ಯಾದಗಿರಿ: ಕಳೆದ ಒಂದು ವಾರದಿಂದ ಯಾದಗಿರಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡ ಹಿನ್ನೆಲೆ ಜುಲೈ 15ರ ರಾತ್ರಿ 8 ಗಂಟೆಯಿಂದ ಜುಲೈ 22ರ ವರೆಗೆ ಒಂದು ವಾರ ಕಠಿಣ ಲಾಕ್ಡೌನ್ ಜಾರಿ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಯಾದಗಿರಿ ಜಿಲ್ಲಾಡಳಿತ ಅಧಿಕೃತ ಆದೇಶ ಹೊರಡಿಸಿದ್ದು, ಜಿಲ್ಲಾಧಿಕಾರಿ ಎಂ.ಕೂರ್ಮರಾವ್ ಕೋವಿಡ್-19 ನಿಯಂತ್ರಣ ವಿಶೇಷ ಅಧಿಕಾರ ಬಳಸಿ ಈ ಆದೇಶ ಹೊರಡಿಸಿದ್ದಾರೆ. ಲಾಕ್ ಡೌನ್ ಸಮಯದಲ್ಲಿ ಅಗತ್ಯ ವಸ್ತುಗಳ …
Read More »Daily Archives: ಜುಲೈ 14, 2020
Big breaking ಡಿಸಿಸಿ ಬ್ಯಾಂಕ್ ಚುನಾವಣೆ ಮುಂದುಡ ಲಾಗಿದೆ..
ರಾಜ್ಯ ಸರ್ಕಾರ ನಿರ್ಧರಿಸಿದ ಪ್ರಕಾರ ಎಲ್ಲ ಸಹಕಾರಿ ಸಂಘಗಳ ಚುನಾವಣೆ ಯನ್ನಾ ರಾಜ್ಯ ಸರ್ಕಾರ ಮುಂದೂಡಿದೆ ಬೆಳಗಾವಿಯ ಪ್ರತಿಷ್ಠಿತ ಬ್ಯಾಂಕ ಗಳಲ್ಲೊಂದಾದ ಬೆಳಗಾವಿ ಡಿ.ಸಿ.ಸಿ. ಬ್ಯಾಂಕ ಚುನಾವಣೆ ಕೂಡ ಸರ್ಕಾರ ಮುಂದೂಡಿದೆ
Read More »ಮಗನ ಅದ್ದೂರಿ ಮದುವೆ ಮಾಡಿದ ಬಿಜೆಪಿ ಮುಖಂಡನ ವಿರುದ್ದ ಎಫ್ ಐ ಆರ್
ಹುಕ್ಕೇರಿ: ಮದುವೆ ಸಮಾರಂಭಗಳಿಗೆ ಸರಕಾರ ನಿಷೇಧ ಹೇರಿದರೂ ಜನ ಮಾತ್ರ ಸಂಭಂದವಿಲ್ಲವೆನೋ ಅನ್ನೊ ಹಾಗೆ ಇದ್ದಾರೆ. ಕೊರೋನಾ ಮಾಹಾಮಾರಿ ಯಿಂದ ಜನ ಸಾವನ್ನಪ್ಪುತ್ತಿದ್ದರು ಜನ ಮಾತ್ರ ಎಚ್ಚೆತ್ತುಕೊಳ್ಳುವ ಲಕ್ಷಣಗಳು ಕಾಣುತ್ತಿಲ್ಲ. ಈಗ ಸರಕಾರದ ನಿಯಮಗಳನ್ನ ಗಾಳಿಗೆ ತೂರಿ ಅದ್ದೂರಿ ಮದುವೆ ಮಾಡಿದ ಬಿಜೆಪಿ ಮುಖಂಡನಿಗೆ ಹುಕ್ಕೇರಿ ಪೊಲೀಸರು ತಕ್ಕ ಶಾಸ್ತಿ ಮಾಡಿದ್ದಾರೆ. ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲಿಸಿದ್ದು ಅದ್ಧೂರಿ ಮದುವೆ ಮಾಡುವ ಮುನ್ನ ಎಚ್ಚರಕೆಯಿಂದ ಇರಿ ಎನ್ನುವ ಸಂದೇಶವನ್ನ …
Read More »ಇಂದು ಸಂಜೆಯಿಂದ ಸ್ಥಬ್ದವಾಗಲಿದೆ ಬೆಂಗಳೂರು………
ಬೆಂಗಳೂರು,ಜು.14- ಬೆಂಗಳೂರು ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಇಂದು ರಾತ್ರಿಯಿಂದ ಒಂದು ವಾರ ಕಾಲ ಜÁರಿಗೆ ಬರಲಿರುವ ಲಾಕ್ಡೌನ್ ಸಂದರ್ಭದಲ್ಲಿ ಬಹುತೇಕ ಎಲ್ಲ ಸೇವೆಗಳು ಬಂದ್ ಆಗಲಿವೆ. ಕೊರೊನಾ ಸೋಂಕು ತಡೆಯುವ ಸಲುವಾಗಿ ಸರ್ಕಾರ ಇಂದು ರಾತ್ರಿ 8ರಿಂದ ಜುಲೈ 22ರ ಬೆಳಗಿನ ಜಾವ 5 ಗಂಟೆವರೆಗೂ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳನ್ನು ಲಾಕ್ಡೌನ್ ಮಾಡಲು ಸರ್ಕಾರ ಈಗಾಗಲೇ ಘೋಷಣೆ ಮಾಡಿದೆ. ಹೀಗಾಗಿ ಇಂದು ಮಧ್ಯಾಹ್ನ 12ರಿಂದಲೇ ದಿನಸಿ …
Read More »ಅರವಿಂದ ಶ್ರೀವಾಸ್ತವ್ ವಾಣಿಜ್ಯ ವಿಭಾಗದಲ್ಲಿ 598 ಅಂಕ ಪಡೆಯುವ ಮೂಲಕ ಟಾಪರ್ ಆಗಿ ಹೊರ ಹೊಮ್ಮಿದ್ದಾರೆ.
ಬೆಂಗಳೂರು: ಮಲ್ಲೇಶ್ವರದ ವಿದ್ಯಾಮಂದಿರ ಪಿಯು ಕಾಲೇಜಿನ ಅರವಿಂದ ಶ್ರೀವಾಸ್ತವ್ ವಾಣಿಜ್ಯ ವಿಭಾಗದಲ್ಲಿ 598 ಅಂಕ ಪಡೆಯುವ ಮೂಲಕ ಟಾಪರ್ ಆಗಿ ಹೊರ ಹೊಮ್ಮಿದ್ದಾರೆ. ಈ ವರ್ಷ ವಾಣಿಜ್ಯ ವಿಭಾಗದ ಪರೀಕ್ಷೆಯನ್ನು ಒಟ್ಟು 2,60,131 ಮಂದಿ ತೆಗೆದುಕೊಂಡಿದ್ದು, 1,70,426 ಮಂದಿ ತೇರ್ಗಡೆಯಾಗುವ ಮೂಲಕ ಶೇ.65.52 ಫಲಿತಾಂಶ ಬಂದಿದೆ. ಮೂರು ವಿಭಾಗದದಲ್ಲಿ ಹೊಸಬರು ಒಟ್ಟು 5,56,267 ಮಂದಿ ಪರೀಕ್ಷೆ ಬರೆದಿದ್ದು, 3,84,947 ಮಂದಿ ತೇರ್ಗಡೆಯಾಗಿದ್ದಾರೆ. ಶೇ.69.20 ಫಲಿತಾಂಶ ಬಂದಿದೆ. ಟಾಪರ್ ಪಟ್ಟಿ 1. …
Read More »ಉಡುಪಿಯ ಅಭಿಜ್ಞಾ ರಾವ್ ಮತ್ತು ಬೆಂಗಳೂರಿನ ಪ್ರೇರಣಾ 600ಕ್ಕೆ 596 ಅಂಕ ಪಡೆಯುವ ಮೂಲಕ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ಟಾಪರ್
ಬೆಂಗಳೂರು: ಉಡುಪಿಯ ಅಭಿಜ್ಞಾ ರಾವ್ ಮತ್ತು ಬೆಂಗಳೂರಿನ ಪ್ರೇರಣಾ 600ಕ್ಕೆ 596 ಅಂಕ ಪಡೆಯುವ ಮೂಲಕ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ಟಾಪರ್ ಆಗಿ ಹೊರ ಹೊಮ್ಮಿದ್ದಾರೆ. ಈ ವರ್ಷ ವಿಜ್ಞಾನ ವಿಭಾಗದ ಪರೀಕ್ಷೆಗೆ 2,16,271 ಮಂದಿ ಹಾಜರಾಗಿದ್ದು, 1,64,794 ಮಂದಿ ಪಾಸ್ ಆಗುವ ಮೂಲಕ ಶೇ.76.2 ಫಲಿತಾಂಶ ದಾಖಲಾಗಿದೆ. ಮೂರು ವಿಭಾಗದದಲ್ಲಿ ಹೊಸಬರು ಒಟ್ಟು 5,56,267 ಮಂದಿ ಪರೀಕ್ಷೆ ಬರೆದಿದ್ದು, 3,84,947 ಮಂದಿ ತೇರ್ಗಡೆಯಾಗಿದ್ದಾರೆ. ಶೇ.69.20 ಫಲಿತಾಂಶ …
Read More »ಬೇರೊಬ್ಬಳೊಂದಿಗೆ ಕಾರಿನಲ್ಲಿದ್ದ ಪತಿಯನ್ನು ಚೇಸ್ ಮಾಡಿ ಹಿಡಿದ ಪತ್ನಿ- ವೈರಲ್ ವಿಡಿಯೋ
ಮುಂಬೈ: ಗೆಳತಿಯೊಂದಿಗೆ ಕಾರಿನಲ್ಲಿ ತೆರಳುತ್ತಿದ್ದ ಪತಿಯನ್ನು ಪತ್ನಿ ಚೇಸ್ ಮಾಡಿ ಹಿಡಿದಿರುವ ಘಟನೆ ಮುಂಬೈ ನಗರದಲ್ಲಿ ನಡೆದಿದೆ. ಮಹಿಳೆಯ ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಮುಂಬೈ ನಗರದಲ್ಲಿ ಪ್ರಮುಖ ರಸ್ತೆಯೊಂದರಲ್ಲಿ ಜುಲೈ 11ರ ಸಂಜೆ ಘಟನೆ ನಡೆದಿದೆ. ಮುಂಬೈ ನಿವಾಸಿಯಾಗಿದ್ದ 30 ವರ್ಷದ ವ್ಯಕ್ತಿ ಕಪ್ಪು ಬಣ್ಣದ ಕಾರಿನಲ್ಲಿ ಮಹಿಳೆಯೊಂದಿಗೆ ಪ್ರಯಾಣಿಸುತ್ತಿದ್ದ. ಈ ಕಾರನ್ನು ಮತ್ತೊಂದು ಕಾರಿನಲ್ಲಿ ಬೆನ್ನತ್ತಿದ್ದ ಆತನ ಪತ್ನಿ ನಡುರಸ್ತೆಯಲ್ಲಿ ಕಾರನ್ನು …
Read More »ಕಲಾ ವಿಭಾಗ ಟಾಪರ್ಸ್ ಲಿಸ್ಟ್ – ಬಳ್ಳಾರಿಯ ಇಂದು ಕಾಲೇಜಿನ ವಿದ್ಯಾರ್ಥಿಗಳಿಗೆ ಮೊದಲ ಮೂರು ಸ್ಥಾನ
ಬೆಂಗಳೂರು: ದ್ವಿತೀಯ ಪಿಯುಸಿಯ ಕಲಾ ವಿಭಾಗದಲ್ಲಿ ಪ್ರತಿ ವರ್ಷದಂತೆ ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕೊಟ್ಟೂರಿನ ಇಂದು ಕಾಲೇಜಿನ ವಿದ್ಯಾರ್ಥಿಗಳು ವಿಶೇಷ ಸಾಧನೆ ಮಾಡಿದ್ದಾರೆ. ಮೊದಲ ಮೂರು ಸ್ಥಾನಗಳನ್ನು ಈ ಕಾಲೇಜಿನ ವಿದ್ಯಾರ್ಥಿಗಳು ಪಡೆದುಕೊಂಡಿದ್ದಾರೆ. ಕಾಮೇಗೌಡ 594 ಅಂಕ ಪಡೆಯುವ ಮೂಲಕ ಮೊದಲ ಸ್ಥಾನ ಪಡೆದರೆ, 591 ಅಂಕ ಪಡೆದ ಸ್ವಾಮಿ ಎರಡನೇ ಸ್ಥಾನ ಪಡೆದಿದ್ದಾರೆ. ರಾಜ್ಯದಲ್ಲಿ ಈ ವರ್ಷ ಕಲಾ ವಿಭಾಗದ ಪರೀಕ್ಷೆಗೆ 1,98,875 ಮಂದಿ ಹಾಜರಾಗಿದ್ದು, 82,077 …
Read More »ಮಗನೊಂದಿಗೆ ಬೋಟಿನಲ್ಲಿ ತೆರಳಿದ್ದ ನಟಿ- 6 ದಿನಗಳ ನಂತ್ರ ಶವವಾಗಿ ಪತ್ತೆ
ಲಾಸ್ ಏಂಜಲೀಸ್: ಕ್ಯಾಲಿಫೋರ್ನಿಯಾದ ಕಣಿವೆಯಲ್ಲಿ ಮಗನೊಂದಿಗೆ ಬೋಟಿನಲ್ಲಿ ಹೋಗಿದ್ದಾಗ ನಾಪತ್ತೆಯಾಗಿದ್ದ ನಟಿ ಶವವಾಗಿ ಪತ್ತೆಯಾಗಿದ್ದಾರೆ. ಹಾಲಿವುಡ್ನ ನಟಿ ನಯಾ ರಿವೇರಾ ಮೃತದೇಹ ಪತ್ತೆಯಾಗಿದೆ. ಕ್ಯಾಲಿಫೋರ್ನಿಯಾದ ಕಣಿವೆಯಲ್ಲಿ ನಾಪತ್ತೆಯಾಗಿದ್ದರು. ಆದರೆ ಆರು ದಿನಗಳ ನಂತರ ಸೋಮವಾರ ರಿವೇರಾ ಶವವಾಗಿ ಪತ್ತೆಯಾಗಿದ್ದಾರೆ ಎಂದು ಯುಎಸ್ ಅಧಿಕಾರಿಗಳು ಹೇಳಿದ್ದಾರೆ. ನಟಿ ನಯಾ ರಿವೇರಾ ಕಳೆದ ವಾರ ತಮ್ಮ ನಾಲ್ಕು ವರ್ಷದ ಮಗನೊಂದಿಗೆ ಬೋಟಿನಲ್ಲಿ ಹೋಗಿದ್ದ ವೇಳೆ ಬೋಟ್ ಮಗುಚಿ ಮುಳುಗಿದ್ದರು. ಸದ್ಯಕ್ಕೆ ರಿವೇರಾ ಅವರ …
Read More »ಹಲವಾರು ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯಾದ್ಯಂತ ಆಶಾ ಕಾರ್ಯಕರ್ತರು ಪ್ರತಿಭಟನೆ
ಮೂಡಲಗಿ : ಹಲವಾರು ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯಾದ್ಯಂತ ಆಶಾ ಕಾರ್ಯಕರ್ತರು ಪ್ರತಿಭಟನೆ ಹಮ್ಮಿಕೊಂಡಿದ್ದು ಅದೇ ಪ್ರಕಾರ ಸ್ಥಳೀಯ ಆಶಾ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ತಹಸಿಲ್ದಾರ್ ಮತ್ತು ಪುರಸಭೆ ಮುಖ್ಯಾಧಿಕಾರಿಗಳು ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು. ಸೋಮವಾರದಂದು ಸಲ್ಲಿಸಿದ ಮನವಿ ಪತ್ರದಲ್ಲಿ ಈಗಾಗಲೇ ತಿಳಿಸಿದಂತೆ ಇದೇ ಜುಲೈ 10 ರಿಂದ ಆರೋಗ್ಯಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಬೇಡಿಕೆಗಳು ಮಾಸಿಕ 12 ಸಾವಿರ ರೂಗಳ ಗೌರವ ಖಾತರಿಪಡಿಸಬೇಕು.ಕೋವಿಡ 19 ವಿರುದ್ಧ ಹೋರಾಟದಲ್ಲಿ ಅಗತ್ಯ …
Read More »
Laxmi News 24×7