Breaking News

Daily Archives: ಮೇ 3, 2020

ಒಂದು ದಿನ ಅಥವಾ ಒಂದು ಕಡೆಗೆ ಹೋಗಲು ಪಾಸ್ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.

ಬೆಂಗಳೂರು: ಲಾಕ್‍ಡೌನ್3 ಘೋಷಣೆಯಾಗಿರುವುರಿಂದ ವಿವಿಧ ಸ್ಥಳಗಳಲ್ಲಿ ಸಿಕ್ಕಿಹಾಕಿಕೊಂಡು ಊರಿಗೆ ಹೋಗಲು ಪರದಾಡುತ್ತಿರುವ ಕಾರ್ಮಿಕರು, ಯಾತ್ರಿಕರು, ವಿದ್ಯಾರ್ಥಿಗಳು ಮತ್ತಿತರರಿಗೆ ಅನುಕೂಲವಾಗುವಂತೆ ಒಂದು ದಿನ ಅಥವಾ ಒಂದು ಕಡೆಗೆ ಹೋಗಲು ಪಾಸ್ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಒಂದು ದಿನ, ಒಂದು ಕಡೆಗೆ ಹೋಗಲು ಮಾತ್ರ ಈ ಪಾಸ್ ಬಳಸಬಹುದು. ಅಂತರ್ ಜಿಲ್ಲೆಗಳಿಗೆ ಪ್ರಯಾಣಿಸಲು ಅವಕಾಶ ನೀಡಲಾಗಿದೆ ಎಂದು ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ತಮ್ಮ ಆದೇಶದಲ್ಲಿ ಪ್ರಕಟಿಸಿದ್ದಾರೆ. ಪಾಸ್ ಬೇಕಾದವರು ತಮ್ಮ …

Read More »

ಹಸಿರು ವಲಯದಲ್ಲಿ ಬಸ್ ಸಂಚಾರಕ್ಕೆ ಹಸಿರು ನಿಶಾನೆ…..

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಿಲುಕಿಕೊಂಡಿದ್ದ ವಲಸೆ ಕಾರ್ಮಿಕರಿಗೆ ತಮ್ಮ ಊರುಗಳಿಗೆ ಹೋಗಲು ರಾಜ್ಯ ಸರ್ಕಾರ ಶನಿವಾರದಿಂದ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಬೆನ್ನಲ್ಲೇ ಹಸಿರು ವಲಯದಲ್ಲಿ ಬಸ್ ಸಂಚಾರಕ್ಕೆ ಹಸಿರು ನಿಶಾನೆ ತೋರಿದೆ. ಉಡುಪಿಯನ್ನು ಹೊರತುಪಡಿಸಿ ರಾಜ್ಯದ 12 ಹಸಿರು ವಲಯ ಜಿಲ್ಲೆಗಳಲ್ಲಿ ಸೋಮವಾರದಿಂದ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಆರಂಭವಾಗಲಿದೆ. ಆದರೆ ಜಿಲ್ಲೆಯ ಒಳಗೆ ಮಾತ್ರ ಬಸ್‍ಗಳು ಸಂಚರಿಸಲಿವೆ. ಅಂತರ್ ಜಿಲ್ಲೆಯ ಬಸ್ ಸಂಚಾರ ಇರುವುದಿಲ್ಲ. ಹಾವೇರಿ, ಯಾದಗಿರಿ, …

Read More »

ಯಾವ ಜಿಲ್ಲೆಯಲ್ಲಿ ಎಷ್ಟು ಕಂಟೈನ್‍ಮೆಂಟ್ ಝೋನ್?

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಹೀಗಾಗಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಂಟೈನ್‍ಮೆಂಟ್ ಝೋನ್‍ಗಳ ಸಂಖ್ಯೆಯೂ ಹೆಚ್ಚಾಗುತ್ತಲೇ ಇದೆ. ಆದರೆ ಬೆಂಗಳೂರಿನಲ್ಲಿ ಇಳಿಕೆ ಕಂಡಿದೆ. ರೆಡ್ ಝೋನ್ ಮೈಸೂರು ಜಿಲ್ಲೆಯಲ್ಲಿ ಒಟ್ಟು 28 ಕಂಟೈನ್‍ಮೆಂಟ್ ವಲಯಗಳಿವೆ. ಇದರಲ್ಲಿ ಮೈಸೂರು ನಗರದ ಕೆಲವು ಪ್ರದೇಶ, ನಂಜನಗೂಡಿನ ಕೆಲವು ಬಡಾವಣೆ, ಮೈಸೂರು ತಾಲೂಕು ಕೆಲವು ಏರಿಯಾ ಹಾಗೂ ಟೀ ನರಸೀಪುರದ 1 ಗ್ರಾಮ ಸೇರಿವೆ. …

Read More »

ಭಾರತದ ಪಾಲಿಗೆ ಇಂದು ಮತ್ತೊಂದು ಐತಿಹಾಸಿಕ ದಿನ – ವಾಯು, ನೌಕಾ ಸೇನೆಯಿಂದ ಹೆಲ್ತ್ ವಾರಿಯರ್ಸ್‌ಗೆ ಗೌರವ

ನವದೆಹಲಿ: ನಮ್ಮನ್ನು ರಕ್ಷಿಸಲು, ಕೊರೊನಾ ಹಿಮ್ಮೆಟ್ಟಿಸಲು ಪ್ರಾಣವನ್ನೇ ಪಣಕ್ಕಿಟ್ಟು ಹೋರಾಟ ನಡೆಸುತ್ತಿರುವ ಹೆಲ್ತ್ ವಾರಿಯರ್ಸ್‌ಗೆ ಈಗಾಗಲೇ ಚಪ್ಪಾಳೆ ತಟ್ಟುವ ಮೂಲಕ ಜನರು ಗೌರವ ಸಲ್ಲಿಸಿದ್ದಾರೆ. ಆದರೆ ಇಂದು ಇಡೀ ದೇಶವನ್ನೇ ಕಾಯುವ ಮೂರು ಸೇನೆಗಳು ಹೆಲ್ತ್ ವಾರಿಯರ್ಸ್‌ಗೆ ವಿಶೇಷ ಗೌರವ ಸಲ್ಲಿಸಲು ಮುಂದಾಗಿವೆ. ಉತ್ತರ ಧ್ರುವದಿಮ್ ದಕ್ಷಿಣ ಧ್ರುವದವರೆಗೆ ಹೆಲಿಕಾಪ್ಟರ್‌ನಿಂದ ಹೂಮಳೆ ಈ ಬಾರಿ ಸಾಮಾನ್ಯ ಜನರ ಬದಲು, ಇಡೀ ದೇಶವನ್ನು ಫುಲ್ ಟೈಂ ಕಾಯುವ ಮೂರು ಸೇನೆಗಳು ಹೆಲ್ತ್ …

Read More »

11 ಟೈರ್ ಟ್ಯೂಬ್‍ನಲ್ಲಿ ಸಾಗಿಸುತ್ತಿದ್ದ 330 ಲೀಟರ್ ಕಳ್ಳಭಟ್ಟಿ ವಶ………

ಚಿಕ್ಕೋಡಿ/ಬೆಳಗಾವಿ: ಕೊರೊನಾದಿಂದ ರಾಜ್ಯದಲ್ಲಿ ಮದ್ಯ ಮಾರಾಟ ಬಂದ್ ಆಗಿದ್ದ ಕಾರಣ ಕಳ್ಳ ಭಟ್ಟಿ ದಂಧೆಗೆ ಕಡಿವಾಣ ಹಾಕಲು ಚಿಕ್ಕೋಡಿ ವಿಭಾಗದ ಅಬಕಾರಿ ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಚಿಕ್ಕೋಡಿ ವಿಭಾಗದ ಅಬಕಾರಿ ಪೊಲೀಸರು ಹುಕ್ಕೇರಿ ತಾಲೂಕಿನ ಶಹಬಂದರ ಗ್ರಾಮದಲ್ಲಿ ಕಳ್ಳ ಭಟ್ಟಿ ದಂಧೆಕೋರರ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಸುಮಾರು 330 ಲೀಟರ್ ಕಳ್ಳಭಟ್ಟಿ ವಶಕ್ಕೆ ಪಡೆದುಕೊಡಿದ್ದಾರೆ. ಶಹಬಂದರ್ ಗ್ರಾಮದ ಬಳಿ ಕಳ್ಳಭಟ್ಟಿ ಸಾಗಿಸುತ್ತಿದ್ದ ಎರಡು ದ್ವಿ-ಚಕ್ರ ವಾಹನ ಹಾಗೂ …

Read More »