ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಸೋಂಕಿತರ ಸಂಖ್ಯೆ ಸಾವಿರ ದಾಟಿದರೆ ಮತ್ತೆ ಲಾಕ್ಡೌನ್ ಮಾಡಬೇಕಾಗುತ್ತದೆ ಎಂದು 15 ದಿನಗಳ ಹಿಂದೆಯೇ ಕೊರೊನಾ ತಜ್ಞರು ಸರ್ಕಾರಕ್ಕೆ ಸಲಹೆ ನೀಡಿದ್ದರು. ಈಗಲೂ ಕೂಡ ತಜ್ಞರು ಸರ್ಕಾರಕ್ಕೆ ಸಲಹೆ ನೀಡಿದ್ದು, ತಕ್ಷಣಕ್ಕೆ ಲಾಕ್ಡೌನ್ ತೆರವು ಬೇಡ ಬೇಡ ವಿಸ್ತರಿಸಿ ಎಂದಿದ್ದಾರೆ. ತಜ್ಞರ ಸಲಹೆ ಏನು? ದಿನದ ಸೋಂಕಿತರ ಸಂಖ್ಯೆ 2 ಸಾವಿರ ದಾಟಿದೆ. ಇಂತಹ ಸಂದರ್ಭಗಳಲ್ಲಿ ಮೈಮರೆಯಬಾರದು. ಈಗ ಲಾಕ್ಡೌನ್ ತೆರವು ಮಾಡಿದರೆ ಜುಲೈ ಅಂತ್ಯದಲ್ಲಿ ಕೇಸ್ …
Read More »Daily Archives: ಜುಲೈ 17, 2020
ರಾಯಚೂರಿನಲ್ಲಿ ಲಾಕ್ಡೌನ್ ಬಿಗಿ- ಶಾಸಕರ ಕಾರನ್ನೂ ವಾಪಸ್ ಕಳುಹಿಸಿದ ಪೊಲೀಸರು
ರಾಯಚೂರು: ಜಿಲ್ಲೆಯ ರಾಯಚೂರು ಹಾಗೂ ಸಿಂಧನೂರು ನಗರಗಳ 3ನೇ ದಿನದ ಲಾಕ್ಡೌನ್ನಲ್ಲೂ ಜನ ಯಾವುದೇ ಭೀತಿಯಿಲ್ಲದೆ ರಸ್ತೆಗಿಳಿಯುತ್ತಿದ್ದಾರೆ. ಜಿಲ್ಲೆಯಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಎರಡು ನಗರಗಳನ್ನು ಒಂದು ವಾರ ಕಾಲ ಲಾಕ್ಡೌನ್ ಮಾಡಲಾಗಿದೆ. ಅನಗತ್ಯವಾಗಿ ಜನ ರಸ್ತೆಗೆ ಇಳಿಯುತ್ತಲೇ ಇದ್ದಾರೆ. ಹೀಗಾಗಿ ಲಾಕ್ಡೌನ್ ಬಿಗಿಗೊಳಿಸಲು ಪೋಲಿಸರು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಲಾಕ್ಡೌನ್ ಹಿನ್ನೆಲೆ ಶಾಸಕರ ಕಾರನ್ನು ಸಹ ವಾಪಸ್ ಕಳುಹಿಸಿ ಪೊಲೀಸ್ ಸಿಬ್ಬಂದಿ ಕರ್ತವ್ಯ ನಿಷ್ಠೆ …
Read More »ಬೆಳಗಾವಿಯಲ್ಲಿ 95 ಜನರಿಗೆ ಸೋಂಕು ಪತ್ತೆಯಾಗಿದೆ.
ಬೆಂಗಳೂರು – ರಾಜ್ಯದಲ್ಲಿ ಇಂದು 3693 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಬೆಳಗಾವಿಯಲ್ಲಿ 95 ಜನರಿಗೆ ಸೋಂಕು ಪತ್ತೆಯಾಗಿದೆ. ಬೆಂಗಳೂರಿನಲ್ಲಿ 2208, ಧಾರವಾಡದಲ್ಲಿ 157, ಬಳ್ಳಾರಿ 133, ವಿಜಯಪುರ 118, ಮೈಸೂರು 93, ಕಲಬುರಗಿ 89, ಉಡುಪಿ 80, ಉತ್ತರ ಕನ್ನಡ 75 ಜನರಿಗೆ ಸೋಂಕು ಪತ್ತೆಯಾಗಿದೆ.
Read More »ಖಾನಾಪುರದ ಈ ಹೋಟೆಲ್ ನಲ್ಲಿ ಯಾರಾದ್ರೂ ತಿಂಡಿ ತಿಂದ್ರೆ ಪರೀಕ್ಷೆ ಮಾಡಿಸಿಕೊಳ್ಳಿ
ಖಾನಾಪುರ – : ಖಾನಾಪುರ ತಾಲೂಕು ಇಲ್ಲಿಯವರೆಗೆ ಕೊರೋನಾ ರಹಿತವಾಗಿ ಗುರುತಿಸಿಕೊಂಡಿತ್ತು. ತಾಲೂಕಿನಲ್ಲಿ ಕೋವಿಡ್-೧೯ ಗೆ ಮೊದಲ ಬಲಿಯಾಗಿದೆ. ಪಟ್ಟಣದ ರೇಣುಕಾ ಹೊಟೇಲ್ ಉದ್ಯಮಿ ೩ ದಿನಗಳ ಹಿಂದೆ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಹೆದ್ದಾರಿಗೆ ಹೊಂದಿಕೊಂಡಿರುವ ಹೊಟೆಲನ್ನು ಸೀಲಡೌನ್ ಮಾಡಲಾಗಿದೆ. ಶಾಸಕಿ ಡಾ.ಅಂಜಲಿ ನಿಂಬಾಳಕರ, ತಹಶೀಲದಾರ ರೇಷ್ಮಾ ತಾಳಿಕೋಟೆ, ಪಂ.ಪ.ಮುಖ್ಯಾಧಿಕಾರಿ ವಿವೇಕ ಬನ್ನೆ, ಪೋಲಿಸ್ ಅಧಿಕಾರಿಗಳು, ಡಾ.ನಾಂದ್ರೆ , ಸರ್ವ ಪಕ್ಷಗಳ ಮುಖಂಡರು ಸೇರಿ ಹೊಟೇಲ್ …
Read More »ಲಾಕಡೌನ್ ಜಾರಿಯಲ್ಲಿದ್ದರೂ ಜನಜೀವನಕ್ಕೆ ಎಂದಿನಂತೆಯೇ ಇದೆ.
ಗೋಕಾಕದಲ್ಲಿ ಲಾಕಡೌನ್ ಜಾರಿಯಲ್ಲಿದ್ದರೂ ಜನಜೀವನಕ್ಕೆ ಎಂದಿನಂತೆಯೇ ಇದೆ. ಲಾಕಡೌನ್ ಲೆಕ್ಕಕ್ಕಿಲ್ಲದಂತೆ ಜನ ಓಡಾಡುತ್ತಿದ್ದಾರೆ. ಲಾಕಡೌನ್ ಆದ ಪ್ರದೇಶದಲ್ಲಿ ಹೇಳೊರಿಲ್ಲ,ಕೇಳೊರಿಲ್ಲ ಅನ್ನೋ ಸ್ಥಿತಿ ಇದ ಕೊರೋನಾ ಸೋಂಕು ತಡೆಗೆ ಲಾಕ್ಡೌನ್ ಘೋಷಿಸಲಾಗಿದೆ. ಆದರೆ ಗೋಕಾಕ ಜನತೆ ಲಾಕ್ಡೌನ್ ನಿಯಮಗಳನ್ನು ಉಲ್ಲಂಘಿಸಿ ಹೇಗೆ ಬೇಕೋ ಹಾಗೆ ವರ್ತಿಸುತ್ತಿದ್ದಾರೆ. ಇದೆಲ್ಲ ಗೊತ್ತಿದ್ದರೂ ಗೋಕಾಕ ತಹಸೀಲ್ದಾರ್ ತಲೆ ಕೆಡಿಸಿಕೊಳ್ಳುತ್ತಿಲ್ಲ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡುತ್ತಿಲ್ಲ.ವಸ್ತುಸ್ಥಿತಿಯನ್ನು ಪರಿಶೀಲಿಸುತ್ತಿಲ್ಲ. ಕೊರಾನಾ ಕೇಸ್ಗಳು ಹೆಚ್ಚುತ್ತಿವೆ. ಇದನ್ನು ತಡೆಯಲು ಲಾಕ್ಡೌನ್ ಘೋಷಿಸಲಾಗಿತ್ತು. …
Read More »ಗೋಕಾಕ ನಗರದ ವಾರ್ಡ್ ಗಳಲ್ಲಿ ಸದಸ್ಯರೊಂದಿಗೆ ಕೊರೊನಾ ವಾರಿಯರ್ಸ್ ಗಳು ಜಾಗೃತಿ ಮೂಡಿಸಿದರು.
ಗೋಕಾಕ: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಗೋಕಾಕ ನಗರದ ವಾರ್ಡ್ ಗಳಲ್ಲಿ ಸದಸ್ಯರೊಂದಿಗೆ ಕೊರೊನಾ ವಾರಿಯರ್ಸ್ ಗಳು ಜಾಗೃತಿ ಮೂಡಿಸಿದರು. ನಗರಸಭೆ ಕಂದಾಯ ಅಧಿಕಾರಿ ಎಸ್. ಕೆ. ಹಳ್ಳೂರು, ಆಶಾ ಕಾರ್ಯಕರ್ತೆಯರು ಹಾಗೂ ಪೊಲೀಸ್ ಸಿಬ್ಬಂದಿಗಳು ನಗರದ ಪ್ರತಿಯೊಂದು ವಾರ್ಡ್ ಗೆ ಸದಸ್ಯರೊಂದಿಗೆ ಭೇಟಿ ನೀಡಿ ಜನರಿಗೆ ಕೊರೊನಾ ಸೋಂಕಿನ ಕುರಿತು ಜಾಗೃತಿ ಮೂಡಿಸಿ ಆರೋಗ್ಯ ರಕ್ಷಣೆ ಬಗ್ಗೆ ಮಾಹಿತಿ ನೀಡಿದರು. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಜತೆಗೆ ಕಡ್ಡಾಯವಾಗಿ …
Read More »ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಹೋಂ ಕ್ವಾರಂಟೈನ್
ಬೆಂಗಳೂರು: ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಹೋಂ ಕ್ವಾರಂಟೈನ್ ಆಗಿದ್ದಾರೆ. ಕಾರು ಚಾಲಕನಿಗೆ ಕೊರೊನಾ ಪಾಸಿಟಿವ್ ದೃಢ ಪಟ್ಟ ಹಿನ್ನೆಲೆಯಲ್ಲಿ ಭಾಸ್ಕರ್ ರಾವ್ ಹೋಂ ಕ್ವಾರಂಟೈನ್ನಲ್ಲಿದ್ದಾರೆ. ಭಾಸ್ಕರ್ ರಾವ್ ಕಾರು ಚಾಲಕ ಕೋವಿಡ್ ಪರೀಕ್ಷೆ ಮಾಡಿಸಿದ್ದರು. ಇಂದು ಪಾಸಿಟಿವ್ ಎಂದು ಗೊತ್ತಾದ ಬಳಿಕ ಮನೆಯಲ್ಲೇ ಕ್ವಾರಂಟೈನ್ ಆಗಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಭಾಸ್ಕರ್ ರಾವ್, ಚಾಲಕನಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ 4 ದಿನಗಳ ಕಾಲ …
Read More »ವೃದ್ಧೆ ತಾಯಿಗೆ ಮಗ ಹಾಗೂ ಮೊಮ್ಮಗ ಸೇರಿ ಹಿಗ್ಗಾಮುಗ್ಗಾ ಥಳಿಸಿ ಎತ್ತಿ ಬಿಸಾಡಿದ ಮಗ
ಮಂಗಳೂರು: ವೃದ್ಧೆ ತಾಯಿಗೆ ಮಗ ಹಾಗೂ ಮೊಮ್ಮಗ ಸೇರಿ ಹಿಗ್ಗಾಮುಗ್ಗಾ ಥಳಿಸಿದ ಘಟನೆ ದಕ್ಷಿಣ ಕನ್ನಡದ ಬೆಳ್ತಂಗಡಿಯ ಸವಣಾಲು ಎಂಬಲ್ಲಿ ನಡೆದಿದೆ. ಸವಣಾಲು ಹಲಸಿನಕಟ್ಟೆ ಎಂಬಲ್ಲಿನ ನಿವಾಸಿ ವೃದ್ಧೆ ಅಪ್ಪಿ ಶೆಟ್ಟಿಗೆ ಅವರ ಮಗ ಶ್ರೀನಿವಾಸ ಶೆಟ್ಟಿ ಹಾಗೂ ಮೊಮ್ಮಗ ಪ್ರದೀಪ್ ಶೆಟ್ಟಿ ಕಂಠಪೂರ್ತಿ ಕುಡಿದು ಮಲಗಿದಲ್ಲೇ ಮಲಗಿರುವ ಅಪ್ಪಿ ಶೆಟ್ಟಿಯವರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ ಎತ್ತಿ ಬಿಸಾಡಿದ್ದಾರೆ.ಈ ದೃಶ್ಯವನ್ನು ಅಲ್ಲೇ ಇದ್ದ ಇನ್ನೋರ್ವ ಮೊಮ್ಮಗ ಮೊಬೈಲ್ನಲ್ಲಿ ಚಿತ್ರೀಕರಿಸಿದ್ದಾರೆ. …
Read More »ನಿರ್ಲಕ್ಷಿಸಿದರೆ ಭಾರತದಲ್ಲಿ 20 ಲಕ್ಷಕ್ಕೂ ಅಧಿಕ ಮಂದಿಗೆ ಕೊರೊನಾ : ರಾಹುಲ್ ಎಚ್ಚರಿಕೆ
ನವದೆಹಲಿ,ಜು.17- ಕೊರೊನಾ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದಲಿ ಆಗಷ್ಟ್ 10 ರ ವೇಳೆಗೆ ದೇಶದಲ್ಲಿ ಕೊರೊನಾ ಪೀಡಿತರ ಸಂಖ್ಯೆ 20 ಲಕ್ಷಕ್ಕೆ ಏರಿಕೆಯಾಗಲಿದೆ ಎಂದು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ಗಾಂಧಿ ಎಚ್ಚರಿಕೆ ನೀಡಿದ್ದಾರೆ. ಕೊರೊನಾ ನಿಯಂತ್ರಣದಲ್ಲಿ ಕೇಂದ್ರ ಸರ್ಕಾರ ಎಡವಿರುವುದರಿಂದ ಈಗಾಗಲೆ ದೇಶದಲ್ಲಿ ಸೋಂಕಿತರ ಸಂಖ್ಯೆ 10 ಲಕ್ಷಕ್ಕೆ ಏರಿಕೆಯಾಗಿದೆ. ಇದೇ ಧೋರಣೆ ಮುಂದುವರೆಸಿದರೆ ಮುಂದಿನ ದಿನಗಳಲ್ಲಿ ಸೋಂಕಿತರ ಸಂಖ್ಯೆ 20 ಲಕ್ಷಕ್ಕೂ ಹೆಚ್ಚು ಜನರಿಗೆ …
Read More »ಇಂದು ಸಂಜೆಯಿಂದ ಸೋಮವಾರದ ಬೆಳಗ್ಗೆವರೆಗೆ ಕೊಡಗು ಸಂಪೂರ್ಣ ಲಾಕ್ಡೌನ್
ಮಡಿಕೇರಿ: ಇಂದು ಸಂಜೆಯಿಂದ ಸೋಮವಾರದ ಬೆಳಗ್ಗೆವರೆಗೆ ಕೊಡಗಿನಲ್ಲಿ ಸಂಪೂರ್ಣವಾಗಿ ಲಾಕ್ಡೌನ್ ಮಾಡುವುದಾಗಿ ಕೊಡಗಿನ ಜಿಲ್ಲಾಧಿಕಾರಿ ಅನೀಸ್ ಕೆ.ಜಾಯ್ ತಿಳಿಸಿದ್ದಾರೆ. ಜಿಲ್ಲೆಗೆ ವಾರಾಂತ್ಯದಲ್ಲಿ ಹೊರಗಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಸೇರಿದಂತೆ ಬೇರೆ ಬೇರೆ ಕಡೆಗಳಿಂದ ಜನರು ಬರುತ್ತಿದ್ದಾರೆ. ಅಲ್ಲದೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಉಲ್ಬಣಿಸುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು ಸಂಜೆಯಿಂದ ಸೋಮವಾರದವರೆಗೆ ಜಿಲ್ಲಾ ಮಟ್ಟದಲ್ಲಿ ಲಾಕ್ಡೌನ್ ಮಾಡಲು ನಿರ್ಧರಿಸಲಾಗಿದೆ. ತರಕಾರಿ, ಮೆಡಿಕಲ್ ಶಾಪ್ಗಳು, ಪೆಟ್ರೋಲ್ ಬಂಕ್ಗಳು ಸೇರಿದಂತೆ ಕಾರ್ಮಿಕರ ಅನುಕೂಲ …
Read More »