Breaking News

Daily Archives: ಆಗಷ್ಟ್ 21, 2020

ಕೃಷ್ಣಾ ನದಿಯಲ್ಲಿ ನಾಪತ್ತೆಯಾಗಿದ್ದ ನಾಲ್ವರು ಶವವಾಗಿ ಪತ್ತೆ……….

ರಾಯಚೂರು: ಆಗಸ್ಟ್ 17ರಂದು ಕೃಷ್ಣ ನದಿಯಲ್ಲಿ ತೆಪ್ಪ ಮುಳುಗಿ ನಾಪತ್ತೆಯಾಗಿದ್ದ ರಾಯಚೂರಿನ ನಡುಗಡ್ಡೆ ಗ್ರಾಮ ಕುರ್ವಕಲಾದ ನಾಲ್ಕು ಜನ ಕೊನೆಗೆ ಶವವಾಗಿ ಪತ್ತೆಯಾಗಿದ್ದಾರೆ.ತೆಲಂಗಾಣದ ಪಂಚದೇವಪಾಡಗೆ ದಿನಸಿ ತರಲು ಹೋಗಿದ್ದವರು ಕುರ್ವಾಕುಲಕ್ಕೆ ಮರಳುವಾಗ ತೆಪ್ಪ ಮುಳುಗಿತ್ತು. ಮೊದಲಿಗೆ ಇಬ್ಬರು, ಬಳಿಕ ಒಬ್ಬರು ಒಟ್ಟು ಮೂರು ಜನ ತೆಲಂಗಾಣದ ಜುರಾಲಾ ಇಂದಿರಾ ಪ್ರಿಯದರ್ಶಿನಿ ಜಲಾಶಯದ ಬಳಿ ಶವವಾಗಿ ಪತ್ತೆಯಾಗಿದ್ದರು. ಇಂದು ಬಾಲಕಿ ರೋಜಾ ಸಹ ಜಲಾಶಯ ಬಳಿ ಶವವಾಗಿ ದೊರಕಿದ್ದಾಳೆ. ಸುಮಲತಾ, ನರಸಮ್ಮ, …

Read More »

ಜೀವನಾಧಾರವಾಗಿದ್ದ 2 ಎಮ್ಮೆಗಳನ್ನು ಕಳೆದುಕೊಂಡ ಬಡ ಕುಟುಂಬದ ನೆರವಿಗೆ ಸೋನು ಸೂದ್

ಪಾಟ್ನಾ: ಕೊರೊನಾ ಮಹಾಮಾರಿ ಸೃಷ್ಟಿಸಿರುವ ಸಂದಿಗ್ಧ ಬಿಕ್ಕಟ್ಟಿನ ಸಂದರ್ಭದಲ್ಲಿ ಹಲವು ಕುಟುಂಬಗಳಿಗೆ ನಟ ಸೋನು ಸೂದ್ ನೆರವಾಗುತ್ತಿದ್ದಾರೆ. ಸದ್ಯ ಪ್ರವಾಹದಲ್ಲಿ ಕುಟುಂಬದ ಜೀವನಾಧಾರವಾಗಿದ್ದ 2 ಎಮ್ಮೆಗಳನ್ನು ಕಳೆದುಕೊಂಡ ಬಡ ಕುಟುಂಬದ ನೆರವಿಗೆ ಸೋನು ಸೂದ್ ಧವಿಸಿದ್ದಾರೆ. ಬಿಹಾರದ ಚಂಪರನ್ ಪ್ರದೇಶದ ಭೋಲಾ ಗ್ರಾಮದ ಕುಟುಂಬ ಭೀಕರ ಪ್ರವಾಹದಲ್ಲಿ ಪುತ್ರ ಹಾಗೂ ಜೀವನಾಧರವಾಗಿದ್ದ ಎಮ್ಮೆಯನ್ನು ಕಳೆದುಕೊಂಡಿತ್ತು. ಈ ಕುರಿತ ಮಾಹಿತಿ ಪಡೆದ ಸೋನು ಸೂದ್ ಮತ್ತೊಂದು ಎಮ್ಮೆಯನ್ನು ಖರೀದಿ ಮಾಡಿ ಕುಟುಂಬಕ್ಕೆ …

Read More »

ನಿಮ್ಮ ಫೋನ್ ಕದ್ದಾಲಿಕೆ ಮಾಡುವ ದರಿದ್ರ ನಮ್ಮ ಸರ್ಕಾರಕ್ಕೆ ಬಂದಿಲ್ಲ: ಸುಧಾಕರ್

ಬೆಂಗಳೂರು: ನನ್ನ ಫೋನ್ ಟ್ಯಾಪಿಂಗ್ ಆಗ್ತಿರೋದು ನಿಜ ಎಂಬ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗಂಭೀರ ಆರೋಪಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ತಿರುಗೇಟು ನೀಡಿದ್ದಾರೆ. ಈ ಸಂಬಂಧ ಎರಡು ಟ್ವೀಟ್ ಮಾಡಿರುವ ಸಚಿವರು, ಡಿಕೆ ಶಿವಕುಮಾರ್ ಅವರೇ, ನೀವು ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಿದ್ದಾಗ ಧರ್ಮ-ಸಂಸ್ಕೃತಿಯ ಪ್ರತೀಕ, ಪವಿತ್ರವಾದ ಮನಸ್ಸುಳ್ಳ ಆದಿಚುಂಚನಗಿರಿ, ರಂಭಾಪುರಿ, ಸಿದ್ಧಗಂಗಾ ಮಠದ, ಸಿರಿಗೆರೆ ಮಠ, ಸುತ್ತೂರು ಮಠ ಶ್ರೀಗಳು ಸೇರಿದಂತೆ 7 ಸ್ವಾಮೀಜಿಗಳ …

Read More »

ಅಪಹರಣವಾದ ಮಗುವನ್ನು 48 ಗಂಟೆಯೊಳಗೆ ರಕ್ಷಿಸಿದ ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ

ನೆಲಮಂಗಲ: 18 ತಿಂಗಳ ಮಗುವನ್ನು ಹಣಕ್ಕಾಗಿ ಅಪಹರಿಸಿದ್ದ ಆರೋಪಿಗಳನ್ನ ಬಂಧಿಸುವಲ್ಲಿ ಮಾದನಾಯಕನಹಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ. ಎರಡು ದಿನದ ಹಿಂದೆ ಮನೆ ಮುಂದೆ ಇದ್ದ ಮಗುವನ್ನು ಇಬ್ಬರು ವ್ಯಕ್ತಿಗಳು ಅಪಹರಿಸಿದ್ದರು. ಇಂದು ಪ್ರಕರಣ ಭೇದಿಸಿದ ಪೊಲೀಸರು ಪೋಷಕರಿಗೆ ಮಗುವನ್ನು ಹಸ್ತಾಂತರಿಸಿ ಪ್ರಕರಣವನ್ನು ಸುಖಾಂತ್ಯಗೊಳಿಸಿದ್ದಾರೆ. ಬೆಂಗಳೂರು ಹೊರವಲಯ ಮಾಗಡಿ ರಸ್ತೆಯ ಕಡಬಗೆರೆ ಬಳಿ ಮಗು ಅಪಹರಣವಾಗಿತ್ತು. ಮಾಚೋಹಳ್ಳಿಯ ರವಿ ದಂಪತಿಯ 18 ತಿಂಗಳ ಹೆಣ್ಣು ಮಗುವನ್ನು ಅಪಹರಣ ಮಾಡಿದ್ದರು. ಅಪಹರಣವಾದ ಮಗುವನ್ನು 48 …

Read More »

ಆಗಸ್ಟ್ 22ರಿಂದ ಮದ್ಯ ಮಾರಾಟ ನಿಷೇಧ: d.c…

ಧಾರವಾಡ: ಅಗಸ್ಟ್ 22ರಿಂದ ಸೆಪ್ಟಂಬರ್ 4ರವರೆಗೆ ಗಣೇಶ ಹಬ್ಬದ ಆಚರಣೆ ಪ್ರಯುಕ್ತ ಧಾರವಾಡ ಜಿಲ್ಲೆಯ ನಗರ ಮತ್ತು ಗ್ರಾಮಗಳಲ್ಲಿ ಗಣೇಶ ವಿಗ್ರಹಗಳ ವಿಸರ್ಜನಾ ನಡೆಯುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ಮದ್ಯ ಮಾರಾಟ ನಿಷೇಧಿಸಿ ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಆದೇಶ ಹೊರಡಿಸಿದ್ದಾರೆ. ಗಣೇಶ ಹಬ್ಬಕ್ಕೆ ಸಂಬಂಧಿಸಿದಂತೆ ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21(1) ಕಾಯ್ದೆಯಡಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಂಡು ಮುಂಜಾಗ್ರತಾ ಕ್ರಮವಾಗಿ ಈ ಆದೇಶ ಹೊರಡಿಸಲಾಗಿದೆ. ಸಮಾರಂಭ, …

Read More »

ಡಾ.ನಾಗೇಂದ್ರ ಕುಟುಂಬಕ್ಕೆ 50 ಲಕ್ಷ ಪರಿಹಾರ ಘೋಷಣೆ – 7 ದಿನಗಳೊಳಗೆ ತನಿಖಾ ವರದಿಗೆ ಸಿಎಂ ಸೂಚನೆ

ಮೈಸೂರು: ನಂಜನಗೂಡು ಆರೋಗ್ಯಾಧಿಕಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಾ.ನಾಗೇಂದ್ರ ಕುಟುಂಬಕ್ಕೆ 50 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ.ಪರಿಹಾರ ಹಣವನ್ನು ಶೀಘ್ರವೇ ಬಿಡುಗಡೆ ಮಾಡುವಂತೆ ಅಧಿಕಾರಿಗಳಿಗೆ ಸಿಎಂ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಅಲ್ಲದೆ ಪ್ರಕರಣ ಸಂಬಂಧ 7 ದಿನಗಳ ಒಳಗೆ ತನಿಖೆ ನಡೆಸಿ ವರದಿ ನೀಡಲು ಮೈಸೂರು ಜಿಲ್ಲಾ ಪ್ರಾದೇಶಿಕ ಆಯ್ತಕರಿಗೆ ಸಿಎಂ ಆದೇಶಿಸಿದ್ದಾರೆ. ಅನುಕಂಪದ ಆಧಾರದ ಮೇಲೆ ಕುಟುಂಬ ಅವಲಂಬಿತರಿಗೆ ಹುದ್ದೆ ನೀಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ. ಈ …

Read More »

ಕ್ಷಣ ಕ್ಷಣಕ್ಕೂ ಕ್ಷೀಣಿಸ್ತಿದೆ ಎಸ್‍ಪಿಬಿ ಆರೋಗ್ಯರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವೈದ್ಯರ ತಂಡಗಳು ಎಸ್‍ಬಿಪಿಗೆ ಚಿಕಿತ್ಸೆ,

ಚೆನ್ನೈ: ಖ್ಯಾತ ಗಾಯಕ ಎಸ್‍ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಗಂಭೀರ ಸ್ಥಿತಿ ತಲುಪಿದ್ದು, ಅವರಿಗೆ ಅಂತಾರಾಷ್ಟ್ರೀಯ ವೈದ್ಯರ ತಂಡದಿಂದ ಚಿಕಿತ್ಸೆ ಕೊಡಿಸಲಾಗುತ್ತದೆ. ಕಳೆದ ಆಗಸ್ಟ್ 5ರಂದು ಎಸ್‍ಪಿಬಿ ಅವರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಹೀಗಾಗಿ ಅವರು ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ್ದರು. ಈ ನಡುವೆ ಅವರ ಆರೋಗ್ಯ ಗಂಭೀರವಾದ ಕಾರಣ ಅವರನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವೈದ್ಯರ ತಂಡಗಳು ಎಸ್‍ಬಿಪಿಗೆ ಚಿಕಿತ್ಸೆ ನೀಡುತ್ತಿವೆ. ಕಳೆದ …

Read More »

ಭರ್ಜರಿ ಮಳೆಯಲ್ಲೇ ಗೌರಿ ಪೂಜೆ

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದೊಂದು ವಾರದಿಂದ ಬಿಡುವು ನೀಡಿದ್ದ ಮಳೆರಾಯ, ಇಂದು ಬೆಳಗ್ಗೆಯಿಂದ ಮತ್ತೆ ಶುರುವಿಟ್ಟಿದ್ದಾನೆ. ವಾರದ ನಂತರ ಇದ್ದಕ್ಕಿದ್ದಂತೆ ಮಳೆಯಾಗಿರುವುದು ಜನರನ್ನು ಪರದಾಡುವಂತೆ ಮಾಡಿದೆ. ಇದು ಗೌರಿ ಹಬ್ಬಕ್ಕೂ ತಟ್ಟಿದ್ದು, ಮಹಿಳೆಯರು ಮಳೆಯನ್ನೂ ಲೆಕ್ಕಿಸದೆ ಪೂಜೆ ನೆರವೇರಿಸಿದ್ದಾರೆ.ಜಿಲ್ಲಾದ್ಯಂತ ಮೋಡಕವಿದ ವಾತಾವರಣವಿದ್ದು, ಹಲವೆಡೆ ಭಾರೀ ಮಳೆಯಾಗುತ್ತಿದೆ. ಇದರಿಂದಾಗಿ ಮಲೆನಾಡಿಗರು ಆತಂಕಕ್ಕೀಡಾಗಿದ್ದಾರೆ. ಸುರಿಯುತ್ತಿರೋ ಮಳೆಯಲ್ಲೇ ಗೌರಿ ಹಬ್ಬಕ್ಕೆ ಮುಂದಾಗಿರೋ ಮಲೆನಾಡಿಗರು, ವರುಣನ ಅಬ್ಬರದ ನಡುವೆಯೇ ಗೌರಿಯನ್ನು ಪೂಜೆ ಮಾಡಿ ಮನೆಗೆ …

Read More »

ಪರಿಸರ ಸ್ನೇಹಿ ಗೋಪಿಚಂದನದ ವಿಶೇಷ ಗಣೇಶ ಮೂರ್ತಿಗೆ ಈ ಬಾರಿ ಎಲ್ಲೆಡೆಯಿಂದ ಭಾರೀ ಬೇಡಿಕೆ

ರಾಯಚೂರು: ಪ್ರತಿ ವರ್ಷದಂತೆ ಈ ವರ್ಷವೂ ಗಣೇಶ ಹಬ್ಬ ಬಂದಿದೆ. ಆದರೆ ಈ ಬಾರಿ ಸಾರ್ವಜನಿಕವಾಗಿ ಅದ್ಧೂರಿ ಗಣೇಶೋತ್ಸವ ಆಚರಿಸುವುದಕ್ಕೆ ಅವಕಾಶ ಇಲ್ಲ. ಕೊರೊನಾ ಮಹಾಮಾರಿ ಹಿನ್ನೆಲೆ ಬಹುತೇಕರು ಮನೆಯಲ್ಲಿ ಗಣೇಶನ ಪ್ರತಿಷ್ಠಾಪಿಸುತ್ತಾರೆ. ಹೀಗಾಗಿ ರಾಯಚೂರಿನ ಪರಿಸರ ಸ್ನೇಹಿ ಗೋಪಿಚಂದನದ ವಿಶೇಷ ಗಣೇಶ ಮೂರ್ತಿಗೆ ಈ ಬಾರಿ ಎಲ್ಲೆಡೆಯಿಂದ ಭಾರೀ ಬೇಡಿಕೆ ಬಂದಿದೆ. ನಗರದ ಜಯತೀರ್ಥದಾಸರ ಕುಟುಂಬ ಗೋಪಿ ಚಂದನದಿಂದ ಪರಿಸರ ಸ್ನೇಹಿ, ಸಾಂಪ್ರದಾಯಿಕ ಗಣೇಶನನ್ನ ಮಾಡಿ ಮಾರಾಟ ಮಾಡುತ್ತಿದ್ದಾರೆ. …

Read More »

ಹೋರಿ ಎಲ್ಲಿ ಎಷ್ಟು ಮೇಯ್ದರೇನು, ನಮ್ಮ ಮನೆಗೆ ಬರಬೇಕು:ಕಿಡಿಕಾರಿದ ಹೊರಟ್ಟಿ

ಧಾರವಾಡ: ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಮಾಜಿ ಸಭಾಪತಿ ಬಸವರಾಜ್ ಹೊರಟ್ಟಿ ಹೋರಿಗೆ ಹೋಲಿಸಿ ಮಾತನಾಡಿದ್ದಾರೆ. ಧಾರವಾಡದಲ್ಲಿ ರಾಜ್ಯ ಸರ್ಕಾರದ ಭೂಸುಧಾರಣೆ ಕಾಯ್ದೆ ಹಾಗೂ ಹಲವು ವಿಷಯಗಳ ವಿರುದ್ಧ ಪ್ರತಿಭಟನೆ ನಡೆಸಿ ಮಾತನಾಡಿದ ಅವರು, ಬಿಜೆಪಿ ಸರ್ಕಾರದಲ್ಲಿ ತಾಳ ಇಲ್ಲ, ತಂತಿಯೂ ಇಲ್ಲ. ವಲಸಿಗರು ಮತ್ತು ಮೂಲರ ಮಧ್ಯೆ ಇದ್ದಾರೆ ಎಂದು ಹೇಳಿದರು. ಈ ಹಿಂದೆ ಕಾಂಗ್ರೆಸ್-ಜೆಡಿಎಸ್ ಸರ್ಕಾರ ಇತ್ತು. ಬಿಜೆಪಿ-ಜೆಡಿಎಸ್ ಸರ್ಕಾರವೂ ರಚನೆ ಆಗಿತ್ತು. ಆದರೆ ಈಗ …

Read More »