Breaking News

Monthly Archives: ಜುಲೈ 2020

ಅನುಷ್ಕಾಳನ್ನು ಭೇಟಿಯಾಗದಿದ್ದರೆ ನಾನು ಬದಲಾಗುತ್ತಿರಲಿಲ್ಲ: ಪತ್ನಿಯನ್ನು ಹಾಡಿಹೊಗಳಿದ ವಿರಾಟ್

ನವದೆಹಲಿ: ಅನುಷ್ಕಾಳನ್ನು ಭೇಟಿಯಾಗದಿದ್ದರೆ ಜೀವನದಲ್ಲಿ ನಾನು ಬದಲಾಗುತ್ತಿರಲಿಲ್ಲ ಎಂದು ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಹೇಳಿದ್ದಾರೆ. ಕೊರೊನಾ ಲಾಕ್‍ಡೌನ್ ನಂತರ ಭಾರತ ಕ್ರಿಕೆಟ್ ತಂಡ ಯಾವುದೇ ಕ್ರಿಕೆಟ್ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ. ಹೀಗಾಗಿ ಮನೆಯಲ್ಲೇ ಉಳಿದಿರುವ ಆಟಗಾರರು ಸಾಮಾಜಿಕ ಜಾಲತಾಣದಲ್ಲಿ ಸಖತ್ ಸಕ್ರಿಯವಾಗಿ ಇದ್ದಾರೆ. ಈಗ ಕನ್ನಡಿಗ ಮಯಾಂಕ್ ಅಗರ್ವಾಲ್ ಅವರು ಜೊತೆ ‘ಓಫನ್ ನೆಟ್ಸ್ ವಿತ್ ಅಗರ್ವಾಲ್’ ಎಂಬ ಕಾರ್ಯಕ್ರಮದಲ್ಲಿ ಮಾತನಾಡಿರುವ ವಿರಾಟ್, ಪತ್ನಿಯನ್ನು ಹಾಡಿಹೊಗಳಿದ್ದಾರೆ …

Read More »

ರೈಲಿನಡಿ ಸಿಲುಕ್ತಿದ್ದ ವ್ಯಕ್ತಿಯನ್ನ ರಕ್ಷಿಸಿದ ಭದ್ರತಾ ಸಿಬ್ಬಂದಿ………..

ಮುಂಬೈ: ರೈಲಿನಡಿ ಸಿಲುಕುತ್ತಿದ್ದ ವ್ಯಕ್ತಿಯನ್ನ ಭದ್ರತಾ ಸಿಬ್ಬಂದಿ ರಕ್ಷಿಸಿರುವ ವಿಡಿಯೋ ವೈರಲ್ ಆಗಿದೆ. ಮುಂಬೈ ಕಲ್ಯಾಣ್ ರೈಲ್ವೇ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಮಂಗಳವಾರ ಮಧ್ಯಾಹ್ನ 52 ವರ್ಷದ ದಿಲೀಪ್ ಮಂಡಗೆ ಎಂಬವರು ಚಲಿಸುತ್ತಿದ್ದ ರೈಲಿನಿಂದ ಹೊರಗೆ ಜಿಗಿಯಲು ಪ್ರಯತ್ನಿಸಿದ್ದರು. ಈ ವೇಳೆ ಆಯತಪ್ಪಿದ ದಿಲೀಪ್ ಅವರನ್ನು ಪ್ಲಾಟ್‍ಫಾರಂನಲ್ಲಿ ಕರ್ತವ್ಯನಿರತ ಭದ್ರತಾ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ದಿಲೀಪ್ ಮಗನೊಂದಿಗೆ ಮುಂಬೈನಿಂದ ಕಯಾಮತಿ ಎಕ್ಸ್ ಪ್ರೆಸ್ ಮೂಲಕ ಮಧ್ಯಪ್ರದೇಶದ ಬುರಹಾನಪುರಕ್ಕೆ ಹೊರಟಿದ್ದರು. …

Read More »

ಕೊರೊನಾ ನಿವಾರಣೆಗೆ ಶಕ್ತಿಸೌಧಕ್ಕೆ ಬರಲಿದೆ ‘ಸೇಫ್ ಪ್ರೋ’ ಹೈಟೆಕ್ ಯಂತ್ರ

ಬೆಂಗಳೂರು,:- ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಶಕ್ತಿಸೌಧದಲ್ಲಿ ಸೇಫ್ ಪ್ರೋ ಎಂಬ ಹೈಟೆಕ್ ಯಂತ್ರವನ್ನು ಅಳವಡಿಸಲಾಗಿದೆ. ಕಳೆದ ತಿಂಗಳು ಮೈಸೂರು ಸಂಸದ ಪ್ರತಾಪ್ ಸಿಂಹ ಅವರು ಮಾಸ್ಕ್ ಧರಿಸಿರಲಿಲ್ಲ ಅನ್ನೋ ಕಾರಣಕ್ಕೆ ವಿಧಾನಸೌಧದ ಪ್ರವೇಶಕ್ಕೆ ಈ ಸಿಬ್ಬಂದಿ ಅನುಮತಿ ನೀಡದ ಘಟನೆ ನಡೆದಿತ್ತು. ಆದರೆ ಈಗ ವಿಧಾನಸೌಧಕ್ಕೆ ಸೇಫ್ ಪೆÇ್ರೀ. ಹೈಟೆಕ್ ಯಂತ್ರವೊಂದು ಬಂದಿದೆ. ವಿಧಾನಸೌಧದ ಪಶ್ಚಿಮ ದ್ವಾರದಲ್ಲಿ ಈ ಹೈಟೆಕ್ ಯಂತ್ರವನ್ನು ಇಡಲಾಗಿದ್ದು, ಇದು …

Read More »

ಕಾಫಿನಾಡ ಏಕೈಕ ಕಾರ್ಖಾನೆಗೆ ಬೀಗ……….

ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿದ್ದ ಕಾಫಿನಾಡ ಏಕೈಕ ಕಾರ್ಖಾನೆ ವಿಜ್ಞಾನ್ ಇಂಡಸ್ಟ್ರೀಸ್ ಲಿಮಿಟೆಡ್‍ಗೆ ಬೀಗ ಬೀಳುವ ಕಾಲ ಸನ್ನಿಹಿತವಾಗಿದ್ದು, ಕಾರ್ಖಾನೆಯನ್ನು ನೆಚ್ಚಿಕೊಂಡು ನಾಲ್ಕೈದು ದಶಕಗಳಿಂದ ಬದುಕು ಕಟ್ಟಿಕೊಂಡಿದ್ದ ಕಾರ್ಮಿಕರ ಪರಿಸ್ಥಿತಿ ಅತಂತ್ರವಾಗಿದೆ. ಪ್ರಸ್ತುತ ಕಾರ್ಖಾನೆಯಲ್ಲಿ 60 ಜನ ಪರ್ಮೆಂಟ್ ಉದ್ಯೋಗಿಗಳು, 12 ಜನ ಟ್ರೈನಿಸ್, 10 ಆಫೀಸರ್ಸ್ ಸೇರಿದಂತೆ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವ 180 ಕಾರ್ಮಿಕರು ಕಾರ್ಖಾನೆಯಿಂದ ಬದುಕು ಕಟ್ಟಿಕೊಂಡಿದ್ದರು. ಆದರೀಗ ಕಾರ್ಖಾನೆಗೆ ಬೀಗ ಬೀಳುತ್ತೆಂದು ನೌಕರರು ಕಂಗಾಲಾಗಿದ್ದಾರೆ. …

Read More »

ಶ್ರೀಗಳೊಬ್ಬರು ಭಕ್ತರು, ಮಠ ದೂರ ಉಳಿದು ಹೊಲಗದ್ದೆಯಲ್ಲಿ ಕುರಿ ಕಾಯತೊಡಗಿದ್ದಾರೆ‌.

ಹಾವೇರಿ : ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಭಕ್ತರ ಹಾಗೂ ತಮ್ಮ ಆರೋಗ್ಯದ ಸುರಕ್ಷತೆಗಾಗಿ ಶ್ರೀಗಳೊಬ್ಬರು ಭಕ್ತರು, ಮಠ ದೂರ ಉಳಿದು ಹೊಲಗದ್ದೆಯಲ್ಲಿ ಕುರಿ ಕಾಯತೊಡಗಿದ್ದಾರೆ‌. ಹೌದು. ಹಾವೇರಿ ಜಿಲ್ಲೆಯ ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿ ಅವರು ಕಳೆದ ಕೆಲ ದಿನಗಳಿಂದ ಮಠ ತೊರೆದು ಕುರಿಗಳನ್ನ ಕಾಯುತ್ತಿದ್ದಾರೆ. ಕೊರೊನಾ ಸಂಕಷ್ಟದಲ್ಲಿ ಕಾಗಿನೆಲೆ ಕನಕ ಗುರುಪೀಠ, ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಬೆಳ್ಳೂಡಿ ಮತ್ತು ಬಳ್ಳಾರಿ ಜಿಲ್ಲೆಯ …

Read More »

C.M. ಆಗ್ತಾರಾ ಲಕ್ಷ್ಮಣ ಸವದಿ ಎಂಬುದಕ್ಕೆ ಅವರೇ ಉತ್ತರ ಕೊಟ್ಟಿದ್ದಾರೆ……..!

ಬೆಂಗಳೂರು: ದೆಹಲಿ ಭೇಟಿ ಕುರಿತು ಸ್ಪಷ್ಟೀಕರಣ ನೀಡಿರುವ ಡಿಸಿಎಂ ಲಕ್ಷಣ ಸವದಿ ನಾವೆಲ್ಲರೂ ಪಕ್ಷಕ್ಕೆ ನಿಷ್ಠರು ಹಾಗೂ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರು.ಅನಗತ್ಯವಾದ ಪ್ರಚಾರ ಬೇಡ ಎಂದು ಅಭಿಮಾನಿಗಳಲ್ಲಿ ಹಾಗೂ ಮಾಧ್ಯಮ ಮಿತ್ರರಲ್ಲಿ ಮನವಿ ಮಾಡಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣಗಳ ಖಾತೆ ಮೂಲಕ ಈ ಕುರಿತು ಬರೆದುಕೊಂಡಿರುವ ಅವರು ನನ್ನ ದೆಹಲಿ ಭೇಟಿಯ ಬಗ್ಗೆ ಅನಗತ್ಯವಾದ ಪ್ರಚಾರ ಬೇಡ ದೆಹಲಿಯಲ್ಲಿ ವರಿಷ್ಠರೊಂದಿಗಿನ ಭೇಟಿ ಪೂರ್ವ ನಿರ್ಧಾರಿತವಾಗಿದ್ದ ಕಾರ್ಯಕ್ರಮ ಅದರ ಬಗ್ಗೆ …

Read More »

ಖಾತೆಯಲ್ಲಿಯ 15 ಕೋಟಿ ಹೋಗಿದ್ದು ಯಾರ ಖಾತೆಗೆ?ಪಂಚ ಸವಾಲುಗಳಿಗೆ ಉತ್ತರ ಬೇಕೆಂದ ಸುಶಾಂತ್ ತಂದೆ

ಮುಂಬೈ/ಪಾಟ್ನಾ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಪ್ರಕರಣ ದಿನದಿಂದ ದಿನ ಜಟಿಲವಾಗುತ್ತಾ ಹೋಗ್ತಿದೆ. ಸುಶಾಂತ್ ತಂದೆ ಕೆಕೆ ಸಿಂಗ್ ನಟಿ ರಿಯಾ ಚಕ್ರವರ್ತಿ ಮತ್ತು ಇಂದ್ರಜಿತ್ ಚಕ್ರವರ್ತಿ ವಿರುದ್ಧ ಗಂಭೀರ ಆರೋಪ ಮಾಡಿದ್ದು, ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕೆಕೆ ಸಿಂಗ್ ದೂರಿನಲ್ಲಿ ತಮಗೆ ಐದು ಪ್ರಶ್ನೆಗಳಿಗೆ ಉತ್ತರ ಬೇಕಂದಿದ್ದಾರೆ. ಪಂಚ ಸವಾಲುಗಳು: 1. 2019ಕ್ಕಿಂತ ಮೊದಲು ನನ್ನ ಮಗನಿಗೆ ಯಾವುದೇ ಸಮಸ್ಯೆ ಇರಲಿಲ್ಲ. ರಿಯಾಳ ಸಂಪರ್ಕಕ್ಕೆ …

Read More »

ಆಕೆ ನನ್ನ ಮಗನಿಗೆ ಓವರ್ ಡೋಸ್ ಮಾತ್ರೆ ನೀಡಿದ್ದಾಳೆ:ಸುಶಾಂತ್ ಸಿಂಗ್ ರಜಪೂತ್ ಅವರ ತಂದೆ

ನವದೆಹಲಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ತಂದೆ ರಿಯಾ ಚಕ್ರವರ್ತಿ ಅವರ ವಿರುದ್ಧ ದೂರು ನೀಡಿದ್ದು, ಆಕೆ ನನ್ನ ಮಗನಿಗೆ ಓವರ್ ಡೋಸ್ ಮಾತ್ರೆ ನೀಡಿದ್ದಾಳೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಸುಶಾಂತ್ ಸಿಂಗ್ ಸಾವನ್ನಪ್ಪಿ ಒಂದು ತಿಂಗಳ ನಂತರ ಅವರ ತಂದೆ ಕೆಕೆ ಸಿಂಗ್ ಅವರು, ಇಂದು ಪೊಲೀಸರಿಗೆ ದೂರು ನೀಡಿದ್ದು, ರಿಯಾ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಜೊತೆಗೆ ಆಕೆ ನನ್ನ ಮಗನನ್ನು ಆತ್ಮಹತ್ಯೆ ಮಾಡಿಕೊಳ್ಳುವಂತೆ …

Read More »

ಪತಿಯೊಬ್ಬ ಪತ್ನಿಯನ್ನು ಕೊಂದು ನಂತರ ಕುತ್ತಿಗೆ ಕೊಯ್ದುಕೊಂಡು ತಾನೂ ಆತ್ಮಹತ್ಯೆಗೆ

ಹೈದರಾಬಾದ್: ಪತಿಯೊಬ್ಬ ಪತ್ನಿಯನ್ನು ಕೊಂದು ನಂತರ ಕುತ್ತಿಗೆ ಕೊಯ್ದುಕೊಂಡು ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ನಡೆದಿದೆ. ಅರುಣಾ (29) ಕೊಲೆಯಾದ ಪತ್ನಿ. ಆರೋಪಿ ಪತಿ ಪ್ರಭಾಕರ್ ರೆಡ್ಡಿ ಆತ್ಮಹತ್ಯೆಗೆ ಯತ್ನಿಸಿದ್ದು, ಸದ್ಯಕ್ಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಪ್ರಭಾಕರ್ ಎಂಟು ವರ್ಷಗಳ ಹಿಂದೆ ಕರ್ನಾಟಕದ ಕೋಲಾರ ಮೂಲದ ಅರುಣಾ ಜೊತೆ ಮದುವೆಯಾಗಿದ್ದನು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಪ್ರಭಾಕರ್ ಕುರಿಗಳನ್ನು ಸಾಕುತ್ತಾ ಕುಟುಂಬವನ್ನು ನೋಡಿಕೊಳ್ಳುತ್ತಿದ್ದನು. ಇತ್ತೀಚೆಗೆ …

Read More »

ಕೊರೊನಾ ಸೋಂಕಿನಿಂದ ಬಿಡುಗಡೆಯಾದ ಬಳಿಕ ಜವಾಬ್ದಾರಿ ಮರೆತ ಸ್ಥಳೀಯ ಪತ್ರಿಕೆ ಪತ್ರಕರ್ತ ಹಾಗೂ ಪೊಲೀಸ್ ಸಿಬ್ಬಂದಿ ಹುಚ್ಚಾಟ

ಬಾಗಲಕೋಟೆ: ಕೊರೊನಾ ಸೋಂಕಿನಿಂದ ಬಿಡುಗಡೆಯಾದ ಬಳಿಕ ಜವಾಬ್ದಾರಿ ಮರೆತ ಸ್ಥಳೀಯ ಪತ್ರಿಕೆ ಪತ್ರಕರ್ತ ಹಾಗೂ ಪೊಲೀಸ್ ಸಿಬ್ಬಂದಿ ಹುಚ್ಚಾಟ ಮೆರೆದ ಘಟನೆ ಬಾಗಲಕೋಟೆ ಜಿಲ್ಲೆ ರಬಕವಿ-ಬನಹಟ್ಟಿ ತಾಲೂಕಿನ ರಾಮಪೂರದಲ್ಲಿ ನಡೆದಿದೆ. ಇಬ್ಬರೂ ಕೊರೊನಾ ಸೋಂಕಿನಿಂದ ಬಿಡುಗಡೆ ಆಗಿದ್ದಕ್ಕೆ ಊರಲ್ಲಿ ಅಭಿಮಾನಿಗಳಿಂದ ಸಂಭ್ರಮ ಎಂಬ ಹುಚ್ಚಾಟ ನಡೆದಿದೆ. ಕೋವಿಡ್‍ನಿಂದ ಗುಣಮುಖ ಆಗಿ ಬಂದಿದ್ದಕ್ಕೆ ಇಬ್ಬರಿಗೆ ಅದ್ಧೂರಿ ಸ್ವಾಗತ ಕೋರಿದ್ದಲ್ಲದೇ ಗುಂಪು ಗುಂಪು ಸೇರಿ ಸಂಭ್ರಮಾಚರಣೆ ಮಾಡಿದ್ದಾರೆ. ಜೊತೆಗೆ ಗಲ್ಲಿಯಲ್ಲಿ ಪಟಾಕಿ ಸಿಡಿಸಿ, …

Read More »