Breaking News

Monthly Archives: ಜೂನ್ 2020

ಅನಂತಕುಮಾರ್ ಕುಟುಂಬ ಕಡೆಗಣನೆ, ಬಿಜೆಪಿಯಲ್ಲಿ ಶುರುವಾಯ್ತು ಅಸಮಾಧಾನ

ಬೆಂಗಳೂರು,ಜೂ.8-ರಾಜ್ಯದಲ್ಲಿ ಬಿಜೆಪಿಯನ್ನು ತಳಮಟ್ಟದಿಂದ ಕಟ್ಟಿ ಪಕ್ಷವನ್ನು ಬೆಳೆಸಿ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಅಧಿಕಾರಕ್ಕೆ ಬರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ದಿ.ಅನಂತಕುಮಾರ್ ಅವರ ಕುಟುಂಬವನ್ನು ಕಡೆಗಣಿಸುತ್ತಿರುವುದಕ್ಕೆ ಪಕ್ಷದ ವಲಯದಲ್ಲಿ ಅಸಮಾಧಾನ ವ್ಯಕ್ತವಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಹೊರತುಪಡಿಸಿದರೆ ಕರ್ನಾಟಕದಲ್ಲಿ ಬಿಜೆಪಿಯನ್ನು ನಗರಪ್ರದೇಶದಿಂದ ಹಳ್ಳಿಹಳ್ಳಿಗೂ ಕೊಂಡೊಯ್ದ ಕೀರ್ತಿ ಅನಂತ್‍ಕುಮಾರ್ ಅವರಿಗೆ ಸಲ್ಲುತ್ತದೆ. ಕಳೆದ ವರ್ಷ ಕ್ಯಾನ್ಸರ್ ಕಾಣಿಸಿಕೊಂಡು ಅನಂತ್‍ಕುಮಾರ್ ನಿಧನರಾದ ಮೇಲೆ ಅವರ ಕುಟುಂಬವನ್ನು ಸಂಪೂರ್ಣವಾಗಿ ಬಿಜೆಪಿ ನಾಯಕರು ನಿರ್ಲಕ್ಷ್ಯ ಮಾಡುತ್ತಾ …

Read More »

ಬ್ರೇಕ್ ಫೇಲ್- ಡಿಪೋದಿಂದ ಹೊರ ನುಗ್ಗಿದ ಬಸ್………..

ಬೆಂಗಳೂರು: ಬ್ರೀಕ್ ಫೇಲ್‍ನಿಂದಾಗಿ ಬಸ್‍ವೊಂದು ಡಿಪೋದಿಂದ ಹೊರ ನುಗ್ಗಿದ ಘಟನೆ ಪೂರ್ಣಪ್ರಜ್ಞ ನಗರದಲ್ಲಿ ನಡೆದಿದ್ದು, ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪೂರ್ಣಪ್ರಜ್ಞ ನಗರದ ಡಿಪೋ 33ರಲ್ಲಿ ಇಂದು ಬೆಳಗ್ಗೆ 10:45 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಸಿಬ್ಬಂದಿ ನಿಲ್ಲಿಸಿದ್ದ 2 ಬೈಕ್, ಒಂದು ಸೈಕಲ್‍ಗೆ ಜಖಂಗೊಡಿವೆ. ಬಸ್ ಏನಾದ್ರು ಇನ್ನು ಸ್ವಲ್ಪ ಮುಂದೆ ಬಂದಿದ್ದರೆ ದೊಡ್ಡ ಹಳ್ಳಕ್ಕೆ ಬೀಳುತ್ತಿತ್ತು. ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಿಪೋ 33ರ ಮ್ಯಾನೇಜರ್, ಅಪಘಾತ …

Read More »

ತೀವ್ರ ಜ್ವರ, ಗಂಟಲು ನೋವು – ಸಿಎಂ ಕೇಜ್ರಿವಾಲ್‍ಗೆ ಕೊರೊನಾ ಟೆಸ್ಟ್………..

ನವದೆಹಲಿ: ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನಾಳೆ ಬೆಳಗ್ಗೆ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಲಿದ್ದಾರೆ. ಭಾನುವಾರದಿಂದ ಕೇಜ್ರಿವಾಲ್ ಆರೋಗ್ಯದಲ್ಲಿ ಏರುಪೇರಾಗಿದ್ದು, ವೈದ್ಯರ ಸಲಹೆ ಹಿನ್ನೆಲೆ ನಾಳೆ ಕೊರೊನಾ ಪರೀಕ್ಷೆಗೆ ಒಳಗಾಗಲಿದ್ದಾರೆ. ಕೇಜ್ರಿವಾಲ್ ತೀವ್ರ ಜ್ವರ, ಗಂಟಲು ನೋವಿನಿಂದ ಬಳಲುತ್ತಿದ್ದರು. ಚಿಕಿತ್ಸೆ ಬಳಿಕವೂ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಕೊರೊನಾ ಪರೀಕ್ಷೆ ನಡೆಸಲು ತಿರ್ಮಾನಿಸಲಾಗಿದೆ.ಕೊರೊನಾ ಹೋರಾಟದ ಮುನ್ನಲೆಯಲ್ಲಿರುವ ಅರವಿಂದ ಕೇಜ್ರಿವಾಲ್, ಪ್ರತಿ ನಿತ್ಯ ಅಧಿಕಾರಗಳ ಸಭೆ ನಡೆಸುತ್ತಿದ್ದಾರೆ. ಜ್ವರ ಕಾಣಿಸಿಕೊಂಡ …

Read More »

ಕಂದನಿಗಾಗಿ ಕಾಯುತ್ತಿದ್ದ ಚಿರು, ಪತ್ನಿಗೆ ಗೊಂಬೆ ಗಿಫ್ಟ್

ಬೆಂಗಳೂರು: ಸ್ಯಾಂಡಲ್‍ವುಡ್ ನಟ ಚಿರಂಜೀವಿ ಸರ್ಜಾ ಅವರು ಅಪ್ಪನಾಗುತ್ತಿರುವ ಸಂಭ್ರಮದಲ್ಲಿದ್ದರು. ಆದರೆ ಮುದ್ದು ಕಂದ ಬರುವ ಮೊದಲೇ ಚಿರು ಇಹಲೋಕ ತ್ಯಜಿಸಿದ್ದಾರೆ. ಚಿರಂಜೀವಿ ಸರ್ಜಾ ತಮ್ಮ ಮುದ್ದು ಕಂದನ ಬರುವಿಕೆಗಾಗಿ ಕಾತುರದಿಂದ ಕಾಯುತ್ತಿದ್ದರು. ಈ ಹಿನ್ನೆಲೆಯಲ್ಲಿ ಮುದ್ದು ಮಡದಿ ಮೇಘನಾಗೆ ಒಂದು ಗೊಂಬೆಯನ್ನು ಕೂಡ ಗಿಫ್ಟಾಗಿ ನೀಡಿದ್ದರು. ಈಗ ಮೇಘನಾ ಚಿರು ಇಲ್ಲದ ಹೊತ್ತಲ್ಲಿ ಆ ಮುದ್ದಾದ ಬೊಂಬೆಯನ್ನು ನೋಡುತ್ತಾ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಅಲ್ಲದೇ ಜೋಕಾಲಿ ಕಟ್ಟಿ ಬೊಂಬೆಗೆ …

Read More »

ಕೋರೆ ಕತ್ತಿ ಕಿತ್ತಾಟ,ಈರಣ್ಣಾ ಕಡಾಡಿಗೆ ಒಲಿದು ಬಂದ ರಾಜ್ಯ ಸಭಾ ಟಿಕೆಟ್……

ಬೆಳಗಾವಿ- ಇಬ್ಬರ ಜಗಳ ಮೂರನೇಯ ವ್ಯೆಕ್ತ ಗೆ ಯಾವ ರೀತಿ ಲಾಭ ಮಾಡಿ ಕೊಡುತ್ತದೆ ಎನ್ನುವದಕ್ಜೆ ಕೋರೆ ಕತ್ತಿ ಕಿತ್ತಾಟವೇ ಅದಕ್ಕೆ ಸಾಕ್ಷಿಯಾಗಿದ್ದು.ರಾಜ್ಯ ಸಭಾ ಟಿಕೆಟ್ ಈರಣ್ಣಾ ಕಡಾಡಿಗೆ ಒಲಿದು ಬಂದಿದೆ. ಬೆಳಗಾವಿ ಜಿಲ್ಲೆಯಲ್ಲಿ ಸಂಘ ಪರಿವಾರದ ಮೂಲಕ ರಾಜಕೀಯ ಜೀವನ ಆರಂಭಿಸಿದ ಈರಣ್ಣಾ ಕಡಾಡಿ ಪಕ್ಷದ ಸಂಘಟನೆಗೆ ಪ್ರಾಮಾಣಿಕವಾಗಿ ಶ್ರಮಿಸಿದ್ದು ಬಿಜೆಪಿ ಹೈಕಮಾಂಡ್ ಪ್ರಾಮಾಣಿಕ ಕಾರ್ಯಕರ್ತನಿಗೆ ರಾಜ್ಯಸಭಾ ಟಿಕೆಟ್ ನೀಡಿದ್ದು ಕಿತ್ತಾಟ ನಡೆಸಿದ ಪ್ರಭಾವಿ ನಾಯಕರಿಗೆ ಅಚ್ಚರಿ ಮೂಡಿಸಿದೆ. …

Read More »

ರಾಜ್ಯಸಭೆ ಚುನಾವಣೆ : ಖರ್ಗೆಗೆ ಬಿ ಫಾರಂ ನೀಡಿದ ಡಿಕೆಶಿ

ಬೆಂಗಳೂರು,ಜೂ.8-ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ಬಿ ಫಾರಂ ನೀಡಿದರು. ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಉಪಮುಖ್ಯಮಂತ್ರಿ ಪರಮೇಶ್ವರ್, ಕೆಪಿಸಿಸಿ ನಿರ್ಗಮಿತ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಸೇರಿದಂತೆ ಸುಮಾರು 50 ಮಂದಿ ಖರ್ಗೆ ಅವರ ಬಿ ಫಾರಂಗೆ ಸಹಿ ಹಾಕಿದರು. ಐದು ನಾಮಪತ್ರಗಳನ್ನು ವಿಧಾನಸಭೆ ಮಾಜಿ ಅಧ್ಯಕ್ಷ ರಮೇಶ್‍ಕುಮಾರ್ ಪರಿಶೀಲನೆ ನಡೆಸಿ …

Read More »

ನಾವು ಆತ್ಮೀಯ ಸ್ನೇಹಿತನನ್ನ ಕಳ್ಕೊಂಡಿದ್ದೇವೆ: ರಾಧಿಕಾ ಸಂತಾಪ………….

ಬೆಂಗಳೂರು: ನಾವು ಇಂದು ಆತ್ಮೀಯ ಸ್ನೇಹಿತ ಚಿರುವನ್ನು ಕಳೆದುಕೊಂಡಿದ್ದೇವೆ ಎಂದು ನಟಿ ರಾಧಿಕಾ ಪಂಡಿತ್ ಚಿರಂಜೀವಿ ಸರ್ಜಾ ಅವರ ಅಕಾಲಿಕ ಮರಣಕ್ಕೆ ಸಂತಾಪ ಸೂಚಿಸಿದ್ದಾರೆ. ನಟಿ ರಾಧಿಕಾ ಪಂಡಿತ್ ಚಿರಂಜೀವಿನ ಸಾವಿನ ಸುದ್ದಿ ತಿಳಿದ ತಕ್ಷಣ ಈ ಬಗ್ಗೆ ಇನ್‍ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. “ನನಗೆ ಚಿರಂಜೀವಿ ಸಾವಿನ ಸುದ್ದಿಯನ್ನು ನಂಬಲು ಸಾಧ್ಯವಾಗುತ್ತಿಲ್ಲ. ಒಳ್ಳೆಯ, ಸುಂದರ ಆತ್ಮ ನಮ್ಮನ್ನು ಬಿಟ್ಟು ಬೇಗನೇ ಹೋಗಿದೆ. ಹೀಗಾಗಿ ಪತ್ನಿ ಮೇಘನಾ, ಧ್ರುವ, ಅವರ ಅಮ್ಮ …

Read More »

ಸಿದ್ದರಾಮಯ್ಯ ಗೊಂದಲ ಸೃಷ್ಟಿಮಾಡೋದರಲ್ಲಿ ನಂಬರ್ ಒನ್: ನಳಿನ್ ಕುಮಾರ್ ಕಟೀಲ್

ಕೊಪ್ಪಳ: ನಮ್ಮಲ್ಲಿ ಯಾವುದೇ ಭಿನ್ನಮತವಿಲ್ಲ, ಎಲ್ಲರೂ ಒಂದಾಗಿದ್ದೇವೆ. ಎಲ್ಲರೂ ಹೈಕಮಾಂಡ್ ತೀರ್ಮಾನಕ್ಕೆ ಬದ್ಧರಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ಇಂದು ಕೊಪ್ಪಳ ಜಿಲ್ಲೆ ಕಾರಟಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಟಿಲ್, ಶಾಸಕರು ಸೇರಿ ಒಟ್ಟಾಗಿ ಊಟ ಮಾಡಿದ್ರೆ, ಚಹಾ ಕುಡಿದ್ರೆ ಭಿನ್ನಮತನಾ ಎಂದು ಪ್ರಶ್ನೆ ಮಾಡಿದ್ರು. ರಾಜ್ಯದಲ್ಲಿ ಇಬ್ಬರು ಸಿಎಂ ಎಂದು ಹೇಳಿಕೆ ನೀಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯಗೆ ತಿರುಗೇಟು ನೀಡಿದ ಕಟಿಲ್, ಸಿದ್ದರಾಮಯ್ಯ ಗೊಂದಲ ಸೃಷ್ಟಿಮಾಡೋದರಲ್ಲಿ …

Read More »

ಶ್ರೀ ರಮೇಶ ಜಾರಕಿಹೊಳಿ ಯವರಿಗೆ ಕುರುಬರ ವತಿಯಿಂದ ಸನ್ಮಾನಿಸಿ ಟಗರು ಕೊಡಲಾಯಿತು

ಗೋಕಾಕ : ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಗೊಕಾಕ ನಗರಕ್ಕೆ ಆಗಮಿಸಿದ್ದ ರಮೇಶ ಅಣ್ಣಾ ಜಾರಕಿಹೊಳಿ ಅವರಿಗೆ ಗೋಕಾಕ ತಾಲೂಕಿನ ಕುರುಬರ ವತಿಯಿಂದ ಸನ್ಮಾನಿಸಿ ಟಗರು ಕೊಡಲಾಯಿತು ………. ಅದೇ ಸಂದಭ೯ದಲ್ಲಿ ಬೆಳಗಾವಿ ಸುವರ್ಣ ಸೌದದ ಆವರಣದಲ್ಲಿ ದೇಶ ಪ್ರೇಮಿ ಕ್ರಾಂತಿಯ ಜ್ಯೋತಿ ಹಚ್ಚಿದ ಕ್ರಾಂತೀವಿರ ಸಂಗೊಳ್ಳಿ ರಾಯಣ್ಣನ ಬೃಹತ್ ಪ್ರತಿಮೆಯನ್ನು ಪ್ರತಿಸ್ಟಾಪಿಸಬೆಕೆಂದು ಕ್ರಾಂತೀವಿರ ಸಂಗೊಳ್ಳಿ ರಾಯಣ್ಣ ಸೇನೆಯ ವತಿಯಿಂದ ಹಾಗೂ ಸಮಾಜದ ಯುವಕರು ಹಾಗೂ ರಾಯಣ್ಣನ ಅಭಿಮಾನಿಗಳು ಮನವಿಯನ್ನು …

Read More »

ಸುಂದರ್ ರಾಜ್‍ಗೆ ಸಾಂತ್ವನ ಹೇಳಿದ ಟಿ.ಎನ್.ಸೀತಾರಾಮ್ – ಮೇಘನಾಗೆ ನೀನು ಮಾತ್ರ ಧೈರ್ಯ ನೀಡಬಲ್ಲೆ ಸುಂದರ್

ಬೆಂಗಳೂರು: ಎಲ್ಲರ ಪ್ರೀತಿಯ ಸ್ಯಾಂಡಲ್‍ವುಡ್ ನಟ ಚಿರಂಜೀವಿ ಸರ್ಜಾ ಅವರ ನಿಧನಕ್ಕೆ ಅನೇಕರು ಸಂತಾಪ ಸೂಚಿಸಿದ್ದಾರೆ. ಅಳಿಯ ಅಗಲಿಕೆ, ಪ್ರೀತಿಯ ಮಗಳ ದುಃಖವನ್ನು ಕಂಡು ಹಿರಿಯ ನಟ ಸುಂದರ್ ರಾಜ್ ಕಣ್ಣೀರಾಗಿದ್ದಾರೆ. ಅವರಿಗೆ ನಿರ್ದೇಶಕ ಟಿ.ಎನ್.ಸೀತಾರಾಮ್ ಅವರು ಸಾಂತ್ವನ ಹೇಳಿದ್ದಾರೆ. ತಮ್ಮ ಫೇಸ್‍ಬುಕ್‍ನಲ್ಲಿ ಚಿರಂಜೀವಿ ಸರ್ಜಾ ಫೋಟೋವನ್ನು ಪೋಸ್ಟ್ ಮಾಡಿರುವ ಟಿ.ಎನ್.ಸೀತಾರಾಮ್, ‘ಪ್ರೀತಿಯ ಸುಂದರ್ ರಾಜ’ ಎಂದು ಮಾತುಗಳನ್ನು ಆರಂಭಿಸಿದ್ದಾರೆ. “ಈ ಕ್ಷಣದಲ್ಲಿ ಎಲ್ಲ ಬಗೆಯ ಸಾಂತ್ವನದ ಮಾತುಗಳೂ ಕೂಡ …

Read More »