ಮುಂಬೈ – ಅಮಿತಾಬ್ ಬಚ್ಚನ್ ಗೆ ಕೊರೋನಾ ಬಂದಿರುವ ಬೆನ್ನಲ್ಲೇ ಮಗ ಅಭಿಷೇಕ್ ಬಚ್ಚನ್ ಗೂ ಸೋಂಕು ದೃಢಪಟ್ಟಿದೆ. ಅವರೇ ಟ್ವಿಟರ್ ನಲ್ಲಿ ಈ ವಿಷಯ ಬಹಿರಂಗಪಡಿಸಿದ್ದಾರೆ. ಅಮಿತಾಬ್ ಹಾಗೂ ತಾವು ಇಬ್ಬರೂ ಸಣ್ಣ ಅನಾರೋಗ್ಯಕ್ಕಾಗಿ ಆಸ್ಪತ್ರೆಗೆ ಹೋಗಿ ಪರೀಕ್ಷೆ ಮಾಡಿಸಿಕೊಂಡೆವು. ಇಬ್ಬರಿಗೂ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ನಮ್ಮಿಬ್ಬರೊಂದಿಗೆ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳಿ. ಯಾರೂ ಆತಂಕಕ್ಕೆ ಒಳಗಾಗುವುದು ಬೇಡ ಎಂದು ಅವರು ತಿಳಿಸಿದ್ದಾರೆ.
Read More »Daily Archives: ಜುಲೈ 11, 2020
ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಮುಂಬೈ: ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಅಮಿತಾಬ್ ಟ್ವೀಟ್ ಮಾಡಿ ಖಚಿತಪಡಿಸಿದ್ದು, ನನಗೆ ಕೊರೊನಾ ಸೋಂಕು ದೃಢಪಟ್ಟಿದೆ. ಆಸ್ಪತ್ರೆಗೆ ಸ್ಥಳಾಂತರಗೊಂಡಿದ್ದೇನೆ. ನಮ್ಮ ಕುಟುಂಬದವರು ಹಾಗೂ ಸಿಬ್ಬಂದಿಯನ್ನು ಸಹ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ವರದಿಗಾಗಿ ಕಾಯುತ್ತಿದ್ದೇವೆ ಎಂದು ಬರೆದುಕೊಂಡಿದ್ದಾರೆ. ಕಳೆದ 10 ದಿನಗಳಿಂದ ನನ್ನ ಜೊತೆ ಯಾರ್ಯಾರು ಸಂಪರ್ಕದಲ್ಲಿದಿರೋ ಅವರೆಲ್ಲರೂ ದಯವಿಟ್ಟು ಸ್ವಯಂ ಪ್ರೇರಿತವಾಗಿ ಕೊರೊನಾ ಪರೀಕ್ಷೆಗೆ ಒಳಗಾಗುವಂತೆ ವಿನಂತಿಸುತ್ತೇನೆ ಎಂದು ಬರೆದಿದ್ದಾರೆ. …
Read More »ಸೋಮವಾರದ ಜಿಲ್ಲಾಧಿಕಾರಿಗಳ ಸಭೆಯ ನಂತರ ಮತ್ತೆ ಸಂಪೂರ್ಣ ಕರ್ನಾಟಕ ಲಾಕ್ ಡೌನ್ ಆಗತ್ತಾ..?
ಬೆಂಗಳೂರು: ಇಂದು ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳು ಮಂಗಳವಾರದಿಂದ ಒಂದು ಲಾಕ್ಡೌನ್ ಆಗಲಿವೆ. ಇದೇ ರೀತಿ ಸೋಮವಾರ ಉಳಿದ ಜಿಲ್ಲೆಗಳಲ್ಲಿ ಲಾಕ್ಡೌನ್ ಘೋಷಿಸುವ ಸಾಧ್ಯತೆಗಳಿವೆ. ಸೋಮವಾರ ಜಿಲ್ಲಾಧಿಕಾರಿಗಳ ಸಿಎಂ ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ. ಸಭೆಯಲ್ಲಿ ಜಿಲ್ಲೆಯ ಸ್ಥಿತಿ ಗತಿಗಳ ಬಗ್ಗೆ ಮಾಹಿತಿಯನ್ನು ಮುಖ್ಯಮಂತ್ರಿಗಳು ಪಡೆಯಲಿದ್ದಾರೆ. ಜಿಲ್ಲಾಧಿಕಾರಿಗಳು ನೀಡುವ ವರದಿ ಆಧರಿಸಿ ಸೋಮವಾರ ಸಂಜೆ ಲಾಕ್ಡೌನ್ ಘೋಷಣೆ ಮಾಡುವ ಸಾಧ್ಯತೆಗಳು ದಟ್ಟವಾಗಿವೆ. ಹೆಚ್ಚು ಕೊರೊನಾ ಪ್ರಕರಣಗಳಿರುವ ಜಿಲ್ಲೆಗಳನ್ನು ಲಾಕ್ಡೌನ್ …
Read More »ಮಂಗಳ ವಾರ ಎಂಟು ಗಂಟೆಯಿಂದ ಮತ್ತೆ ಲಾಕ್ ಡೌನ್… ….!
ಬೆಂಗಳೂರು: ಕಳೆದ 10 ದಿನಗಳಿಂದ ಎದ್ದಿರುವ ಕೊರೊನಾ ಮಹಾ ಸುನಾಮಿಗೆ ತತ್ತರಿಸಿರುವ ರಾಜ್ಯ ಸರ್ಕಾರ, ರಾಜಧಾನಿಯನ್ನು ಒಂದು ವಾರ ಲಾಕ್ಡೌನ್ ಮಾಡಿ ಆದೇಶ ಹೊರಡಿಸಿದೆ. ಮಂಗಳವಾರದಿಂದ ಅಂದ್ರೆ ಜುಲೈ 14ರಿಂದ ರಾತ್ರಿ 8 ಗಂಟೆಯಿಂದ ಜುಲೈ 22ರ ನಸುಕಿನಜಾವ ಐದು ಗಂಟೆಯವರೆಗೂ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಲಾಕ್ಡೌನ್ ಆಗಲಿದೆ. ಈ ಸಂಬಂಧ ರಾತ್ರಿ 8 ಗಂಟೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಈ ಪ್ರಕಟಣೆ ಮಾಡಿದರು. ಸೋಂಕು ತಡೆಗೆ, ಸಂಡೇ …
Read More »ಇಂದು ಒಂದೇ ದಿನ ರಾಜ್ಯದಲ್ಲಿ 2798 ಜನರಿಗೆ ಸೋಂಕು………..
ಬೆಂಗಳೂರು – ರಾಜ್ಯದಲ್ಲಿ ಕೊರೋನಾ ದಿನದಿಂದ ದಿನಕ್ಕೆ ಹೆಚ್ಚುತ್ತ ಸಾಗುತ್ತಿದ್ದು, ಇಂದು ಒಂದೇ ದಿನ ರಾಜ್ಯದಲ್ಲಿ 2798 ಜನರಿಗೆ ಸೋಂಕು ದೃಢಪಟ್ಟಿದೆ. ಬೆಂಗಳೂರಿನಲ್ಲಿ 1533 ಜನರಿಗೆ ಸೋಂಕು ತಗುಲಿದೆ. ಇಂದು ಒಟ್ಟೂ 70 ಜನರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ 23 ಜನರು ಸಾವಿಗೀಡಾಗಿದ್ದಾರೆ. ಈ ಮಧ್ಯೆ ಮಂಗಳವಾರ ರಾತ್ರಿಯಿಂದ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ಒಂದು ವಾರ ಲಾಕ್ ಡೌನ್ ಮಾಡಲು ಸರಕಾರ ನಿರ್ಧರಿಸಿದೆ. ಇಡೀ ರಾಜ್ಯಕ್ಕೆ ಲಾಕ್ ಡೌನ್ ಮಾಡಬೇಕೋ …
Read More »ಸಚಿವ ಸಿ.ಟಿ.ರವಿ ಅವರಿಗೆ ಕೊರೊನಾ ಸೋಂಕು
ಬೆಂಗಳೂರು: ಸಚಿವ ಸಿ.ಟಿ.ರವಿ ಅವರಿಗೆ ಕೊರೊನಾ ಸೋಂಕು ತಗುಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಮಾಹಿತಿ ನೀಡಿದ್ದಾರೆ. ಸಂಸದೆ ಸುಮಲತಾ ಅಂಬರೀಶ್, ಶಾಸಕರಾದ ಪ್ರಾಣೇಶ್, ಅಜೇಯ್ ಸಿಂಗ್, ಪುಟ್ಟಣ್ಣಯ್ಯ ಸೇರಿದಂತೆ ಹಲವು ಜನಪ್ರತಿನಿಧಿಗಳಿಗೆ ಕೊರೊನಾ ತಗುಲಿದೆ. ಎಲ್ಲರೂ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಆದಷ್ಟು ಬೇಗ ಗುಣಮುಖರಾಗಿ ಬರುತ್ತೇವೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ. ಈ ಹಿಂದೆಯೂ ಕೊರೊನಾ ಪರೀಕ್ಷೆಗೆ ಒಳಗಾಗಿದ್ದ ಸಿ.ಟಿ.ರವಿ ಸ್ವಯಂ ಕ್ವಾರಂಟೈನ್ …
Read More »ಬುರುಡ ಸಮಾಜಕ್ಕೆ ಸರಕಾರದಿಂದ ಆರ್ಥಿಕ ನೆರವು ನೀಡುವಂತೆ ಒತ್ತಾಯಿ
ಚಿಕ್ಕೋಡಿ: ಕೊರೊನಾ ಹಿನ್ನೆಲೆಯಲ್ಲಿ ಲಾಕ್ಡೌನ್ದಿಂದಾಗಿ ಬಿದರಿನ ಬುಟ್ಟಿ ತಯಾರಿಸಿ ಬದುಕು ಸಾಗಿಸುತ್ತಿದ್ದ ಬುರುಡ(ಮೇದಾರ)ಸಂಕಷ್ಟದಲ್ಲಿದ್ದು, ಬುರುಡ ಸಮಾಜಕ್ಕೆ ಸರಕಾರದಿಂದ ಆರ್ಥಿಕ ನೆರವು ನೀಡುವಂತೆ ಒತ್ತಾಯಿಸಿ ಶನಿವಾರ ಮೇದಾರ ಕೇತಯ್ಯ ಬುರುಡ ಸಮಾಜ ಸಂಘದಿಂದ ವಿಧಾನ ಪರಿಷತ್ನ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಅವರಿಗೆ ಮನವಿ ಅಲ್ಲಿಸಿದರು. ಕೊರೊನಾ ಬಂದು ಲಾಕ್ಡೌನ್ದಿಂದ ಪರಿಶಿಷ್ಟ ಪಂಗಡದ ವರ್ಗದವರಾಗಿರುವ ನಾವು ನಮ್ಮ ಮೂಲ ಕಸುಬು ಬಿದರಿನ ಬುಟ್ಟಿ ಮತ್ತು ಮರಗಳು ಸೇರಿದಂತೆ ಇನ್ನಿತರ ಬಿದರಿನ ವಸ್ತುಗಳನ್ನು …
Read More »ನಿಪ್ಪಾಣಿಯಲ್ಲಿರುವ ನೂತನ ಪ್ರವಾಸಿ ಮಂದಿರದ ಉದ್ಘಾಟನಾ ಸಮಾರಂಭ
ಬೆಳಗಾವಿ: ನಿಯಮಗಳನ್ನು ಪಾಲಿಸಿ ಜನರಿಗೆ ಮಾದರಿಯಾಗಬೇಕಿರುವ ನಮ್ಮ ನಾಯಕರು ನಿಯಮಗಳನ್ನು ಮುರಿಯುತ್ತಿದ್ದಾರೆ. ಇಂಥದ್ದೇ ಒಂದು ಘಟನೆ ಜಿಲ್ಲೆಯ ನಿಪ್ಪಾಣಿಯಲ್ಲಿ ನಡೆದಿದೆ. ನಿಪ್ಪಾಣಿಯಲ್ಲಿರುವ ನೂತನ ಪ್ರವಾಸಿ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಇಂದು ಉಪಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ ಹಾಗೂ ಗೋವಿಂದ ಕಾರಜೋಳ ಪಾಲ್ಗೊಂಡಿದ್ದರು. ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಸಹ ಉಪಸ್ಥಿತರಿದ್ದರು. ಇದೇ ವೇಳೆ ಸಮಾರಂಭದಲ್ಲಿ ಅಧಿಕಾರಿಗಳು ಸೇರಿದಂತೆ 100ಕ್ಕೂ ಹೆಚ್ಚು ಜನರು ಸಹ ಭಾಗಿಯಾಗಿದ್ದರು. ಜೊತೆಗೆ, ಸಾಮಾಜಿಕ …
Read More »ಕೋರ್ಟ್ ಆದೇಶಿಸಿದರೂ ಕೆರೆ ಒತ್ತುವರಿ ತೆರವುಗೊಳಿಸದ ಅಧಿಕಾರಿಗಳು
ನೆಲಮಂಗಲ: ಬೆಂಗಳೂರು ಹೊರವಲಯ ನೆಲಮಂಗಲ ಸಮೀಪದ ದಾಸನಪುರ ಹೋಬಳಿಯ ಮಾದಾವರ ಗ್ರಾಮದ ಕೆರೆ ಒತ್ತುವರಿ ಜಾಗವನ್ನು ತೆರವುಗೊಳಿಸುವಂತೆ ಈಗಾಗಲೇ ಲೋಕಾಯಕ್ತ ಕೋರ್ಟ್ ಅಧಿಕಾರಿಗಳಿಗೆ ಆದೇಶ ನೀಡಿದೆ. ಆದರೆ ಅಧಿಕಾರಿಗಳು ತೆರವು ಕಾರ್ಯ ಮಾತ್ರ ಮಾಡದಿರುವುದು ಸಾಕಷ್ಟು ಅನುಮಾನಗಳಿಗೆ ಎಡೆಮಾಡಿದೆ ಎಂದು ದೂರುದಾರ ರಾಮಕೃಷ್ಣಯ್ಯ ಆರೋಪಿಸಿದ್ದಾರೆ. ಮಾದಾವರ ಕೆರೆ ಜಾಗವನ್ನು ಒತ್ತುವರಿ ಮಾಡಿಕೊಂಡಿರುವುದನ್ನು ತೆರವುಗೊಳಿಸುವಂತೆ ಲೋಕಾಯುಕ್ತ ಕೋರ್ಟ್ ಆದೇಶ ನೀಡಿದರೂ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದ ಒತ್ತುವರಿ ತೆರವುಗೊಂಡಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ. …
Read More »ಲಾಕ್ಡೌನ್ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ: ಡಿಸಿಎಂ ಕಾರಜೋಳ
ಚಿಕ್ಕೋಡಿ: ಲಾಕ್ಡೌನ್ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ. ಶನಿವಾರ ಲಾಕ್ಡೌನ್ ಮಾಡುವ ವಿಚಾರ ಜಿಲ್ಲಾಧಿಕಾರಿಗಳ ವಿವೇಚನೆಗೆ ಬಿಡಲಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ್ ಕಾರಜೋಳ ಸ್ಪಷ್ಟಪಡಿಸಿದ್ದಾರೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ಅಂಬೇಡ್ಕರ್ ಭವನ ಹಾಗೂ ನೂತನ ಪ್ರವಾಸಿ ಮಂದಿರ ಉದ್ಘಾಟಿಸಿ, ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನರ ಸುರಕ್ಷತೆಗಾಗಿ ಶನಿವಾರ ಹಾಗೂ ಭಾನುವಾರ ಲಾಕ್ ಮಾಡಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಮದುವೆ ಕಾರ್ಯಕ್ರಮಗಳಿಂದ ಹೆಚ್ಚಿನ ಕೊರೊನಾ ಪ್ರಕರಣ ಬಂದ ಕಾರಣ …
Read More »