Breaking News

Monthly Archives: ಜೂನ್ 2020

ನನಗೆ ಒಬ್ಬನೇ ಮಗ- ಕಣ್ಣೀರಿಟ್ಟ ಕರ್ನಲ್ ಸಂತೋಷ್ ಬಾಬು ತಾಯಿ…….

ಹೈದರಾಬಾದ್: ನನಗೆ ಒಬ್ಬನೇ ಮಗ ಎಂದು ಹುತಾತ್ಮ ಯೋಧ ಕರ್ನಲ್ ಸಂತೋಷ್ ಬಾಬು ಅವರ ತಾಯಿ ಕಣ್ಣೀರಿಟ್ಟಿದ್ದಾರೆ. ಭಾರತ-ಚೀನಾ ಮಧ್ಯೆ ಯುದ್ಧದ ಕಾರ್ಮೋಡ ಆವರಿಸುತ್ತಿದೆ. ಪದೇ ಪದೇ ಕಿರಿಕ್ ಮಾಡುವ ಚೀನಾ, ಯುದ್ಧೋನ್ಮಾದದಲ್ಲೇ ತೇಲಾಡುತ್ತಿದೆ. ಸೋಮವಾರ ರಾತ್ರಿ ನಡೆದ ದಾಳಿಯಲ್ಲಿ ಭಾರತೀಯ ಸೇನೆ ಕರ್ನಲ್ ಮತ್ತು ಇಬ್ಬರು ಸೈನಿಕರು ಹುತಾತ್ಮರಾಗಿದ್ದರು. ಇಂದು ರಾತ್ರಿ ಬಂದ ಮಾಹಿತಿ ಪ್ರಕಾರ ಒಟ್ಟು 20 ಮಂದಿ ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ಮಾಧ್ಯಮಗಳ ಜೊತೆಗೆ ಮಾತನಾಡಿದ …

Read More »

ಅಶೋಕ ವೆಂಕಪ್ಪ ಚಂದರಗಿ ಅವರನ್ನು ಎಂಎಲ್ಸಿ ಮಾಡುವಂತೆ

ಬೆಳಗಾವಿ: ಸಮಸ್ತ ಕರ್ನಾಟಕ ವಿಶೇಷವಾಗಿ ಉತ್ತರ ಕರ್ನಾಟಕ ಜಿಲ್ಲೆಗಳ ಜ್ಞಾನ ಅನುಭವ ಹೊಂದಿರುವ ಪ್ರಮುಖ ಕನ್ನಡ ಹೋರಾಟಗಾರ ಅಶೋಕ ವೆಂಕಪ್ಪ ಚಂದರಗಿ ಅವರನ್ನು ಎಂಎಲ್ಸಿ ಮಾಡುವಂತೆ ಕನ್ನಡಪರ ಹೋರಾಟಗಾರರ ಒಕ್ಕೂಟ ಆಗ್ರಹಿಸಿದೆ. ಇಂದು ಸಂಯುಕ್ತ ಸುದ್ದಿಗೋಷ್ಠಿಯಲ್ಲಿ ಕರವೇ ಮಹಾದೇವ ತಳವಾರ ಮತ್ತು ಹಿರಿಯ ಕನ್ನಡ ಮುಖಂಡರು ರಾಜ್ಯ ಬಿಜೆಪಿ ಸರಕಾರ ಮತ್ತು ಎಲ್ಲ ರಾಜಕೀಯ ಪಕ್ಷಗಳನ್ನು ಆಗ್ರಹಿಸಿದ್ದಾರೆ. ಕನ್ನಡ ನಾಡು-ನುಡಿ, ನೆಲ -ಜಲ ಹಾಗೂ ಸಾಮಾಜಿಕ ಸೇವಾ ವಲಯದಲ್ಲಿ ನೈಜ …

Read More »

ನನ್ನ ರಾಜಕೀಯ ಜೀವನ ಇರುವವರೆಗೆ ನಾನು ಬಿಜೆಪಿ ಪಕ್ಷದಲ್ಲಿ ಇರುತ್ತೇನೆ.: ರಮೇಶ್ ಜಾರಕಿಹೊಳಿ

ಚಿಕ್ಕೋಡಿ(ಬೆಳಗಾವಿ): ನೀರಾವರಿ ಸಚಿವ ರಮೇಶ್ ಜಾರಕಿಹೊಳಿ ಬಿಜೆಪಿ ಪಕ್ಷ ಬಿಡುತ್ತಾರೆ ಎಂಬ ಊಹಾಪೋಹಗಳು ಹರಿದಾಡುತ್ತಿದ್ದು, ಈ ಸುದ್ದಿಗೆ ಸ್ಪಷ್ಟನೆ ನೀಡುವ ಮೂಲಕ ಬೆಳಗಾವಿ ಸಾಹುಕಾರ ತೆರೆ ಎಳೆದಿದ್ದಾರೆ. ಚಿಕ್ಕೋಡಿ ಪಟ್ಟಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಂಘ ಪರಿವಾರದಲ್ಲಿ ನನಗೆ ಸಿಗುತ್ತಿರುವ ಆಶೀರ್ವಾದವನ್ನ ಕೆಲ ವೈರಿ ಕುತಂತ್ರಿಗಳಿಗೆ ನೋಡಲು ಆಗುತ್ತಿಲ್ಲ. ಹೀಗಾಗಿ ನನ್ನ ಬಗ್ಗೆ ಪಕ್ಷ ಬಿಡುತ್ತೇನೆ ಎಂದು ಊಹಾಪೋಹಗಳನ್ನ ಎಬ್ಬಿಸಲಾಗಿದೆ ಎಂದು ಗರಂ ಆದರು. ನನ್ನ ರಾಜಕೀಯ ಜೀವನ …

Read More »

ರೈತ ವಿರೋಧಿ ಸರಕಾರ ಎಂದು ಘೋಷಣೆ ಕೂಗಿದ ರೈತ ಸಂಘ

ಗೋಕಾಕ: ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರ ಸ್ವಕ್ಷೇತ್ರದ ಸಂತ್ರಸ್ತರು ತಹಸೀಲ್ದಾರ್ ಕಚೇರಿ ಆವರಣದಲ್ಲಿ ಮಂಗಳವಾರ ದನ-ಕರು, ಎಮ್ಮೆ- ಎತ್ತುಗಳೊಂದಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.   ಇಲ್ಲಿನ ತಹಶೀಲ್ದಾರರ ಕಚೇರಿಗೆ ನೆರೆ ಸಂತ್ರಸ್ತರು ಮುತ್ತಿಗೆ ಹಾಕಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಘೋಷಣೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ರು. 6 ತಿಂಗಳು ಕಳೆದರು ಕೂಡ ನೆರೆ ಪರಿಹಾರ ವಿತರಣೆಯಾಗದ ಹಿನ್ನೆಲೆಯಲ್ಲಿ ಪುಟ್ಟ ಮಕ್ಕಳನ್ನು ಕರೆದುಕೊಂಡು …

Read More »

ಎಪಿಎಂಸಿ ಸದಸ್ಯ ರಾಗಿ ನೇಮಕ ಆದವರಿಗೆ ಸಂಸದರಿಂದ ಸನ್ಮಾನ..

ಬೆಳಗಾವಿ ಎಪಿಎಂಸಿ ಸದಸ್ಯರಾಗಿ ಸರ್ಕಾರದಿಂದ ನೇಮಕಗೊಂಡ ಶ್ರೀಮತಿ ರೇಷ್ಮಾ ಯಲ್ಲಪ್ಪ ಪಾಟೀಲ್ ಹಾಗೂ ಬೆಳಗಾವಿ ಗ್ರಾಮೀಣ ಬಿಜೆಪಿ ಕಾರ್ಯದರ್ಶಿಗಳಾಗಿ ಆಯ್ಕೆಯಾದ ಶ್ರೀಮತಿ ರಂಜನಾ ಅರುಣ್ ಕೋಲ್ಕಾರ್ ಅವರಿಗೆ ಇಂದು ನಗರದ ಕಾಡಾ ಕಚೇರಿಯಲ್ಲಿ ಸನ್ಮಾನಿಸಿ, ಶುಭಕೋರಲಾಯಿತು. ಈ ಸಂದರ್ಭದಲ್ಲಿ ಶ್ರೀ ವಿನಯ್ ಕದಮ್, ಶ್ರೀ ಪ್ರವೀಣ್ ಪಾಟೀಲ್, ಶ್ರೀ ಹೇಮಂತ್, ಶ್ರೀ ರಾಜೀವ್ ದೇಸಾಯಿ, ಶ್ರೀ ಅರುಣ್ ಕೋಲ್ಕಾರ್ ಹಾಗೂ ಡಾ. ಪಾಟೀಲ್ ರವರು ಉಪಸ್ಥಿತರಿದ್ದರು.

Read More »

ಗ್ರಾಮದ ಮಂಡುಭಾಯಿ ಪವಾರ ಅವರ ಕುಟುಂಬಕ್ಕೆ ಪ್ರಕೃತಿ ವಿಕೋಪದಡಿ ತಲಾ ಐದು ಲಕ್ಷ ರೂಪಾಯಿ ಚೆಕ್ಕನ್ನು ಅಥಣಿ ಶಾಸಕ ಹಾಗೂ ಕೊಳಗೇರಿ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ ಮಹೇಶ ಕುಮಠಳ್ಳಿ

ಅಥಣಿ: ತಾಲೂಕಿನ ಸವದಿ ದರ್ಗಾ ಗ್ರಾಮದಲ್ಲಿ ಇತ್ತೀಚೆಗೆ ಸಿಡಿಲು ಬಡಿದು ಮೃತಪಟ್ಟ ಬಂದೆನವಾಜ ಮುಲ್ಲಾ ಹಾಗೂ ದೇಸಾರಟ್ಟಿ ಗ್ರಾಮದ ಮಂಡುಭಾಯಿ ಪವಾರ ಅವರ ಕುಟುಂಬಕ್ಕೆ ಪ್ರಕೃತಿ ವಿಕೋಪದಡಿ ತಲಾ ಐದು ಲಕ್ಷ ರೂಪಾಯಿ ಚೆಕ್ಕನ್ನು ಅಥಣಿ ಶಾಸಕ ಹಾಗೂ ಕೊಳಗೇರಿ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ ಮಹೇಶ ಕುಮಠಳ್ಳಿ ಯವರು ಹಸ್ತಾಂತರಿಸಿದರು.  ಈ ವೇಳೆ ಮಾತನಾಡಿದ ಮಹೇಶ ಕುಮಠಳ್ಳಿ ಇಂತಹ ದುರ್ಘಟನೆ ಘಟಿಸಬಾರದಿತ್ತು ಆದರೆ ವಿಧಿ ಆಟದ ಎದುರು ಎಲ್ಲರೂ …

Read More »

ಅಳತೆ, ತೂಕ ಮತ್ತು ಮಾಪನ ಇಲಾಖೆಯ ಅಧಿಕಾರಿ ಮನೆ ಮೇಲೆ ದಾಳಿ ನಡೆದೆ‌ ಅಸಿಸ್ಟೆಂಟ್ ಕಂಟ್ರೋಲರ್ ಸುಭಾಷ್ ಉಪ್ಪಾರ ನಿವಾಸ, ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಳಗಾವಿಯ ಅಳತೆ, ತೂಕ ಮತ್ತು ಮಾಪನ ಇಲಾಖೆಯ ಅಧಿಕಾರಿ ಮನೆ ಮೇಲೆ ದಾಳಿ ನಡೆದೆ‌ ಅಸಿಸ್ಟೆಂಟ್ ಕಂಟ್ರೋಲರ್ ಸುಭಾಷ್ ಉಪ್ಪಾರ ನಿವಾಸ, ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರುಕ್ಮಿಣಿ ನಗರದ ನಿವಾಸ ಮತ್ತು, ಕಚೇರಿಯಲ್ಲಿ ಎಸಿಬಿ ಅಧಿಕಾರಿಗಳಿಂದ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.ಸುಭಾಷ್ ಉಪ್ಪಾರ್, ಬೆಳಗಾವಿಯ ತೂಕ ಮತ್ತು ಮಾಪನ ಇಲಾಖೆಯ ಇನ್ವೆಸ್ಟಿಗೇಷನ್ ಯೂನಿಟ್ 3ರ ಅಸಿಸ್ಟೆಂಟ್ ಕಂಟ್ರೋಲರ್ ಆಗಿದ್ದಾರೆ. ಏಕಕಾಲದಲ್ಲಿ ನಾಲ್ಕು ಕಡೆ ದಾಳಿ ಮಾಡಿದ 30 …

Read More »

ಹೆಚ್​ಎಎಲ್ ಪೊಲೀಸರು ಸಂತೋಷ್ ಸೇರಿ 9 ಜನರನ್ನು ಬಂಧನ ಮಾಡಿದ್ದಾರೆ.

ಬೆಂಗಳೂರು; ಕಳ್ಳತನ ಮಾಡಿದ್ದ ಹಣವನ್ನು ಹಂಚಿಕೊಳ್ಳೋ ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಜೆ.ಪಿ. ನಗರದ ರೌಡಿಶೀಟರ್ ಆಗಿದ್ದ ಶ್ರೀನಿವಾಸ್ ಅಲಿಯಾಸ್ ಪಾಗಲ್ ಸೀನನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಸಂತೋಷ್ ಆ್ಯಂಡ್ ಟೀಂನಿಂದ ಈ ಕೊಲೆ ನಡೆದಿದ್ದು, ಸದ್ಯ ಹೆಚ್​ಎಎಲ್ ಪೊಲೀಸರು ಸಂತೋಷ್ ಸೇರಿ 9 ಜನರನ್ನು ಬಂಧನ ಮಾಡಿದ್ದಾರೆ. ಜೂನ್ 6ರಂದು ಸಂತೋಷ್ ಆ್ಯಂಡ್ ಟೀಂನಿಂದ ಪಾಗಲ್ ಶ್ರೀನಿವಾಸ್ ಕೊಲೆ ಮಾಡಲಾಗಿತ್ತು. ಇನ್ನು ಪಾಗಲ್ ಸೀನ ಹಾಗೂ ಸಂತೋಷ್ …

Read More »

ಒಂದೇ ದಿನ 24 ಗಂಟೆಯಲ್ಲಿ 1,647 ಮಂದಿಗೆ ಕೊರೋನಾ ವೈರಸ್​ ಬಂದಿದೆ. ಈ ಮೂಲಕ ದೆಹಲಿಯಲ್ಲಿ

 ದೆಹಲಿಯಲ್ಲಿ ಮಾರಕ ಕೊರೋನಾ ವೈರಸ್​ ಆರ್ಭಟ ಮುಂದುವರಿದದೆ. ಸೋಮವಾರ ಒಂದೇ ದಿನ 24 ಗಂಟೆಯಲ್ಲಿ 1,647 ಮಂದಿಗೆ ಕೊರೋನಾ ವೈರಸ್​ ಬಂದಿದೆ. ಈ ಮೂಲಕ ದೆಹಲಿಯಲ್ಲಿ ಕೋವಿಡ್​​-19 ಸೋಂಕಿತರ ಸಂಖ್ಯೆ 42,829ಕ್ಕೆ ಏರಿಕೆಯಾಗಿದೆ ಎಂದು ಸಿಎಂ ಅರವಿಂದ್​ ಕೇಜ್ರಿವಾಲ್​ ನೇತೃತ್ವದ ಆಪ್​ ಸರ್ಕಾರ ಬಿಡುಗಡೆ ಮಾಡಿದ ಹೆಲ್ತ್​​ ಬುಲೆಟಿನ್​​ನಿಂದ ತಿಳಿದು ಬಂದಿದೆ. ಇನ್ನು, ಮಹಾಮಾರಿ ಕೋವಿಡ್​​-19 ಸೋಂಕು ನಿನ್ನೆಯೂ 73 ಮಂದಿಯನ್ನು ಬಲಿ ತೆಗೆದುಕೊಂಡಿದೆ. ಈ ಮೂಲಕ ಕೊರೋನಾ ವೈರಸ್​ನಿಂದ …

Read More »

ಇಂದು ಸಿಲಿಕಾನ್ ಸಿಟಿಯಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

ರಾಜ್ಯದ ಹಲವೆಡೆ ಮೋಡ ಕವಿದ ವಾತಾವರಣ ಇರಲಿದ್ದು, ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮಳೆಯಾಗುವ ಸಾಧ್ಯತೆ ಇದೆ. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದೆ. ಹಾಗೆಯೇ ಬಳ್ಳಾರಿಯಲ್ಲಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದೆ. ನಗರಗಳ ಗರಿಷ್ಠ, …

Read More »