Breaking News

Monthly Archives: ಜುಲೈ 2020

ಕಾಗವಾಡ ತಾಲೂಕಿನ ಮಂಗಸೂಳಿ ಗ್ರಾಮದ ಯೋಧ ಚಿಕಿತ್ಸೆ ಫಲಕಾರಿಯಾಗದೆ ನಿಧನ

ಬೆಳಗಾವಿ/ಚಿಕ್ಕೋಡಿ: ಅಸ್ಸಾಂ ಗಡಿಯಲ್ಲಿ ಭಾರತೀಯ ಸೈನ್ಯದಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಸುನೀಲ ಸದಾಶಿವ ಖಿಲಾರೆ (36) ಮೃತ ಯೋಧ. ಕಾಗವಾಡ ತಾಲೂಕಿನ ಮಂಗಸೂಳಿ ಗ್ರಾಮದವರಾಗಿದ್ದು, ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ಬಳಿಕ ಇವರನ್ನು ಗುವಾಹಾಟಿಯ ಆರ್ಮಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ರಾತ್ರಿ ಸುನೀಲ ಸದಾಶಿವ ಖಿಲಾರೆ ವಿಧಿವಶರಾಗಿದ್ದಾರೆ. ಕಳೆದ 17 ವರ್ಷಗಳಿಂದ ಸೈನಿಕ ಸೇವೆಯಲ್ಲಿದ್ದ ಇವರು ಕೊರೊನಾ ಹೆಮ್ಮಾರಿ ಹಿನ್ನೆಲೆಯಲ್ಲಿ ಕಳೆದ 3 …

Read More »

ಮುಂದೆ ಯುದ್ಧ ಅಂತಹದ್ದೇನು ಜರುಗಲ್ಲ, ಗಾಬರಿಯಾಗುವ ಅವಶ್ಯಕತೆ ಇಲ್ಲ: ಕೋಡಿಮಠ ಶ್ರೀ

ಹಾಸನ: ಮುಂದೆ ಯುದ್ಧ ಅಂತಹದ್ದೇನು ಜರುಗಲ್ಲ, ಗಾಬರಿಯಾಗುವ ಅವಶ್ಯಕತೆ ಇಲ್ಲ ಎಂದು ಕೋಡಿ ಮಠದ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನಲ್ಲಿರುವ ಕೋಡಿಮಠದಲ್ಲಿ ಮಾತನಾಡಿದ ಶ್ರೀಗಳು, ಜಗತ್ತಿನಾದ್ಯಂತ ಪ್ರಸಾರವಾಗಿರುವ ಈ ಮಾರಕ ರೋಗ ಮನುಕುಲಕ್ಕೆ ಕಂಟಕ ಪ್ರಾಯವಾಗಿದೆ. ಇದು ದಿನ ದಿನಕ್ಕೆ ಹೆಚ್ಚುತ್ತಿರುವುದು ಶೋಚನೀಯ ಪ್ರಸಂಗ ಎಂದು ಆತಂಕ ಹೊರಹಾಕಿದರು. ಮನುಷ್ಯ ಸ್ವಾರ್ಥದಿಂದ ತಂದುಕೊಳ್ಳುತ್ತಿರುವ ಈ ರೋಗ ಕೇವಲ ಮನುಕುಲ ಅಲ್ಲದೆ ಪ್ರಾಣಿ, ಪಕ್ಷಿ, ವೃಕ್ಷಗಳ ಮೇಲೆ …

Read More »

ಸಾರಿಗೆ ಸಿಬ್ಬಂದಿ ಕರ್ತವ್ಯ ಪ್ರಜ್ಞೆ- ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರ ತಲುಪಿದ ವಿದ್ಯಾರ್ಥಿಗಳು!

ಕಾರವಾರ: ಗಾಳಿ ಮಳೆಗೆ ದಾರಿಗೆ ಅಡ್ಡಲಾಗಿ ಬಿದ್ದಿದ್ದ ಮರವೊಂದನ್ನು ಸಾರಿಗೆ ಸಿಬ್ಬಂದಿಯೇ ತೆರವುಗೊಳಿಸಿದ್ದು, ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳನ್ನು ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಕ್ಕೆ ತಲುಪುವಂತೆ ಮಾಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಯಾಣ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಗುರುವಾರದಿಂದ ಜಿಲ್ಲೆಯಾದ್ಯಂತ ಗಾಳಿ ಸಹಿತ ಭಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಯಾಣ ಮೂಲಕ ಕುಮಟಾ ತೆರಳುವ ರಸ್ತೆಯಲ್ಲಿ ಬೃಹತ್ ಮರವೊಂದು ಅಡ್ಡಲಾಗಿ ಬಿದ್ದಿತ್ತು. ಈ ವೇಳೆ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಮಕ್ಕಳನ್ನು …

Read More »

ಹಿಂಡಲಗಾ ಕೈದಿಗೆ ಕೊರೊನಾ ಸೋಂಕು……….

ಬೆಳಗಾವಿ: ಹಿಂಡಲಗಾ ಕೈದಿಗೆ ಕೊರೊನಾ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದ್ದು, ಹಿಂಡಲಗಾ ಹಾಗೂ ಕ್ಯಾಂಪ್ ಪೊಲೀಸ್ ಠಾಣೆಯ ಸಿಬ್ಬಂದಿಯಲ್ಲಿ ಆತಂಕ ಶುರುವಾಗಿದೆ. ಈಚೇಗೆ ಕುಖ್ಯಾತ ರೌಡಿಯನ್ನು ಕ್ಯಾಂಪ್ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದರು.  ಬಳಿಕ ಮೂರು ದಿನಗಳ ಹಿಂದೆಷ್ಟೇ ಹಿಂಡಲಗಾ ಜೈಲಿಗೆ ಕಳಿಸಲಾಗಿತ್ತು. ಆದ್ರೆ ಇಂದು ಕೈದಿಗೆ ಕೊರೊನಾ ಸೋಂಕು ಶಂಕೆ ವ್ಯಕ್ತವಾಗಿದೆ. ಇದರಿಂದ ಕ್ಯಾಂಪ್ ಹಾಗೂ ಹಿಂಡಲಗಾ ಪೊಲೀಸ ಸಿಬ್ಬಂದಿಗೆ ಆತಂಕ ಮನೆ ಮಾಡಿದೆ. ಜತೆಗೆ ಹಿಂಡಲಗಾ ಜೈಲಿನಲ್ಲಿ …

Read More »

ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಯೋಧ

ಬೆಳಗಾವಿ: ಯೋಧ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಮೀಪದ ಸಾಂಬ್ರಾದಲ್ಲಿರುವ ಏರ್ ಫೋರ್ಸ್ ನ ಟ್ರೇನಿಂಗ್ ಸ್ಕೂಲ್ ನಲ್ಲಿ ನಡೆದಿದೆ. ಹರಿಯಾಣ ಮೂಲದ ಅಮೀರ್ ಖಾನ್(24) ಆತ್ಮಹತ್ಯೆ  ಮಾಡಿಕೊಂಡ ಯೋಧ. ಇನ್ಸಾಸ್ ರೈಫಲ್‌ನಿಂದ ಗುರುವಾರ ಬೆಳಿಗ್ಗೆ ತಾನೇ ಶೂಟ್ ಮಾಡಿಕೊಂಡಿದ್ದಾರೆ.  ತಕ್ಷಣ ಅಲ್ಲಿನ ಹಿರಿಯ ಅಧಿಕಾರಿಗಳು ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದರು. ಆದ್ರೆ ಚಿಕಿತ್ಸೆಗೂ ಮುನ್ನ ಯೋಧ ಮೃತಪಟ್ಟಿದ್ದಾರೆ. ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More »

ತನ್ನ ಹಳೇ ಶಿಷ್ಯನ ಪರವಾಗಿ ಬ್ಯಾಟಿಂಗ್ ಮಾಡಿದ ಸಿದ್ದು,

ಬೆಂಗಳೂರು: ಸಿಎಂ ಫಂಡ್‍ಗೆ ಬಂದ 290 ಕೋಟಿಯಲ್ಲಿ ಒಂದು ರೂಪಾಯಿಯನ್ನಾದರೂ ಖರ್ಚು ಮಾಡಿದ್ದೀರಾ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸಿಎಂ ಯಡಿಯೂರಪ್ಪನವರಿಗೆ ಪ್ರಶ್ನೆ ಮಾಡಿದ್ದಾರೆ. ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಲಾಕ್‍ಡೌನ್‍ಗಿಂತ ಮುಂಚಿತವಾಗಿ ನಮ್ಮ ದೇಶದಲ್ಲಿ ಕಡಿಮೆ ಸೋಂಕಿತ್ತು. ಕಡಿಮೆ ಸೋಂಕು ಇದ್ದಾಗ ನಮಗೆ ಸಿದ್ಧತೆ ಮಾಡಿಕೊಳ್ಳಲು ದೇಶದಲ್ಲಿ ಮತ್ತು ರಾಜ್ಯದಲ್ಲಿ ಸಮಯ ಇತ್ತು. ಆದರೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ನಿರ್ಲಕ್ಷ್ಯ, ತಪ್ಪು ನಿರ್ಧಾರಗಳಿಂದ …

Read More »

ಟಿಕ್‍ಟಾಕ್‍ನಿಂದ ಪಿಎಂ ಕೇರ್ಸ್ ಫಂಡ್‍ಗೆ 30 ಕೋಟಿ ಬಂದಿದೆ: ಖಾದರ್

ಮಂಗಳೂರು: ಚೀನಾದ 59 ಆ್ಯಪ್ ಗಳನ್ನು ಬ್ಯಾನ್ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಶಾಸಕ ಯು.ಟಿ ಖಾದರ್ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚೀನಾ ಆ್ಯಪ್ ಬಂದ್ ಮಾಡಿದ್ದು ಯಾಕೆ ಎಂದು ಪ್ರಶ್ನಿಸಿದರು. ಚೈನಾಗೆ ಆ್ಯಪ್‍ನಿಂದ ನಷ್ಟ ಇಲ್ಲ. ಭಾರತಕ್ಕೆ ಆ್ಯಪ್ ಬ್ಯಾನ್‍ನಿಂದ ಲಾಭ ಇಲ್ಲ. ಪಿಎಂ ಕೇರ್ಸ್ ಫಂಡ್‍ಗೆ ಟಿಕ್‍ಟಾಕ್‍ನಿಂದ 30 ಕೋಟಿ ಬಂದಿದೆ. ಆ ಹಣವನ್ನು ಸರ್ಕಾರ ವಾಪಸ್ ಕೊಡಲಿ. ಸರ್ಕಾರಕ್ಕೆ …

Read More »

ನಟಿ ರಚಿತಾ ರಾಮ್ ನೋಡಲು ಆಟೋ ಚಾಲಕರೊಬ್ಬರು ಅವರ ಮನೆಯ ಬಳಿಯೇ ಕಾದು ಕುಳಿತ್ತಿದ್ದರು

ಬೆಂಗಳೂರು: ಅಭಿಮಾನಿಗಳು ತಮ್ಮ ನೆಚ್ಚಿನ ನಟ-ನಟಿಯರನ್ನು ನೋಡಲು, ಅವರನ್ನು ಭೇಟಿ ಮಾಡಲು ಕಾತುರದಿಂದ ಕಾಯುತ್ತಿರುತ್ತಾರೆ. ಅದೇ ರೀತಿ ನಟಿ ರಚಿತಾ ರಾಮ್ ನೋಡಲು ಆಟೋ ಚಾಲಕರೊಬ್ಬರು ಅವರ ಮನೆಯ ಬಳಿಯೇ ಕಾದು ಕುಳಿತ್ತಿದ್ದರು. ಅವರ ಅಭಿಮಾನಕ್ಕೆ ಡಿಂಪಲ್ ಕ್ವೀನ್ ರಚಿತಾ ಭಾವುಕರಾಗಿದ್ದಾರೆ. ನಟಿ ರಚಿತಾ ರಾಮ್ ಆಟೋ ಡ್ರೈವರ್ ಅಭಿಮಾನವನ್ನು ಕಂಡು ಭಾವುಕರಾದ ಕ್ಷಣವನ್ನು ಸೋಶಿಯಲ್ ಮೀಡಿಯಾದಲ್ಲಿ ಸುದೀರ್ಘ ಪೋಸ್ಟ್ ಮಾಡುವ ಮೂಲಕ ಹೇಳಿಕೊಂಡಿದ್ದಾರೆ. ಪೋಸ್ಟ್‌ನಲ್ಲಿ ಏನಿದೆ? “ಅಭಿಮಾನಿಗಳೇ ದೇವ್ರು” …

Read More »

ಕೊರೊನಾ ಬರುತ್ತೆ ಕೆಲಸಕ್ಕೆ ಹೋಗ್ಬೇಡ ಅಂದಿದ್ದಕ್ಕೆ ಆಶಾ ಕಾರ್ಯಕರ್ತೆ ಆತ್ಮಹತ್ಯೆ………..

ಬೆಂಗಳೂರು: ಕೊರೊನಾ ಬರುತ್ತೆ ಕೆಲಸಕ್ಕೆ ಹೋಗಬೇಡ ಎಂದು ಅಣ್ಣ ಬೈದಿದ್ದಕ್ಕೆ ಆಶಾ ಕಾರ್ಯಕರ್ತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಸವಿತಾ(27) ನೇಣಿ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಪಾವಗಡ ಮೂಲದ ಸವಿತಾ ನಗರದಲ್ಲಿ ಆಶಾ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದರು. ಯಲಹಂಕದ ಮಾರುತಿ ನಗರದ ಅಣ್ಣನ ಮನೆಯಲ್ಲಿ ವಾಸವಾಗಿದ್ದರು. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಗಂಡನಿಂದ ದೂರವಾಗಿ, ಅಣ್ಣನ ಮನೆಯಲ್ಲೇ ವಾಸಿಸುತ್ತಿದ್ದರು. ಅಣ್ಣನ ಮನೆಯಿಂದಲೇ ಕೆಲಸಕ್ಕೆ ಹೋಗುತ್ತಿದ್ದರು ಎನ್ನಲಾಗಿದೆ. ಕೊರೊನಾ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ …

Read More »

ಜುಲೈ ಮೂರನೇ ವಾರದಲ್ಲಿ ಪಿಯುಸಿ ಫಲಿತಾಂಶ ನಂತರ ಆಗಸ್ಟ್ ಮೊದಲ ವಾರದಲ್ಲಿ ಎಸ್‍ಎಸ್‍ಎಲ್‍ಸಿ ಫಲಿತಾಂಶವನ್ನು ಬಿಡುಗಡೆ

ಬೆಂಗಳೂರು: ಜುಲೈ ಮೂರನೇ ವಾರದಲ್ಲಿ ಪಿಯುಸಿ ಫಲಿತಾಂಶ ನಂತರ ಆಗಸ್ಟ್ ಮೊದಲ ವಾರದಲ್ಲಿ ಎಸ್‍ಎಸ್‍ಎಲ್‍ಸಿ ಫಲಿತಾಂಶವನ್ನು ಬಿಡುಗಡೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಮಾಹಿತಿ ನೀಡಿದ್ದಾರೆ. ಇಂದು ಆನೇಕಲ್ ತಾಲೂಕಿನ ಅತ್ತಿಬೆಲೆ, ಚಂದಾಪುರ, ಸರ್ಜಾಪುರ, ದೊಮ್ಮಸಂದ್ರ ಸೇರಿ ಹಲವು ಎಸ್‍ಎಸ್‍ಎಲ್‍ಸಿ ಪರೀಕ್ಷಾ ಕೇಂದ್ರಗಳಿಗೆ ಭೇಟಿಕೊಟ್ಟ ಸಚಿವರು, ಪರೀಕ್ಷಾ ಕೇಂದ್ರದ ಮುನ್ನೆಚ್ಚರಿಕಾ ಕ್ರಮಗಳನ್ನು ಪರಿಶೀಲಿಸಿದರು. ಜೊತೆಗೆ ಕರ್ತವ್ಯದಲ್ಲಿ ಹಾಜರಿದ್ದ ಸ್ಕೌಟ್ಸ್ ವಿದ್ಯಾರ್ಥಿಗಳ ಜೊತೆ ಸಮಾಲೋಚನೆ ನಡೆಸಿದ್ದಾರೆ. ಇದೇ …

Read More »