ಗೋಕಾಕ: ಗೋಕಾಕ ಮತ್ತು ಮೂಡಲಗಿ ತಾಲೂಕಿನಲ್ಲಿ ಶುಕ್ರವಾರ ೮೭ ಕೊರೋನಾ ವರದಿಗಳು ದೃಢಪಟ್ಟಿವೆ ಎಂದು ತಾಲೂಕಾ ವೈದ್ಯಾಧಿಕಾರಿ ಡಾ. ಜಗದೀಶ ಜಿಂಗಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕೆಗೆ ಮಾಹಿತಿ ನೀಡಿರುವ ಅವರು, ಗೋಕಾಕ ನಗರದಲ್ಲಿಯೆ ಇಂದು ಒಂದೇ ದಿನದಲ್ಲಿ ಹಾಪ್ ಸೆಂಚುರಿ ಸಮೀಪಿಸಿದ್ದು, ನಗರದಲ್ಲಿ ಕೊರೋನಾ ಪೀಡಿತರ ಸಂಖ್ಯೆ ಒಂದೇ ದಿನ ೪೭ ಕ್ಕೆ ಬಂದು ತಲುಪಿದೆ. ಗ್ರಾಮೀಣ ಪ್ರದೇಶ ಅಂಕಲಗಿಯಲ್ಲಿ ೧೮ ಪ್ರಕರಣಗಳು ವರದಿಯಾಗಿದ್ದು ಆತಂಕ ಹೆಚ್ಚಿಸಿದೆ. ಉಳಿದಂತೆ ಮೂಡಲಗಿ …
Read More »Daily Archives: ಆಗಷ್ಟ್ 7, 2020
ಆರ್ ಟಿ ಓ ಕಚೇರಿ ರಸ್ತೆಯ ಎರಡೂ ಬದಿಗೆ ವಾಹನಗಳ ಪಾರ್ಕಿಂಗ್ ಶುಲ್ಕ ವಸೂಲಿ……
ಬೆಳಗಾವಿ- ವಾಹನಗಳ ಪಾರ್ಕಿಂಗ್ ಗೆ ಸ್ಥಳವಿಲ್ಲ,ಆದರೂ ಆರ್ ಟಿ ಓ ಕಚೇರಿ ರಸ್ತೆಯ ಎರಡೂ ಬದಿಗೆ ವಾಹನಗಳ ಪಾರ್ಕಿಂಗ್ ಮಾಡಲು ಬೆಳಗಾವಿಯ ಕಾಂಟೋನ್ಮೆಂಟ್ ಬೋರ್ಡ್ ಅನುಮತಿ ನೀಡಿದೆ. ಈ ರಸ್ತೆಯಲ್ಲಿ ಪಾರ್ಕಿಂಗ್ ಮಾಡುವ ವಾಹನಗಳಿಂದ ಪಾರ್ಕಿಂಗ್ ಶುಲ್ಕ ವಸೂಲಿ ಮಾಡಲು ಗುತ್ತಿಗೆದಾರನನ್ನು ನೇಮಿಸಿ.ಯಾವ ವಾಹನಕ್ಕೆ ಎಷ್ಟು ಶುಲ್ಕ ಎನ್ನುವದರ ಬಗ್ಗೆ ಆರ್ ಟಿ ಓ ಕಚೇರಿಯ ಬಳಿ ಕಾಂಟೋನ್ಮೆಂಟ್ ಬೋರ್ಡ್ ದೊಡ್ಡ ಫಲಕ ಹಾಕಿದೆ. ರಸ್ತೆಯ ಇಕ್ಕೆಲುಗಳಲ್ಲಿ ವಾಹನಗಳು ಪಾರ್ಕಿಂಗ್ …
Read More »ಯತೀಂದ್ರ ಸಿದ್ದರಾಮಯ್ಯಗೂ ಕೊರೊನಾ ಪಾಸಿಟಿವ್
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿಕ ಇದೀಗ ಅವರ ಪುತ್ರ ಯತೀಂದ್ರರಿಗೂ ಕೊರೊನಾ ಪಾಸಿಟಿವ್ ದೃಢವಾಗಿದೆ. ಬಗ್ಗೆ ಟ್ವೀಟ್ ,ಆಡಿರುವ ಯತೀಂದ್ರ, ನನ್ನ ಕೊರೊನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ ಎಂದು ಬರೆದುಕೊಂಡಿದ್ದಾರೆ. ಆಗಸ್ಟ್ 4ರಂದು ಸಿದ್ದರಾಮಯ್ಯ ಅವರಿಗೆ ಕೊರೊನಾ ಸೋಂಕು ಹರಡಿರುವುದು ದೃಢವಾಗಿದೆ. ಈ ಹಿನ್ನೆಲೆಯಲ್ಲಿ ಯಾವುದೇ ರೋಗ ಲಕ್ಷಣವಿಲ್ಲದಿದ್ದರೂ ಮಣಿಪಾಲ್ ಆಸ್ಪತ್ರೆಗೆ …
Read More »ವರ್ಷದ ಹಿಂದೆ ಕಟ್ಟಿದ ಮನೆ ಬೀಳುವ ಆತಂಕ- ಕೊಚ್ಚಿ ಹೋದ ಅಡಿಪಾಯ
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಭಾರೀ ಅವಾಂತರಗಳನ್ನು ಸೃಷ್ಟಿಸುತ್ತಿದೆ. ಇದೀಗ ಕಳೆದವರ್ಷವಷ್ಟೇ ಕಟ್ಟಿದ ಮನೆ ಸಹ ಬೀಳುವ ಹಂತ ತುಲುಪಿದ್ದು, ಅಡಿಪಾಯ ಕೊಚ್ಚಿ ಹೋಗಿದೆ.ಜಿಲ್ಲೆಯ ಮೂಡಿಗೆರೆ ಪಟ್ಟಣದ ಛತ್ರ ಮೈದಾನದಲ್ಲಿ ಮನೆಯ ಅಡಿಪಾಯ ಕುಸಿದು ಬೀಳುವ ಹಂತ ತಲುಪಿದೆ. ನಾಗಮ್ಮ ಅವರಿಗೆ ಸೇರಿದ ಮನೆ ಇದಾಗಿದ್ದು, ಮೂಡಿಗೆರೆಯಲ್ಲಿ ಮಳೆ-ಗಾಳಿ ಅಬ್ಬರದ ಹಿನ್ನೆಲೆ ಮಣ್ಣು ಹೆಚ್ಚು ಕುಸಿಯುತ್ತಿದೆ. ಹೀಗಾಗಿ ಅಡಿಪಾಯ ಸಹ ಕೊಚ್ಚಿ ಹೋಗಿದೆ. ಕಳೆದ ವರ್ಷ ಕಟ್ಟಿದ ಮನೆ, ಇದೀಗ …
Read More »ಸಿಎಂ ಬಿಎಸ್ವೈಗೆ ಕೊರೋನಾ ಸೋಂಕು, ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸುವವರು ಯಾರು..?
ಬೆಂಗಳೂರು,ಆ.7-ಕೊರೋನಾ ಬಾಧೆಯಿಂದ ಮುಖ್ಯಮಂತ್ರಿ ಯಡಿಯೂರಪ್ಪ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದು ಧ್ವಜಾರೋಹಣ ನೆರವೇರಿಸುವವರು ಯಾರು ಎಂಬ ಈಗ ಪ್ರಶ್ನೆ ಎದುರಾಗಿದೆ. ಆಸ್ಪತ್ರೆಯಿಂದ ಬಿಡುಗಡೆ ಹೊಂದಿದರೂ ಕ್ವಾರಂಟೈನ್ ಕಟ್ಟುಪಾಡಿನ ಪ್ರಕಾರ ಯಡಿಯೂರಪ್ಪನವರು 14 ದಿನಗಳ ಕಾಲ ಅಂದರೆ 16ನೇ ತಾರೀಖಿನವರೆಗೆ ಮನೆಯಲ್ಲಿಯೇ ಇರಬೇಕಾಗುತ್ತದೆ. ಈ ಕಾರಣ ಅವರು ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಕ್ರಿಯವಾಗಿ ಭಾಗವಹಿಸುವುದು ಅನುಮಾನ. ಹಾಗೊಂದು ವೇಳೆ ಅವರು ಭಾಗವಹಿಸಲೇಬೇಕು ಎಂದಾದರೇ ಕ್ವಾರಂಟೈನ್ ನಿಯಮಗಳನ್ನು ಸಡಿಲಿಸಬೇಕಾಗುತ್ತದೆ. ಸಾಮಾನ್ಯವಾಗಿ ಮುಖ್ಯಮಂತ್ರಿ ಗೈರಿನಲ್ಲಿ …
Read More »ಮೋಬೈಲ್ ಖರೀದಿ ಮಾಡಲು ಕಿವಿಯೊಲೆ ಮಾರಿದ ಮಹಾತಾಯಿಯ ಸಂಕಷ್ಟಕ್ಕೆ ಬೆಳಗಾವಿಯ ಬಿಜೆಪಿ ನಾಯಕನೊಬ್ಬ ಸ್ಪಂದಿಸಿ
ಬೆಳಗಾವಿ- ದೇವದಾಸಿ ಅಮ್ಮ ಈ ಅಮ್ಮನಿಗೆ ಇಬ್ಬರು ಮಕ್ಕಳು,ತಗಡಿನ ಸೆಡ್ಡಿನಲ್ಲಿ ವಾಸ,ಮಗಳ ಆನ್ ಲೈನ್ ಕ್ಲಾಸಿಗೆ ಮೋಬೈಲ್ ಖರೀದಿ ಮಾಡಲು ಕಿವಿಯೊಲೆ ಮಾರಿದ ಮಹಾತಾಯಿಯ ಸಂಕಷ್ಟಕ್ಕೆ ಬೆಳಗಾವಿಯ ಬಿಜೆಪಿ ನಾಯಕನೊಬ್ಬ ಸ್ಪಂದಿಸಿ ಬೆಳಗಾವಿಯಲ್ಲಿ ಮಾನವೀಯತೆಯ ಶಿಲನ್ಯಾಸ ಮಾಡಿದ ಅಪರೂಪದ ಪ್ರಸಂಗ ಬೆಳಗಾವಿಯಲ್ಲಿ ನಡೆಯಿತು ಇಡೀ ದೇಶವೇ ಶ್ರೀರಾಮ ಮಂದಿರದ ಶಿಲನ್ಯಾಸ ಕಾರ್ಯಕ್ರಮ ದಲ್ಲಿ ಮುಳುಗಿರುವಾಗ ಬೆಳಗಾವಿಯ ವೀರೇಶ ಕಿವಡಸಣ್ಣವರ ಸಂಕಷ್ಟದಲ್ಲಿದ್ದ ಆ ದೇವದಾಸಿ ಮಹಾತಾಯಿಗೆ ಹೊಸ ಕಿವಿಯೊಲೆ ಕೊಡಿಸಿ,ಅಗತ್ಯ ಸಾಮಗ್ರಿಗಳನ್ನು …
Read More »ಖಾಸಗಿ ಆಸ್ಪತ್ರೆಗಳು ಕೋವೀಡ್ ಚಿಕಿತ್ಸೆ ನೀಡುವ ವಿಷಯದಲ್ಲಿ ಹೆಚ್ಚು ಹಣ ಪಡೆಯುತ್ತಿವೆ ಎನ್ನುವ ದೂರುಗಳು ಕೇಳಿ ಬಂದಿವೆ,
ಬೆಳಗಾವಿ- ಬೆಳಗಾವಿಯ ಕೆಲವು ಖಾಸಗಿ ಆಸ್ಪತ್ರೆಗಳು ಕೋವೀಡ್ ಚಿಕಿತ್ಸೆ ನೀಡುವ ವಿಷಯದಲ್ಲಿ ಹೆಚ್ಚು ಹಣ ಪಡೆಯುತ್ತಿವೆ ಎನ್ನುವ ದೂರುಗಳು ಕೇಳಿ ಬಂದಿವೆ,ಯಾವುದೇ ಮುಲಾಜಿಲ್ಲದೇ ಹೆಚ್ಚಿನ ಬಿಲ್ ಪಡೆಯುತ್ತಿರುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಲಾಗುವದು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಭರವಸೆ ನೀಡಿದ್ದಾರೆ. ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಜಿಲ್ಲೆಯ ಎಲ್ಲ ಇಲಾಖೆಗಳ ಅಧಿಕಾರಿಗಳ ಜೊತೆಗೆ ಕೋವೀಡ್ ನಿಯಂತ್ರಣ,ಮತ್ತು ಪ್ರವಾಹ ನಿರ್ವಹಣೆಯ ಕುರಿತು ಪ್ರಗತಿ ಪರಶೀಲನೆ ನಡೆಸಿದ …
Read More »ದೇಶದ ಮೊದಲ ಕಿಸಾನ್ ರೈಲಿಗೆ ಚಾಲನೆ!:
ದೇಶದ ಮೊದಲ ಕಿಸಾನ್ ರೈಲಿಗೆ ಚಾಲನೆ! ಮಹಾರಾಷ್ಟ್ರದ ದೇವಲಾಲಿ ಮತ್ತು ಬಿಹಾರದ ದಾನಾಪುರ ನಡುವೆ ಸಂಚರಿಸಲಿರುವ ಮೊದಲ ಕಿಸಾನ್ ರೈಲಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ, ಕೇಂದ್ರ ಕೃಷಿ ಸಚಿವರಾದ ನರೇಂದ್ರ ಸಿಂಗ್ ತೋಮರ್ ಅವರ ನೇತೃತ್ವದಲ್ಲಿ ಚಾಲನೆ ನೀಡಲಾಯಿತು. ಕಿಸಾನ್ ರೈಲು ಕೃಷಿ ಕ್ಷೇತ್ರದ ಪ್ರಗತಿಗೆ ಮತ್ತು ರೈತರ ಬೆಳೆಗೆ ನ್ಯಾಯಯುತ ದರ ಒದಗಿಸಲು ಹೆಚ್ಚು ಸಹಕಾರಿಯಾಗಲಿದೆ. ಹಾಗೂ ದೇಶದ ಮೂಲೆಮೂಲೆಗಳಿಗೆ ಕೃಷಿ ಉತ್ಪನ್ನಗಳ ಸುಗಮ ಸಾಗಾಣಿಕೆಗೆ ಅನುಕೂಲ ಕಲ್ಪಿಸಲು …
Read More »ಪ್ರವಾಹ ಮತ್ತು ಕೋವಿಡ್-೧೯ ನಿಯಂತ್ರಣ: ಪರಿಶೀಲನಾ ಸಭೆ
ಪ್ರವಾಹ ಮತ್ತು ಕೋವಿಡ್-೧೯ ನಿಯಂತ್ರಣ: ಪರಿಶೀಲನಾ ಸಭೆ ನೀರು ಬಿಡುಗಡೆ ಸಮನ್ವಯತೆಗೆ ಅಧಿಕಾರಿ ನಿಯೋಜನೆ: ಸಚಿವ ಜಾರಕಿಹೊಳಿ ಬೆಳಗಾವಿ, : ಜಲಾಶಯಗಳಲ್ಲಿ ನೀರು ಪ್ರಮಾಣ ಮತ್ತು ಬಿಡುಗಡೆಗೆ ಸಂಬಂಧಿಸಿದಂತೆ ಮಾಹಿತಿ ವಿನಿಮಯ ಮತ್ತಿತರ ಸಮನ್ವಯ ಸಾಧಿಸಲು ರಾಜ್ಯದ ಒಬ್ಬ ಅಧಿಕಾರಿಯನ್ನು ಮಹಾರಾಷ್ಟ್ರದ ಜಲಾಶಯಗಳಿಗೆ ಹಾಗೂ ಅಲ್ಲಿನ ಅಧಿಕಾರಿಗಳು ಇಲ್ಲಿನ ಜಲಾಶಯಗಳಿಗೆ ನಿಯೋಜಿಸಲು ಕ್ರಮ ಕೈಗೊಳ್ಳಬೇಕು ಎಂದು ಜಲಸಂಪನ್ಮೂಲ ಇಲಾಖೆಯ ಸಚಿವರಾದ ರಮೇಶ್ ಜಾರಕಿಹೊಳಿ ಸೂಚನೆ ನೀಡಿದರು. ಕೋವಿಡ್-೧೯ ನಿಯಂತ್ರಣ ಹಾಗೂ …
Read More »ಮಡಿಕೇರಿ -ಮೈಸೂರು ರಸ್ತೆ ಸಂಪರ್ಕ ಬಂದ್
ಮಡಿಕೇರಿ/ಮೈಸೂರು: ಕೊಡಗಿನಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಕಾವೇರಿ ನದಿ ಉಕ್ಕಿ ಹರಿಯುತ್ತಿದ್ದು ಮಡಿಕೇರಿ – ಮೈಸೂರು ರಸ್ತೆ ಸಂಪರ್ಕ ಕಡಿತಗೊಂಡಿದೆ. ಕುಶಾಲನಗರ ಬಳಿಯ ರಸ್ತೆಯ ಮೇಲೆ ಭಾರೀ ಪ್ರಮಾಣದಲ್ಲಿ ನೀರು ಹರಿಯುತ್ತಿರುವ ಕಾರಣ ಹೆದ್ದಾರಿ ಜಲಾವೃತವಾಗಿದೆ. ಹೆದ್ದಾರಿ ಬಂದ್ ಆಗಿರುವ ಕಾರಣ ಎರಡು ಕಡೆ ವಾಹನಗಳು ಸಾಲಾಗಿ ನಿಂತಿವೆ.ಭಾರೀ ಮಳೆಯಿಂದ ಸೂತ್ತೂರು ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಸೂತ್ತೂರು ಕ್ಷೇತ್ರದ ಸುತ್ತ ಮುತ್ತ ತೋಟ ಜಮೀನಿಗೆ ನೀರು ನುಗ್ಗಿದೆ.ಕಬಿನಿ ಡ್ಯಾಂನಿಂದ ನದಿಗೆ 50ಸಾವಿರ …
Read More »