Breaking News

Monthly Archives: ಏಪ್ರಿಲ್ 2020

ಹುಬ್ಬಳ್ಳಿಯಲ್ಲಿ ಪಶು ವೈದ್ಯರ ಮಾನವೀಯತೆ; ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಗರ್ಭಿಣಿ ಹಸುವಿಗೆ ಮರುಜೀವ

ಹುಬ್ಬಳ್ಳಿ(ಏ.12): ಕೊರೋನಾ ಸೋಂಕಿನ ವಿರುದ್ಧ  ವಿಶ್ವದ ವೈದ್ಯರು ಮನುಕುಲದ ರಕ್ಷಣೆಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಹುಬ್ಬಳ್ಳಿಯ ಉಣಕಲ್ ಗ್ರಾಮದ ಪಶುವೈದ್ಯರು ಮೃತ್ಯುವಿನ ಬಾಗಿಲು ತಟ್ಟಿದ್ದ ಅನಾಥ ಗರ್ಭಿಣಿ ಹಸುವಿಗೆ  ಮರುಜನ್ಮ ನೀಡಿದ್ದಾರೆ. ಈ ಹೃದಯಸ್ಪರ್ಶಿ  ಘಟನೆ ಉಣಕಲ್  ಸಿದ್ದಪ್ಪಜ್ಜನ ಹೊಸಮಠದ ಆವರಣದಲ್ಲಿ ನಡೆದಿದೆ. ಉಣಕಲ್ ಕ್ರಾಸ್ ರಾಮಲಿಂಗೇಶ್ವರ ದೇವಸ್ಥಾನದ ಬಯಲಿನಲ್ಲಿ ಪರಸ್ಪರ ಬಡಿದಾಡುತ್ತ ಬಂದ ನಾಲ್ಕಾರು ಬೀಡಾಡಿ ದನಗಳು ತುಂಬು ಗರ್ಭಿಣಿ ಹಸುವೊಂದನ್ನು ಕೆಳಗೆ ಬೀಳಿಸಿದ್ದವು. ಹಸುವಿನ ಮೇಲೆ ದಾಳಿ …

Read More »

ವಿಜಯಪುರ ಜಿಲ್ಲಾಸ್ಪತ್ರೆ ಕೋವಿಡ್ ಆಸ್ಪತ್ರೆಯಾಗಿ ಮಾರ್ಪಾಡು; ನಗರದ ಹಲವೆಡೆ ಸೀಲ್​​ಡೌನ್​

ವಿಜಯಪುರ(ಏ.12): ವಿಜಯಪುರದಲ್ಲಿ ಕೊರೋನಾ ಭೀತಿ ಹೆಚ್ಚಾದ ಹಿನ್ನೆಲೆ, ಜಿಲ್ಲಾಡಳಿತವು ಕಟ್ಟೆಚ್ಚರ ವಹಿಸಿದೆ. ಕೊರೋನಾ ನಿಗ್ರಹಕ್ಕಾಗಿ ಹಲವಾರು ಮುಂಜಾಗ್ರತಾ ಮತ್ತು ಕಟ್ಟುನಿಟ್ಟಿನ ಕ್ರಮಗಳನ್ನು ವಿಜಯಪುರ ಜಿಲ್ಲಾಡಳಿತವು ತೆಗೆದುಕೊಂಡಿದೆ. ಈಗ ವಿಜಯಪುರ ಜಿಲ್ಲಾಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯನ್ನಾಗಿ ಮಾರ್ಪಾಡು ಮಾಡಿದೆ. ಹೌದು, ವಿಜಯಪುರ ಜಿಲ್ಲಾಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯನ್ನಾಗಿ ಮಾರ್ಪಡಿಸಿದೆ. ಹೀಗಾಗಿ ಜಿಲ್ಲಾಸ್ಪತ್ರೆಯಲ್ಲಿದ್ದ ಎಲ್ಲಾ ರೋಗಿಗಳನ್ನು ಬೇರೆ ಬೇರೆ ಆಸ್ಪತ್ರೆಗಳಿಗೆ ಸ್ಥಳಾಂತರ ಮಾಡಲಾಗಿದೆ. ಈ ಜಿಲ್ಲಾಸ್ಪತ್ರೆಯಲ್ಲಿ ಸುಮಾರು 150ಕ್ಕೂ ಹೆಚ್ಚು ರೋಗಿಗಳಿದ್ದು, ಅವರನ್ನು ನಗರದ ಬೇರೆ …

Read More »

ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೂ ಸಿಗುತ್ತೆ ರೇಷನ್…

ಬೆಂಗಳೂರು: ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೂ ಪಡಿತರ ನೀಡುವ ಮಹತ್ವದ ಘೋಷಣೆಯನ್ನು ರಾಜ್ಯ ಸರ್ಕಾರ ಹೊರಡಿಸಿದೆ. ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಿದವರಿಗೂ ಏಪ್ರಿಲ್‍ನಿಂದ ಜೂನ್‍ವರೆಗೆ ಅಕ್ಕಿ ವಿತರಣೆ ಮಾಡಲು ಸರ್ಕಾರ ಆದೇಶ ನೀಡಿದೆ. ಈ ಮೂಲಕ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಪ್ರತಿ ತಿಂಗಳು 10 ಕೆಜಿ ಅಕ್ಕಿ ಸಿಗಲಿದೆ. ಆದರೆ ಎಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಸರ್ಕಾರ ಹಣ ನಿಗದಿ ಮಾಡಿದೆ. …

Read More »

ರಾಮನಗರ:2 ದಿನದಲ್ಲಿ ಪೊಲೀಸರಿಂದ 956 ವಾಹನಗಳು ಸೀಜ್, 92 ಪ್ರಕರಣ ದಾಖಲು

ರಾಮನಗರ: ಕೊರೊನಾ ತಡೆಗಾಗಿ ದೇಶವನ್ನೇ ಲಾಕ್‍ಡೌನ್ ಮಾಡಿದರೂ ಅನಗತ್ಯವಾಗಿ ರಸ್ತೆಗಿಳಿದು ಓಡಾಟ ನಡೆಸುತ್ತಿದ್ದರು. ಈ ಮೂಲಕ ಜಿಲ್ಲೆಯಲ್ಲಿ ಲಾಕ್‍ಡೌನ್ ಉಲ್ಲಂಘನೆ ಸಂಬಂಧಿಸಿದಂತೆ ಒಟ್ಟು 956 ವಾಹನಗಳನ್ನು ರಾಮನಗರ ಪೊಲೀಸರು ಸೀಜ್ ಮಾಡಿದ್ದಾರೆ. ಅನುಮತಿಯಿಲ್ಲದೇ ಅಂಗಡಿ ತೆರೆದಿದ್ದಕ್ಕೆ 94 ಪ್ರಕರಣ ದಾಖಲು ಮಾಡಲಾಗಿದೆ. ಅನಗತ್ಯವಾಗಿ ರಸ್ತೆಗಿಳಿದು ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ, ನಗರದ ರಸ್ತೆಗಳಲ್ಲಿ ಹಾಗೂ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಹನಗಳನ್ನು ಸೀಜ್ ಮಾಡಲಾಗಿದೆ. ಜೊತೆಗೆ ಅಂಗಡಿಗಳು, ಬೇಕರಿ, ಟೀ ಸ್ಟಾಲ್, ಸಲೂನ್ …

Read More »

ನಾಪತ್ತೆಯಾಗಿರುವ ತಬ್ಲಿಘಿಗಳ ಮಾಹಿತಿ ನೀಡಿದ್ರೆ ಸಿಗುತ್ತೆ ನಗದು ಬಹುಮಾನ,”ಮಾಹಿತಿ ನೀಡಿದವರ ಹೆಸರ ಗೌಪ್”ಯ

ಲಕ್ನೋ: ತಬ್ಲಿಘಿ ಜಮಾತ್‍ಗೆ ತೆರಳಿ ಇನ್ನೂ ಪತ್ತೆಯಾಗದವರನ್ನು ಹುಡುಕಿಕೊಟ್ಟವರಿಗೆ ಬಹುಮಾನ ನೀಡಲಾಗುವುದು ಎಂದು ಉತ್ತರ ಪ್ರದೇಶದ ಪೊಲೀಸರು ಪ್ರಕಟಿಸಿದ್ದಾರೆ. ದೆಹಲಿಯ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ ಸದಸ್ಯರು ಕೂಡಲೇ ಆಸ್ಪತ್ರೆಗೆ ತೆರಳಿ ಪರೀಕ್ಷೆ ನಡೆಸಬೇಕೆಂದು ಎಲ್ಲ ಸರ್ಕಾರಗಳು ಸೂಚನೆ ನೀಡುತ್ತಿವೆ. ಆದರೂ ಈ ಕಾರ್ಯಕ್ರಮಕ್ಕೆ ತೆರಳಿದ ಹಲವು ಮಂದಿ ಇನ್ನೂ ಪತ್ತೆಯಾಗದ ಹಿನ್ನೆಲೆಯಲ್ಲಿ ಅಜಂಗಢದ ಪೊಲೀಸರು ನಾಪತ್ತೆಯಾದ ವ್ಯಕ್ತಿಗಳನ್ನು ಪತ್ತೆ ಮಾಡಿದವರಿಗೆ ಬಹುಮಾನ ನೀಡಲಾಗುವುದು ಎಂದು ಪ್ರಕಟಿಸಿದ್ದಾರೆ. ಬಹಳ ಸಂಖ್ಯೆಯಲ್ಲಿ ಜಮಾತ್ …

Read More »

ಮೀನುಗಾರಿಕೆಗೆ ವಿನಾಯಿತಿ- ನಾಡದೋಣಿ, ಸಾಂಪ್ರದಾಯಿಕ ಮೀನುಗಾರಿಕೆಗೆ ಅವಕಾಶ

ಮಂಗಳೂರು: ಕೊರೊನಾ ಮಹಾಮಾರಿ ಹಿನ್ನೆಲೆ ಇನ್ನೂ 15 ದಿನಗಳ ಕಾಲ ಲಾಕ್‍ಡೌನ್ ಮುಂದುವರಿಸಲಾಗಿದ್ದು, ಆದರೆ ಕೆಲವು ಅಗತ್ಯ ವಸ್ತುಗಳಿಗೆ ವಿನಾಯಿತಿ ನೀಡಲಾಗಿದೆ. ಈ ಪಟ್ಟಿಯಲ್ಲಿ ಮೀನುಗಾರಿಕೆ ಸಹ ಇದ್ದು, ಸಾಂಪ್ರದಾಯಿಕ ಮೀನುಗಾರಿಕೆಗೆ ಅವಕಾಶ ಕಲ್ಪಿಸಲಾಗಿದೆ. ಇಂದಿನಿಂದ ನಾಡದೋಣಿ, ಸಾಂಪ್ರದಾಯಿಕ ಮೀನುಗಾರಿಕೆಗೆ ಅವಕಾಶ ಕಲ್ಪಿಸಲಾಗಿದ್ದು, ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಆದೇಶಿಸಿದ್ದಾರೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದಿನಿಂದ ಮೀನುಗಾರಿಕೆ ಆರಂಭವಾಗಲಿದೆ. ಜನಸಂದಣಿ ಇಲ್ಲದ …

Read More »

ಆಶಾ ಕಾರ್ಯಕರ್ತೆ ಮೇಲೆ ಹಲ್ಲೆಗೈದಿದ್ದ ಇಬ್ಬರು ಎಸ್‍ಡಿಪಿಐ ಕಾರ್ಯಕರ್ತರ ಬಂಧನ

ಮಂಗಳೂರು: ಆಶಾ ಕಾರ್ಯಕರ್ತೆ ಮೇಲೆ ಹಲ್ಲೆಗೈದಿದ್ದ ಇಬ್ಬರು ಎಸ್‍ಡಿಪಿಐ ಕಾರ್ಯಕರ್ತರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಮಲ್ಲೂರು ಬದ್ರಿಯಾ ನಗರ ನಿವಾಸಿಗಳಾದ ಇಸ್ಮಾಯಿಲ್ ಮತ್ತು ಅಶ್ರಫ್ ಬಂಧಿತರು. ಆರೋಪಿಗಳು ಕೊರೊನಾ ವೈರಸ್ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮನೆ ಮನೆ ಭೇಟಿಯಲ್ಲಿದ್ದ ಆಶಾ ಕಾರ್ಯಕರ್ತೆಯೊಬ್ಬರ ಕರ್ತವ್ಯಕ್ಕೆ ಅಡ್ಡಿಪಡಿಸಿ, ಬೆದರಿಕೆ ಹಾಕಿದ್ದರು. ವಸಂತಿ ಎಂಬ ಆಶಾ ಕಾರ್ಯಕರ್ತೆ ಮನೆ ಭೇಟಿಗೆ ತೆರಳಿದ್ದ ವೇಳೆ ಇಬ್ಬರೂ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರು. ಕರ್ತವ್ಯ ನಿರ್ವಹಿಸದಂತೆ ತಡೆದಿದ್ದ ಆರೋಪಿಗಳು, ಆಶಾ …

Read More »

ದಾವಣಗೆರೆ:ಮನೆಯಿಂದ ಹೊರಗಡೆ ಬಂದವ್ರ ಮೇಲೆ ಡ್ರೋಣ್ ಕಣ್ಣು

ದಾವಣಗೆರೆ: ಕೋವಿಡ್-19 ಸೋಂಕು ಹರಡದಂತೆ ಲಾಕ್ ಡೌನ್ ಮಾಡಲಾಗಿದ್ದರೂ ಜನ ಹೊರ ಬರುತ್ತಿರುವುದನ್ನು ಮಟ್ಟ ಹಾಕಲು ಎಸ್‍ಪಿ ಹನುಮಂತರಾಯ ನೇತೃತ್ವದ ತಂಡ ಡ್ರೋಣ್ ಕ್ಯಾಮೆರಾ ಮೂಲಕ ಹದ್ದಿನ ಕಣ್ಣಿಟ್ಟಿದೆ. ಲಾಕ್‍ಡೌನ್ ಆದೇಶ ಉಲ್ಲಂಘನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ಮೊದಲ ಹಂತವಾಗಿ ಆಜಾದ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಾಯೋಗಿಕವಾಗಿ ಡ್ರೋಣ್ ಕ್ಯಾಮೆರಾವನ್ನು ನಗರದಲ್ಲಿ ಹಾರಿಸಲಾಯಿತು. ಆಜಾದ್ ನಗರ, ಬಾಷಾನಗರ, ವೆಂಕೊಬ ಕಾಲೊನಿ …

Read More »

ಇಂದು ಡಾ.ರಾಜ್‍ಕುಮಾರ್ ಪುಣ್ಯಸ್ಮರಣೆ…..

ಬೆಂಗಳೂರು: ಇಂದು ಚಂದನವನದ ಅಪ್ಪಾಜಿ, ನಟಸಾರ್ವಭೌಮ ಡಾ.ರಾಜ್‍ಕುಮಾರ್ ಅವರ ಪುಣ್ಯಸ್ಮರಣೆ. ಇಂದಿಗೆ ಡಾ. ರಾಜ್‍ಕುಮಾರ್ ನಮ್ಮನ್ನು ಅಗಲಿ 14 ವರ್ಷಗಳು ಆಯ್ತು. ಪ್ರತಿವರ್ಷ ರಾಜ್‍ಕುಮಾರ್ ಅವರ ಅಭಿಮಾನಿಗಳು ಅನ್ನಸಂತರ್ಪಣೆ, ಬಟ್ಟೆ ದಾನ, ರಕ್ತದಾನ ಸೇರಿದಂತೆ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದರು. ಲಾಕ್‍ಡೌನ್ ಹಿನ್ನೆಲೆಯಲ್ಲಿ ಇಂದು ರಾಜ್ ಕುಟುಂಬಸ್ಥರು ಸಮಾಧಿ ಸ್ಥಳಕ್ಕೆ ಆಗಮಿಸಿ ಪೂಜೆ ಸಲ್ಲಿಸಿದರು. ಬೆಳಗ್ಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕುಟುಂಬಸ್ಥರ ಸಮೇತವಾಗಿ ಆಗಮಿಸಿ ತಂದೆಯವರ ಸಮಾಧಿಗೆ ಪೂಜೆ …

Read More »

‘ಲಾಕ್ ಡೌನ್ ಮುಂದುವರಿಕೆ; 4 ರಾಜ್ಯಗಳಿಂದ ಅಧಿಕೃತ ಆದೇಶ “

ನವದೆಹಲಿ, ಏಪ್ರಿಲ್ 12 : ಕೊರೊನಾ ಹರಡದಂತೆ ತಡೆಯಲು 21 ದಿನಗಳ ಲಾಕ್ ಡೌನ್ ಘೋಷಣೆ ಮಾಡಲಾಗಿತ್ತು. ಏಪ್ರಿಲ್ 30ರ ತನಕ ಲಾಕ್ ಡೌನ್ ವಿಸ್ತರಣೆ ಮಾಡಬೇಕು ಎಂದು ಹಲವು ರಾಜ್ಯಗಳು ಬೇಡಿಕೆ ಇಟ್ಟಿವೆ. ಈ ಕುರಿತು ಕೇಂದ್ರ ಸರ್ಕಾರ ಅಧಿಕೃತ ಘೋಷಣೆ ಮಾಡಬೇಕಿದೆ. ಪ್ರಧಾನಿ ನರೇಂದ್ರ ಮೋದಿ ಶನಿವಾರ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ಸಭೆಯಲ್ಲಿ ಲಾಕ್ ಡೌನ್ ವಿಸ್ತರಣೆ ಮಾಡುವ …

Read More »