷ ಹಾಕಿಕೊಂಡು ಸ್ಥಳೀಯರು ಕೊರೊನಾ ವೈರಸ್ ಕುರಿತು ಜಾಗೃತಿ

ಹಾವೇರಿ: ಯಮ, ಕಿಂಕರರು ಹಾಗೂ ಕೊರೊನಾ ವೈರಸ್ ವೇಷ ಹಾಕಿಕೊಂಡು ಸ್ಥಳೀಯರು ಕೊರೊನಾ ವೈರಸ್ ಕುರಿತು ಜನರಿಗೆ ಜಾಗೃತಿ ಮೂಡಿಸುತ್ತಿರುವ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಹೊಸಪೇಟೆ ಓಣಿಯ ನಾಲ್ವರಲ್ಲಿ ಓರ್ವ ಯಮನ ವೇಷ, ಇಬ್ಬರು ಕಿಂಕರರ ವೇಷ ಹಾಗೂ ಮತ್ತೊಬ್ಬ ಕೊರೊನಾ ವೈರಸ್ ನ ವೇಷ ಹಾಕಿಕೊಂಡು ಪಟ್ಟಣದಲ್ಲಿ ಜನರಿಗೆ ಕೊರೊನಾ ವೈರಸ್ ಮತ್ತು ಲಾಕ್‍ಡೌನ್ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಯಮ …

Read More »

ಬೆಂಗಳೂರಿನ ಇನ್ಫೋಸಿಸ್ ಫೌಂಡೇಶನ್ ವತಿಯಿಂದ ಇಂದು ಪೌರಕಾರ್ಮಿಕರಿಗೆ ಆಹಾರ ಕಿಟ್ ವಿತರಿಸಲಾಯಿತು.

ಹುಬ್ಬಳ್ಳಿ: ಬೆಂಗಳೂರಿನ ಇನ್ಫೋಸಿಸ್ ಫೌಂಡೇಶನ್ ವತಿಯಿಂದ ಇಂದು ಪೌರಕಾರ್ಮಿಕರಿಗೆ ಆಹಾರ ಕಿಟ್ ವಿತರಿಸಲಾಯಿತು. ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ತಡೆಗಟ್ಟುವ ನಿಟ್ಟಿನಲ್ಲಿ ಸ್ವಚ್ಛತಾ ಸೇನಾನಿಗಳಂತೆ ಕಾರ್ಯನಿರ್ವಹಿಸುತ್ತಿರುವ (Frontline workers) ಪಾಲಿಕೆಯ ಪೌರಕಾರ್ಮಿಕರು, ಆಟೋ ಟಿಪ್ಪರ್ ಚಾಲಕರು ಮತ್ತು ಸಹಾಯಕರು, ಟ್ರ್ಯಾಕ್ಟರ್ ಡ್ರೈವರ್‍ಗಳು, ಲೋಡರ್ಸ್, ಜೆಟ್ಟಿಂಗ್ ಯಂತ್ರದ ಸಿಬ್ಬಂದಿಗೆ 2,800 ಆಹಾರ ಸಾಮಗ್ರಿಗಳ ಕಿಟ್ ವಲಯವಾರು ವಿತರಿಸಲಾಯಿತು. ಕಿಟ್ 5 ಕೆ.ಜಿ ಅಕ್ಕಿ, 1ಕೆ.ಜಿ ತೊಗರಿ …

Read More »

ಪತ್ರಕರ್ತರ ಕೋವಿಡ್-19 ಪರೀಕ್ಷೆ ನಡೆಸುತ್ತಿದ್ದ ವೇಳೆ ಅಡ್ಡಿಪಡೆಸಿ, ಗಲಾಟೆ ಮಾಡಿದ ಎಂಎಲ್‍ಸಿ ಕೆ.ಟಿ ಶ್ರೀಕಂಠೇಗೌಡ ಹಾಗೂ ಅವರ ಪುತ್ರನ ವಿರುದ್ಧ ಸಂಸದೆ ಸುಮಲತಾ ಅಂಬರೀಶ್ ಕಿಡಿ

ಮಂಡ್ಯ: ಇಂದು ಪತ್ರಕರ್ತರ ಕೋವಿಡ್-19 ಪರೀಕ್ಷೆ ನಡೆಸುತ್ತಿದ್ದ ವೇಳೆ ಅಡ್ಡಿಪಡೆಸಿ, ಗಲಾಟೆ ಮಾಡಿದ ಎಂಎಲ್‍ಸಿ ಕೆ.ಟಿ ಶ್ರೀಕಂಠೇಗೌಡ ಹಾಗೂ ಅವರ ಪುತ್ರನ ವಿರುದ್ಧ ಸಂಸದೆ ಸುಮಲತಾ ಅಂಬರೀಶ್ ಕಿಡಿಕಾರಿದ್ದಾರೆ. ಈ ರೀತಿ ಗೂಂಡಾಗಿರಿ ಮಾಡಿ, ಗಲಾಟೆ ಮಾಡೋರಿಗೆ ಎಂಎಲ್‍ಸಿ ಆಗಿ ಮುಂದುವರಿಯೋಕೆ ಯಾವ ಅರ್ಹತೆ ಇದೆ ಎಂದು ಪ್ರಶ್ನಿಸಿದ್ದಾರೆ. ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ದೂರವಾಣಿಯಲ್ಲಿ ಮಾತನಾಡಿದ ಅವರು, ಎಸ್‍ಪಿ, ಪೊಲೀಸ್ ಅಧಿಕಾರಿಗಳು, ಜಿಲ್ಲಾಡಳಿತದ ನೇತೃತ್ವದಲ್ಲಿ ನಡೆಯುತ್ತಿದ್ದ ಪತ್ರಕರ್ತರ …

Read More »

ಕೊರೊನಾ ಟೆಸ್ಟ್ ನಡೆಸದಂತೆ ಕಿರಿಕ್ – ಜೆಡಿಎಸ್ ಎಂಎಲ್‍ಸಿ, ಪುತ್ರನ ವಿರುದ್ಧ ಎಫ್‍ಐಆರ್

ಮಂಡ್ಯ: ಕೋವಿಡ್-19 ಟೆಸ್ಟ್ ನಡೆಸದಂತೆ ಕಿರಿಕ್ ಮಾಡಿದ್ದ ಜೆಡಿಎಸ್ ವಿಧಾನಪರಿಷತ್ ಸದಸ್ಯ ಶ್ರೀಕಂಠೇಗೌಡ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 143 (ಅಕ್ರಮ ಗುಂಪು), 147 (ದೊಂಬಿ) 341 (ಅಕ್ರಮವಾಗಿ ತಡೆಯುವುದು) ಅಡಿ ಪ್ರಕರಣ ದಾಖಲಾಗಿದೆ. ಶ್ರೀಕಂಠೇಗೌಡ ಎ1, ಪುತ್ರ ಕೃಷಿಕ್ ಗೌಡ ಎ2, ಬೆಂಬಲಿಗರಾದ ಚಂದ್ರಕಲಾ ಎ3, ಜಗದೀಶ್ ನಾಲ್ಕನೇ ಆರೋಪಿ ಆಗಿದ್ದಾರೆ. ನಗರದ ಅಂಬೇಡ್ಕರ್ ಭವನದಲ್ಲಿ ಇಂದು ಪತ್ರಕರ್ತರ ಕೋವಿಡ್ 19 …

Read More »

ರಸ್ತೆಯಲ್ಲಿ ನೋಟುಗಳು ಬಿದ್ದಿದ್ರೂ ಮುಟ್ಟದ ಜನ – ಪೊಲೀಸರಿಗೆ ಮಾಹಿತಿ

ರಾಯಚೂರು: ಮಹಾಮಾರಿ ಕೊರೊನಾ ವೈರಸ್ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ನೋಟುಗಳು ಆತಂಕ ಸೃಷ್ಟಿಸಿದ ಘಟನೆ ನಡೆದಿದೆ. 500 ರೂಪಾಯಿ ಮುಖಬೆಲೆಯ ನೋಟುಗಳು ಬೀದಿಯಲ್ಲಿ ಬಿದ್ದಿದ್ದಕ್ಕೆ ಜನ ಆತಂಕಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ರಾಯಚೂರಿನ ನೇತಾಜಿ ನಗರದಲ್ಲಿ 500 ರೂಪಾಯಿ ಮುಖಬೆಲೆಯ 5 ನೋಟುಗಳು ರಸ್ತೆಯಲ್ಲಿ ಬಿದ್ದಿದ್ದವು. ಇದನ್ನು ನೋಡಿದ ಸ್ಥಳೀಯರು ಆತಂಕಗೊಂಡಿದ್ದಾರೆ. ಅಲ್ಲದೇ ರಸ್ತೆಯಲ್ಲಿ ಹಣ ಬಿದ್ದಿದ್ದರು ಮುಟ್ಟದ ಸಾರ್ವಜನಿಕರು ಪೊಲೀಸರ ಗಮನಕ್ಕೆ ತಂದಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ …

Read More »

ಕೊರೋನಾ ವಿರುದ್ಧವಾಗಿ ಜಿಲ್ಲಾಮಟ್ಟದ ಅಧಿಕಾರಿಗಳು ಉತ್ತಮ ಸಹಕಾರ ನೀಡುತ್ತಿದ್ದಾರೆ: ಸಿಇಓ

ಮಂಡ್ಯ.ಏ.22 (ಕರ್ನಾಟಕ ವಾರ್ತೆ):- ಎಲ್ಲಾ ಇಲಾಖೆಯ ಅಧಿಕಾರಿಗಳು, ಸಂಘ-ಸಂಸ್ಥೆಗಳು, ದಾನಿಗಳು ಕೊರೋನಾ ವಿರುದ್ಧವಾಗಿ ಉತ್ತಮ ಸಹಕಾರ ನೀಡುತ್ತಿದ್ದಾರೆ. ಎಂದು ಜಿಲ್ಲಾ ಮುಖ್ಯಕಾರ್ಯನಿರ್ವಾಹಣಾಧಿಕಾರಿಯಾದ ಕೆ.ಯಾಲಕ್ಕಿಗೌಡ ಅವರು ಹೇಳಿದರು. ನಗರದ ಜಿಲ್ಲಾಪಂಚಾಯಿತಿಯ ಸಭಾಂಗಣದಲ್ಲಿ ಜಿಲ್ಲಾಪಂಚಾಯಿತಿಯ ಅಧ್ಯಕ್ಷರಾದ ನಾಗರತ್ನಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು ಗ್ರಾಮಪಂಚಾಯಿತಿಯ ಮಟ್ಟದಲ್ಲಿ ಅರಿವು ಮೂಡಿಸುವ ಕಾರ್ಯಕ್ರಮವನ್ನು ಮಾಡುತ್ತಿದ್ದು ಗ್ರಾಮಪಂಚಾಯಿತಿಯ ಅಧ್ಯಕ್ಷತೆಯಲ್ಲಿ ಗ್ರಾಮಪಡೆ ಎನ್ನುವ ಹೆಸರಿನಿಂದ ಮಾಡುತ್ತಿದ್ದಾರೆ. ಪಿಡಿಓ, ಕಾರ್ಯದರ್ಶಿ,ಸದಸ್ಯರು,ಅಂಗನವಾಡಿ ಕಾರ್ಯಕರ್ತೆಯರು, ಆಶಾಕಾರ್ಯಕರ್ತೆಯರು, ಪೊಲೀಸರು,ಮತ್ತು ತಾಲ್ಲೂಕು ಆರೋಗ್ಯಾಧಿಕಾರಿಗಳು, …

Read More »

ಪೊಲೀಸ್ ಇಲಾಖೆ ಸಿಬ್ಬಂದಿಗಳಿಗೆ ರೇಣುಕಾ ಹೋಟೆಲ್ ಕಡೆಯಿಂದ ಊಟದ ವ್ಯವಸ್ಥೆ

ಶ್ರೀ ರೇಣುಕಾ ಹೋಟೆಲ್ ಮಾಲೀಕರಾದ ಮುದಲಿಂಗ ಮಹಾಲಿಂಗಪ್ಪ ಗೋರಬಾಳ, ಹಾಗೂ ಪರಶುರಾಮ ಕಪರಟ್ಟಿ ವತಿಯಿಂದ ಹಾಗೂ ಪುರಸಭೆ ಸದಸ್ಯರಾದಂತಹ ವಿನೋದ ಕರನಿಂಗ್,ಗೂಳಪ್ಪ ಅಸೋದೆ,ಅಶೋಕ್ಕುಮಾರ್ ನಾಯಕ, ಹಾಗೂ ಮಾಣಿಕವಾಡಿ ಗ್ರಾಮದ ಯುವಕರು ನಾಗಪ್ಪ ಹರಿಜನ,ಅಸಿಫ್ ಶೇಖ,ವಾಸಿಮ ಮುಲ್ಲಾ, ಶಿವಲಿಂಗ ಗೋರಬಾಳ ವತಿಯಿಂದ. ಕೋರನಾ ವೈರಸ್ ಸಲುವಾಗಿ ಹಗಲು ರಾತ್ರಿ ಶ್ರಮ ಪಡುತ್ತಿರುವ ಪೊಲೀಸ್ ಇಲಾಖೆ ಸಿಬ್ಬಂದಿಗಳಿಗೆ ಸುಮಾರು 100~130 ವರೆಗೆ ಊಟದ ವ್ಯವಸ್ಥೆ ಮಾಡಲಾಯಿತು

Read More »

ನೌಕರರನ್ನು ವಜಾ ಮಾಡದಂತೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂ​ ಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.

ನವದೆಹಲಿ: ಮಹಾಮಾರಿ ಕೊರೊನಾ ವೈರಸ್‌ ನಿಂದಾಗಿ ಖಾಸಗಿ ಸಂಸ್ಥೆಗಳು ತಮ್ಮ ನೌಕರರನ್ನು ಯಾವುದೇ ಕಾರಣ ನೀಡದೆ ಸಾಮೂಹಿಕವಾಗಿ ಕೆಲಸದಿಂದ ವಜಾ ಮಾಡುವ ಆರೋಪ ಕೇಳಿಬಂದಿದೆ. ನೌಕರರನ್ನು ವಜಾ ಮಾಡದಂತೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂ​ ಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ಲಾಕ್‌ಡೌನ್‌ನಿಂದಾಗಿ ಖಾಸಗಿ ಕಂಪನಿಗಳು ತಮ್ಮ ನೌಕರರಿಗೆ ಜೀವನಾಧಾರವಾಗಿ ಕನಿಷ್ಠ ವೇತನ ನೀಡಬೇಕು. ತಮ್ಮ ವ್ಯವಹಾರವನ್ನು ನಿಲ್ಲಿಸಿದರೆ, ಕೆಲಸ ಕಳೆದುಕೊಂಡ ನೌಕರರಿಗೆ ಹಣಕಾಸಿನ ನೆರವು ನೀಡಬೇಕೆಂದು ಸರ್ಕಾರ …

Read More »

SSLC ಪರೀಕ್ಷೆ ಖಂಡಿತಾ ನಡೆಯುತ್ತೆ.ಸುರೇಶ್ ಕುಮಾರ್…

ಬೆಂಗಳೂರು: ಲಾಕ್ ಡೌನ್ ಮುಂದುವರೆದಿದ್ದು, ವೈರಸ್ ವಿಚಾರವಾಗಿ ಜನ ಭಯಗೊಂಡಿದ್ದಾರೆ. ಪರೀಕ್ಷೆಗಳಿಗೂ ವೈರಸ್ ಕಾಟ ತಪ್ಪಿಲ್ಲ. ಇಷ್ಟೊತ್ತಿಗೆ ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಗಳು ನಡೆದಿರಬೇಕಿತ್ತು. ಆದ್ರೆ ಲಾಕ್ ಡೌನ್ ಮುಂದುವರಿಕೆಯಿಂದಾಗಿ ಪರೀಕ್ಷೆ ಹೇಗೆ ಮಾಡ್ತಾರೆ ಎಂಬ ಪ್ರಶ್ನೆಗಳು ಉದ್ಭವಿಸಿವೆ. ಈ ಮಧ್ಯೆ ಪರೀಕ್ಷೆ ನಡೆಯದೆ 1-9 ಪಾಸ್ ಮಾಡಿದ ಹಾಗೆ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗುತ್ತೆ ಎಂಬ ವದಂತಿಗಳು ಹರಿದಾಡುತ್ತಿವೆ. ಈ ವದಂತಿಗಳಿಗೆ ಸಚಿವ ಸುರೇಶ್ ಕುಮಾರ್ ಬ್ರೇಕ್ ಹಾಕಿದ್ದಾರೆ. ಬೆಂಗಳೂರಿನಲ್ಲಿ …

Read More »