ಮೂಡಲಗಿ: ಇಲ್ಲಿನ ಇತಿಹಾಸ ಪ್ರಸಿದ್ದಿ ಪಡೆದಿರುವ ಶಿವಬೊಧ ರಂಗಮಠದ ಪೀಠಾದಿಪತಿ, ಈ ಭಾಗದ ನಡೆದಾಡುವ ದೇವರು ಎಂದೇ ಭಕ್ತರ ಹೃದಯದಲ್ಲಿ ನೆಲೆಸಿದ್ದ ಶ್ರೀಪಾದ ಬೊಧ ಮಹಾಸ್ವಾಮಿಗಳು (66) ಭಾನುವಾರ ಐಕ್ಯರಾದ ಸುದ್ದಿ ಕೇಳಿ ದಿಗ್ಭ್ರಮೆ ಉಂಟಾಯಿತು. ಪೂಜ್ಯರ ಪವಿತ್ರ ಆತ್ಮಕ್ಕೆ ಭಕ್ತಿಪೂರ್ವಕ ನಮನವನ್ನು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಲ್ಲಿಸಿ ಅತೀವ ಸಂತಾಪ ಸೂಚಿಸಿದ್ದಾರೆ. ಪೂಜ್ಯರ ಐಕ್ಯದಿಂದಾಗಿ ನಾಡಿಗೆ ಅಪಾರ ಹಾನಿಯಾಗಿದೆ.ಮೂಡಲಗಿ ಭಾಗದಲ್ಲಿ ಶೈಕ್ಷಣಿಕ, …
Read More »Monthly Archives: ಏಪ್ರಿಲ್ 2020
ಅಮೆರಿಕದಲ್ಲಿ ಕೊರೊನಾಗೆ ಒಂದೇ ದಿನ 1,997 ಮಂದಿ ಬಲಿ
ವಾಷಿಂಗ್ಟನ್: ಅಮೆರಿಕದಲ್ಲಿ ಒಂದೇ ದಿನಕ್ಕೆ 1,997 ಮಂದಿ ಬಲಿಯಾಗಿದ್ದಾರೆ ಎಂಬುದಾಗಿ ವರದಿಯಾಗಿದೆ. ಈ ಮೂಲಕ ಭಾನುವಾರದವರೆಗೆ ಮೃತಪಟ್ಟವರ ಸಂಖ್ಯೆ 40,661 ಕ್ಕೆ ಏರಿಕೆಯಾಗಿದೆ. ಪ್ರಪಂಚದಾದ್ಯಂತ ಕೋವಿಡ್ 19 ಎಂಬ ಮಹಾಮಾರಿ ಅಟ್ಟಹಾಸ ಮೆರೆಯುತ್ತಿದ್ದು, ಇತ್ತ ವಿಶ್ವದ ದೊಡ್ಡಣ್ಣ ಈ ಮಹಾಮಾರಿಗೆ ತತ್ತರಿಸಿ ಹೋಗಿದೆ. ಭಾನುವಾರದ ಅಂಕಿ-ಅಂಶವನ್ನು ಗಮನಿಸಿದಾಗ ಇನ್ನೂ ದುಪ್ಪಟ್ಟಾಗುವ ಸಾಧ್ಯತೆಗಳಿರುವುದಾಗಿ ರಾಜ್ಯಪಾಲ ಆಂಡ್ರ್ಯೂ ಕುಮೊ ಆತಂಕ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಅಮೆರಿಕದಲ್ಲಿ 7,64,265 ಕೊರೊನಾ ಸೋಂಕಿತರಿದ್ದು, ಈ ಮೂಲಕ ಜಗತ್ತಿನಲ್ಲೇ …
Read More »ಸರ್ಜಿಕಲ್ ಸ್ಪಿರಿಟ್ಗೆ ನೀರು ಬೆರೆಸಿ ಕಳ್ಳಬಟ್ಟಿ ಸಾರಾಯಿ ಎಂದು ಮಾರಾಟ
ದಾವಣಗೆರೆ: ಮದ್ಯ ಸಿಗದ್ದಕ್ಕೆ ಹಲವರು ಕಳ್ಳಬಟ್ಟಿ ಸಾರಾಯಿ ಮೊರೆ ಹೋಗುತ್ತಿದ್ದು, ಇದನ್ನೇ ಬಂಡವಾಳವನ್ನಾಗಿಸಿಕೊಂಡಿರುವ ಕೆಲವರು ಸರ್ಜಿಕಲ್ ಸ್ಪಿರಿಟ್ನ್ನು ಕಳ್ಳಬಟ್ಟಿ ಸರಾಯಿ ಎಂದು ನಂಬಿಸಿ ಮಾರಾಟ ಮಾಟುತ್ತಿದ್ದಾರೆ. ದಾವಣಗೆರೆಯಲ್ಲಿ ಸರ್ಜಿಕಲ್ ಸ್ಪಿರಿಟ್ ದಂಧೆ ಜೋರಾಗಿದ್ದು, ಸರ್ಜಿಕಲ್ ಸ್ಪೀರಿಟ್ನ್ನು ನೀರಿಗೆ ಬೆರೆಸಿ ಕಳ್ಳಬಟ್ಟಿ ಎಂದು ನಂಬಿಸಿ ಮಾರಾಟ ಮಾಡಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಬಂಧಿಸಲಾಗಿದ್ದು, ಯಾರೇ ಕೇಳಿದರೂ ಸರ್ಜಿಕಲ್ ಸ್ಪಿರಿಟ್ ನೀಡದಂತೆ ಡ್ರಗ್ ಕಂಟ್ರೋಲ್ ರೂಮ್ಗೆ ಪತ್ರ ಬರೆಯಲಾಗಿದೆ. ಸರ್ಜಿಕಲ್ ಸ್ಪಿರಿಟ್ ಬೇಕು …
Read More »ಪ್ರತಿ ಜಿಲ್ಲೆಯಲ್ಲಿ ಕೊರೋನಾ ತಪಾಸಣಾ ಕೇಂದ್ರ ಸ್ಥಾಪಿಸಿ ರಾಪಿಡ್ ಟೆಸ್ಟಿಂಗ್ ಕಿಟ್ ಒದಗಿಸುವಂತೆ ದೇಶಪಾಂಡೆ ಆಗ್ರಹ
ಬೆಂಗಳೂರು:ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಶೀಘ್ರವಾಗಿ ತಪಾಸಣೆ ನಡೆಸಲು ಈ ತಿಂಗಳ 30ರ ಒಳಗಾಗಿ ಪ್ರತಿ ಜಿಲ್ಲೆಗೊಂದು ಕೋವಿಡ್-19 ಪ್ರಯೋಗಾಲಯ ಹಾಗೂ ರಾಪಿಡ್ ಟೆಸ್ಟಿಂಗ್ ಕಿಟ್ ಒದಗಿಸಬೇಕು ಎಂದು ಮಾಜಿ ಸಚಿವ ಆರ್.ವಿ.ದೇಶಪಾಂಡೆ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದಾರೆ. ಕಾಂಗ್ರೆಸ್ ನಿಯೋಗದೊಂದಿಗೆ ಸಿಎಂ ಅವರನ್ನು ಭೇಟಿ ಮಾಡಿದ ನಂತರ ಮಾತನಾಡಿದ ಅವರು ಸರ್ಕಾರವು ಕಟ್ಟಡ ಕಾರ್ಮಿಕರಿಗೆ ಸಹಾಯಧನ ಘೋಷಣೆ ಮಾಡಿದೆ. ಆದರೆ ಇತರೆ ಕಾರ್ಮಿಕರ ಬದುಕು ಸಂಕಷ್ಟದಲ್ಲಿದ್ದು ಸಂಘಟಿತ …
Read More »ಮಂಗಳೂರು ಜೈಲಿನಿಂದ 40 ಕೈದಿಗಳು ಚಿಕ್ಕಮಗಳೂರಿನ ಕಾರಾಗೃಹಕ್ಕೆ ಶಿಫ್ಟ್…
ಚಿಕ್ಕಮಗಳೂರು : ಮಂಗಳೂರು ಕಾರಾಗೃಹದಲ್ಲಿ ಸ್ಥಳಾವಕಾಶದ ಕೊರತೆಯಿಂದ ಚಿಕ್ಕಮಗಳೂರಿನ ಕಾರಾಗೃಹಕ್ಕೆ 40 ಕೈದಿಗಳನ್ನು ಸ್ಥಳಾಂತರಿಸಲಾಗಿದೆ. ಮಂಗಳೂರಿನ ಕೈದಿಗಳನ್ನು ಚಿಕ್ಕಮಗಳೂರು ಕಾರಾಗೃಹಕ್ಕೆ ಕರೆ ತಂದಿರುವುದಕ್ಕೆ ಇಲ್ಲಿನ ಕಾರಾಗೃಹದಲ್ಲಿರುವ ಕೈದಿಗಳು ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಕೊರೊನಾ ಸೋಂಕಿನ ಕಾರಣದಿಂದ ಸಾಮಾಜಿಕ ಅಂತರ ಕಾಪಾಡಲು ಸಮಸ್ಯೆಯಾಗುವ ಹಿನ್ನೆಲೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದ್ದು. ಎರಡು ಕೆಎಸ್ಆರ್ಟಿಸಿ ಬಸ್ಸುಗಳಲ್ಲಿ 40 ಕೈದಿಗಳು ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಚಿಕ್ಕಮಗಳೂರಿನ ಜಿಲ್ಲಾ ಕಾರಾಗೃಹ ಸೇರಿದ್ದಾರೆ.
Read More »ಲಾಕ್ಡೌನ್ ಸ್ವಲ್ಪ ಸಡಿಲಿಕೆ, ಯಾವಕ್ಷೇತ್ರಗಳಿಗೆ ವಿನಾಯಿತಿ..? ಇಲ್ಲಿದೆ ಫುಲ್ ಡೀಟೇಲ್ಸ್ ……
ನವದೆಹಲಿ : ಪ್ರಧಾನಿ ಮೋದಿ ಘೋಷಿಸಿರುವ ಕಟ್ಟುನಿಟ್ಟಿನ ಲಾಕ್ಡೌನ್ ನಾಳೆಯಿಂದ ಸ್ವಲ್ಪ ಪ್ರಮಾಣದಲ್ಲಿ ಸಡಿಲಿಕೆಯಾಗಲಿದ್ದು,ಕೆಲ ಕ್ಷೇತ್ರಗಳಿಗೆ ಲಾಕ್ ಡೌನ್ ನಿಂದ ಷರತ್ತು ಬದ್ಧ ವಿನಾಯಿತಿ ನೀಡಿದೆ. ಕೆಲ ಸರ್ಕಾರಿ ಕಾರ್ಯಚಟುವಟಿಕೆಗಳಿಗೆ ಅನುಮತಿ ನೀಡಿದೆ. ಕೇಂದ್ರ ಗೃಹ ಇಲಾಖೆ ಜಾರಿಗೊಳಿಸಲು ಉದ್ದೇಶಿಸಿರುವ ಸೇವೆಗಳು ಹಾಗೂ ಚಟುವಟಿಕೆಗಳಿಗಾಗಿ ವಿಶೇಷ ಮಾರ್ಗಸೂಚಿಗಳನ್ನು ಜಾರಿಗೊಳಿಸಲಾಗಿದೆ. ಈ ಬಗ್ಗೆ ಕೇಂದ್ರ ಗೃಹ ಸಚಿವಾಲಯ ಒಂದಷ್ಟು ನಿರ್ದೇಶನಗಳನ್ನು ಮತ್ತು ಮಾಹಿತಿಗಳನ್ನು ನೀಡಿದ್ದು, ಕೆಲವು ಕ್ಷೇತ್ರಗಳು ಲಾಕ್ ಡೌನ್ ನಿಂದ …
Read More »ಕಾರ್ಮಿಕರ ವೇತನ ಕಡಿತಕ್ಕೆ ಅವಕಾಶ ನೀಡುವುದಿಲ್ಲ : ಶಿವರಾಮ ಹೆಬ್ಬಾರ್
ಬೆಂಗಳೂರು, :ಕಟ್ಟಡ ಕಾರ್ಮಿಕರದ್ದಾಗಲೀ ಅಥವಾ ಇತರೆ ಯಾವುದೇ ಕಾರ್ಮಿಕರದ್ದಾಗಲೀ ವೇತನ ಕಡಿತಕ್ಕೆ ರಾಜ್ಯ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಕಾರ್ಮಿಕ ಸಚಿವ ಅರೆಬೈಲ್ ಶಿವರಾಮ ಹೆಬ್ಬಾರ್ ಅವರು ಪ್ರಕಟಿಸಿದ್ದಾರೆ. ಕಾರ್ಮಿಕರ ಆರೋಗ್ಯ ದೃಷ್ಠಿಯಿಂದ ಎಲ್ಲಾ ಕಾರ್ಮಿಕರಿಗೂ ಮುಖಗವಸು ಹಾಗೂ ಸ್ಯಾನಿಟೈಜರ್ಗಳನ್ನು ಒದಗಿಸುವುದರ ಜೊತೆಗೆ ಕಾರ್ಮಿಕ ಇಲಾಖೆಯ ಎಲ್ಲಾ ಹಿರಿಯ ಅಧಿಕಾರಿಗಳು ಪ್ರತಿ ದಿನ ಎರಡು ಪ್ರದೇಶಗಳಿಗೆ ಭೇಟಿ ನೀಡಿ, ಅಲ್ಲಿನ ಕಾರ್ಮಿಕರ ಯೋಗ ಕ್ಷೇಮವನ್ನು ವಿಚಾರಿಸಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕೆಂದು …
Read More »54 ಮಂದಿ ಪಾದರಾಯನಪುರ ಪುಂಡರು ವಶಕ್ಕೆ..! ಘಟನೆ ಹಿಂದಿದೆ ಇಬ್ಬರ ಕೈವಾಡ..?
ಬೆಂಗಳೂರು : ಕಳೆದ ರಾತ್ರಿ ನಗರದ ಪಾದರಾಯನಪುರದಲ್ಲಿ ಕೊರೊನಾ ವಾರಿಯಸ್೯ ( ಕಾರ್ಯಕರ್ತೆಯರು ) ಮೇಲೆ ನಡೆದ ದಾಳಿ ಸಂಬಂಧ ಮಿಂಚಿನ ಕಾರ್ಯಚಾರಣೆ ನಡೆಸಿರುವ ಪೊಲೀಸರು 54 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಸಿಸಿ ಕ್ಯಾಮರಾ ಮತ್ತು ಮೊಬೈಲ್ ದೃಶ್ಯಾವಳಿಗಳನ್ನು ಆಧರಿಸಿ 54 ಜನರನ್ನು ಜೆ.ಜೆ.ನಗರ ಠಾಣೆ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ ಜೊತೆಗೆ ಪಾದರಾಯನಪುರದಲ್ಲಿ ದಾಂಧಲೆ ಎಸಗಿದವರ ವಿರುದ್ಧ ನಾಲ್ಕು ಪ್ರತ್ಯೇಕ ಎಫ್ಐಆರ್ ಗಳನ್ನು ದಾಖಲಿಸಿಕೊಳ್ಳಲಾಗಿದೆ. ಐಪಿಸಿ ಸೆಕ್ಷನ್ 353, …
Read More »ರೀನ್ ಝೋನ್ ನಲ್ಲಿದ್ದರೂ ಗಡಿ ರಾಜ್ಯಗಳಾದ ಆಂಧ್ರ ಪ್ರದೇಶ ಹಾಗೂ ತೆಲಂಗಾಣದಿಂದ ಗಡಿದಾಟಿ ಬರುವ ಜನರದ್ದೇ ಆತಂಕವಾಗಿದೆ.
ರಾಯಚೂರು: ಜಿಲ್ಲೆ ಗ್ರೀನ್ ಝೋನ್ ನಲ್ಲಿದ್ದರೂ ಗಡಿ ರಾಜ್ಯಗಳಾದ ಆಂಧ್ರ ಪ್ರದೇಶ ಹಾಗೂ ತೆಲಂಗಾಣದಿಂದ ಗಡಿದಾಟಿ ಬರುವ ಜನರದ್ದೇ ಆತಂಕವಾಗಿದೆ. ಹೀಗಾಗಿ ಅಡ್ಡದಾರಿಗಳಲ್ಲಿ ಬರುವ ಜನರನ್ನು ಪೊಲೀಸರು ಹಾಗೂ ಗ್ರಾಮಸ್ಥರು ವಾಪಸ್ ಕಳುಹಿಸುತ್ತಿದ್ದಾರೆ. ತೆಲಂಗಾಣ ಗಡಿಯಿಂದ ರಾಯಚೂರಿನ ಸಿಂಗನೊಡಿ ಗ್ರಾಮಕ್ಕೆ ಬರುತ್ತಿದ್ದ ಬೈಕ್ ಸವಾರರನ್ನು ಪೊಲೀಸ್ ಅಧಿಕಾರಿಯೊಬ್ಬರು ಸಿನಿಮಾ ಶೈಲಿಯಲ್ಲಿ ಚೇಸಿಂಗ್ ಮಾಡಿ ಹಿಡಿದು, ತೆಲಂಗಾಣಕ್ಕೆ ವಾಪಸ್ ಕಳುಹಿಸಿದ್ದಾರೆ. ಅಕ್ರಮ ಮಾರ್ಗದ ಮೂಲಕ ರಾಯಚೂರು ಪ್ರವೇಶ ಮಾಡುತ್ತಿರುವ ಆಂಧ್ರ ಪ್ರದೇಶ …
Read More »ಪಾದರಾಯನಪುರದ ಘಟನೆ ಬಗ್ಗೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ: ಬೊಮ್ಮಾಯಿ
ಬೆಂಗಳೂರು: ಸಿಲಿಕಾನ್ ಸಿಟಿಯ ಪಾದರಾಯನಪುರದಲ್ಲಿ ನಡೆದ ಘಟನೆ ಬಗ್ಗೆ ಕಠಿಒಣ ಕ್ರಮ ಕೈಗೊಳ್ಳುತ್ತೇವೆ. ಈ ಬಗ್ಗೆ ಪೊಲೀಸರಿಗೆ ಸಂಪೂರ್ಣ ಅಧಿಕಾರ ನೀಡಿರುವುದಾಗಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಈ ಬಗ್ಗೆಮಾತನಾಡಿದ ಅವರು, ಘಟನೆ ಸಂಬಂಧ ಈಗಾಗಲೇ 60 ಜನರನ್ನ ಬಂಧನ ಮಾಡಲಾಗಿದೆ. ಘಟನೆಯಾದ 3-4 ಗಂಟೆಯಲ್ಲಿ ಎಲ್ಲಾ ಪ್ರಮುಖರನ್ನ ಅರೆಸ್ಟ್ ಮಾಡಿದ್ದೇವೆ. ಪಾದರಾಯನಪುರದ ಘಟನೆ ಬಗ್ಗೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಪೊಲೀಸರಿಗೆ ಸಂಪೂರ್ಣ ಅಧಿಕಾರವನ್ನು ಕೊಟ್ಟಿದ್ದೇವೆ ಎಂದರು. ಪೊಲೀಸರು, …
Read More »
Laxmi News 24×7