ಗೋಕಾಕ: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಗೋಕಾಕ ನಗರದಲ್ಲಿ ಐದು ದಿನಗಳ ಕಾಲ ಲಾಕ್ ಡೌನ್ ಮಾಡಲು ನಿರ್ಧರಿಸಲಾಗಿದೆ ಎಂದು ನಗರಸಭೆ ಕಮಿಷನರ್ ಶಿವನಂದ ಹಿರೇಮಠ್ ತಿಳಿಸಿದ್ದಾರೆ. ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಅಂಗಡಿ, ಮುಗ್ಗಟ್ಟು ಹಾಗೂ ವ್ಯಾಪಾರಸ್ತರೊಂದಿಗೆ ಮಂಗಳವಾರ ನಡೆದ ಸಭೆಯಲ್ಲಿ ನಾಳೆಯಿಂದ ಆ. 15(ರವಿವಾರ)ದವರೆಗೂ ಲಾಕ್ ಡೌನ್ ಮಾಡಲು ತೀರ್ಮಾನಿಸಲಾಗಿದೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಗರದಲ್ಲಿ ಸಾವಿನ ಸಂಖ್ಯೆ ಹೆಚ್ಚುತಲಿದೆ. ಹೀಗಾಗಿ ಬಟ್ಟೆ ಅಂಗಡಿ, …
Read More »Daily Archives: ಆಗಷ್ಟ್ 11, 2020
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದ ವಿದ್ಯಾರ್ಥಿನಿಗೆ ಸನ್ಮಾನ
ಚಿಕ್ಕೋಡಿ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ ರ್ಯಾಂಕ್ ಪಡೆದುಕೊಂಡು ನಮ್ಮ ಶಾಲೆ ಹಾಗೂ ಜಿಲ್ಲೆಗೆ ಕೀರ್ತಿ ತಂದಿರುವ ವಿದ್ಯಾರ್ಥಿನಿ ಸಹನಾ ಶಂಕರ ಕಾಮಗೌಡ ಅವಳ ಮುಂದಿನ ವಿದ್ಯಾಭ್ಯಾಸದ ಸಮಗ್ರ ಖರ್ಚು ವೆಚ್ಚವನ್ನು ಸಂಸ್ಥೆ ಭರಿಸಲಿದೆ ಎಂದು ಸಿಎಲ್ಇ ಸಂಸ್ಥೆ ಕಾರ್ಯದರ್ಶಿ ಜಗದೀಶ ಕವಟಗಿಮಠ ತಿಳಿಸಿದರು. ಇಲ್ಲಿನ ಸಿಎಲ್ಇ ಸಂಸ್ಥೆಯ ಸಭಾಭವನದಲ್ಲಿ ಮಂಗಳವಾರ ಹಮ್ಮಿಕೊಂಡ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ರ್ಯಾಂಕ ಪಡೆದ ಎಂ.ಕೆ.ಕವಟಗಿಮಠ ಪ್ರೌಢ ಶಾಲೆಯ ವಿದ್ಯಾರ್ಥಿನಿ ಸಹನಾ ಶಂಕರ ಕಾಮಗೌಡ …
Read More »ನಗರ ಅಪರಾಧ ಮತ್ತು ಸಂಚಾರ ಪೊಲೀಸ್ ದಳದ ಡಿಸಿಪಿಯಾಗಿ ಚಂದ್ರಶೇಖರ್ ನೀಲಗಾರ್ ಅಧಿಕಾರ
ಬೆಳಗಾವಿ : ನಗರ ಅಪರಾಧ ಮತ್ತು ಸಂಚಾರ ಪೊಲೀಸ್ ದಳದ ಡಿಸಿಪಿಯಾಗಿ ಚಂದ್ರಶೇಖರ್ ನೀಲಗಾರ್ ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದರು. ಡಿಸಿಪಿ ಯಶೋಧಾ ವಂಟಗೋಡಿ ಲೋಕಾಯುಕ್ತ ಎಸ್ಪಿಯಾಗಿ ವರ್ಗಾವಣೆಯಾದ ಹಿನ್ನೆಲೆ ತೆರವಾದ ಸ್ಥಾನಕ್ಕೆ ಚಂದ್ರಶೇಖರ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಇಂದು ಅವರು ಅಧಿಕಾರ ಸ್ವೀಕರಿಸಿಕೊಂಡರು.
Read More »ಜನರಿಂದ ಹಗಲು ದರೋಡೆಗೆ ನಿಂತಿದೆವಾಯುವ್ಯ ಸಾರಿಗೆ ಇಲಾಖೆ
ಹಾವೇರಿ: ವಾಯುವ್ಯ ಸಾರಿಗೆ ಇಲಾಖೆಯಲ್ಲಿ ಆಗಾಗ ಒಂದಿಲ್ಲೊಂದು ಅವಾಂತರಗಳು ನಡೆಯುವಂತೆ, ಈಗ ಟಿಕೆಟ್ ದರದ ಮತ್ತೊಂದು ಅವಾಂತರ ಬೆಳಕಿಗೆ ಬಂದಿದೆ. ಒಂದು ಊರಿನಿಂದ ಮತ್ತೊಂದು ಊರಿಗೆ ಹೋದ್ರೆ ಒಂದು ದರವಿದ್ದರೇ, ಹೋದ ಊರಿನಿಂದ ಮರಳಿ ಬಂದರೆ ಹೆಚ್ಚಿನ ದರವನ್ನು ಪ್ರಯಾಣಿಕರಿಂದ ವಸೂಲಿ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಆ. 10 ರಂದು ಪ್ರಯಾಣಿಕನೋರ್ವ ಮಧ್ಯಾಹ್ನ 2.22 ಗಂಟೆಗೆ ಕಾಗಿನೆಲ್ಲಿಯಿಂದ ಹತ್ತಿರದ ಮುತ್ತೂರಿಗೆ ತೆರಳುವ ಸಮಯದಲ್ಲಿ ಹಾವೇರಿ ಘಟಕಕ್ಕೆ ಸೇರಿದ …
Read More »ರೈತ ಕಷ್ಟಪಟ್ಟು ಬೆಳೆದಿದ್ದ ಬಾಳೆಗೊನೆ ಕಳ್ಳತನವಾಗಿದ್ದು, ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆ.
ಬೆಂಗಳೂರು: ಕೊರೊನಾ ಮಧ್ಯೆ ರೈತ ಕಷ್ಟಪಟ್ಟು ಬೆಳೆದಿದ್ದ ಬಾಳೆಗೊನೆ ಕಳ್ಳತನವಾಗಿದ್ದು, ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಭಟ್ಟರಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಕಷ್ಟಪಟ್ಟು ಬೆಳೆದಿದ್ದ ಬೆಳೆ ಕಳ್ಳನ ಪಾಲಾಗಿದೆ. ಕಳ್ಳರ ಕರಾಮತ್ತು ತೋಟದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಗ್ರಾಮದ ರಾಮಕೃಷ್ಣಪ್ಪ ತೋಟದಲ್ಲಿ ಕಳ್ಳತನವಾಗಿದ್ದು, ಸುಮಾರು 25 ಬಾಳೆಗೊನೆ ಕಳ್ಳತನವಾಗಿದೆ. ಈ ಹಿಂದೆಯೂ ಸಹ ಸಾಕಷ್ಟು ಬಾರಿ ತೋಟದಲ್ಲಿ ಕಳ್ಳತನ ಪ್ರಕರಣಗಳು ನಡೆಯುತ್ತಿತ್ತು. ಇದರಿಂದ ಬೇಸತ್ತ ರೈತ …
Read More »Districts ಕೃಷ್ಣನ ತೊಟ್ಟಿಲು ತೂಗಿ, ಭಜನೆ ಮಾಡಿದ ಈಶ್ವರಪ್ಪ…
ಶಿವಮೊಗ್ಗ : ಕೃಷ್ಣ ಜನ್ಮಾಷ್ಟಮಿ ದಿನವಾದ ಇಂದು ಸಚಿವ ಕೆ.ಎಸ್.ಈಶ್ವರಪ್ಪ ಶಿವಮೊಗ್ಗದ ಇಸ್ಕಾನ್ ಮಂದಿರದಲ್ಲಿ ಕೃಷ್ಣನ ತೊಟ್ಟಿಲು ತೂಗಿ ಭಜನೆ ಮಾಡಿ ಗಮನ ಸೆಳೆದಿದ್ದಾರೆ. ಗೋವಿಂದ ಗುರುಹರಿ ಗೋಪಾಲು ಬೋಲೊ ಎಂದು ಭಜನೆ ಮಾಡುವ ಮೂಲಕ ಕೃಷ್ಣನ ನಾಮಸ್ಮರಣೆ ಮಾಡಿದ್ದಾರೆ. ಶಿವಮೊಗ್ಗ ತಾಲೂಕಿನ ಬಿದರೆಯ ಇಸ್ಕಾನ್ ಮಂದಿರದಲ್ಲಿ ಇಂದು ನಡೆದ ಕೃಷ್ಣನ ಜನ್ಮಾಷ್ಟಮಿಯ ಕಾರ್ಯಕ್ರಮದಲ್ಲಿ ಕುಟುಂಬಸ್ಥರೊಂದಿಗೆ ಭಾಗಿಯಾದ ಸಚಿವರು, ಕೃಷ್ಣನ ತೊಟ್ಟಿಲು ತೂಗುವ ಮೂಲಕ ತಮ್ಮ ಭಕ್ತಿಯನ್ನು ಕೃಷ್ಣನಿಗೆ ಸಮರ್ಪಿಸಿದ್ದಾರೆ. …
Read More »30 ಸಾವಿರ ಲಂಚ ಪಡೆಯುತ್ತಿರುವಾಗACB ಬಲೆಗೆ ಬಿದ್ದ DHO
ಯಾದಗಿರಿ: ಸ್ಟಾಫ್ ನರ್ಸ್ ನೇಮಕಾತಿ ವೇಳೆಯಲ್ಲಿ ಅಭ್ಯರ್ಥಿಯೊಬ್ಬರಿಂದ 30 ಸಾವಿರ ಲಂಚ ಪಡೆಯುತ್ತಿರುವಾಗ ಯಾದಗಿರಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮುಖ್ಯಾಧಿಕಾರಿ ಎಸಿಬಿ ಬಲೆಗೆ ಬಿದ್ದಿದ್ದಾರೆ.ಸದ್ಯ ಜಿಲ್ಲೆಯಲ್ಲಿ ಕೊರೊನಾ ಹಾವಳಿ ಹೆಚ್ಚಾಗಿರುವ ಹಿನ್ನೆಲೆ ಆರೋಗ್ಯ ಇಲಾಖೆಯ ಅಗತ್ಯ ಸಿಬ್ಬಂದಿಯ ಭರ್ತಿ ಕಾರ್ಯ ನಡೆಯುತ್ತಿತ್ತು. ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮುಖ್ಯಾಧಿಕಾರಿ ಎಸ್.ಎಂ. ಪಾಟೀಲ್ ಭರ್ತಿ ಕಾರ್ಯದ ಮುಖ್ಯಸ್ಥರಾಗಿದ್ದರು. ನೇಮಕಾತಿಗಾಗಿ ಒಬ್ಬೊಬ್ಬ ಅಭ್ಯರ್ಥಿಯಿಂದ 30 ರಿಂದ 50 …
Read More »S.S.L.C.ಪರೀಕ್ಷೆಯಲ್ಲಿ ಕಡಿಮೆ ಅಂಕಗಳು ಬಂದ ಕಾರಣಕ್ಕೆ ಮನನೊಂದ ವಿದ್ಯಾರ್ಥಿನಿಗಳಿಬ್ಬರು ಆತ್ಮಹತ್ಯೆ
ಹಾವೇರಿ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕಡಿಮೆ ಅಂಕಗಳು ಬಂದ ಕಾರಣಕ್ಕೆ ಮನನೊಂದ ವಿದ್ಯಾರ್ಥಿನಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ನಿನ್ನೆಯಷ್ಟೇ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿತ್ತು. ಫಲಿತಾಂಶ ಬಂದ ಬೆನ್ನಲ್ಲೇ ಕಡಿಮೆ ಅಂಕ ಬಂದಿದೆ ಹಾಗೂ ಅನುತ್ತೀರ್ಣನಾಗಿದ್ದೇನೆ ಎಂದು ಇಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಣಿತ ವಿಷಯದಲ್ಲಿ ಫೇಲಾದ ಕಾರಣಕ್ಕೆ ಹಾವೇರಿಯ ದ್ಯಾಮವ್ವನ ಗುಡಿ ಓಣಿಯಲ್ಲಿ ವೈಷ್ಣವಿ ರಿತ್ತಿ (16) ಮನೆಯಲ್ಲಿ ವಿಷ ಸೇವಿಸಿದ್ದಾಳೆ. …
Read More »ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಯುವರಾಜ ಜಾಧವ ಅವರ ಸಹೋದರ ಬಾಳೆಕುಂದ್ರಿ ಕೆ.ಎಚ್.ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಶಾಂತ ಜಾಧವ ವಿರುದ್ಧ ಕ್ರಿಮಿನಲ್ ಪ್ರಕರಣ
ಬೆಳಗಾವಿ: ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಯುವರಾಜ ಜಾಧವ ಅವರ ಸಹೋದರ ಬಾಳೆಕುಂದ್ರಿ ಕೆ.ಎಚ್.ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಶಾಂತ ಜಾಧವ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿದ್ದು, ಅವರ ಸದಸ್ಯತ್ವ ರದ್ದುಪಡಿಸಬೇಕೆಂದು ಪ್ರಾದೇಶಿಕ ಆಯುಕ್ತರು ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ. ಪ್ರಶಾಂತ ಅವರು ವಿರುದ್ಧ 26,78,473 ರುಪಾಯಿ ಅವ್ಯವಹಾರ ಆರೋಪದ ಹಿನ್ನೆಲೆಯಲ್ಲಿ ಪ್ರಾದೇಶಿಕ ಆಯುಕ್ತರ ನ್ಯಾಯಾಲಯ ವಿಚಾರಣೆ ನಡೆಸಿದೆ. ಅಲ್ಲದೆ ಅವರ ವಿರುದ್ಧ ಹಲವಾರು ಗಂಭೀರ ಆರೋಪಗಳ ಕೇಳಿ ಬಂದಿವೆ. ಗ್ರಾಮ ಪಂಚಾಯಿತಿಯ ಕರವಸೂಲಾತಿಯಲ್ಲಿ …
Read More »ಘಟಪ್ರಭಾ-ಮಣಗುತ್ತಿ ವಿವಾದ ಸೌಹಾರ್ದತೆ ಕಾಪಾಡುವಂತೆ ಪೋಲಿಸ್ ಕಮೀಶನರ್ ಗೆ ಕನ್ನಡ ಸೇನೆ ವತಿಯಿಂದ ಮನವಿ
ಹುಕ್ಕೇರಿ ತಾಲೂಕಿನ ಮಣಗುತ್ತಿ ಗ್ರಾಮದಲ್ಲಿ ಶಿವಾಜಿ ಮಹಾರಾಜರ ಮೂರ್ತಿ ಅನಾವರಣ ಮತ್ತು ಸ್ಥಳಾಂತರ ಪ್ರಕರಣವನ್ನು ಶಿವಸೇನೆ ಮತ್ತು ಹೊರಗಿನಿಂದ ಬಂದ ಇತರೆ ಸಂಘಟನೆಗಳು ವಿವಾದ ಸೃಷ್ಟಿ ಮಾಡಿ ಸೌಹಾರ್ದತೆ ಹಾಳು ಮಾಡಲು ಪ್ರಯತ್ನಿಸುತ್ತಿರುವ ಕಿಡಗೇಡಿಗಳನ್ನು ಕೂಡಲೇ ಅವರನ್ನು ಬಂದಿಸಬೇಕು. ಅದರಂತೆ ಅಲ್ಲಿಯ ಜನರಿಗೆ ಸೌಹಾರ್ದತೆಯಿಂದ ಬಾಳಲು ಅನುಮಾಡಿ ಕೊಡಬೇಕು ಎಂದು ಕನ್ನಡ ಸೇನೆ ಮತ್ತು ಕರವೇ ಸಂಘಟನೆ ವತಿಯಿಂದ ಪೋಲಿಸ್ ಕಮೀಶನರ್ ಮನವಿ ಸಲ್ಲಿಸಲಾಯಿತು. ಮಣಗುತ್ತಿ ಗ್ರಾಮದಲ್ಲಿ ಶಿವಾಜಿ ಮಹಾರಾಜರ …
Read More »