ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಹೇಳೋದು ಆಚಾರ, ತಿನ್ನೋದು ಬದನೆಕಾಯಿ ಎನ್ನುವಂತಹ ಪರಿಸ್ಥಿತಿ ಕಾಂಗ್ರೆಸ್ ಮುಖಂಡರದ್ದಾಗಿದೆ ಎಂದು ಟೀಕಿಸಿದರು. ಗ್ರಾಮ ಪಂಚಾಯ್ತಿ ಚುನಾವಣೆಯನ್ನು ಚುನಾವಣಾ ಆಯೋಗದ ನಿರ್ದೇಶನದಂತೆ ನಡೆಸಲಾಗುವುದು. ಮೇ ಅಂತ್ಯಕ್ಕೆ ರಾಜ್ಯದ ಗ್ರಾಮ ಪಂಚಾಯ್ತಿ ಸದಸ್ಯರ ಅಧಿಕಾರ ಅವಧಿ ಮುಗಿದರೇ, ಕೆಲವು …
Read More »Monthly Archives: ಮೇ 2020
ಮುಂದಿನ ಒಂದು ವರ್ಷದವರೆಗೂ ಕೊರೊನಾ ಇರುತ್ತೆ :ಜಗದೀಶ ಶೆಟ್ಟರ್
ಧಾರವಾಡ: ಮುಂದಿನ ಒಂದು ವರ್ಷದವರೆಗೂ ಕೊರೊನಾ ಇರುತ್ತೆ ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಭವಿಷ್ಯ ನುಡಿದಿದ್ದಾರೆ. ಧಾರವಾಡದಲ್ಲಿ ಅಧಿಕಾರಿಗಳ ಸಭೆಯ ನಂತರ ಮಾತನಾಡಿದ ಅವರು, ಕೊರೊನಾ ಎಲ್ಲರಿಗೂ ಒಂದು ಹೊಸ ಅನುಭವ, ಒಂದು ತಿಂಗಳು, ಎರಡು ತಿಂಗಳಿಗೆ ಮುಗಿದು ಹೋಯ್ತು ಎನ್ನುವಂತಹದ್ದಲ್ಲ. ಇದು ನಿರಂತರವಾಗಿ ವರ್ಷಗಟ್ಟಲೇ ಇರುವಂತಹದ್ದು ಎಂದು ಹೇಳಿದರು. ಕೆಲವು ಜನರಿಗೆ ಪಾಸಿಟಿವ್ ಬರುತ್ತಿರುತ್ತದೆ, ಅದೇ ರೀತಿ ಇನ್ನು ಕೆಲವರು ಡಿಸ್ಚಾರ್ಜ್ ಆಗತ್ತಿರುತ್ತಾರೆ. ಹೀಗೆ ನಿರಂತರವಾಗಿ ಪ್ರಕ್ರಿಯೆ …
Read More »ಕ್ವಾರಂಟೈನ್ ಕೇಂದ್ರದಲ್ಲಿ ತಂಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳು ಗಂಡು ಮಗುವಿಗೆ ಜನ್ಮ
ಕಲಬುರಗಿ: ಶಹಾಬಾದ್ ಪಟ್ಟಣದಲ್ಲಿನ ಕ್ವಾರಂಟೈನ್ ಕೇಂದ್ರದಲ್ಲಿ ತಂಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ನಡೆದಿದೆ. ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಸೋಮನಹಳ್ಳಿ ಗ್ರಾಮದಿಂದ ಕೆಲ ದಿನಗಳ ಹಿಂದಷ್ಟೇ ಬಾಲಕಿ ಕಲಬುರಗಿಗೆ ಬಂದಿದ್ದು, ಬಳಿಕ ಆಕೆಯನ್ನು ಸಾಂಸ್ಥಿಕ ಕ್ವಾರಂಟೈನ್ ಕೇಂದ್ರದಲ್ಲಿರಿಸಲಾಗಿತ್ತು. ತನ್ನ ಪೋಷಕರೊಂದಿಗೆ ಇತ್ತೀಚೆಗಷ್ಟೇ ಬಂದಿದ್ದ ಬಾಲಕಿಗೆ ಇಂದು ಬೆಳಗ್ಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಕ್ವಾರಂಟೈನ್ ಕೇಂದ್ರದಲ್ಲಿದ್ದ ಇತರೆ ಮಹಿಳೆಯರೇ ಆಕೆಗೆ ಹೆರಿಗೆ ಮಾಡಿಸಲು ಸಹಕರಿಸಿದ್ದಾರೆ. ಸೋಮನಹಳ್ಳಿಯಲ್ಲಿ ಬಾಲಕಿಯ …
Read More »2 ವರ್ಷದ ಹೆಣ್ಣು ಮಗು ಸೇರಿ ಜಿಲ್ಲೆಯಲ್ಲಿ ಇಂದು ನಾಲ್ವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢ
ಬೆಳಗಾವಿ: 2 ವರ್ಷದ ಹೆಣ್ಣು ಮಗು ಸೇರಿ ಜಿಲ್ಲೆಯಲ್ಲಿ ಇಂದು ನಾಲ್ವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಆ ಮೂಲಕ ಸೋಂಕಿತರ ಸಂಖ್ಯೆ 145 ಕ್ಕೆ ಏರಿಕೆಯಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಧ್ಯಾಹ್ನದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, 2 ವರ್ಷದ ಮಗು ಕೇರಳ ರಾಜ್ಯದಿಂದ ವಾಪಸ್ ಆಗಿರುವ ಟ್ರಾವೆಲ್ ಹಿಸ್ಟರಿ ಇದೆ. ಇನ್ನು ಉಳಿದ ಮೂವರು ಮಹಾರಾಷ್ಟ್ರ ರಾಜ್ಯದಲ್ಲಿ ಹಿಂದಿರುಗಿದ್ದಾರೆ. ಈವರೆಗೂ 88 ಜನ ಸೋಂಕಿತರು …
Read More »ಮಹದಾಯಿ ನದಿ ನೀರು ವಿಚಾರವಾಗಿ ಡಿಪಿಆರ್ ಸಿದ್ದಪಡಿಸಲಾಗಿದೆ. 800 ಕೋಟಿ ರೂಪಾಯಿ ಯೋಜನೆ ರೂಪರೇಷ ಸಿದ್ದವಾಗಿದೆ.
ಬೆಳಗಾವಿ: ಕೊರೊನಾ ಸೋಂಕು ಭೀತಿ ಹಿನ್ನೆಲೆಯಲ್ಲಿ ಕೃಷ್ಣಾ ನದಿ ನೀರು ಹಂಚಿಕೆ ವಿಚಾರವಾಗಿ ಮಹಾರಾಷ್ಟ್ರ ಸರ್ಕಾರದ ಜತೆ ಮಾತುಕತೆ ವಿಳಂಬವಾಗಿದೆ. ಶೀಘ್ರ ಈ ವಿಚಾರವಾಗಿ ಚರ್ಚಿಸಿ ನೀರು ಹಂಚಿಕೆ ಒಪ್ಪಂದ ಮಾಡಿಕೊಳ್ಳಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೃಷ್ಣಾ ನದಿ ತೀರದಲ್ಲಿ ಸದ್ಯ ನೀರನ ಸಮಸ್ಯೆ ಇಲ್ಲ. ಮುಂದಿನ ಬೇಸಿಗೆ ಅವಧಿ ವೇಳೆಗೆ ಎಲ್ಲ ಸಮಸ್ಯೆಗಳಿಗೆ ಇತಿಶ್ರೀ ಹಾಡಲಾಗುವುದು ಎಂದರು. …
Read More »ಒಂಟಿ ದಾರಿಹೋಕರ ಮೇಲೆ ಹಲ್ಲೆ ನಡೆಸಿ ದರೋಡೆಗೆ ಪ್ಲಾನ್ ಮಾಡಿದ್ದ ನಾಲ್ವರು ಅಂದರ್
ಬೆಂಗಳೂರು, ಮೇ 27- ಕತ್ತಲಲ್ಲಿ ಹೊಂಚು ಹಾಕಿ ಒಂಟಿ ದಾರಿಹೋಕರ ಮೇಲೆ ಹಲ್ಲೆ ನಡೆಸಿ ನಗ-ನಾಣ್ಯ ದೋಚಲು ಸಜ್ಜಾಗಿದ್ದ ನಾಲ್ವರು ದರೋಡೆಕೋರರು ಸಿಸಿಬಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. ರಾಜಗೋಪಾಲನಗರದ ಅಮರನಾಥ್ (31), ಶಿವರಾಜ್ (32), ಕೆಪಿ ಅಗ್ರಹಾರದ ಶಾಂತರಾಜು (27) ಹಾಗೂ ಶ್ರೀನಿವಾಸ ಬಂಧಿತ ಆರೋಪಿಗಳು. ನಿನ್ನೆ ರಾತ್ರಿ ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಬಿಇಎಲ್ 2ನೆ ಹಂತದ ಭರತ್ನಗರ ಪಾರ್ಕ್ ಸಮೀಪ ಕತ್ತಲಲ್ಲಿ ನಿಂತು ದಾರಿಯಲ್ಲಿ ಒಂಟಿಯಾಗಿ ಹೋಗುವ …
Read More »ಇಂದು ಬುಧವಾರ ಬಿಡುಗಡೆಯಾದ ಮಿಡ್ ಡೇ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ 4 ಪಾಸಿಟೀವ್ ಕೇಸ್
ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಮಹಾಮಾರಿ ಕೊರೋನಾ ರುದ್ರ ನರ್ತನ ಮುಂದುವರೆದಿದೆ.ಇಂದು ಬುಧವಾರ ಬಿಡುಗಡೆಯಾದ ಮಿಡ್ ಡೇ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ 4 ಪಾಸಿಟೀವ್ ಕೇಸ್ ಗಳು ಪತ್ತೆಯಾಗಿವೆ. ಬೆಳಗಾವಿ ಜಿಲ್ಲೆಯಲ್ಲಿ ಜಿಲ್ಲಾ ಹೆಲ್ತ್ ಬುಲಿಟೀನ್ ಪ್ರಕಾರ ಕೊರೋನಾ ಸೊಂಕಿತರ ಸಂಖ್ಯೆ 147 ಕ್ಕೇರಿದೆ. ಬೆಳಗಾವಿ ಜಿಲ್ಲೆಯಲ್ಲಿ ಮಹಾರಾಷ್ಟ್ರದ ನಂಜು ಏರುತ್ತಲೇ ಇದ್ದು ಇಂದು ಪತ್ತೆಯಾದ ನಾಲ್ವರೂ ಮಹಾರಾಷ್ಟ್ರ ರಿಟರ್ನ್ ,ಮಹಾರಾಷ್ಟ್ರದ ವಿವಿಧ ನಗರಗಳಿಂದ ಬೆಳಗಾವಿಗೆ ಆಗಮಿಸಿದ್ದ ಈ …
Read More »ರಂಜಾನ್ ಮುಗಿದ ಬೆನ್ನಲ್ಲೇ ನಾಲ್ವರ ಬರ್ಬರ ಕೊಲೆ, ಗುಂಡ್ಲುಪೇಟೆ ಪ್ರಕ್ಷುಬ್ಧ..!
ಕೊಳ್ಳೇಗಾಲ, ಮೇ 27- ಪವಿತ್ರ ರಂಜಾನ್ ಹಬ್ಬ ಮುಗಿದ ಬೆನ್ನಲ್ಲೇ ಮುಸಲ್ಮಾನ ಸಮುದಾಯದ ಎರಡು ಗುಂಪುಗಳ ನಡುವೆ ನಡೆದ ಮಾರಾಮಾರಿಯಲ್ಲಿ ನಾಲ್ಕು ಮಂದಿ ಭೀಕರವಾಗಿ ಹತ್ಯೆಗೀಡಾಗಿರುವ ಘಟನೆ ಗುಂಡ್ಲುಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪಟ್ಟಣ ಪುರಸಭೆ ಸದಸ್ಯ ನೂರುಲ್ಲಾ ಗುಂಪಿನಲ್ಲಿ ಗುರುತಿಸಿಕೊಂಡಿದ್ದ ಜಾಕಿರ್ಹುಸೇನ್ ಗ್ರಾಮದ ನಿವಾಸಿಗಳಾದ ಜಕಾವುಲ್ಲಾ, ಇದ್ರೀಶ್, ಕೈಸರ್ ಹಾಗೂ ನಸ್ರುಲ್ಲಾ ಕೊಲೆಯಾದ ನತದೃಷ್ಟರು. ನಿನ್ನೆ ರಾತ್ರಿ 10 ಗಂಟೆ ಸಮಯದಲ್ಲಿ ಅಸ್ಲಾಂ, ಜಮೀರ್ ಮತ್ತಿತರರ ಗುಂಪು …
Read More »BIG NEWS : ಘೋಷಣೆಗಷ್ಟೇ ಸೀಮಿತವಾದ ಬಿಎಸ್ವೈ ಕೊರೋನಾ ಸ್ಪೆಷಲ್ ಪ್ಯಾಕೇಜ್..!
ಬೆಂಗಳೂರು, ಮೇ 27- ರಾಜ್ಯದಲ್ಲಿ ಲಾಕ್ಡೌನ್ ಅನುಷ್ಠಾನಗೊಳಿಸಿದ ಪರಿಣಾಮ ಸಂಕಷ್ಟದಲ್ಲಿದ್ದ ಶ್ರಮಿಕರು, ಮಧ್ಯಮ ವರ್ಗದವರು ಹಾಗೂ ರೈತರಿಗೆ ಸರ್ಕಾರ ಘೋಷಣೆ ಮಾಡಿದ್ದ ವಿಶೇಷ ಪ್ಯಾಕೇಜ್ ಇನ್ನೂ ಗಗನ ಕುಸುಮವಾಗಿಯೇ ಉಳಿದಿದೆ. ಏಕೆಂದರೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಘೋಷಣೆ ಮಾಡಿದ್ದ 1,777 ಕೋಟಿ ವಿಶೇಷ ಪ್ಯಾಕೇಜ್ನಲ್ಲಿ ಇಂದಿನವರೆಗೂ ಫಲಾನುಭವಿಗಳಿಗೆ ಬಿಡುಗಡೆ ಮಾಡಿರುವ ಮೊತ್ತ ಕೇವಲ 5.93 ಕೋಟಿ ಮಾತ್ರ. ನಂಬುವುದಕ್ಕೆ ಅಚ್ಚರಿಯಾದರೂ ಇದು ಸತ್ಯ. ಇನ್ನು ಆಶ್ಚರ್ಯಕರ ಸಂಗತಿ ಎಂದರೆ, ಪ್ಯಾಕೇಜ್ ಘೋಷಣೆಯಾಗಿ ಸರಿಸುಮಾರು …
Read More »ಜೂನ್ 25ರಿಂದ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಲು ಉದ್ದೇಶಿಸಿರುವ ಎಸ್ಎಸ್ಎಲ್ ಸಿ ಪರೀಕ್ಷೆಗೆ ಈಗ ಕಾರ್ಮೋಡ
ಬೆಳಗಾವಿ – ಜೂನ್ 25ರಿಂದ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಲು ಉದ್ದೇಶಿಸಿರುವ ಎಸ್ಎಸ್ಎಲ್ ಸಿ ಪರೀಕ್ಷೆಗೆ ಈಗ ಕಾರ್ಮೋಡ ಕವಿದಿದೆ. ಕೊರೆನಾ ಮತ್ತು ಈ ಹಿನ್ನೆಲೆಯಲ್ಲಿ ವಿಧಿಸಲಾಗಿರುವ ಲಾಕ್ ಡೌನ್ ನಿಂದಾಗಿ ಎಸ್ಎಸ್ಎಲ್ ಸಿ ಪರೀಕ್ಷೆ ಸೇರಿದಂತೆ ಇಡೀ ಶೈಕ್ಷಣಿಕ ವ್ಯವಸ್ಥೆ ಅಸ್ತವ್ಯಸ್ತವಾಗಿದೆ. ಬಹುತೇಕ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ. ಇನ್ನು ಹಲವು ಪರೀಕ್ಷೆಗಳು ಸ್ಪಷ್ಟತೆ ಇಲ್ಲದೆ ಗೊಂದಲದಲ್ಲೇ ಮುಂದುವರಿದಿವೆ. ಹಲವು ದಿನಗಳ ನಂತರ ಅಂತೂ ರಾಜ್ಯ ಸರಕಾರ ಎಸ್ಎಸ್ಎಲ್ ಸಿ …
Read More »
Laxmi News 24×7