Breaking News

Daily Archives: ಮೇ 21, 2020

ಶನಿವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಗ್ಗೆ 7 ಗಂಟೆಯವರೆಗೆ ಅಂಗಡಿಗಳೂ ತೆರೆಯುವಂತಿಲ್ಲ.

ಬೆಂಗಳೂರು – ರಾಜ್ಯದಲ್ಲಿ ಮೇ 31ರ ವರೆಗೂ 4ನೇ ಹಂತದ ಲಾಕ್ ಡೌನ್ ಮುಂದುವರಿಯಲಿದೆ. ಆದರೆ ಬೆಳಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಕಟ್ಟುನಿಟ್ಟಾದ ಲಾಕ್ ಡೌನ್ ಇರುವುದಿಲ್ಲ. ಸಂಜೆ 7 ಗಂಟೆಯಿಂದ ಬೆಳಗ್ಗೆ 7 ಗಂಟೆಯವರೆಗೆ ಕರ್ಫ್ಯೂ ಮಾದರಿಯಲ್ಲಿ ಲಾಕ್ ಡೌನ್ ಇರಲಿದೆ. ಎಲ್ಲಾ ಅಂಗಡಿಗಳೂ 7 ಗಂಟೆಗೆ ಬಾಗಿಲು ಹಾಕಬೇಕು. ವಾಹನ ಸಂಚಾರವೂ ಸ್ಥಗಿತವಾಗಬೇಕು. ಜನರೂ ಅನಗತ್ಯವಾಗಿ ಸಂಚರಿಸಬಾರದು. ಇದರ ಜೊತೆಗೆ ಪ್ರತಿ ಭಾನುವಾರ ಸಂಪೂರ್ಣ …

Read More »

ಮೇ 26ರಿಂದ ದೇವಾಲಯಗಳಲ್ಲಿ ಆನ್‍ಲೈನ್ ಸೇವೆ ಪ್ರಾರಂಭ:ಕೋಟಾ ಶ್ರೀನಿವಾಸ್ ಪೂಜಾರಿ

ಬೆಂಗಳೂರು: ಇಷ್ಟು ದಿನ ಕೊರೊನಾ ವೈರಸ್ ಭೀತಿಗೆ ಬಂದ್ ಆಗಿದ್ದ ದೇವಲಯಗಳಲ್ಲಿ ಈಗ ಭಕ್ತರಿಗೆ ಆನ್‍ಲೈನ್ ಮೂಲಕ ಹಣ ಪಾವತಿಸಿ ಪೂಜೆ ಮಾಡಿಸಲು ಅವಕಾಶ ನೀಡಲಾಗುತ್ತಿದೆ. ಮೇ 26, 27ರಿಂದ ದೇವಾಲಯಗಳಲ್ಲಿ ಆನ್‍ಲೈನ್ ಸೇವೆ ಪ್ರಾರಂಭ ಆಗಲಿದೆ ಎಂದು ಮುಜರಾಯಿ ಇಲಾಖೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಆನ್‍ಲೈನ್‍ನಲ್ಲಿ ಭಕ್ತರು ದೇವಸ್ಥಾನಗಳಿಗೆ ಹಣ ಪಾವತಿ ಮಾಡಿ ಪೂಜೆ ಮಾಡಿಸಲು ಅವಕಾಶ ನೀಡಲಾಗುತ್ತದೆ. 15ರಿಂದ 20 …

Read More »

ಎಫ್‍ಬಿ ವಿಶೇಷ ಲಾಕ್ ಫೀಚರ್ – ಭಾರತದ ಬಳಕೆದಾರರಿಗೆ ಮಾತ್ರ ಲಭ್ಯ

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ನಂಬರ್ ಒನ್ ಆಗಿರುವ ಫೇಸ್‍ಬುಕ್ ಭಾರತೀಯ ಬಳಕೆದಾರರಿಗೆ ಮಾತ್ರ ವಿಶೇಷ ಪ್ರೈವೆಸಿಯನ್ನು ಫೀಚರ್ ನೀಡಲು ಮುಂದಾಗುತ್ತಿದೆ. ಇಲ್ಲಿಯವರೆಗೆ ಫೇಸ್‍ಬುಕ್‍ನಲ್ಲಿ ಫ್ರೆಂಡ್ಸ್ ಆಗದೇ ಇದ್ದರೂ ಅವರ ವಾಲ್ ನಲ್ಲಿ ಬರೆದ ಪೋಸ್ಟ್, ಫೋಟೋಗಳನ್ನು ವೀಕ್ಷಿಸಬಹುದಾಗಿತ್ತು. ಆದರೆ ಈಗ ಸಂಪೂರ್ಣವಾಗಿ ಪ್ರೊಫೈಲ್ ಲಾಕ್ ಮಾಡುವ ಫೀಚರ್ ನೀಡಲಿದೆ. ಯಾರೆಲ್ಲ ಈ ಲಾಕ್ ಫೀಚರ್ ಆಯ್ಕೆ ಮಾಡುತ್ತಾರೋ ಅವರ ಪ್ರೊಫೈಲಿನಲ್ಲಿರುವ ಫೋಟೋಗಳು ಸ್ನೇಹಿತರಿಗೆ ಮಾತ್ರ ಕಾಣುತ್ತದೆ. ಬೇರೆ ಯಾರಿಗೂ ಫೋಟೋಗಳು, …

Read More »

ಇಲ್ಲಿದೆ ರಾಜ್ಯದಲ್ಲಿ ಸಂಚಾರ ಆರಂಭಿಸಲಿರುವ ರೈಲುಗಳ ಕಂಪ್ಲೀಟ್ ಡೀಟೇಲ್ಸ್ ……….

ಹುಬ್ಬಳ್ಳಿ,ಮೇ21-ಕಳೆದ ಮಾರ್ಚ್ 22ರಿಂದ ಸ್ಥಗಿತಗೊಂಡಿದ್ದ ರೈಲು ಸಂಚಾರ ರಾಜ್ಯದಲ್ಲಿ ನಾಳೆಯಿಂದ ಆರಂಭವಾಗಲಿದೆ ಎಂದು ನೈರುತ್ಯ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.ಕೊರೊನಾ ವೈರಸ್ ತಡೆಯಲು ಜಾರಿಗೊಳಿಸಲಾದ ಲಾಕ್‍ಡೌನ್ ಹಿನ್ನೆಲೆಯಲ್ಲಿ , ಭಾರತೀಯ ರೈಲ್ವೆಯ ಇತಿಹಾಸದಲ್ಲಿ ಮೊದಲ ಬಾರಿಗೆ ಕಳೆದ ಮಾರ್ಚ್ 22ರಿಂದ ಪ್ರಯಾಣಿಕರ ರೈಲುಗಳನ್ನು ರದ್ದುಗೊಳಿಸಲಾಗಿತ್ತು. ಲಾಕ್‍ಡೌನ್ 4.0 ಮೊದಲ ದಿನವಾದ ಮೇ 18ರಂದು ಮುಖ್ಯಮಂತ್ರಿಗಳು, ಕರ್ನಾಟಕದೊಳಗೆ ಅಂತರ ಜಿಲ್ಲಾ ರೈಲುಗಳನ್ನು ಪ್ರಾರಂಭಿಸಬಹುದು ಎಂದು ಹೇಳಿದರು. ರೈಲ್ವೆ ಸಚಿವಾಲಯವು ಈ ಶಿಫಾರಸನ್ನು ಪರಿಗಣಿಸಿ …

Read More »

ವಿವಾಹಿತ ಮಹಿಳೆಯೊಬ್ಬಳು ತನ್ನ ಮಗುವನ್ನು ತವರು ಮನೆಯಲ್ಲಿ ಬಿಟ್ಟು ತನ್ನ ಹಳೆ ಪ್ರಿಯಕರನ ಜೊತೆ ಪರಾರಿ

ಉಡುಪಿ: ವಿವಾಹಿತ ಮಹಿಳೆಯೊಬ್ಬಳು ತನ್ನ ಮಗುವನ್ನು ತವರು ಮನೆಯಲ್ಲಿ ಬಿಟ್ಟು ತನ್ನ ಹಳೆ ಪ್ರಿಯಕರನ ಜೊತೆ ಪರಾರಿಯಾದ ಘಟನೆ ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದಲ್ಲಿ ನಡೆದಿದೆ. ಅಜೆಕಾರು ಕೈಕಂಬ ನಿವಾಸಿ ಮುನ್ಶಿರಾ ಮೆಹಮೂಬ್(ಹೆಸರು ಬದಲಾಯಿಸಲಾಗಿದೆ) ಪರಾರಿಯಾದ ಮಹಿಳೆ. ಮದುವೆಗೆಂದು ಮಂಗಳೂರಿಗೆ ಹೋದ ಕಾರಣಕ್ಕೆ ಈ ಮಹಿಳೆ, ತಾಯಿ ಮತ್ತು ಸಹೋದರನ ಜೊತೆ ಹೋಂ ಕ್ವಾರಂಟೈನ್ ಆಗಿದ್ದಳು. ಹೋಂ ಕ್ವಾರಂಟೈನ್ ಅವಧಿ ಮುಗಿಯುತ್ತಿದ್ದಂತೆ ತನ್ನ ಹಳೆಯ ಪ್ರಿಯಕರನ ಜೊತೆ ಮಹಿಳೆ ಪರಾರಿಯಾಗಿದ್ದಾಳೆ. …

Read More »

ರಾಜ್ಯದಲ್ಲಿ 1578ಕ್ಕೇರಿಕೆಯಾದ ಕೊರೊನಾ ಸೋಂಕಿತರ ಸಂಖ್ಯೆ

ಬೆಂಗಳೂರು: ಕೊರೊನಾ ವೈರಸ್ ಇಂದು ಬೆಳಗ್ಗೆ ಶತಕ ಬಾರಿಸಿದ್ದು, ಒಂದೇ ದಿನ 116 ಮಂದಿಗೆ ಸೋಂಕು ತಗುಲಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1578ಕ್ಕೆ ಏರಿಕೆಯಾಗಿದೆ. ಇಂದು ಕೊರೊನಾದಿಂದ ಗುಣಮುಖರಾಗಿ 14 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 1578 ಸೋಂಕಿರ ಪೈಕಿ 612 ಜನ ಗುಣಮುಖರಾಗಿದ್ದು, 966 ಮಂದಿ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಸೋಂಕಿತರ ವಿವರ: 1. ರೋಗಿ- 1463: ಬೆಂಗಳೂರಿನ 40 ವರ್ಷದ ಮಹಿಳೆ- ರೋಗಿ 1208ರ ಸಂಪರ್ಕ 2. …

Read More »

ಬೆಳಗಾವಿ ಜಿಲ್ಲೆಗೆ ಕೊರೋನಾ ವೈರಸ್ ಮತ್ತೆಶಾಕ್ ಕ್ಮಿಡ್ ಡೇ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ. 9 ಜನರಲ್ಲಿ ಸೊಂಕು ಪತ್ತೆ

ಬೆಳಗಾವಿ- ಬೆಳಗಾವಿ ಜಿಲ್ಲೆಗೆ ಕೊರೋನಾ ವೈರಸ್ ಮತ್ತೆ ಶಾಕ್ ನೀಡಿದೆ.ಇಂದು ಗುರುವಾರ ಬಿಡುಗಡೆಯಾದ ಮಿಡ್ ಡೇ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ. 9 ಜನರಲ್ಲಿ ಸೊಂಕು ಪತ್ತೆಯಾಗಿದೆ ಇಂದು ಪತ್ತೆಯಾಗಿರುವ ಕೊರೋನಾ ಸಂಕಿತರಿಂದಾಗಿ ಬೆಳಗಾವಿ ಜಿಲ್ಲೆಯಲ್ಲಿ ರಾಜ್ಯ ಹೆಲ್ತ್ ಬುಲಿಟೀನ್ ಪ್ರಕಾರ ಸೊಂಕಿತರ ಸಂಖ್ಯೆ 125 ಕ್ಕೇ ಏರಿದಂತಾಗಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಂಪಗಾಂವ ಗ್ರಾಮದ 8 ಜನ ಅಜ್ಮೇರ್ ದರ್ಗಾ ದರ್ಶನ ಮಾಡಿ ಸಂಪಗಾಂವ ಮರಳಿದ್ದರು ಇವರನ್ನು …

Read More »

ಉಡುಪಿಯಲ್ಲಿ ಕೊರೊನಾ ಆತಂಕ- 950 ವರದಿಗಳ ನಿರೀಕ್ಷೆಯಲ್ಲಿ ಜಿಲ್ಲಾಡಳಿತ

ಉಡುಪಿ: ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಇಂದು ಫುಲ್ ಆತಂಕದಲ್ಲಿದೆ. ಜಿಲ್ಲೆಯಲ್ಲಿ ಏಕಾಏಕಿ ಕೊರೊನಾ ಪಾಸಿಟಿವ್ ಸಂಖ್ಯೆ ಹೆಚ್ಚುವ ಆತಂಕವಿದೆ. ಮುಂಬೈ ಜೊತೆ ಇಂದು ದುಬೈ ಪ್ರಯಾಣಿಕರ ವರದಿಯನ್ನು ಜಿಲ್ಲಾಡಳಿತ ನಿರೀಕ್ಷೆ ಮಾಡುತ್ತಿದೆ. ಡಿಎಚ್‍ಒ ಕೊಡುವ ಮಾಹಿತಿ ಪ್ರಕಾರ ಇಂದು 950ಕ್ಕೂ ಹೆಚ್ಚು ಮಂದಿಯ ವೈದ್ಯಕೀಯ ವರದಿ ಕೈಸೇರಲಿದೆ. ಉಡುಪಿ ಜಿಲ್ಲೆಯಲ್ಲಿ ಈಗಾಗಲೇ 22 ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಓರ್ವ ಸೋಂಕಿತ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮಂಗಳವಾರ ದುಬೈನಿಂದ ಬಂದಿದ್ದ 49 …

Read More »

ಮುಂಬೈ ವಲಸಿಗರಿಗೆ ಸ್ವಂತ ಗೆಸ್ಟ್‌ಹೌಸ್‌ನಲ್ಲಿ ಆಶ್ರಯ ಕಲ್ಪಿಸಿದ ಸತೀಶ್ ಜಾರಕಿಹೊಳಿ

ಬೆಳಗಾವಿ/ಚಿಕ್ಕೋಡಿ: ಮುಂಬೈನಿಂದ ಬಂದ 200ಕ್ಕೂ ಹೆಚ್ಚು ವಲಸೆ ಕಾರ್ಮಿಕರಿಗೆ ಯಮಕನಮರಡಿ ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಮ್ಮ ಗೆಸ್ಟ್ ಹೌಸ್‍ನಲ್ಲೇ ಆಶ್ರಯ ಕಲ್ಪಿಸಿ ಮಾನವೀಯತೆ ಮೆರೆದಿದ್ದಾರೆ. ಮಹಾಮಾರಿ ಕೊರೊನಾದಿಂದ ವಲಸೆ ಕಾರ್ಮಿಕರ ಬದುಕು ಬೀದಿಗೆ ಬಂದಂತಾಗಿದೆ. ಕೊರೊನಾ ಭೀತಿಯಿಂದ ದುಡಿಮೆ ಇಲ್ಲದೇ ತಮ್ಮ ಗ್ರಾಮಗಳಿಗೆ ವಾಪಸ್ ಆಗುತ್ತಿರುವ ಕಾರ್ಮಿಕರ ಸ್ಥಿತಿ ಚಿಂತಾಜನಕವಾಗಿದೆ. ತಮ್ಮ ಗ್ರಾಮಗಳಿಗೆ ಬರುವ ಕಾರ್ಮಿಕರನ್ನು ಯಾವುದೋ ಸರ್ಕಾರಿ ಕಟ್ಟಡದಲ್ಲಿ ಇಟ್ಟು ಕ್ವಾರಂಟೈನ್ ಮಾಡುವ ಬದಲು ಸತೀಶ್ …

Read More »

ಬಾಲಿವುಡ್ ಪರಿ ಅನುಷ್ಕಾ ಶರ್ಮಾಗೆ ಲೀಗಲ್ ನೋಟಿಸ್ ನೀಡಲಾಗಿದೆ…….

ಮುಂಬೈ: ಬಾಲಿವುಡ್ ಪರಿ ಅನುಷ್ಕಾ ಶರ್ಮಾಗೆ ಲೀಗಲ್ ನೋಟಿಸ್ ನೀಡಲಾಗಿದೆ. ಅನುಷ್ಕಾ ಶರ್ಮಾ ನಿರ್ಮಾಣದ ವೆಬ್ ಸೀರಿಸ್ ವಿವಾದದ ಸುಳಿಯಲ್ಲಿ ಸಿಲುಕಿದ್ದು, ಅದರಲ್ಲಿ ಬಳಸಲಾಗಿರುವ ಜಾತಿ ನಿಂದನಾತ್ಮಕ ಪದವುಳ್ಳ ಡೈಲಾಗ್ ತೆಗೆಯುವಂತೆ ಸೂಚಿಸಲಾಗಿದೆ. ಗಿಲ್ಡ್ ಸದಸ್ಯ ಮತ್ತು ಪ್ರಣಾಯ್ ರಾಯ್ ಅಸೋಸಿಯೇಟ್ಸ್ ಚೇಂಬರ ವಕೀಲ ವೀರೆನ್ ಶ್ರೀ ಗುರೂಂಗಾ ನೋಟಿಸ್ ಕಳುಹಿಸಿದ್ದಾರೆ. ವಕೀಲ ಗುರೂಂಗಾ, ವೆಬ್ ಸೀರೀಸ್ ಎರಡನೇ ಸಂಚಿಕೆಯಲ್ಲಿ ನೇಪಾಳಿ ಸಮುದಾಯವನ್ನು ಅವಮಾನಿಸುವ ಡೈಲಾಗ್ ಇದೆ ಎಂದು ಹೇಳಿದ್ದಾರೆ. …

Read More »