ವೇದವು ಆತ್ಮ ಮತ್ತು ಆತ್ಮಕ್ಕಿಂತ ಭಿನ್ನವಾದ ಪರಮಾತ್ಮನನ್ನು ಬೋಧಿಸುತ್ತದೆ ಎಂದು ಸಾರುತ್ತಿದ್ದವರಿಂದ ವೇದವನ್ನು ರಕ್ಷಿಸಿ ಆತ್ಮನೇ ಪರಮಾತ್ಮನು, ಜೀವನು ಮೋಹಾದಿ ಮಾಯೆಯಿಂದ ಕನಸಿನಂತೆ ಜಗತ್ತನ್ನು ಅನುಭವಿಸುತ್ತಿದ್ದಾನೆ ಎಂದು ವಾಸ್ತವತೆಯನ್ನು ಅರಿವಿಗೆ ಬರುವಂತೆ ಹದಿನಾರನೇ ವಯಸ್ಸಿನಲ್ಲೇ ವೇದಗಳಿಗೆ ಭಾಷ್ಯವನ್ನು ಬರೆದು ಪ್ರತಿಪಾದಿಸಿದ ದಿವ್ಯ ತೇಜ ಆದಿಗುರು ಶಂಕರಾಚಾರ್ಯ. ವೈಶಾಖ ಮಾಸ ಶುಕ್ಲ ಪಂಚಮಿದಿನದಂದು ಜನಿಸಿದ ಶಂಕರರ ಜಯಂತಿಯನ್ನು ಇಂದು ಆಚರಿಸಲಾಗುತ್ತಿದೆ ಕ್ರಿ.ಶ.788ರಲ್ಲಿ ವೈಶಾಖ ಶುಕ್ಲ ಪಂಚಮಿಯಲ್ಲಿ ಆರಿದ್ರಾ ನಕ್ಷತ್ರ ಮಿಥುನರಾಶಿಯಲ್ಲಿ ಚಂದ್ರನಿರುವಾಗ …
Read More »Monthly Archives: ಏಪ್ರಿಲ್ 2020
55 ವರ್ಷ ಮೇಲ್ಪಟ್ಟ ಪೊಲೀಸರನ್ನ ಕೋವಿಡ್ ಡ್ಯೂಟಿಗೆ ಹಾಕುವಂತಿಲ್ಲ:ಐಜಿಪಿ ಪ್ರವೀಣ್ ಸೂದ್
ಬೆಂಗಳೂರು: ಹೆಮ್ಮಾರಿ ಕೊರೊನಾ ವೈರಸ್ ಹರಡದಂತೆ ತಡೆಯಲು ಪೊಲೀಸರು ಶ್ರಮಿಸುತ್ತಿದ್ದಾರೆ. ಇದೀಗ ಡಿಜಿ ಅಂಡ್ ಐಜಿಪಿ ಪ್ರವೀಣ್ ಸೂದ್ ಅವರು, 55 ವರ್ಷ ಮೇಲ್ಪಟ್ಟ ಪೊಲೀಸರನ್ನ ಕೋವಿಡ್ ಡ್ಯೂಟಿಗೆ ಹಾಕುವಂತಿಲ್ಲ ಎಂದು ಆದೇಶ ಹೊರಡಿಸಿದ್ದಾರೆ. ಮಧುಮೇಹ, ಬಿಪಿ, ಅಸ್ತಮಾ, ಕಿಡ್ನಿ ಹಾಗೂ ಯಕೃತ್ ಸಮಸ್ಯೆ, ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರೊ ಸಿಬ್ಬಂದಿಗೆ ರೋಡ್ ಮೇಲೆ ಡ್ಯೂಟಿ ಹಾಕುವಂತಿಲ್ಲ. ಠಾಣೆಯ ಒಳಗೆ ಅಥವಾ ಸುರಕ್ಷಿತ ಸ್ಥಳಗಳಲ್ಲಿ ಡ್ಯೂಟಿ ಹಾಕಬೇಕು ಎಂದು ಪ್ರವೀಣ್ …
Read More »ಬಿಜೆಪಿ ಮುಖಂಡರು ಕೊರೊನಾ ವಾರಿಯರ್ಸ್ ಪೌರಕಾರ್ಮಿಕರಿಗೆ ಚಿಕನ್ ಬಿರಿಯಾನಿ ವಿತರಿಸುವುದರ ಜೊತೆಗೆ ಪಾದ ಪೂಜೆ ಮಾಡಿ ಗೌರವ
ಕೋಲಾರ: ಜಿಲ್ಲೆಯ ಬಿಜೆಪಿ ಮುಖಂಡರು ಕೊರೊನಾ ವಾರಿಯರ್ಸ್ ಪೌರಕಾರ್ಮಿಕರಿಗೆ ಚಿಕನ್ ಬಿರಿಯಾನಿ ವಿತರಿಸುವುದರ ಜೊತೆಗೆ ಪಾದ ಪೂಜೆ ಮಾಡಿ ಗೌರವ ಸಲ್ಲಿಸಿದರು. ಕೆಜಿಎಫ್ ನಗರದಲ್ಲಿ ಪೌರಕಾರ್ಮಿಕರಿಗೆ ತಾಲೂಕು ಬಿಜೆಪಿ ಘಟಕದ ವತಿಯಿಂದ ಹೀಗೆ ವಿಭಿನ್ನವಾಗಿ ಗೌರವ ಸಲ್ಲಿಸಲಾಯಿತು. ಕಳೆದ ಒಂದು ತಿಂಗಳಿನಿಂದ ಪ್ರತಿನಿತ್ಯ ಸಾರ್ವಜನಿಕರಿಗೆ ಆಹಾರ ಪದಾರ್ಥ ಹಾಗೂ ಊಟವನ್ನ ನೀಡುತ್ತಿದ್ದ ತಾಲೂಕು ಬಿಜೆಪಿ ಮುಖಂಡರು ಮಂಗಳವಾರ ಪೌರಕಾರ್ಮಿಕರಿಗೆ ಪಾದ ಪೂಜೆ ಸಲ್ಲಿಸಿ, ಆಹಾರ ಪದಾರ್ಥಗಳೊಂದಿಗೆ ಚಿಕನ್ ಬಿರಿಯಾನಿ ನೀಡಿದರು. …
Read More »ದೇಶದಲ್ಲೇ ಮೊದಲ ಬಾರಿಗೆ ದಕ್ಷಿಣ ಕೊರಿಯಾ ರ್ಯಾಪಿಡ್ ಟೆಸ್ಟಿಂಗ್ ಕಿಟ್ಗಳ ಪ್ರಾಯೋಗಿಕ ಪರೀಕ್ಷೆಗೆ ಕೋಲಾರ ಜಿಲ್ಲೆ ಮುಂದಾಗಿದೆ.
ಕೋಲಾರ: ದೇಶದಲ್ಲೇ ಮೊದಲ ಬಾರಿಗೆ ದಕ್ಷಿಣ ಕೊರಿಯಾ ರ್ಯಾಪಿಡ್ ಟೆಸ್ಟಿಂಗ್ ಕಿಟ್ಗಳ ಪ್ರಾಯೋಗಿಕ ಪರೀಕ್ಷೆಗೆ ಕೋಲಾರ ಜಿಲ್ಲೆ ಮುಂದಾಗಿದೆ. ಸುಮಾರು 6 ಸಾವಿರ ಮಂದಿಗೆ ರ್ಯಾಪಿಡ್ ಟೆಸ್ಟ್ ಮಾಡುವುದಕ್ಕೆ ಕೋಲಾರ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಸಜ್ಜಾಗಿದೆ. ಎಲ್ಲೆಡೆ ಸಂಚಲನ ಮೂಡಿಸಿರುವ ಹಾಗೂ ಸಾಕಷ್ಟು ಸಮಯ ವ್ಯರ್ಥ ಮಾಡುತ್ತಿರುವ ರಕ್ತ ಮಾದರಿ ಹಾಗೂ ಗಂಟಲು ದ್ರವ ಸಂಗ್ರಹಿಸಿ ಎರಡು ದಿನಗಳ ಕಾಲ ವರದಿಗಾಗಿ ಕಾಯುವ ಬದಲಿಗೆ ಪ್ರಾಥಮಿಕ ಹಂತದಲ್ಲೆ ಪರೀಕ್ಷೆಗೆ …
Read More »ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಭಾರೀ ಮಳೆ……
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಭಾರೀ ಮಳೆಯಾಗಿದೆ. ಮಳೆಯ ಜೊತೆ ಗಾಳಿ, ಮಿಂಚು, ಗುಡುಗು ಸಹ ಬಂದಿದ್ದರಿಂದ ವಾಹನ ಸಂಚರಕ್ಕೆ ಹಲವೆಡೆ ಅಡ್ಡಿ ಆಗಿತ್ತು. ಬೆಳಗ್ಗೆ ಸುಮಾರು 5 ಗಂಟೆಯಿಂದ ಆರಂಭವಾದ ಮಳೆ ಸುಮಾರು 2 ಗಂಟೆಗಳ ಕಾಲ ಜೋರಾಗಿಯೇ ಸುರಿದಿದೆ. ಬೆಳಗ್ಗೆ 7 ಗಂಟೆಯಾದರೂ ನಿಲ್ಲುವ ಸೂಚನೆ ಕಾಣುತ್ತಿಲ್ಲ. ನಗರದ ಎಲ್ಲ ಫ್ಲೈ ಓವರ್ ಗಳನ್ನು ಮುಚ್ಚಿದ ಪರಿಣಾಮ ಸರ್ವಿಸ್ ರಸ್ತೆಯಲ್ಲಿ ವಾಹನಗಳು ಸಂಚರಿಸುತ್ತಿದ್ದು, ಕಾರು ಚಾಲಕರು ಮತ್ತು …
Read More »ಕೊರೊನಾ ಸೋಂಕಿನಿಂದ ಗುಣಮುಖರಾದ ಮೈಸೂರಿನ ಎಂಟು ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಮೈಸೂರು: ಕೊರೊನಾ ಸೋಂಕಿನಿಂದ ಗುಣಮುಖರಾದ ಮೈಸೂರಿನ ಎಂಟು ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸಂಪೂರ್ಣ ಗುಣಮುಖವಾದ ಹಿನ್ನೆಲೆಯಲ್ಲಿ ರೋಗಿ ನಂಬರ್ 140, 195, 201, 213, 216 311, 312 ಮತ್ತು 273 ಎಂಟು ಜನರು ಇಂದು ಕೋವಿಡ್-19 ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಮೈಸೂರಿನಲ್ಲಿ ಕೊರೊನಾದಿಂದ ಗುಣಮುಖವಾವರ ಸಂಖ್ಯೆ 51ಕ್ಕೆ ಏರಿಕೆಯಾಗಿದೆ. ಸದ್ಯ 38 ಜನರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಮಾಹಿತಿ …
Read More »ಕಲಬುರಗಿ ಜಿಲ್ಲಾಧಿಕಾರಿ ಶರತ್ ವರ್ಗಾವಣೆಗೆ ಸಿಎಂ ತಡೆ……….
ಬೆಂಗಳೂರು: ಕಲಬುರಗಿ ಜಿಲ್ಲಾಧಿಕಾರಿ ಬಿ.ಶರತ್ ಅವರ ವರ್ಗಾವಣೆಯ ಆದೇಶವನ್ನು ಮುಖ್ಯಮಂತ್ರಿ ಯಡಿಯೂರಪ್ಪನವರು ತಡೆ ಹಿಡಿದಿದ್ದಾರೆ. ಇಂದು ಬಿ.ಶರತ್ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಿ, ಸುರಾಲ್ಕರ್ ವಿಕಾಸ್ ಕಿಶೋರ್ ಕಲಬುರಗಿ ಡಿಸಿಯಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿತ್ತು. ಡಿಸಿ ವರ್ಗಾವಣೆ ಆದೇಶದ ಬೆನ್ನಲ್ಲೇ ವ್ಯಾಪಕ ಟೀಕೆಗಳು ವ್ಯಕ್ತವಾದವು. ಕಲಬುರಗಿಯಲ್ಲಿ ಈಗಾಗಲೇ ಕೊರೊನಾದಿಂದ ಐವರು ಸಾವನ್ನಪ್ಪಿದ್ರೆ, ಸೋಂಕಿತರ ಸಂಖ್ಯೆ 44ಕ್ಕೆ ಏರಿಕೆಯಾಗಿದೆ. ಕೊರೊನಾ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ವರ್ಗಾವಣೆ ಬೇಕಿತ್ತಾ ಎಂದು ಸಾರ್ವಜನಿಕರು …
Read More »ಬಟ್ಟೆಯಿಂದ ವ್ಯಕ್ತಿ ಅಳೆಯೋ ಸಮಾಜ ನಮ್ಮದು ಎಂದ ಅನಿತಾ ಭಟ್
ಬೆಂಗಳೂರು: ಕನ್ನಡ, ತೆಲುಗು ಸಿನಿಮಾ ರಂಗದಲ್ಲಿ ಗುರುತಿಸಿಕೊಂಡಿರುವ ಹಾಟ್ ಬೆಡಗಿ ಅನಿತಾ ಭಟ್ ಬಟ್ಟೆ ಬಗ್ಗೆ ಚರ್ಚೆಗೆ ಇಳಿದಿದ್ದು, ನೆಟ್ಟಿಗರ ಪ್ರಶ್ನೆಗೆ ತಕ್ಕ ಉತ್ತರ ನೀಡಿದ್ದಾರೆ. ಅದೇನಪ್ಪಾ ಬಟ್ಟೆ ವಿಚಾರ ಅಂತೀರಾ ಈ ವಿಡಿಯೋ ನೀಡಿ. ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಆಗಿರುವ ಹಾಟ್ ಬೆಡಗಿ ಅನಿತಾ ಭಟ್, ತಮ್ಮ ಹಾಟ್ ಫೋಟೋಗಳಿಂದಲೇ ಕಿಕ್ಕೇರಿಸುತ್ತಿರುತ್ತಾರೆ. ಇದೀಗ ಅದೇ ರೀತಿಯ ಫೋಟೋ ವಿವಾದಕ್ಕೆ ಕಾರಣವಾಗಿದ್ದು, ಈ ಕುರಿತು ಸಾಕಷ್ಟು ಚರ್ಚೆ ನಡೆಯುತ್ತಿದೆ. ವಿಶೇಷವೆಂದರೆ …
Read More »ಪ್ಲಾಸ್ಮಾ ನೀಡಿ ಜೀವ ಉಳಿಸಲು ಮುಂದಾದ ಗಾಯಕಿ
ನವದೆಹಲಿ: ಬಾಲಿವುಡ್ ಗಾಯಕಿ ಕನಿಕಾ ಕಪೂರ್ ಕೊರೊನಾ ಸೋಂಕು ತಗುಲಿದ ನಂತರ ಸ್ವಯಂ ದಿಗ್ಬಂಧನ ವಿಧಿಸಿಕೊಳ್ಳದೆ, ಹಲವು ಗಣ್ಯರು ಭಾಗವಹಿಸಿದ್ದ ಸಮಾರಂಭದಲ್ಲಿ ಪಾಲ್ಗೊಳ್ಳುವ ಮೂಲಕ ಕೆಂಗಣ್ಣಿಗೆ ಗುರಿಯಾಗಿದ್ದರು. ಆದರೆ ಇದೀಗ ಜನರೇ ಕೊಂಡಾಡುವ ಕೆಲಸ ಮಾಡುತ್ತಿದ್ದು, ಜೀವ ಉಳಿಸುವ ನಿರ್ಧಾರ ಕೈಗೊಂಡಿದ್ದಾರೆ. ಹೌದು, ರಾಜಕಾರಣಿಗಳೂ ಸೇರಿದಂತೆ ಗಣ್ಯಾತಿಗಣ್ಯರು ಭಾಗವಹಿಸಿದ್ದ ಸಮಾರಂಭದಲ್ಲಿ ಭಾಗವಹಿಸುವ ಮೂಲಕ ಕನಿಕಾ ಕಪೂರ್ ವಿಪರೀತ ಟೀಕೆಗೆ ಗುರಿಯಾಗಿದ್ದರು. ಅಲ್ಲದೆ ನಂತರ ಈ ಕುರಿತು ಸಾಮಾಜಿಕ ಜಾಲತಾಣಗಳ ಮೂಲಕ …
Read More »ವದಂತಿ ನಂಬಿ ಮಂಗ್ಳೂರು ಟೌನ್ಹಾಲ್ ಎದುರು ಜಮಾಯಿಸಿದ ವಲಸೆ ಕಾರ್ಮಿಕರು
ಮಂಗಳೂರು: ಎರಡು ವಾರಗಳ ಹಿಂದೆ ವದಂತಿ ನಂಬಿ ಮುಂಬೈನಲ್ಲಿ ಸಾವಿರಾರು ವಲಸೆ ಕಾರ್ಮಿಕರು ರೈಲ್ವೇ ಸ್ಟೇಷನ್ಗೆ ಬಂದಿದ್ದರು. ಆ ವೇಳೆ ಪರಿಸ್ಥಿತಿ ನಿಭಾಯಿಸಲು ಪೊಲೀಸರು ಹೆಣಗಾಡಿದರು. ಇಂತದ್ದೆ ಸನ್ನಿವೇಶ ಇಂದು ಮಂಗಳೂರಿನಲ್ಲಿ ಕಂಡು ಬಂತು. ಜಿಲ್ಲಾಡಳಿತ ತಮ್ಮನ್ನು ಸ್ವಗ್ರಾಮಗಳಿಗೆ ಕಳಿಸಲಿದೆ ಎಂಬ ವದಂತಿ ನಂಬಿದ ಸಾವಿರಕ್ಕೂ ಹೆಚ್ಚು ವಲಸೆ ಕಾರ್ಮಿಕರು ಮಂಗಳೂರಿನ ಟೌನ್ಹಾಲ್ನಲ್ಲಿ ಕಾಣಿಸಿಕೊಂಡರು. ಸಾಮಾಜಿಕ ಅಂತರಪಾಲಿಸದೆ ಗುಂಪು ಸೇರಿದ್ದರು. ಇದು ವದಂತಿ ಹೋಗಿ ಎಂದರೂ ಯಾರೂ ಕೇಳಲಿಲ್ಲ. ಕಾರ್ಮಿಕರು …
Read More »
Laxmi News 24×7