ಬೆಂಗಳೂರು: ಲೋಕಸಭಾ ಚುನಾವಣೆ ಬಳಿಕ ಅಜ್ಞಾತದಲ್ಲಿರುವ ಚಂದನವನದ ಪದ್ಮಾವತಿ ಕೆಲವು ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಆಗಿದ್ದಾರೆ. ರಮ್ಯಾ ಅಜ್ಞಾತದಲ್ಲಿದ್ದರೂ ಅಭಿಮಾನಿಗಳು ಮಾತ್ರ ಅವರ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಆದ್ರೆ ಸ್ಯಾಂಡಲ್ವುಡ್ ಕ್ವೀನ್ ದರ್ಶನಕ್ಕಾಗಿ ಎಷ್ಟೋ ಅಭಿಮಾನಿಗಳು ಕಾಯುತ್ತಿದ್ದರು. ಇದೀಗ ಇನ್ಸ್ಟಾಗ್ರಾಂ ಸ್ಟೇಟಸ್ ಡಿಫೆರೆಂಟ್ ಆಗಿ ಪೌಟ್ ಮಾಡಿ ಸೆಲ್ಫಿ ಕ್ಲಿಕ್ಕಿಸಿಕೊಂಡಿರುವ ಫೋಟೋಗಳನ್ನು ರಮ್ಯಾ ಪೋಸ್ಟ್ ಮಾಡಿಕೊಂಡಿದ್ದಾರೆ ಒಟ್ಟು 10 ವಿಭಿನ್ನವಾಗಿ ಪೋಸ್ ನೀಡಿರುವ ರಮ್ಯಾ ಫೋಟೋಗಳು ಸೋಶಿಯಲ್ …
Read More »Monthly Archives: ಜುಲೈ 2020
ಬೈಕ್ ಕಳ್ಳತನ ಮಾಡುತ್ತಿದ್ದ ಮೂವರು ಖದೀಮರನ್ನುಬಂಧಿಸಿದ್ದು, ಸುಮಾರು 18 ಬೈಕ್ ಜಪ್ತಿ ಮಾಡಿದ್ದಾರೆ.
ಬೆಳಗಾವಿ: ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿನ ಬೈಕ್ ಕಳ್ಳತನ ಮಾಡುತ್ತಿದ್ದ ಮೂವರು ಖದೀಮರನ್ನು ಪೊಲೀಸರು ಬಂಧಿಸಿದ್ದು, ಸುಮಾರು 18 ಬೈಕ್ ಜಪ್ತಿ ಮಾಡಿದ್ದಾರೆ. ಮಚ್ಚೆ ಮಾರುತಿ ಗಲ್ಲಿ ನಿವಾಸಿ ಅಕ್ಷಯ ಶಂಕರ ಚೌಗಲೆ, ಬಸವನಕುಡಚಿ ನಿವಾಸಿಗಳಾದ ಮಹೇಶ ಭಾವುಕನ್ನಾ ಅನಗೋಳಕರ, ಆಕಾಶ ಭಾವುಕನ್ನಾ ಅನಗೋಳಕರ ಬಂಧಿತರು. ವಾಘವಾಡೆ ವ್ಯಾಪ್ತಿಯಲ್ಲಿ ಸಂಶಯಾಸ್ಪದವಾಗಿ ಓಡಾಡುತ್ತಿದ್ದ ಮೂವರನ್ನು ಠಾಣೆಗೆ ಕರೆದಂತು ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. 6,50,000 ಮೌಲ್ಯದ 18 ದ್ವಿಚಕ್ರ …
Read More »ತಾಯಿ ತೀರಿದ ದಿನವೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಕೊರೊನಾ ಸೋಂಕಿತೆ
ಚಿಕ್ಕಮಗಳೂರು: ಕೊರೊನಾ ಸೋಂಕಿತೆ ಇಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಖುಷಿ ವಿಚಾರವಾದರೆ, ಬೇಸರದ ಸಂಗತಿ ಎಂಬಂತೆ ಮಹಿಳೆಯ ತಾಯಿ ಕೊರೊನಾಗೆ ಬಲಿಯಾಗಿದ್ದಾರೆ. ಜಿಲ್ಲೆಯ ಕೋವಿಡ್-19 ಆಸ್ಪತ್ರೆಯಲ್ಲಿ ಘಟನೆ ನಡೆದಿದ್ದು, ದುರಾದೃಷ್ಟವಶಾತ್ ಕೊರೊನಾ ಸೋಂಕಿತೆ ಗರ್ಭಿಣಿಯ ತಾಯಿ ಕೊರೊನಾದಿಂದಾಗಿಯೇ ಸಾವನ್ನಪ್ಪಿದ್ದು, ಅಮ್ಮ ತೀರಿಕೊಂಡ ನೋವಿನಲ್ಲೂ ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಅಮ್ಮನೇ ಮತ್ತೆ ನನ್ನ ಹೊಟ್ಟೆಯಲ್ಲೇ ಹುಟ್ಟಿದ್ದಾಳೆ ಎಂದು ಗರ್ಭಿಣಿ ಭಾವಿಸಿದ್ದಾಳೆ. ಜಿಲ್ಲೆಯ ಕಡೂರು ತಾಲೂಕಿನ ಬೀರೂರಿನ 23 …
Read More »ಸುಶಾಂತ್ ಪ್ರಕರಣದ ತನಿಖೆ ಸಿಬಿಐಗೆ ನೀಡಿ: ಅಮಿತ್ ಶಾಗೆ ರಿಯಾ ಮನವಿ
ಮುಂಬೈ: ನಟ ಸುಶಾಂತ್ ಸಿಂಗ್ ರಜಪೂತ್ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಬೇಕೆಂದು ನಟಿ ರಿಯಾ ಚಕ್ರವರ್ತಿ ಕೇಂದ್ರ ಗೃಹಸಚಿವ ಅಮಿತ್ ಶಾ ಬಳಿ ಮನವಿ ಮಾಡಿಕೊಂಡಿದ್ದಾರೆ. ಈ ಕುರಿತು ಟ್ವೀಟ್ ಮಾಡುವ ಮೂಲಕ ಸಿಬಿಐ ತನಿಖೆಗೆ ಒತ್ತಾಯಿಸಿದ್ದಾರೆ. ರಿಯಾ ಟ್ವೀಟ್: ಮಾನ್ಯ ಅಮಿತ್ ಶಾ ಅವರೇ, ನಾನು ನಟ ಸುಶಾಂತ್ ಸಿಂಗ್ ರಜಪೂತ್ ಗೆಳತಿ ರಿಯಾ ಚಕ್ರವರ್ತಿ. ಸುಶಾಂತ್ ನಿಧನವಾಗಿ ಒಂದು ತಿಂಗಳಕ್ಕೂ ಅಧಿಕ ಸಮಯ ಕಳೆದಿದೆ. ನನಗೆ ಸರ್ಕಾರದ …
Read More »8 ವರ್ಷ, 264 ಕೋಟಿ ವೆಚ್ಚ- ಉದ್ಘಾಟನೆಗೊಂಡ 29 ದಿನಕ್ಕೆ ಕೊಚ್ಚಿ ಹೋದ ಬ್ರಿಡ್ಜ್
ಪಾಟ್ನಾ: ಬಿಹಾರದ ಗೋಪಾಲ್ಗಂಜ್ ನಲ್ಲಿ ಸೇತುವೆ ಉದ್ಘಾಟನೆಯಾದ 29 ದಿನದಲ್ಲಿ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿದೆ. ಸೇತುವೆ ಕೊಚ್ಚಿಕೊಂಡ ಹೋದ ಪರಿಣಾಮ ಚಂಪಾರಣ ತಿರಹುತ್ ಮತ್ತು ಸಾರಣ್ ಜಿಲ್ಲೆಗಳ ನಡುವಿನ ಸಂಪರ್ಕ ಕಡಿತಗೊಂಡಿದೆ. ಜೂನ್ 16ರಂದು ಬಿಹಾರದ ಮುಖ್ಯಮಂತ್ರಿ ನಿತಿಶ್ ಕುಮಾರ್ ಈ ಸೇತುವೆಯನ್ನು ಉದ್ಘಾಟಿಸಿದ್ದರು. 263.47 ಕೋಟಿ ವೆಚ್ಚದಲ್ಲಿ ಈ ಸೇತುವೆಯನ್ನು ನಿರ್ಮಿಸಲಾಗಿತ್ತು. ಸೇತುವೆ ನಿರ್ಮಾಣಕ್ಕೆ ಎಂಟು ವರ್ಷ ಸಮಯ ತೆಗೆದುಕೊಂಡಿತ್ತು. ಗಂಢಕ್ ನದಿಗೆ ಅಡ್ಡಲಾಗಿ ಗೋಪಾಲಗಂಜ್ ಜಿಲ್ಲೆಯ …
Read More »ಬರೆಯಲು ಜಾಗವಿಲ್ಲವೆಂದು ಬೇರೆ ಚೀಟಿ ಕೇಳಿದ್ದಕ್ಕೆ ವೈದ್ಯರ ಮೇಲೆ ಹಲ್ಲೆ?
ಚಿಕ್ಕಮಗಳೂರು: ಈ ಚೀಟಿಯಲ್ಲಿ ಬರೆಯಲು ಜಾಗ ಇಲ್ಲ ಬೇರೆ ಚೀಟಿ ಬರೆಸಿಕೊಂಡು ಬನ್ನಿ ಎಂದಿದ್ದಕ್ಕೆ ರೋಗಿಯ ಜೊತೆ ಬಂದಿದ್ದ ಯುವಕ, ವೈದ್ಯರ ಮೇಲೆ ಹಲ್ಲೆ ಮಾಡಿರುವ ಆರೋಪವೊಂದು ಜಿಲ್ಲೆಯ ಮೂಡಿಗೆರೆ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಕೇಳಿಬಂದಿದೆ. ಬುಧವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಅಹಮದ್ ಎಂಬ ಹುಡುಗ ವಯಸ್ಸಾದ ವೃದ್ಧರೊಬ್ಬರನ್ನು ಸಂತೋಷ್ ಎಂಬ ವೈದ್ಯರ ಕೊಠಡಿ ಮುಂಭಾಗ ಕೂರಿಸಿ ವೈದ್ಯರ ಬಳಿ ಚೀಟಿ ತೆಗೆದುಕೊಂಡು ಹೋಗಿದ್ದಾನೆ. ಈ ವೇಳೆ ವೈದ್ಯ …
Read More »ಬೆಳಗಾವಿಯಲ್ಲೂ ಲಾಕ್ ಡೌನ್ :ಭ್ರಷ್ಟಾಚಾರ ನಿರ್ಮೂಲನೆ ಪರಿವಾರ ಆಗ್ರಹ…..
ಬೆಳಗಾವಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚತಲಿದ್ದು, ಸೋಂಕು ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಕನಿಷ್ಠ ಒಂದು ತಿಂಗಳು ಲಾಕ್ ಡೌನ್ ಜಾರಿ ಮಾಡುವಂತೆ ಭ್ರಷ್ಟಾಚಾರ ನಿರ್ಮೂಲನೆ ಪರಿವಾರ ಆಗ್ರಹಿಸಿದೆ. ಈ ವಿಚಾರವಾಗಿ ಗುರುವಾರ ಜಿಲ್ಲಾಧಿಕಾರಿ ಎಂ.ಜಿ. ಹೀರೇಮಠ ಅವರನ್ನು ಭೇಟಿ ಮಾಡಿ ಭ್ರಷ್ಟಾಚಾರ ನಿರ್ಮೂಲನೆ ಪರಿವಾರ ಮನವಿ ಸಲ್ಲಿಸಿದೆ. ಬೆಳಗಾವಿ ನಗರದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತಲಿದೆ. ಹೀಗಾಗಿ ಬೆಳಗಾವಿಯಲ್ಲಿಯೂ ಲಾಕ್ ಡೌನ್ …
Read More »ಉಡುಪಿಯಲ್ಲಿ ಮುಂಗಾರು ಅಬ್ಬರ- 24 ಗಂಟೆಯಲ್ಲಿ 81 ಮಿಲಿಮೀಟರ್ ಮಳೆ ದಾಖಲು
ಉಡುಪಿ: ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದೆ. 24 ತಾಸುಗಳಲ್ಲಿ ಉಡುಪಿ ಜಿಲ್ಲೆಯಲ್ಲಿ ಸರಾಸರಿ 81 ಮಿ.ಮೀ. ಮಳೆಯಾಗಿದೆ. ಉಡುಪಿ ತಾಲೂಕಿನಲ್ಲಿ 83 ಮಿ.ಮೀ., ಕುಂದಾಪುರದಲ್ಲಿ 85.5 ಮಿ.ಮೀ. ಹಾಗೂ ಕಾರ್ಕಳ ತಾಲೂಕಿನಲ್ಲಿ 73 ಮಿ.ಮೀ. ಮಳೆ ಸುರಿದಿದೆ. ಇದೇ ಅವಧಿಯಲ್ಲಿ ಬಳ್ಕೂರು ಗ್ರಾಮದಲ್ಲಿ ಅತೀ ಹೆಚ್ಚು 145 ಮಿ.ಮೀ. ಮಳೆಯಾಗಿದೆ. ಶಂಕರನಾರಾಯಣ, ಇನ್ನಾಘಿ, ನೀರೆ, ಕಾಲ್ತೋಡು ಮತ್ತಿತರ ಗ್ರಾಮಗಳಲ್ಲಿ 100 ಮಿ.ಮೀ ಗಳಿಗಿಂತಲೂ ಅಧಿಕ ಮಳೆ ಬಿದ್ದಿದೆ. ಜಿಲ್ಲೆಯಾದ್ಯಂತ ಭಾರೀ ಮಳೆಯಾಗಿದೆ. …
Read More »ನಿನ್ನೆ ಪರೀಕ್ಷೆಗೊಳಪಟ್ಟವರ ಪೈಕಿ 9 2ಜನರಿಗೆ ಕೊರೋನಾ ಸೋಂಕು
ಬೆಳಗಾವಿ – ಆರೋಗ್ಯ ಇಲಾಖೆ ಹೆಲ್ತ್ ಬುಲಿಟಿನ್ ಬಿಡುಗಡೆ ಮಾಡುವ ಮುನ್ನವೇ ಬೆಳಗಾವಿ ಜಿಲ್ಲೆಯ ಕೊರೋನಾ ಸೋಂಕಿತರ ವಿವರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದರ ಪ್ರಕಾರ ನಿನ್ನೆ ಪರೀಕ್ಷೆಗೊಳಪಟ್ಟವರ ಪೈಕಿ 92ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದು ಈವರೆಗಿನ ಎಲ್ಲ ದಾಖಲೆಗಳನ್ನು ಹೊಸಕಿ ಹಾಕಿದ್ದು, ಜಿಲ್ಲೆಯಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಪಟ್ಟಿಯಲ್ಲಿ ಸೋಂಕಿತರ ಹೆಸರು, ವಿಳಾಸ, ಸಂಪರ್ಕ ಸಂಖೆಯ ಎಲ್ಲವೂ ನಮೂದಾಗಿದ್ದು, ಎಲ್ಲ ನಿಯಮಗಳನ್ನು ಮೀರಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕಲಾಗಿದೆ. …
Read More »ಎಲ್ಲೂ ಬೆಡ್ ಸಿಗ್ತಿಲ್ಲವೆಂದು ಪತ್ನಿ, ಮಕ್ಕಳ ಸಮೇತ ಸಿಎಂ ಮನೆ ಬಳಿ ಬಂದ ಸೋಂಕಿತ
ಬೆಂಗಳೂರು: ನನಗೆ ಕೊರೊನಾ ಸೋಂಕು ತಗುಲಿದೆ. ಈ ಕುರಿತು ಕರೆ ಮಾಡಿ ಮಾಹಿತಿ ನೀಡಿದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಎಲ್ಲೂ ಬೆಡ್ ಸಿಗುತ್ತಿಲ್ಲವೆಂದು ಕೊರೊನಾ ಸೋಂಕಿತರೊಬ್ಬರು ಸಿಎಂ ನಿವಾಸ ಕಾವೇರಿ ಬಳಿ ಗೋಳಿಟ್ಟಿದ್ದಾರೆ. ಕುಟುಂಬ ಸಮೇತರಾಗಿ ಸಿಎಂ ಮನೆ ಬಳಿ ಬಂದ ಸೋಂಕಿತ, ನನಗೆ ಎಲ್ಲೂ ಬೆಡ್ ಸಿಗುತ್ತಿಲ್ಲ. ತುಂಬಾ ಸುಸ್ತು ಆಗುತ್ತಿದೆ, ನನಗೆ ಆಸ್ಪತ್ರೆಯಲ್ಲಿ ಬೆಡ್ ಕೊಡಿಸಿ ಎಂದು ತನ್ನ ಪತ್ನಿ ಹಾಗೂ ಮಕ್ಕಳ ಜೊತೆಯಲ್ಲಿ ಕೊರೊನಾ ಸೋಂಕಿತ ಕಾವೇರಿ …
Read More »