Daily Archives: ಮೇ 11, 2020

ಮೇ 17ರ ಬಳಿಕ.. ಏನಿರುತ್ತೆ? ಏನಿರಲ್ಲ?………..

ಬೆಂಗಳೂರು: ಕೊರೊನಾ ಲಾಕ್‍ಡೌನ್ 3.0 ಮುಕ್ತಾಯಕ್ಕೆ ಇನ್ನು 7 ದಿನ ಬಾಕಿ ಇದೆ. ಈ ಹೊತ್ತಲ್ಲೇ ಮೇ 17ರ ಬಳಿಕ ಮುಂದಿನ ಕಥೆ ಏನು? ಲಾಕ್‍ಡೌನ್ ಅಂತ್ಯ ಆಗುತ್ತಾ? ಮತ್ತೆ ಏನಾದರೂ ಮುಂದುವರಿಸ್ತಾರಾ? ಮುಂದುವರಿಸೋದಾದ್ರೆ, ಯಾವ ಮಾರ್ಗಸೂಚಿ ಇರುತ್ತೆ? ಲಾಕ್‍ಡೌನ್ ಎಂಡ್ ಆದರೆ ಮತ್ತೆ ವೈರಸ್ ಹಬ್ಬಿದ್ರೆ ಏನ್ ಮಾಡೋದು? ಅನ್ನೋ ಎಲ್ಲಾ ಲೆಕ್ಕಾಚಾರ-ಆತಂಕದ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಮಧ್ಯಾಹ್ನ 3 ಗಂಟೆಗೆ ಎಲ್ಲಾ ರಾಜ್ಯಗಳ …

Read More »

ಸೋಮವಾರದಿಂದ ರೈಲ್ವೆ ಟಿಕೆಟ್ ಬುಕ್ಕಿಂಗ್ ಆರಂಭ…………….

ನವದೆಹಲಿ: ಭಾರತೀಯ ರೈಲ್ವೆ ಇಲಾಖೆಯು ಮಹತ್ವ ಆದೇಶ ಹೊರಡಿಸಿದ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದ್ದು, ಸೋಮವಾರದಿಂದ ರೈಲ್ವೆ ಟಿಕೆಟ್ ಬುಕ್ಕಿಂಗ್ ಆರಂಭವಾಗಲಿದೆ. ಪ್ರಯಾಣಿಕರ ರೈಲುಗಳನ್ನು ಮೇ 12ರಿಂದ ಹಂತ ಹಂತವಾಗಿ ಪ್ರಾರಂಭಿಸಲು ಭಾರತೀಯ ರೈಲ್ವೆ ಯೋಜಿಸಿದೆ. ಆರಂಭದಲ್ಲಿ 15 ಜೋಡಿ ರೈಲುಗಳು ಓಡಾಡಲಿವೆ. ಈ ವಿಶೇಷ ರೈಲುಗಳು ನವದೆಹಲಿ ನಿಲ್ದಾಣದಿಂದ ದಿಬ್ರುಗರ್, ಅಗರ್ತಲಾ, ಹೌರಾ, ಪಾಟ್ನಾ, ಬಿಲಾಸ್ಪುರ್, ರಾಂಚಿ, ಭುವನೇಶ್ವರ, ಸಿಕಂದರಾಬಾದ್, ಬೆಂಗಳೂರು, ಚೆನ್ನೈ, ತಿರುವನಂತಪುರಂ, ಮಡ್ಗಾಂವ್, ಮುಂಬೈ ಸೆಂಟ್ರಲ್, …

Read More »

ಕಲಬುರಗಿಯಲ್ಲಿ ಕೊರೊನಾ ಸೋಂಕಿನಿಂದ 13 ಮಂದಿ ಗುಣಮುಖ……..

ಕಲಬುರಗಿ: ಕೊರೊನಾ ಸೋಂಕಿನಿಂದ ಕಲಬುರಗಿ ನಗರದ 12 ಮತ್ತು ಆಳಂದ ಪಟ್ಟಣದ 65 ವರ್ಷದ ವೃದ್ಧೆ ಸೇರಿದಂತೆ ಒಟ್ಟು 13 ಜನ ಕೋವಿಡ್-19 ಪೀಡಿತರು ಸೋಂಕಿನಿಂದ ಗುಣಮುಖರಾಗಿ ರವಿವಾರ ಅಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಡಿ.ಸಿ ಶರತ್ ಬಿ. ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ ಸೋಂಕು ಪತ್ತೆಯಾದ ನಂತರ ರವಿವಾರ ಪ್ರಥಮ ಬಾರಿಗೆ ಒಂದೇ ದಿನ ಇಷ್ಟೊಂದು ಗರಿಷ್ಠ ಪ್ರಮಾಣದಲ್ಲಿ ರೋಗಿಗಳು ಗುಣಮುಖರಾಗಿ ಅಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯ ಆಳಂದ ಪಟ್ಟಣದ 65 ವರ್ಷದ …

Read More »

ಮೆಗಾ ಏರ್‌ಲಿಫ್ಟ್ ಮೂಲಕ ಬೇರೆ ಬೇರೆ ರಾಜ್ಯಗಳಿಂದ ಮತ್ತು ವಿದೇಶಗಳಿಂದ ಇಂದು ತಾಯ್ನಾಡಿಗೆ 326 ಕನ್ನಡಿಗರು ಬಂದಿಳಿದಿದ್ದಾರೆ.

ಬೆಂಗಳೂರು: ಮಹಾಮಾರಿ ಕೊರೊನಾದಿಂದ ಭಾರತ ನಲುಗಿ ಹೋಗಿದೆ. ಹೀಗಾಗಿ ಆಪರೇಷನ್ ವಂದೇ ಭಾರತ್ ಮೆಗಾ ಏರ್‌ಲಿಫ್ಟ್ ಮೂಲಕ ಬೇರೆ ಬೇರೆ ರಾಜ್ಯಗಳಿಂದ ಮತ್ತು ವಿದೇಶಗಳಿಂದ ಕನ್ನಡಿಗರು ವಾಪಸ್ಸಾಗುತ್ತಿದ್ದಾರೆ. ಇಂದು ತಾಯ್ನಾಡಿಗೆ 326 ಕನ್ನಡಿಗರು ಬಂದಿಳಿದಿದ್ದಾರೆ. ಬೆಂಗಳೂರಿಗೆ 323 ಜನ ಕನ್ನಡಿಗರು ಬಂದಿಳಿದಿದ್ದಾರೆ. ವಿಶೇಷ ವಿಮಾನದ ಮೂಲಕ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಸುಕಿನ ಜಾವ 4.47ಕ್ಕೆ ಕನ್ನಡಿಗರು ಆಗಮಿಸಿದ್ದಾರೆ. ಮೊದಲಿಗೆ ವಿಮಾನ ಲಂಡನ್‍ನಿಂದ  ದೆಹಲಿಗೆ ಬಂದಿದೆ. ನಂತರ ದೆಹಲಿಯಿಂದ ಬೆಂಗಳೂರಿಗೆ …

Read More »