Breaking News

Daily Archives: ಜೂನ್ 3, 2020

ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಸುರೇಶಗೌಡ ಚಾಲನೆ.

ಮಂಡ್ಯ ಜಿಲ್ಲೆನಾಗಮಂಗಲ: ತಾಲೂಕಿನ ವಿವಿಧ ಗ್ರಾಮಗಳಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಸುರೇಶ್ ಗೌಡ ಭೂಮಿ ಪೂಜೆ ಮಾಡುವ ಮೂಲಕ ಚಾಲನೆ ನೀಡಿದರು. ಮಂಡ್ಯ ನಾಗಮಂಗಲದ ಬೆಳ್ಳೂರು ಪಟ್ಟಣದ ಉಮರ್ ನಗರದಲ್ಲಿ 75 ಲಕ್ಷ ರೂ ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಸಿಸಿ ಚರಂಡಿ ನಿರ್ಮಾಣ ಕಾಮಗಾರಿ. ಹಾಗೂ ನಾಗಮಂಗಲ ಪುರಸಭೆ ವ್ಯಾಪ್ತಿಯ ಮಾಯಣ್ಣ ಗೌಡನ ಕೊಪ್ಪಲು 25 ಲಕ್ಷ ರೂ …

Read More »

ಕೆ ಆರ್ ಪೇಟೆ ಯೂತ್ ಕಾಂಗ್ರೆಸ್ ಉಪಾಧ್ಯಕ್ಷರಿಗೆ ಪ್ರೀತಿಯ ವಿಶ್ವಾಸದ ಸನ್ಮಾನ

ನೂತನವಾಗಿ ಮಂಡ್ಯ ಕೆ ಆರ್ ಪೇಟೆ ತಾಲ್ಲೂಕು ಯೂತ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಆಯ್ಕೆಯಾದ ಗಂಜಿಗೆರೆ ಮಹೇಶ ರವರಿಗೆ ಜನಪ್ರಿಯ ಮಾಜಿ ಶಾಸಕರು ಮತ್ತು ಮಂಡ್ಯ ಕೆಪಿಸಿಸಿ ಅಧ್ಯಕ್ಷರಾದ ಸಿ ಡಿ ಗಂಗಾಧರ್ ಅವರ ನೇತೃತ್ವದಲ್ಲಿ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುರೇಶ್ ಕಿಕ್ಕೇರಿ ರವರ ಸಮ್ಮುಖದಲ್ಲಿ ಮಹೇಶ್ ರವರಿಗೆ ಪ್ರೀತಿ-ವಿಶ್ವಾಸದ ಸನ್ಮಾನ ನೆರವೇರಿಸಿ ಪಕ್ಷ ಸಂಘಟನೆಯ ಮತ್ತಷ್ಟು ಬಲಗೊಳಿಸಿ ಪಾದರಸದಂತೆ ಸಂಘಟನೆ ಮಾಡಿ ಎಂದು ಶುಭಹಾರೈಸಿ ತುಂಬು ಹೃದಯದಿಂದ ಅಭಿನಂದಿಸಿದರು. …

Read More »

ರಾಜ್ಯ ಸರ್ಕಾರದ ಪ್ರಕಾರ ೦ಸೋಂಕು ಬೆಳಗಾವಿ ಜಿಲ್ಲೆಯ ಹೆಲ್ತ್ ಬುಲೆಟಿನ್ ಪ್ರಕಾರ 12 …!???

ಬೆಂಗಳೂರು – ರಾಜ್ಯ ಆರೋಗ್ಯ ಇಲಾಖೆ ಇಂದು ಬಿಡುಗಡೆ ಮಾಡಿರುವ ಬುಲಿಟಿನ್ ನಲ್ಲಿ ರಾಜ್ಯದಲ್ಲಿ 267 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ತಿಳಿಸಿದೆ. ಇದರಿಂದಾಗಿ ಕರ್ನಾಟಕದಲ್ಲಿ ಒಟ್ಟೂ 4063 ಜನರಿಗೆ ಸೋಂಕು ತಗುಲಿದಂತಾಗಿದೆ. ಇದರಲ್ಲಿ ಕಲಬುರಗಿಯಲ್ಲಿ 105, ಉಡುಪಿಯಲ್ಲಿ 62, ರಾಯಚೂರಿನಲ್ಲಿ 35, ಬೆಂಗಳೂರು ನಗರದಲ್ಲಿ 20 ಜನರಿಗೆ ಸೋಂಕು ತಗುಲಿರುವುದಾಗಿ ತಿಳಿಸಲಾಗಿದೆ. ಬೆಳಗಾವಿಯ ಬಗ್ಗೆ ಯಾವುದೇ ಉಲ್ಲೇಖವಿಲ್ಲ. ಆದರೆ ಬೆಳಗಾವಿ ಜಿಲ್ಲಾ ಆರೋಗ್ಯ ಇಲಾಖೆ ನೀಡಿರುವ ಮಾಹಿತಿಯಲ್ಲಿ …

Read More »

ಬೆಳಗಾವಿ ಜಿಲ್ಲಾ ಹೆಲ್ತ್ ಬುಲಿಟೀನ್ ಬಿಡುಗಡೆಯಾಗಿದ್ದು ಈ ಬುಲಿಟೀನ್ ನಲ್ಲಿ 12 ಸೊಂಕಿತರ ಸಂಖ್ಯೆ ಹೆಚ್ಚಾಗಿದೆ.

ಬೆಳಗಾವಿ-ಇಂದು ಬುಧವಾರದ ರಾಜ್ಯ ಹೆಲ್ತ್ ಬುಲೀಟಿನ್ ಬಿಡುಗಡೆ ಆಗಿದೆ ಈ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ ಸೊಂಕಿತರ ಸಂಖ್ಯೆ ಶೂನ್ಯ ಆದ್ರೆ ಜೊತೆಗೆ ಬೆಳಗಾವಿ ಜಿಲ್ಲಾ ಹೆಲ್ತ್ ಬುಲಿಟೀನ್ ಬಿಡುಗಡೆಯಾಗಿದ್ದು ಈ ಬುಲಿಟೀನ್ ನಲ್ಲಿ 12 ಸೊಂಕಿತರ ಸಂಖ್ಯೆ ಹೆಚ್ಚಾಗಿದೆ. ಬೆಳಗಾವಿ ಜಿಲ್ಲಾ ಹೆಲ್ತ್‌ ಬುಲಿಟೀನ್ ನಲ್ಲಿ ನಿನ್ನೆ ಸೊಂಕಿತರ ಸಂಖ್ಯೆ 204 ಇತ್ತು ಇಂದು ಬಿಡುಗಡೆಯಾದ ಬುಲೆಟಿನ್ ನಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 216 ಇದೆ ಅಂದ್ರೆ …

Read More »

ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಹುಕಾಲದ ದೊಡ್ಡ ಕನಸೊಂದು ಈಗ ನನಸಾಗುವ ಹಂತಕ್ಕೆ…….

ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಹುಕಾಲದ ದೊಡ್ಡ ಕನಸೊಂದು ಈಗ ನನಸಾಗುವ ಹಂತಕ್ಕೆ ಬಂದು ನಿಂತಿದೆ. ರಾಜಹಂಸಗಡದಲ್ಲಿ, ಹಿಂದೂ ಹೃದಯ ಸಾಮ್ರಾಟ ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿ  ನಿರ್ಮಾಣವಾಗುತ್ತಿದ್ದು, ಸ್ಥಳಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ​  ಐತಿಹಾಸಿಕ ಹಿನ್ನೆಲೆಯ ಸ್ಥಳವಾಗಿರುವ ರಾಜಹಂಸಗಡದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಬೃಹತ್ ಮೂರ್ತಿಯನ್ನು  ನಿರ್ಮಾಣ ಮಾಡಬೇಕೆನ್ನುವ ಬೇಡಿಕೆ ಇಂದು ನಿನ್ನೆಯದಲ್ಲಿ. ಇದಕ್ಕಾಗಿ  ಹಲವಾರು ವರ್ಷಗಳಿಂದ ಗಣ್ಯ ನಾಯಕರುಗಳು, …

Read More »

ಜಮೀರ್‌ 420, ಗುಜರಿ ವ್ಯಾಪಾರ ಮಾಡಿ ರಾಜಕಾರಣದಲ್ಲಿ ನಾಟಕ‌ ಮಾಡ್ತಿದ್ದಾನೆ; ರೇಣುಕಾಚಾರ್ಯ

ಬೆಂಗಳೂರು (ಜೂನ್‌ 03); ಚಾಮರಾಜಪೇಟೆ ಶಾಸಕ ಜಮೀರ್‌ ಅಹಮದ್‌ ಓರ್ವ 420, ಗುಜರಿ ವ್ಯಾಪಾರ ಮಾಡಿ ಇದೀಗ ರಾಜಕಾರಣದಲ್ಲಿ ನಾಟಕ ಮಾಡುತ್ತಿದ್ದಾನೆ ಎಂದು ಮಾಜಿ ಸಚಿವ ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಏಕ ವಚನದಲ್ಲಿ ದಾಳಿ ನಡೆಸಿದ್ದಾರೆ. ಶಾಸಕ ಜಮೀರ್‌ ಅಹಮದ್‌ ಪಾದರಾಯನಪುರ ಗಲಾಟೆಯಲ್ಲಿ ಬಂಧಿಸಲ್ಪಟ್ಟ ಆರೋಪಿಗಳ ಜಾಮೀನಿಗೆ ಸಹಕರಿಸಿದ್ದಾರೆ. ಅಲ್ಲದೆ, ಬಿಡುಗಡೆಗೊಂಡವರನ್ನು ಇಂದು ಪಾದರಾಯನಪುರದಲ್ಲಿ ಅದ್ದೂರಿಯಾಗಿ ಸ್ವಾಗತ ಮಾಡಲಾಗಿದೆ. ಈ ಕುರಿತು ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿರುವ ರೇಣುಕಾಚಾರ್ಯ, ” ಪಾದರಾಯನಪುರ ಗೂಂಡಾಗಳಿಗೆ …

Read More »

ವಿವಾಹದಲ್ಲಿ ವೈದ್ಯ ಭಾಗಿ – ಸುಳ್ಯದಲ್ಲಿ 62 ಮಂದಿಗೆ ಕ್ವಾರಂಟೈನ್

ಮಂಗಳೂರು: ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರಂತೋಡು ಗ್ರಾಮದ 62 ಮಂದಿಯನ್ನು ಕ್ವಾರೆಂಟೈನ್ ಮಾಡಲಾಗಿದೆ. ಮಲೇಷಿಯಾದಿಂದ ಮೇ.22ರಂದು ಬೆಂಗಳೂರಿಗೆ ಬಂದಿದ್ದ ವೈದ್ಯರು ಸರ್ಕಾರಿ ಕ್ವಾರೆಂಟೈನ್ ಮುಗಿಸಿ ಮಂಗಳೂರಿಗೆ ಬಂದಿದ್ದರು. ಭಾನುವಾರ ಅರಂತೋಡು ಗ್ರಾಮದ ಸಂಬಂಧಿಕರ ಮನೆಗೆ ಆಗಮಿಸಿ, ಬಳಿಕ ಯಜಮಾನನ ಕಾರಿನಲ್ಲಿ ತೆರಳಿ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮಂಗಳೂರಿಗೆ ಬಂದ ಬಳಿಕ ಅವರಿಗೆ ಪಾಸಿಟಿವ್ ಇರುವುದು ದೃಢಪಟ್ಟಿತ್ತು. ಹೀಗಾಗಿ ಈ ವೈದ್ಯರ ಪ್ರಾಥಮಿಕ ಸಂಪರ್ಕಕ್ಕೆ ಬಂದ …

Read More »

ಪ್ರಜ್ವಲ್ ರೇವಣ್ಣ ವಿರುದ್ಧ ಸುಳ್ಳು ಮಾಹಿತಿ ಆರೋಪ- ವಿಚಾರಣೆಗೆ ಸುಪ್ರೀಂ ಸಮ್ಮತಿ

ನವದೆಹಲಿ: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿರುವುದಾಗಿ ಆರೋಪಿಸಿ ಮಾಜಿ ಸಚಿವ ಎ.ಮಂಜು ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ಸಮ್ಮತಿಸಿದೆ. ಎ.ಮಂಜು ಸಲ್ಲಿಸಿದ್ದ ಅರ್ಜಿಯನ್ನು ಇಂದು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡುವಂತೆ ಸೂಚಿಸಿ ಪ್ರಜ್ವಲ್ ರೇವಣ್ಣಗೆ ನೋಟಿಸ್ ಜಾರಿ ಮಾಡಿದೆ. ಪ್ರಜ್ವಲ್ ರೇವಣ್ಣ ಅಕ್ರಮವಾಗಿ ಆಸ್ತಿ ಗಳಿಕೆ ಮಾಡಿ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಘೋಷಣೆ ಮಾಡಿದ್ದಾರೆ. …

Read More »

ಅಟಲ್ ಭೂ-ಜಲ ಯೋಜನೆಗೆ 1203 ಕೋಟಿ ರೂ. : ಸಚಿವ ಮಾಧುಸ್ವಾಮಿ

ಬೆಂಗಳೂರು, ಜೂ.3- ಅಟಲ್ ಭೂ ಜಲ ಯೋಜನೆಯಡಿ ಅಂತರ್ಜಲ ಅಭಿವೃದ್ಧಿ ಯೋಜನೆಗೆ 1203 ಕೋಟಿ ರೂ. ಒದಗಿಸಲಾಗಿದೆ ಎಂದು ಕಾನೂನು ಸಚಿವ ಮಾಧುಸ್ವಾಮಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ 14 ಜಿಲ್ಲೆಗಳಲ್ಲಿನ 41 ತಾಲ್ಲೂಕಿಗೆ ಈ ಹಣ ಒದಗಿಸಿದ್ದು, ನಾಲ್ಕು ವರ್ಷದಲ್ಲಿ ವೆಚ್ಚ ಮಾಡಬೇಕು. ಕೇಂದ್ರ ಸರ್ಕಾರದ ಈ ಅನುದಾನದ ಜತೆಗೆ ರಾಜ್ಯ ಸರ್ಕಾರದ ನೆರವು ಮತ್ತು ನರೇಗಾ ಯೋಜನೆಯನ್ನು ಬಳಸಿಕೊಳ್ಳಬಹುದು ಎಂದರು. ಅಂತರ್ಜಲ ಚೇತನ, ಅಟಲ್ ಭೂ …

Read More »

ಇನ್ಮುಂದೆ ಸೀಲ್‍ಡೌನ್ ಇರಲ್ಲ, ಸೋಂಕಿತನ ಮನೆ ಮಾತ್ರ ಕ್ಲೋಸ್ ಡೌನ್: ಸುಧಾಕರ್

ಉಡುಪಿ: ಸೀಲ್‍ಡೌನ್, ಕಂಟೈನ್ಮೆಂಟ್ ಝೋನ್ ಅನ್ನು ರದ್ದು ಮಾಡಿ, ಇನ್ನು ಮುಂದೆ ಕೊರೊನಾ ಸೋಂಕಿತನ ಮನೆ ಮಾತ್ರ ಸೀಲ್ ಡೌನ್ ಮಾಡುವ ಪ್ಲಾನ್ ಇದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಹೇಳಿದ್ದಾರೆ. ಉಡುಪಿಯಲ್ಲಿ ಜಿಲ್ಲಾಮಟ್ಟದ ಸಭೆಯ ನಂತರ ಮಾತನಾಡಿದ ಅವರು, ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಮಹಾರಾಷ್ಟ್ರದಿಂದ ಬಂದವರಿಗೆ ಸಾಂಸ್ಥಿಕ ಕ್ವಾರಂಟೈನ್ ಅವಧಿ 7 ದಿನಕ್ಕೆ ಮೊಟಕು ಮಾಡಲಾಗಿದೆ. ಸಾವಿರಾರು ಜನರನ್ನು ಕ್ವಾರಂಟೈನ್ ಮಾಡುವುದು ಕಷ್ಟ. ಕಂಟೈನ್ಮೆಂಟ್ ಝೋನ್‍ನ …

Read More »