ಕೋಲಾರ: ಇಡೀ ವಿಶ್ವವನ್ನೇ ಹೆಮ್ಮಾರಿ ಕೊರೊನಾ ವೈರಸ್ ಭಾದಿಸುತ್ತಿದ್ದು, ಎಲ್ಲಿ ಹೋದ್ರೆ ಏನಾಗುತ್ತೊ, ಏನ್ ತಿಂದ್ರೆ ಏನ್ ಬರುತ್ತೊ ಅಂತಾ ಜನ ಭಯಭೀತರಾಗಿದ್ದಾರೆ. ಈ ನಡುವೆ ಕೋಲಾರದ ರೈತ ತಾನು ಬೆಳೆದ ತರಕಾರಿಯನ್ನ ಬೈಕ್ ನಲ್ಲಿ ಇಟ್ಟುಕೊಂಡು ಊರೂರು ಸುತ್ತಿ ಕೊರೊನಾ ಬಗ್ಗೆ ಜಾಗೃತಿ ಮೂಡಿಸುತ್ತಾ ಮಾರಾಟ ಮಾಡುತ್ತಿದ್ದಾರೆ. ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ರಾಜೇನಹಳ್ಳಿಯ ರೈತ ಯಲ್ಲಪ್ಪ ಮೂರ್ನಾಲ್ಕು ಭಾಷೆಗಳಲ್ಲಿ ಜೋರಾಗಿ ಕೂಗುತ್ತಾ ಸೊಪ್ಪು ತರಕಾರಿ ಮಾರುತ್ತಿದ್ದಾರೆ. ಜಾದೂಗಾರನಂತೆ …
Read More »Monthly Archives: ಜೂನ್ 2020
ಉದ್ಯಾನ ನಗರಿಯಲ್ಲಿ ವರುಣನ ಸಿಂಚನ- ಅಲ್ಲಲ್ಲಿ ಟ್ರಾಫಿಕ್ ಜಾಮ್…………
ಬೆಂಗಳೂರು: ಉದ್ಯಾನ ನಗರಿಯ ಹಲವೆಡೆ ವರುಣನ ಸಿಂಚನವಾಗಿದ್ದು, ಸುಮಾರು ಅರ್ಧ ಗಂಟೆಗಳ ಕಾಲ ಮಳೆಯಾಗಿದೆ. ನಗರದ ಯಶವಂತಪುರ, ಪೀಣ್ಯ, ಮಲ್ಲೇಶ್ವರ ಸೇರಿದಂತೆ ಹಲವೆಡೆ ಸುಮಾರು ಅರ್ಧ ಗಂಟೆಗಳ ಕಾಲ ಮಳೆಯಾಗಿದೆ. ಮಳೆಯಿಂದಾಗಿ ಟ್ರಾಫಿಕ್ ಜಾಮ್ ಸಂಭವಿಸಿದ್ದು ವಾಹನ ಸವಾರರು ಪರದಾಡುವಂತಾಯಿತು. ಬೆಳಗಿನಿಂದಲೂ ಶೆಖೆ ವಾತಾವರಣವಿತ್ತು. ಅಲ್ಲದೆ ಮಧ್ಯಾಹ್ನ ಸಹ ಸ್ವಲ್ಪ ಪ್ರಮಾಣದಲ್ಲಿ ಬಿಸಿಲು ಇತ್ತು. ಆದರೆ ಸಂಹೆ ನಾಲ್ಕು ಗಂಟೆ ಸುಮಾರಿಗೆ ವರಣ ಸಿಂಚನವಾಗಿದೆ. ಮಳೆಯಿಂದಾಗಿ ತುಮಕೂರು ರಸ್ತೆ, ಯಶವಂತಪುರ, …
Read More »ಜಿಂದಾಲ್ ಕಾರ್ಖಾನೆ ಲಾಕ್ಡೌನ್ ಮಾಡೋಕೆ ಆಗಲ್ಲ: ಜಿಲ್ಲಾಧಿಕಾರಿ ನಕುಲ್……
ಬಳ್ಳಾರಿ: ಲಾಕ್ಡೌನ್ ಸಡಿಲಿಕೆಯಾದ ಹಿನ್ನೆಲೆ ಜಿಲ್ಲೆಯ ಜಿಂದಾಲ್ ಸಮೂಹ ಸಂಸ್ಥೆಯನ್ನು ಸಂಪೂರ್ಣ ಲಾಕ್ಡೌನ್ ಮಾಡಲು ಆಗಲ್ಲವೆಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ತಿಳಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರಿನ ಜುಬಿಲೆಂಟ್ ಕಾರ್ಖಾನೆ ಸಣ್ಣ ಪ್ರಮಾಣದ ಉತ್ಪಾದನೆ ಹೊಂದಿದೆ. ಅಲ್ಲದೇ ಅದು ಕೇವಲ 1 ಸಾವಿರ ನೌಕರರನ್ನ ಮಾತ್ರ ಹೊಂದಿದೆ. ಹೀಗಾಗಿ, ಕಾರ್ಖಾನೆಯನ್ನು ಲಾಕ್ಡೌನ್ ಮಾಡಿ ಕೊರೊನಾ ಸೋಂಕಿತರ ಸಂಖ್ಯೆಯನ್ನು ಸೊನ್ನೆಗೆ ತರಲಾಯಿತು. ಆದರೆ, ಜಿಂದಾಲ್ ಸಮೂಹ ಸಂಸ್ಥೆಯ ಉಕ್ಕು ಕಾರ್ಖಾನೆ ಸುಮಾರು …
Read More »ಕೊರೊನಾ ರಣಕೇಕೆ ಮಧ್ಯೆಯೂ ಐತಿಹಾಸಿಕ ಪುರಿಯ ಜಗನ್ನಾಥ ರಥಯಾತ್ರೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್
ನವದೆಹಲಿ: ಕೊರೊನಾ ರಣಕೇಕೆ ಮಧ್ಯೆಯೂ ಐತಿಹಾಸಿಕ ಪುರಿಯ ಜಗನ್ನಾಥ ರಥಯಾತ್ರೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ಕೊಟ್ಟಿದೆ. ಜೂನ್ 23ರಂದು ದೇವಾಲಯದ ಆವರಣದ ಒಳಗಡೆ ಮಾತ್ರ ಯಾತ್ರೆ ನಡೆಸಲು ಅವಕಾಶ ನೀಡಿದೆ. ಯಾತ್ರೆಗೆ ಅವಕಾಶ ನೀಡುವಂತೆ ಇಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ಗೆ ಮನವಿ ಮಾಡಿತ್ತು. ಕೋಟ್ಯಂತರ ಜನರ ನಂಬಿಕೆ, ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು ಯಾತ್ರೆ ನಡೆಸಲು ಅನುಮತಿ ಕೊಡುವಂತೆ ಅರ್ಜಿಯಲ್ಲಿ ತಿಳಿಸಿತ್ತು. ಪುರಿ ಜಗನ್ನಾಥ ದೇವಾಲಯದ ಆಡಳಿತದ ಅಧ್ಯಕ್ಷರು ಪುರಿಯ ಗಜಪತಿ …
Read More »ನಯನತಾರಾ, ಗೆಳೆಯ ವಿಘ್ನೇಶ್ಗೆ ಕೊರೊನಾ ವದಂತಿ- ಸ್ಪಷ್ಟನೆ ಕೊಟ್ಟ ನಟಿ…………
ಹೈದರಾಬಾದ್: ನಟಿ ನಯನತಾರಾ ಮತ್ತು ನಿರ್ದೇಶಕ ವಿಘ್ನೇಶ್ ಶಿವನ್ ಲಿವಿಂಗ್ ರಿಲೇಷನ್ಶಿಪ್ನಲ್ಲಿರುವುದು ಗೊತ್ತಿರುವ ವಿಚಾರ. ಆದರೆ ಈ ಜೋಡಿ ಶೀಘ್ರವೇ ಮದುವೆಯಾಗಲಿದ್ದಾರೆ ಎಂಬ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಈ ಮಧ್ಯೆ ಇವರಿಬ್ಬರಿಗೂ ಕೊರೊನಾ ಸೋಂಕು ಇದೆ ಎಂಬ ಸುದ್ದಿ ವೈರಲ್ ಆಗಿದೆ. ಈ ಸುದ್ದಿಗೆ ಇದೀಗ ನಟಿ ನಯನತಾರಾ ಸ್ಪಷ್ಟನೆ ಕೊಟ್ಟಿದ್ದಾರೆ. ಚೆನ್ನೈನಲ್ಲಿ ದಿನೇ ದಿನೇ ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ನಟಿ ನಯನತಾರಾ ಮತ್ತು …
Read More »ಸಚಿವ ಡಾ.ಸುಧಾಕರ್ ತಂದೆ ನಂತರ ಮನೆಗೆಲಸದವನಿಗೂ ಕೊರೊನಾ ಸೋಂಕು ದೃಢ……..
ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಂದೆಯ ಬಳಿಕ ಮನೆಗೆಲಸದವನಿಗೂ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಡಾ.ಸುಧಾಕರ್ ತಂದೆ ಹಾಗೂ ಮನೆಗೆಲಸದವನಿಗೆ ಕೊರೊನಾ ಸೋಂಕು ತಗುಲಿದ ಹಿನ್ನೆಲೆ ಅವರ ಇಡೀ ಕುಟುಂಬವನ್ನು ಹೋಮ್ ಕ್ವಾರಂಟೈನ್ ಮಾಡಲಾಗಿದೆ. ಸಚಿವ ಡಾ.ಸುಧಾಕರ್, ಡಾ.ಸುಧಾಕರ್ ಪತ್ನಿ, ಇಬ್ಬರು ಮಕ್ಕಳು, 10ಕ್ಕೂ ಹೆಚ್ಚು ಮನೆಗೆಲಸದವರನ್ನು ಸದ್ಯ ಹೋಮ್ ಕ್ವಾರಂಟೈನ್ ಮಾಡಲಾಗಿದೆ. ಆರೋಗ್ಯ ಇಲಾಖೆ ಸಿಬ್ಬಂದಿ ಕಟ್ಟುನಿಟ್ಟಿನ ಹೋಮ್ ಕ್ವಾರಂಟೈನ್ ಮಾಡಿದ್ದಾರೆ. ಕೊರೊನಾ ಆತಂಕದ ಹಿನ್ನೆಲೆ ಸಚಿವರ …
Read More »ಗಡಿಜಿಲ್ಲೆ ಬೀದರ್ನಲ್ಲಿ 500 ಗಡಿದಾಟಿದ ಸೋಂಕಿತರ ಸಂಖ್ಯೆ………
ಬೀದರ್: ಮಹಾಮಾರಿ ಡ್ರ್ಯಾಗನ್ ಕೊರೊನಾ ಅಟ್ಟಹಾಸ ಮುಂದುವರಿದಿದ್ದು, ಜಿಲ್ಲೆಯಲ್ಲಿ ಇಂದು ಕೂಡ 5 ಕೊರೊನಾ ಪಾಸಿಟಿವ್ ದೃಢವಾಗಿದೆ. ಜಿಲ್ಲೆಯ ಬಸವಕಲ್ಯಾಣ ತಾಲೂಕಿನಲ್ಲಿ 3, ಬೀದರ್ ತಾಲೂಕಿನಲ್ಲಿ 2 ಸೇರಿದಂತೆ ಒಟ್ಟು 5 ಜನ ವಲಸೆ ಕಾರ್ಮಿಕರಿಗೆ ಕೊರೊನಾ ಪಾಸಿಟಿವ್ ಧೃಡವಾಗಿದೆ. ಮುಂಬೈ ಕಂಟಕ ಜಿಲ್ಲೆಯನ್ನು ಬಿಟ್ಟು ಬಿಡದೆ ಕಾಡುತ್ತಿದೆ. ಇಂದು ಕೂಡಾ ಮುಂಬೈ ಕಂಟಕದಿಂದಲೇ 5 ಕೊರೊನಾ ಸೋಂಕು ದೃಢವಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 502ಕ್ಕೇರಿದೆ. ಜಿಲ್ಲೆಯ 502 …
Read More »ಜೀವನ್ಮರಣದ ನಡ್ವೆ ಒದ್ದಾಡ್ತಿದ್ದ ಯುವತಿ ರಕ್ಷಿಸಿದ ಬಾಲಕಿ……………
ಉಡುಪಿ: ಚಲಿಸುತ್ತಿದ್ದ ಕಾರು ಕೆರೆಗೆ ಬಿದ್ದು ಚಾಲಕ ಮೃತಪಟ್ಟು ಕಾರಿನಲ್ಲಿದ್ದ ಯುವತಿ ಸ್ಥಳೀಯರ ಸಮಯ ಪ್ರಜ್ಞೆಯಿಂದ ಬದುಕುಳಿದಿದ್ದಾಳೆ. ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನ ಬಾರ್ಕೂರಲ್ಲಿ ಈ ಘಟನೆ ನಡೆದಿದೆ. ಬಾರ್ಕೂರಿನ ಚೌಳಿಕೆರೆಗೆ ಕಾರು ಉರುಳಿ ಉದ್ಯಮಿ ಸಂತೋಷ್ ಶೆಟ್ಟಿ ಎಂಬವರು ಸ್ಥಳದಲ್ಲೇ ಮೃತರಾಗಿದ್ದರು. ಕಾರಿನಲ್ಲಿ ಜೊತೆಗಿದ್ದ ಸಂಸ್ಥೆಯ ಉದ್ಯೋಗಿ ಶ್ವೇತಾ ಅಪಘಾತದಿಂದ ಪವಾಡ ಸದೃಶ ರೂಪದಲ್ಲಿ ಬಚಾವಾಗಿದ್ದು, ಯುವತಿ ಶ್ವೇತಾಳನ್ನು ಬದುಕಿಸಿದ ವೀಡಿಯೋ ಸಿಕ್ಕಿದೆ. ನೀರು ತುಂಬಿದ್ದ ಕೆರೆಗೆ ಕಾರು …
Read More »ವಿಧಾನಪರಿಷತ್ಗೆ ಏಳು ಅಭ್ಯರ್ಥಿಗಳು ಅವಿರೋಧ ಆಯ್ಕೆ
ಬೆಂಗಳೂರು: ವಿಧಾನಪರಿಷತ್ಗೆ ಸ್ಪರ್ಧಿಸಿದ್ದ ಏಳು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿಯ ಎಂಟಿಬಿ ನಾಗರಾಜ್, ಆರ್ ಶಂಕರ್, ಸುನಿಲ್ ವಲ್ಯಾಪುರೆ, ಪ್ರತಾಪ್ ಸಿಂಹ ನಾಯಕ್, ಕಾಂಗ್ರೆಸ್ನ ಹರಿಪ್ರಸಾದ್, ನಸೀರ್ ಅಹ್ಮದ್ ಮತ್ತು ಜೆಡಿಎಸ್ನ ಗೋವಿಂದರಾಜು ಅವಿರೋಧ ಆಯ್ಕೆಯಾಗಿದ್ದಾರೆ. ಮಾಜಿ ಸಚಿವ ಹೆಚ್.ವಿಶ್ವನಾಥ್ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದ್ರೆ ಕೊನೆ ಕ್ಷಣದಲ್ಲಿ ಟಿಕೆಟ್ ತಪ್ಪಿತ್ತು. ಏಳು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಏಳು ಮಂದಿಯಷ್ಟೇ ಕಣದಲ್ಲಿ ಇದ್ದ ಕಾರಣ ಎಲ್ಲರೂ ಅವಿರೋಧ ಆಯ್ಕೆ ಆಗಿದ್ದಾರೆ.
Read More »ಸಾವಳಗಿಯಲ್ಲಿ SSLC ಶಾಲಾ ಮಕ್ಕಳಿಗೆ ಮಾಸ್ಕ್ ವಿತರಣೆ
ಗೋಕಾಕ ತಾಲೂಕಿನ ಸಾವಳಗಿ ಗ್ರಾಮದಲ್ಲಿ ಇಂದು ನಾಲ್ಕು ಊರಿನ ಎಲ್ಲಾ SSLC ಬರೆಯಲು ಹೋಗುತ್ತಿರುವ 94 ವಿಧ್ಯಾಥಿ೯ಗಳಿಗೆ ಸ್ಪಧಾ೯ವಿವೇಕ ಗೋಕಾಕ ತರಬೇತಿ ಕೇಂದ್ರದಿಂದ ಕಬಾಡಗಿ ಸರ್ ವತಿಯಿಂದ ಮಾಸ್ಕ್ ವಿತರಣೆ ಮಾಡಿದರು. ಎಲ್ಲಾ ಶಾಲಾ ಮಕ್ಕಳಿಗೆ ಸಾಮಾಜಿಕ ಅಂತರ ಕಾಪಾಡಿಕೊಂಡು ಮತ್ತು ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಂಡು ಹೋಗಲು ಹೇಳಿದರು. ಹಾಗೂ ಇದು ಕೋರಾನ ವೈರಸ್ ಹೆಮ್ಮರವಾಗಿ ಬೆಳೆಯುತ್ತಿದೆ ತಮ್ಮ ಸುರಕ್ಷತೆ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಪರೀಕ್ಷೆ ಬರೆಯಲು ಹೇಳಲಾಯಿತು.
Read More »