Breaking News

Daily Archives: ಜುಲೈ 28, 2020

ಅಸ್ಸಾಂ ಮತ್ತು ಬಿಹಾರದಲ್ಲಿ ಪ್ರವಾಹದಿಂದ ಸುಮಾರು 46ಲಕ್ಷಕ್ಕೂ ಹೆಚ್ಚು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಗುವಾಹಟಿ/ಪಟ್ನಾ : ಅಸ್ಸಾಂ ಮತ್ತು ಬಿಹಾರದಲ್ಲಿ ಪ್ರವಾಹದಿಂದ ಸುಮಾರು 46ಲಕ್ಷಕ್ಕೂ ಹೆಚ್ಚು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಕೊಂಚ ಸುಧಾರಿಸಿದೆ. 22 ಜಿಲ್ಲೆಗಳ 22.34 ಲಕ್ಷ ಜನ ಪ್ರವಾಹದಿಂದ ಬಾಧಿತರಾಗಿದ್ದು, ಸೋಮವಾರ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಯು ಗೋಲಾಘಾಟ್‌ ಜಿಲ್ಲೆಯ ಬೋಕಾಖಾಟ್‌ನಲ್ಲಿ ನೆಲೆಸಿದ್ದರು. ಇದರೊಂದಿಗೆ ಅಸ್ಸಾಂನಲ್ಲಿ ಪ್ರಕೃತಿ ವಿಕೋಪದಿಂದ ಸತ್ತವರ ಸಂಖ್ಯೆಯು 129ಕ್ಕೆ ಏರಿಕೆಯಾಗಿದೆ ಎಂದು ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು (ಎಎಸ್‌ಡಿಎಂಎ) ತಿಳಿಸಿದೆ. …

Read More »

ಚಿಕಿತ್ಸೆಗೆ ತಡ ಮಾಡಿದ ಖಾಸಗಿ ಆಸ್ಪತ್ರೆ ವಿರುದ್ಧ ಕ್ರಮ: ಸುಧಾಕರ್

ಬೆಂಗಳೂರು: ನಟಿ ಸುಧಾರಣಿ ಅವರಿಗೆ ಚಿಕಿತ್ಸೆ ನೀಡಲು ತಡಮಾಡಿದ ಶೇಷಾದ್ರಿಪುರಂ ಅಪೊಲೊ ಆಸ್ಪತ್ರೆ ವಿರುದ್ಧ ಕ್ರಮವಹಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ. ‘ನಟಿ ಸುಧಾರಣಿ ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ಬಂದರೂ ಚಿಕಿತ್ಸೆಗೆ ತಡಮಾಡಿದ್ದಾರೆ ಎಂಬ ಸುದ್ದಿ ನೋಡಿದೆ. ಅವರಷ್ಟೇ ಅಲ್ಲ, ಯಾರೊಬ್ಬರೂ ಚಿಕಿತ್ಸೆ ಸಿಗದೆ ಪರದಾಡಬಾರದು’ ಎಂದು ಸಚಿವರು ಹೇಳಿದ್ದಾರೆ. ಸುಧಾಕರ್ ಅವರ ಆಪ್ತ ಸಹಾಯಕನಿಗೆ ಕೊರೊನಾ ಸೋಂಕು ತಗುಲಿದ್ದು ಅವರು ಮತ್ತೊಮ್ಮೆ ಕ್ವಾರಂಟೈನ್ ಆಗಬೇಕಿದೆ ಎಂಬ …

Read More »

ಆಗಸ್ಟ್ 1 ರಿಂದ ಕಾರ್, ಬೈಕ್ ಕೊಳ್ಳುವವರಿಗೆ ಸಿಹಿ ಸುದ್ದಿ

ಆಗಸ್ಟ್ 1 ರಿಂದ ಹೊಸ ಕಾರ್, ದ್ವಿಚಕ್ರ ವಾಹನವನ್ನು ಖರೀದಿಸುವುದು ಸುಲಭವಾಗಲಿದೆ. ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರದ (ಐಆರ್‌ಡಿಎಐ) ಪರಿಣಾಮವಾಗಿ ಹೊಸ ವಾಹನಗಳಿಗೆ ಆನ್-ರೋಡ್ ಬೆಲೆಗಳು ಸ್ವಲ್ಪ ಕಡಿಮೆಯಾಗುತ್ತವೆ. ಏಕೆಂದರೆ ಮೂರು ಅಥವಾ ಐದು ವರ್ಷಗಳವರೆಗೆ ದೀರ್ಘಕಾಲೀನ ಮೋಟಾರು ವಾಹನ ವಿಮೆಯನ್ನು ಕಡ್ಡಾಯಗೊಳಿಸುವ ನಿಯಮವನ್ನು ತೆಗೆದುಹಾಕಲಾಗಿದೆ. ಉದ್ಯಮವು ಈಗ ಹೊಸ ವಾಹನವನ್ನು ಖರೀದಿಸುವಾಗ ಅಗತ್ಯವಾದ ಕಡ್ಡಾಯವಾದ ಒಂದು ವರ್ಷದ, ಸ್ವಂತ-ಹಾನಿ ವಿಮಾ ರಕ್ಷಣೆಗೆ ಮರಳಿದೆ. ಹೊಸ ವಾಹನ ಮಾಲೀಕರು …

Read More »

ತಮಿಳುನಾಡಿನ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ ಅಣ್ಣಾಮಲೈ ಸಂದರ್ಶನ

ಚೆನ್ನೈ: ಮಾಜಿ ಐಪಿಎಸ್​ ಅಧಿಕಾರಿ ಅಣ್ಣಾಮಲೈ ರಾಜಕೀಯ ಸೇರುವುದಂತೂ ಪಕ್ಕಾ ಆಗಿದೆ. ಅದಕ್ಕೂ ಮುನ್ನ ತನ್ನೂರು ಕರೂರಿನಲ್ಲಿ ಜನರೊಂದಿಗೆ ಬೆರೆತು ವಿವಿಧ ಚಟುವಟಿಕಗೆಳಲ್ಲಿ ಅವರು ತೊಡಗಿಕೊಂಡಿದ್ದಾರೆ. ರೈತರ ಕಲ್ಯಾಣಕ್ಕಾಗಿ ಯೋಜನೆಗಳನ್ನು ರೂಪಿಸಿದ್ದಾರೆ. ಇತ್ತೀಚೆಗೆ ತಮಿಳು ವಾಹಿನಿಯೊಂದಕ್ಕೆ ಅವರ ನೀಡಿರುವ ಸಂದರ್ಶನ ತಮಿಳುನಾಡಿನ ರಾಜಕೀಯದಲ್ಲಿಯೇ ಸಂಚಲನ ಸೃಷ್ಟಿಸಿದೆ. ಪ್ರಧಾನಿ ನರೇಂದ್ರ ಮೋದಿ ಕೈಗೊಂಡ ಅಪಮೌಲ್ಯೀಕರಣವನ್ನು ಶ್ಲಾಘಿಸಿದ್ದಾರೆ. ಪ್ರಧಾನಿ ಕಚೇರಿಯನ್ನು ಸಾರ್ವಜನಿಕರ ಸಂಪರ್ಕಕಕ್ಕೂ ಲಭ್ಯವಾಗುವಂತೆ ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮೋದಿ ಆಡಳಿತವನ್ನು ಮೆಚ್ಚಿದ್ದು …

Read More »

ಅಸಮಾಧಾನ ಸ್ಫೋಟ: ಇಲ್ಲದನ್ನ ಮೈಮೇಲೆ ಎಳೆದುಕೊಂಡ ಸಿಎಂ, ಕಟೀಲ್‌ ಫಜೀತಿ

ಬೆಂಗಳೂರು: ಸರ್ಕಾರಕ್ಕೆ ಒಂದು ವರ್ಷ ತುಂಬಿದ ಖುಷಿಯಲ್ಲಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಪಕ್ಷದ ಶಾಸಕರುಗಳಿಗೆ ನಿಗಮ ಮಂಡಳಿ ಗಿಫ್ಟ್ ಕೊಟ್ಟಿದ್ದೇ ತಡ ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟವಾಗಿದೆ. ಹೌದು… ಸಿಎಂ ಯಡಿಯೂರಪ್ಪ ಭಿನ್ನಮತೀಯ ಶಾಸಕರನ್ನು ಓಲೈಸುವ ಸಂಬಂಧ 24 ಶಾಸಕರಿಗೆ ನಿಗಮ-ಮಂಡಳಿ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಿದ್ದರು.ಈ ಮೂಲಕ ಭಿನ್ನಮತ ಶಮನದ ತಂತ್ರಗಾರಿಕೆ ಅನುಸರಿಸಿದ್ದರು. ಆದ್ರೆ, ನಿಗಮ ಮಂಡಳಿ ತಂತ್ರಗಾರಿಕೆ ವರ್ಕ್ ಔಟ್ ಆದಂತೆ ಕಾಣಿಸುತ್ತಿಲ್ಲ. ಆಕಾಂಕ್ಷಿಗಳಾಗಿದ್ದವರಿಗೆ ನಿಗಮ …

Read More »

ಗೋಕಾಕ ತಾಲೂಕಿನಲ್ಲಿ ಕೊರೋನಾದ ಅಲೆ ಜೋರಾಗಿದೆ

ಗೋಕಾಕ: ನಿನ್ನೇ ಸಂಜೆ ಮತ್ತು ಇವತ್ತು ಸೇರಿ   ಕೊರೋನಾ ಒಟ್ಟು 19 ಜನರಿಗೆ ತಗುಲಿದೆ. ಸೋಮವಾರ ಸಂಜೆ ಯಿಂದ   ಮಂಗಳವಾರ ಮುಂಜಾನೆವರೆಗೆ 19 ಜನರಿಗೆ ಕೊರೋನಾ ಸೋಂಕು ದೃಡಪಟ್ಟಿದೆ. ನಗರದ ಹೆರಿಗೆ ತಜ್ಞರೊಬ್ಬರು ಮತ್ತು ಆಸ್ಪತ್ರೆ ಗ್ರೂಪ್ ಡಿ  ಸೇರಿದಂತೆ 9 ಜನರಿಗೆ , ಚಿಕ್ಕನಂದಿ -2 , ಕೌಜಲಗಿ -1 , ಕುಲಗೋಡ -1, ಮಮದಾಪೂರ -1, ರಾಜಾಪೂರ – 1, ಘಟಪ್ರಭಾ -1, ನಲ್ಲಾನಟ್ಟಿ – 2, …

Read More »

ಸ್ನಾನ ಮಾಡುವಾಗಲೇ ಜಾರಿ ಬಿದ್ದು ಮೃತಪಟ್ಟ ಯುವತಿ, ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ಬೆಚ್ಚಿ ಬೀಳಿಸುವ ರಹಸ್ಯ

ಚೆನ್ನೈ: ಪ್ರಿಯಕರನೊಂದಿಗೆ ಪುತ್ರಿ ಪರಾರಿಯಾಗುತ್ತಾಳೆ ಎಂದು ಭಾವಿಸಿದ ತಂದೆಯೇ ಪುತ್ರಿಯನ್ನು ಕೊಲೆ ಮಾಡಿದ ಘಟನೆ ತಮಿಳುನಾಡಿನ ಕಾಂಚೀಪುರಂ ಜಿಲ್ಲೆಯಲ್ಲಿ ನಡೆದಿದೆ. ಬಾಲಾಜಿ ಎಂಬಾತನೇ ಕೊಲೆ ಆರೋಪಿಯಾಗಿದ್ದಾನೆ. ಈತನ ಪುತ್ರಿ ಮೂರು ದಿನಗಳ ಹಿಂದೆ ಸ್ನಾನ ಮಾಡುವ ವೇಳೆ ಜಾರಿ ಬಿದ್ದು ಸಾವನ್ನಪ್ಪಿದ್ದಾಳೆ ಎಂದು ಹೇಳಲಾಗಿತ್ತು. ಗ್ರಾಮಸ್ಥರು ಅದನ್ನೇ ನಂಬಿದ್ದರು. ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬದವರಿಗೆ ನೀಡಿದ್ದು ಅಂತ್ಯಕ್ರಿಯೆ ನೆರವೇರಿಸಲಾಗಿತ್ತು. ಮರಣೋತ್ತರ ಪರೀಕ್ಷೆ ವರದಿಯಲ್ಲಿ ಕತ್ತು ಹಿಸುಕಿ ಕೊಲೆ ಮಾಡಿರುವುದು …

Read More »

ಹೆರಿಗೆ ಆಸ್ಪತ್ರೆ ವೈದ್ಯರ ಎಡವಟ್ಟಿಗೆ ಇಡೀ ಗ್ರಾಮಕ್ಕೆ ಗಂಡಾಂತರ.. ಎಲ್ಲಿ?

ಬೆಳಗಾವಿ: ಚಿಕ್ಕೋಡಿ ಹೆರಿಗೆ ಆಸ್ಪತ್ರೆಯ ಸಿಬ್ಬಂದಿಯಿಂದ ಆದ ಮಹಾ ಎಡವಟ್ಟಿಗೆ ಇಡೀ ಗ್ರಾಮವೊಂದು ಆತಂಕಕ್ಕೆ ಒಳಗಾಗಿದೆ. ಬಾಣಂತಿಗೆ ಸೋಂಕು ಇರುವುದನ್ನು ಹೇಳದೇ ಆಸ್ಪತ್ರೆ ಸಿಬ್ಬಂದಿ ಡಿಸ್ಚಾರ್ಜ್‌ ಮಾಡಿದ್ದಾರೆ. ಇದರಿಂದ ಈಗ ಇಡೀ ಬಾವನಸೌಂದತ್ತಿ ಗ್ರಾಮಕ್ಕೆ ಗಂಡಾಂತರ ಎದುರಾಗಿದೆ. ಕಳೆದ ಮೂರು ದಿನಗಳ ಹಿಂದೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಹೆರಿಗೆ ಆಸ್ಪತ್ರೆಯಲ್ಲಿ ಮಹಿಳೆಗೆ ಹೆರಿಗೆಯಾಗಿತ್ತು. ಹೆರಿಗೆಯಾದ ಬಳಿಕ ಬಾಣಂತಿಗೆ ಸೋಂಕಿರುವುದು ಹೇಳದೆ ವೈದ್ಯರು ಆಕೆಯನ್ನು ಮನೆಗೆ ಕಳುಹಿಸಿದ್ದರು. ನಿನ್ನೆ ಸಂಜೆ ಗ್ರಾಮವನ್ನ …

Read More »

ಬೆಳಗಾವಿ; ತವರಿಗೆ ಹೋದ ಪತ್ನಿ; ಇಬ್ಬರು ಮಕ್ಕಳೊಂದಿಗೆ ಪತಿ ಆತ್ಮಹತ್ಯೆ

ಬೆಳಗಾವಿ, : ಪತ್ನಿ ತಮ್ಮನ್ನು ಬಿಟ್ಟು ತವರಿಗೆ ಹೋಗಿದ್ದರಿಂದ ಮನನೊಂದು ಇಬ್ಬರು ಮಕ್ಕಳ ಜೊತೆಗೆ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಾದಗೂಡು ಗ್ರಾಮದಲ್ಲಿ ಈ ಘಟನೆ ನಡೆದಿದೆ. ತಮ್ಮಣ್ಣ ಗಿಡ್ಡಾಳೆ (35) ಎಂಬುವರು ತಮ್ಮ ಮಕ್ಕಳಾದ ಚಿನ್ನು (2), ನಿರಂಜನ್ (10) ಅವರಿಗೆ ವಿಷ ಉಣಿಸಿ ತಾವೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಧಾರವಾಡ; ಉದ್ಯೋಗ ನಷ್ಟ, ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಹೆಂಡತಿ …

Read More »

ಲಕ್ಷ್ಮಣ ಸವದಿಗೆ ನಸೀಬಿದ್ದರೆ ಮುಖ್ಯಮಂತ್ರಿ ಆಗಲಿ: ರಮೇಶ ಜಾರಕಿಹೊಳಿ

ಬೆಳಗಾವಿ: ‘ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೆ ನಸೀಬಿದ್ದರೆ ಮುಖ್ಯಮಂತ್ರಿ ಆಗಲಿ’ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ‘ಮುಂದಿನ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಎಂದು ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ ಅಭಿಯಾನ ನಡೆಸಲಾಗುತ್ತಿದೆಯಲ್ಲಾ’ ಎನ್ನುವ ಪತ್ರಕರ್ತರ ಪ್ರಶ್ನೆಗೆ ಮಂಗಳವಾರ ಇಲ್ಲಿ ಪ್ರತಿಕ್ರಿಯಿಸಿದ ಅವರು, ‘ಅಭಿಯಾನದ ಬಗ್ಗೆ ನನಗೆ ಗೊತ್ತಿಲ್ಲ. ಮುಖ್ಯಮಂತ್ರಿಯಾದರೆ ಆಗಲಿ ಪಾಪ’ ಎಂದರು. ‘ಹೈಕಮಾಂಡ್‌ನವರು ಹಾಗೂ ಮುಖ್ಯಮಂತ್ರಿ ಚರ್ಚಿಸಿ ನಿಗಮ-ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ‌ ಮಾಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹಾಗೂ …

Read More »