ಬಳ್ಳಾರಿ: ಕೊರೊನಾ ವೈರಸ್ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯ ಹೊಸಪೇಟೆ ಮೂಲದ ಇಬ್ಬರನ್ನು ಐಸೋಲೇಷನ್ನಿಂದ ಬಿಡುಗಡೆ ಮಾಡಲಾಯಿತು. ಪಿ-333 ಹಾಗೂ ಪಿ-337 ಸಂಖ್ಯೆಯ ಈ ಇಬ್ಬರಲ್ಲಿ ಕೊರೊನಾ ವೈರಸ್ ಪಾಸಿಟಿವ್ ದಾಖಲಾಗಿತ್ತು. ಸತತ 14 ದಿನಗಳ ಕಾಲ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆದು ಗುಣಮುಖರಾದ ಈ ಇಬ್ಬರನ್ನ ಜಿಲ್ಲಾ ಸರ್ಕಾರಿ ಕೋವಿಡ್-19 ಅಸ್ಪತ್ರೆಯಿಂದ ಚಪ್ಪಾಳೆ ತಟ್ಟುವ ಮೂಲಕ ಬೀಳ್ಕೊಡಲಾಯಿತು. ಈವರೆಗೂ ಒಟ್ಟಾರೆಯಾಗಿ ಏಳು ಮಂದಿಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. …
Read More »Daily Archives: ಮೇ 1, 2020
ನರ್ಸ್ ಪತಿ ಲಾಕ್ಡೌನ್ ಹೊತ್ತಲ್ಲೇ ನಾಪತ್ತೆಯಾಗಿದ್ದಾನೆ. ಇದೀಗ ನರ್ಸ್ ನನಗೆ ನನ್ನ ಗಂಡ ಬೇಕು, ನ್ಯಾಯ ಕೊಡಿಸಿ ಎಂದು ಕಣ್ಣೀರು
ಬೆಂಗಳೂರು: ಕೊರೊನಾ ಶುರುವಾದಾಗಿನಿಂದ ನರ್ಸ್ ಗಳು ಹಗಲಿರುಳು ಎನ್ನದೇ ಜನರ ಜೀವ ಕಾಪಾಡುವ ಕೆಲಸ ಮಾಡುತ್ತಿದ್ದಾರೆ. ಆದರೆ ಇಂತಹ ಕೊರೊನಾ ವಾರಿಯರ್ಸ್ ನರ್ಸ್ ಪತಿ ಲಾಕ್ಡೌನ್ ಹೊತ್ತಲ್ಲೇ ನಾಪತ್ತೆಯಾಗಿದ್ದಾನೆ. ಇದೀಗ ನರ್ಸ್ ನನಗೆ ನನ್ನ ಗಂಡ ಬೇಕು, ನ್ಯಾಯ ಕೊಡಿಸಿ ಎಂದು ಕಣ್ಣೀರು ಹಾಕುತ್ತಿದ್ದಾರೆ. ದಾವಣಗೆರೆ ಮೂಲದ ನರ್ಸ್ ಶಾಂತ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಆದರೆ ಈಗ ಪತಿ ಸಿದ್ದರಾಜು ನಾಪತ್ತೆಯಾಗಿದ್ದಾನೆ. ಫೋನ್ ಮಾಡಿದರೆ ಸ್ವಿಚ್ ಆಫ್ …
Read More »ಗದಗ, ತುಮಕೂರು ಮತ್ತು ವಿಜಯಪುರಗಳ ಕೋವಿಡ್ ಪರೀಕ್ಷಾ ಪ್ರಯೋಗಾಲಯಗಳಿಗೆ ಕೇಂದ್ರ ಸರ್ಕಾರದ ಅನುಮತಿ
ಬೆಂಗಳೂರು: ಗದಗ, ತುಮಕೂರು ಮತ್ತು ವಿಜಯಪುರಗಳ ಕೋವಿಡ್ ಪರೀಕ್ಷಾ ಪ್ರಯೋಗಾಲಯಗಳಿಗೆ ಕೇಂದ್ರ ಸರ್ಕಾರದ ಅನುಮತಿ ದೊರಕಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೀಗ 26 ಕೋವಿಡ್ ಟೆಸ್ಟಿಂಗ್ ಲ್ಯಾಬ್ಗಳು ಕಾರ್ಯ ನಿರ್ವಹಿಸುವಂತಾಗಿದೆ. ರಾಜ್ಯದಲ್ಲಿ ಈಗ ದಿನಕ್ಕೆ 5,000 ಪರೀಕ್ಷೆಗಳನ್ನು ನಡೆಸುವ ಸಾಮರ್ಥ್ಯ ಲಭ್ಯವಾದಂತಾಗಿದ್ದು, ವೈದ್ಯಕೀಯ ಸೌಲಭ್ಯ ಹೆಚ್ಚಳ ಮತ್ತು ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ ಇದು ಮಹತ್ವದ ಬೆಳವಣಿಗೆಯಾಗಿದೆ. ಪ್ರಸ್ತುತ ಆರ್.ಟಿ.ಪಿ.ಸಿ.ಆರ್ ಲ್ಯಾಬ್ – 15, ಸಿಬಿಎನ್ಎಎಟಿ – 03 ಮತ್ತು ಖಾಸಗಿಯ 08 ಲ್ಯಾಬ್ …
Read More »ಕಾರ್ಮಿಕ ದಿನಾಚರಣೆ – ಪೌರಕಾರ್ಮಿಕರು, ಬೆಸ್ಕಾಂ ಸಿಬ್ಬಂದಿಗೆ ಪುಷ್ಪವೃಷ್ಟಿ……….
ನೆಲಮಂಗಲ: ಕೊರೊನಾ ನಿಯಂತ್ರಣಕ್ಕೆ ವಿಧಿಸಿರುವ ಲಾಕ್ಡೌನ್ನಿಂದ ಕಾರ್ಮಿಕರು ಉದ್ಯೋಗ ಕಳೆದುಕೊಳ್ಳುವ ಸಮಸ್ಯೆ ಎದುರಾಗುವುದಿಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಭರವಸೆ ನೀಡಿದ್ದಾರೆ. ನೆಲಮಂಗಲ ನಗರದ ಬಸವಣ್ಣ ದೇವರಮಠದಲ್ಲಿ ಕಾರ್ಮಿಕ ದಿನಾಚರಣೆ ಪ್ರಯುಕ್ತ ಸ್ವಾಮೀಜಿಗಳ ನೇತೃತ್ವದಲ್ಲಿ ಪೌರಕಾರ್ಮಿಕರಿಗೆ ಹಾಗೂ ಬೆಸ್ಕಾಂ ಸಿಬ್ಬಂದಿಗಳಿಗೆ ಪುಷ್ಪವೃಷ್ಟಿ ಮಾಡುವ ಮೂಲಕ ಆಹಾರಕಿಟ್ ವಿತರಣೆ ಮಾಡಿ ಮಾತನಾಡಿದ ಅವರು, ಲಾಕ್ಡೌನ್ನಿಂದ ಭಾರತದ ಆರ್ಥಿಕತೆ ಕುಸಿತವಾಗಿದೆ. ಆರ್ಥಿಕತೆಗಿಂತ ಜನರ ಪ್ರಾಣ ಉಳಿಸುವುದು ಮುಖ್ಯವಾಗಿದ್ದು ಮುಂದೆ ಆರ್ಥಿಕತೆ ಚೇತರಿಗೆ ಪಡೆಯಲಿದೆ. …
Read More »ಕೋವಿಡ್ ಇರಬೇಕು ಇಲ್ಲ ನಾವಿರಬೇಕು. ಏಕೆಂದರೆ ಕೋವಿಡ್ ನಮ್ಮನ್ನು ಬಿಟ್ಟು ಅಷ್ಟು ಬೇಗ ಹೋಗಲ್ಲ: ಶ್ರೀರಾಮುಲು
ಹಾಸನ: ಕೋವಿಡ್ ಇರಬೇಕು ಇಲ್ಲ ನಾವಿರಬೇಕು. ಏಕೆಂದರೆ ಕೋವಿಡ್ ನಮ್ಮನ್ನು ಬಿಟ್ಟು ಅಷ್ಟು ಬೇಗ ಹೋಗಲ್ಲ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಎಚ್ಚರಿಕೆ ನೀಡಿದ್ದಾರೆ. ಜನರ ಜೊತೆಗೆ ಸರ್ಕಾರ ಕೆಲಸ ಮಾಡುತ್ತಿದೆ. ಇಷ್ಟು ದಿನ ನಾವು ತಾಳ್ಮೆಯಿಂದ ಇದ್ದೇವೆ. ಮುಂದೆಯೂ ಯಾರು ತಾಳ್ಮೆ ಕಳೆದುಕೊಳ್ಳಬೇಡಿ. ಕೋವಿಡ್ ನಮ್ಮನ್ನು ಅಷ್ಟು ಬೇಗ ಬಿಟ್ಟು ಹೋಗಲ್ಲ. ನಾವು ಕೂಡ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ಶ್ರೀರಾಮುಲು ಹೇಳಿದರು. ಕೊರಾನಾ ವಾರಿಯರ್ಸ್ ವಿರುದ್ಧ ಹಲ್ಲೆ …
Read More »ಕೊನೆಗೂ ಜಿಲ್ಲಾಧಿಕಾರಿ ಹಿರೇ ಬಾಗೇವಾಡಿ ಗ್ರಾಮಕ್ಕೆ ಭೇಟಿ
ಬೆಳಗಾವಿ -: ಕೊರೋನಾ ಸಂಕಷ್ಟದಿಂದ ನಲುಗಿಹೋಗಿ ತಿಂಗಳುಗಳೇ ಕಳೆದರೂ ಹಿರೇಬಾಗೇವಾಡಿ ಗ್ರಾಮಕ್ಕೆ ಭೇಟಿ ನೀಡದೆ ಜನರ ಆಕ್ರೋಶಕ್ಕೆ ಗುರಿಯಾಗಿದ್ದ ಬೆಳಗಾವಿ ಜಿಲ್ಲಾಧಿಕಾರಿ ಎಸ್.ಬಿ.ಬೊಮ್ಮನಳ್ಳಿ ಅವರನ್ನು ಗ್ರಾಮಕ್ಕೆ ಕರೆತರುವಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಯಶಸ್ವಿಯಾಗಿದ್ದಾರೆ. ಕೋವಿಡ್ -19 ಬೆಳಗಾವಿ ಜಿಲ್ಲಾ ಉಸ್ತುವಾರಿ ಅಧಿಕಾರಿ ರಾಜೇಂದ್ರ ಚೋಳನ್ ಅವರೊಂದಿಗೆ ನಿನ್ನೆ ಸುದೀರ್ಘ ಚರ್ಚೆ ನಡೆಸಿದ್ದ ಲಕ್ಷ್ಮಿ ಹೆಬ್ಬಾಳಕರ್, ಹಿರೇಬಾಗೇವಾಡಿ ಜನರು ಪಡುತ್ತಿರುವ ಪಾಡನ್ನು ವಿವರಿಸಿದ್ದರು. ಜಿಲ್ಲಾಡಳಿತ ನಿರೀಕ್ಷಿತ ರೀತಿಯಲ್ಲಿ ಸ್ಪಂದಿಸುತ್ತಿಲ್ಲ, ವಿಶೇಷವಾಗಿ, ಕೇವಲ …
Read More »ಮಹಿಳೆ ಯಾವುದೇ ಕಾರಣಕ್ಕೂ ಮದ್ಯದಂಗಡಿ ತೆರೆಯಬೇಡಿ, ಬೇಕಿದ್ದರೆ ನನ್ನ ಅರ್ಧ ಸಂಬಳವನ್ನು ನೀಡುತ್ತೇನೆ ಎಂದು ಸಿಎಂ ಬಳಿ ಮನವಿ ಮಾಡಿದ್ದಾರೆ.
ಬೆಂಗಳೂರು: ಹಲವರು ಮದ್ಯದಂಗಡಿ ಯಾವಾಗ ತೆರೆಯುತ್ತೆ ಎಂದು ಕಾಯುತ್ತಿದ್ದಾರೆ. ಇನ್ನು ಕೆಲವರು ಮದ್ಯದಂಗಡಿ ತೆರೆಯುವಂತೆ ಸರ್ಕಾರಕ್ಕೆ ದುಂಬಾಲು ಬಿದ್ದಿದ್ದಾರೆ. ಆದರೆ ಇಲ್ಲೊಬ್ಬ ಮಹಿಳೆ ಯಾವುದೇ ಕಾರಣಕ್ಕೂ ಮದ್ಯದಂಗಡಿ ತೆರೆಯಬೇಡಿ, ಬೇಕಿದ್ದರೆ ನನ್ನ ಅರ್ಧ ಸಂಬಳವನ್ನು ನೀಡುತ್ತೇನೆ ಎಂದು ಸಿಎಂ ಬಳಿ ಮನವಿ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಮಹಿಳೆಯೊಬ್ಬಳು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಮನವಿ ಮಾಡಿ ವಿಡಿಯೋವೊಂದನ್ನು ಹರಿಬಿಟ್ಟಿದ್ದು, ಮುಖ್ಯಮಂತ್ರಿಗಳಿಗೆ ನನ್ನದೊಂದು ಮನವಿ. ಎಣ್ಣೆ ಅಂಗಡಿ ತೆರೆಯಲು ಅವಕಾಶ ನೀಡಬೇಡಿ. ಏಕೆಂದರೆ ಮದ್ಯ …
Read More »ಬಿಡುವಿಲ್ಲದೆ ಕರ್ತವ್ಯ ನಿರ್ವಹಿಸಿದ್ದಕ್ಕಾಗಿ ಆರೋಗ್ಯದಲ್ಲಿ ವ್ಯತ್ಯಯ ಉಂಟಾಗಿ ಹೋಂಗಾರ್ಡ್ವೊಬ್ಬರು ಸಾವನ್ನಪ್ಪಿದ ದಾರುಣ ಘಟನೆ ತುಮಕೂರಿನಲ್ಲಿ ನಡೆದಿದೆ.
ತುಮಕೂರು: ಬಿಡುವಿಲ್ಲದೆ ಕರ್ತವ್ಯ ನಿರ್ವಹಿಸಿದ್ದಕ್ಕಾಗಿ ಆರೋಗ್ಯದಲ್ಲಿ ವ್ಯತ್ಯಯ ಉಂಟಾಗಿ ಹೋಂಗಾರ್ಡ್ವೊಬ್ಬರು ಸಾವನ್ನಪ್ಪಿದ ದಾರುಣ ಘಟನೆ ತುಮಕೂರಿನಲ್ಲಿ ನಡೆದಿದೆ. ಕೊರಟಗೆರೆ ತಾಲೂಕಿನ ಗೌರಗಾನಹಳ್ಳಿಯ ಹನುಮಂತು ಮೃತರು.ಅನಾರೋಗ್ಯದ ನಡುವೆಯೂ ಗೃಹರಕ್ಷಕ ಸಿಬ್ಬಂದಿ ಹನುಮಂತು ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೊರೊನಾ ಕರ್ತವ್ಯ ನಿರ್ವಹಿಸುತ್ತಿದ್ದರು. ಬಿಡುವಿಲ್ಲದ ಕೆಲಸದಿಂದ ನಿನ್ನೆ ಅವರ ಆರೋಗ್ಯದಲ್ಲಿ ವ್ಯತ್ಯಯ ಕಂಡುಬಂದಿದ್ದು, ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ. ಅವರು ಮಧುಮೇಹದಿಂದ ಬಳಲುತಿದ್ದರು ಎಂದು ತಿಳಿದುಬಂದಿದೆ.ತೀರ ಬಡಕುಟುಂಬದಿಂದ …
Read More »ಬೆಳಗಾವಿ ಜಿಲ್ಲೆಯ ರಾಯಬಾಗ ಕುಡಚಿಯ ಮೂರು ಪಾಸಿಟೀವ್ ಕೇಸ್ ಪತ್ತೆ
ಬೆಳಗಾವಿ- ಬೆಳಗಾವಿ ಪಾಲಿಗೆ ಇಂದು ಶುಭ ಶುಕ್ರವಾರ ಆಗಲಿಲ್ಲ ಯಾಕಂದ್ರೆ ಇಂದು ಬೆಳಗಿನ ಹೆಲ್ತ್ ಬುಲಿಟೀನ್ ಬಿಡುಗಡೆ ಯಾಗಿದೆ. ಈ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ ಮೂರು ಪಾಸಿಟಿವ್ ಕೇಸ್ ಪತ್ತೆಯಾಗಿವೆ ಬೆಳಗಾವಿ ಜಿಲ್ಲೆಯ ರಾಯಬಾಗ ಕುಡಚಿಯ ಮೂರು ಪಾಸಿಟೀವ್ ಕೇಸ್ ಪತ್ತೆಯಾಗಿದ್ದು ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 70 ರ ಗಡಿ ದಾಟಿ 72 ಕ್ಕೇರಿದೆ ನಿನ್ನೆ ಗುರುವಾರ ಒಂದೇ ದಿನ ಹದಿನಾಲ್ಕು ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದ್ದವು ಇಂದು …
Read More »ವೃದ್ಧ ದಂಪತಿಗಳನ್ನು ಹೊರಹಾಕಿದ ಪುರಸಭೆ ಅಧಿಕಾರಿಗಳು ತರಕಾರಿ ತರಲು ತೆರಳಿದ್ದ ದಂಪತಿಗಳ ಮನೆಗೆ ಬೀಗ ಜಡಿದ ಅಧಿಕಾರಿಗಳು.
ರಾಮದುರ್ಗ :ವೃದ್ಧ ದಂಪತಿಗಳನ್ನು ಹೊರಹಾಕಿದ ಪುರಸಭೆ ಅಧಿಕಾರಿಗಳು ತರಕಾರಿ ತರಲು ತೆರಳಿದ್ದ ದಂಪತಿಗಳ ಮನೆಗೆ ಬೀಗ ಜಡಿದ ಅಧಿಕಾರಿಗಳು. ಬೆಳಗಾವಿ ಜಿಲ್ಲೆಯ ರಾಮದುರ್ಗ ಪುರಸಭೆಯ ವ್ಯಾಪ್ತಿಯಲ್ಲಿ ಘಟನೆ ರಾಮದುರ್ಗದ ನೇಕಾರ ಪೇಟೆಯ ನಿವಾಸಿಗಳಿಗೆ ಹೊರದಬ್ಬಿದ ಅಧಿಕಾರಿಗಳು ಕೊರೋನಾ ವೈರಸ್ ಲಾಕಡೌನ ಸಂದರ್ಭದಲ್ಲೂ ಕರುಣೆ ತೋರದ ಅಧಿಕಾರಿಗಳು ಅಧಿಕಾರಿಗಳ ಈ ವರ್ತನೆಗೆ ಕಂಗಾಲಾದ ವೃದ್ದ ದಂಪತಿಗಳು ಬಾಗಿಲು ಬಳಿ ಕುಳಿತು ಕಣ್ಣೀರು ಹಾಕುತ್ತಿರುವ ದಂಪತಿಗಳು ಮನೆಯ ಮುಂದೆಯೆ ದಿನ ಕಳೆಯುತ್ತಿರುವ ಬಸಪ್ಪ …
Read More »
Laxmi News 24×7