ಮೈಸೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ವಿರುದ್ಧ ಕಾಂಗ್ರೆಸ್ ಭ್ರಷ್ಟಾಚಾರದ ಆರೋಪ ಮಾಡಿದೆ. ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ವಕ್ತಾರ ಲಕ್ಷ್ಮಣ, ಸಿಎಂ ಪುತ್ರ ವಿಜಯೇಂದ್ರ ಅವರು ಎಲ್ಲಾ ಇಲಾಖೆಗಳಲ್ಲೂ ಉಸ್ತುವಾರಿಗಳನ್ನು ಮಾಡಿಕೊಂಡಿದ್ದು, ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಇದಕ್ಕಾಗಿ 31 ಜನರ ಗುಂಪು ಕಟ್ಟಿಕೊಂಡಿದ್ದಾರೆ. ಈ 31 ಜನರ ಚಲನವಲನಗಳನ್ನು ಗಮನಿಸಿದ್ದೇದ್ದು, ಎಲ್ಲ ದಾಖಲೆಗಳನ್ನು ಸಂಗ್ರಹಿಸಿದ್ದೇವೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ವಿಜಯೇಂದ್ರ ಅವರು ವರ್ಗಾವಣೆ ದಂಧೆಯಲ್ಲಿ ಕೋಟಿಗಟ್ಟಲೆ …
Read More »Daily Archives: ಆಗಷ್ಟ್ 26, 2020
ಡಿ,ಕೆ, ಶಿವಕುಮಾರ್ ಬೇಗ ಗುಣಮುಖರಾಗಲಿ: ಜಲ ಸಂಪನ್ಮೂಲ ಸಚಿವ
ಡಿಕೆ ಶಿವಕುಮಾರ್ ಅವರು ನನ್ನ ಹಳೆಯ ಗೆಳೆಯ *ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*?? ಡಿ,ಕೆ,ಶಿವಕುಮಾರ ಇವರಿಗೆ ಕೊರಾನಾ ಬಂದ ಹಿನ್ನೆಲೆಯಲ್ಲಿ ಜಲ ಸಂಪನ್ಮೂಲ ಸಚಿವರಾದ ರಮೇಶ ಜಾರಕಿಹೋಳಿಹೇಳಿಕೆ ಅವರು ಶಿಘ್ರವೆ ಗುಣಮುಖರಾಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆಂದು ಮಾದ್ಯಮದವರ ಮುಂದೆ ಹೇಳಿದ ಸಚಿವರಾದ ರಮೇಶ ಜಾರಕಿಹೋಳಿಯವರು ಅವರಿಗೆ ಕರೋನಾ ಪಾಸಿಟಿವ್ ಬಂದಿರೋದು …
Read More »ತಾಲೂಕಾ ಪಂಚಾಯತಿ ಸಭಾ ಭವನದಲ್ಲಿ ಸಚಿವ ರಮೇಶ್ ಜಾರಕಿಹೊಳಿ ಅವರು ಹೇಳಿದ್ದೇನು…?
ಗೋಕಾಕ :ಕೊರಾನಾಗೆ ಸಂಬಂದಪಟ್ಟಂತೆ ಇವತ್ತು ಗೋಕಾಕ ತಾಲೂಕಾ ಪಂಚಾಯತ ಸಭಾ ಭವನದಲ್ಲಿ ನಡೆದ ತಾಲೂಕಾ ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶಿಲನಾ ಸಭೆಯಲ್ಲಿ ಜಲಸಂಪನ್ಮೂಲ ಸಚಿವರಾದ ರಮೇಶ ಜಾರಕಿಹೋಳಿಯವರು ಗೋಕಾಕ ಸರಕಾರಿ ವೈದ್ಯಾಧಿಕಾರಿಗಳಿಗೆ ಯಾವುದೆ ರೀತಿ ಕೊರಾನಾ ಸೊಂಕಿತರಿಗೆ ಭಯ ಪಡದಂತೆ ದಿನಾಲು ಅವರ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು, ಅವರಿಗೆ ಬೇಕಾದಂತ ಎಲ್ಲ ಸೌಲಭ್ಯಗಳನ್ನು ನೀಡಬೇಕು, ಯಾವುದೆ ರೀತಿ ಲಕ್ಷಣ ಕಂಡು ಬರದೆ ಪೋಸಿಟಿವ ಬಂದವರನ್ನು ಆಸ್ಪತ್ರೆಗೆ ತರದೆ ಅಂತವರಿಗೆ …
Read More »ಬೆಳಗಾವಿ ಮಹಾನಗರ ಪಾಲಿಕೆಯ ಮೊದಲ ಕನ್ನಡ ಮೇಯರ್ ಸಿದ್ದನಗೌಡ ಪಾಟೀಲ ನಿಧನ
ಬೆಳಗಾವಿ – ಬೆಳಗಾವಿ ಮಹಾನಗರ ಪಾಲಿಕೆಯ ಮೊದಲ ಕನ್ನಡ ಮೇಯರ್ ಸಿದ್ದನಗೌಡ ಪಾಟೀಲ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಅವರು ಬಳಲುತ್ತಿದ್ದರು. ಬೆಳಗಾವಿಯ ಎಲ್ಲ ಕನ್ನಡ ಹೋರಾಟಗಳಲ್ಲಿ ಮುಂಚೂಣಿಯಲ್ಲಿ ಇರುತ್ತಿದ್ದ ಸಿದ್ದನಗೌಡ ಪಾಟೀಲ, ಹಲವಾರು ಸಾಮಾಜಿಕ ಸಂಘಟನೆಗಳಲ್ಲೂ ತೊಡಗಿಕೊಂಡಿದ್ದರು. ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಬಂದಿದ್ದವು. ಇಂದು ಮಧ್ಯಾಹ್ನ 2 ಗಂಟೆಗೆ ಅವರ ಸ್ವಗ್ರಾಮ ನೇಸರಗಿ ಸಮೀಪದ ಮಲ್ಲಾಪುರದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ. ಬೆಳಗಾವಿಯ ಪ್ರಥಮ ಕನ್ನಡ ಮಹಾಪೌರ …
Read More »ಸುತ್ತ ಹಸಿರ ರಾಶಿ, ಗುಡ್ಡ ಬೆಟ್ಟಗಳ ಸಾಲು, ಹಸಿರು ಬೆಟ್ಟದ ನಡುವೆ ಧುಮ್ಮಿಕ್ಕಿ ಹರಿಯೋ ಜಲಧಾರೆ
ಹಾವೇರಿ: ಸುತ್ತ ಹಸಿರ ರಾಶಿ, ಗುಡ್ಡ ಬೆಟ್ಟಗಳ ಸಾಲು, ಹಸಿರು ಬೆಟ್ಟದ ನಡುವೆ ಧುಮ್ಮಿಕ್ಕಿ ಹರಿಯೋ ಜಲಧಾರೆ. ಆ ಸೌಂದರ್ಯವನ್ನ ಕಣ್ತುಂಬಿಕೊಳ್ಳೋದೆ ಕಣ್ಣಿಗೆ ಹಬ್ಬ, ಮನಸ್ಸಿಗೆ ಆನಂದ. ಇಲ್ಲಿನ ಸೌಂದರ್ಯಕ್ಕೆ ಮನಸೋತ ಜನ, ಧುಮ್ಮಿಕ್ಕುವ ಜಲಪಾತ ನೋಡಲು ಸಾಲುಗಟ್ಟಿ ಆಗಮಿಸುತ್ತಿದ್ದಾರೆ. ಜಿಲ್ಲೆಯ ರಟ್ಟೀಹಳ್ಳಿ ತಾಲೂಕಿನ ಮದಗಮಾಸೂರು ಕೆರೆಯ ಬಳಿ ಜಲಪಾತ ಉಂಟಾಗಿದ್ದು, ಕಣ್ತುಂಬಿಕೊಳ್ಳಲು ಸಚಿವರು ಸೇರಿದಂತೆ ಜನರು ಮುಗಿಬೀಳುತ್ತಿದ್ದಾರೆ. ಮದಗಮಾಸೂರು ಕೆರೆ ಐತಿಹಾಸಿಕವಾಗಿ ಸಾಕಷ್ಟು ಮಹತ್ವ ಪಡೆದಿದೆ. ಕೆರೆಯ ಕುರಿತು …
Read More »ಯುಪಿಎಸ್ಸಿ ಪರೀಕ್ಷೆಯಲ್ಲಿ ಟಾಪರ್ ಇಂದು ಬಳ್ಳಾರಿ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಅಧಿಕಾರ ಸ್ವೀಕಾರ…..
ಬಳ್ಳಾರಿ: ಯುಪಿಎಸ್ಸಿ ಪರೀಕ್ಷೆಯಲ್ಲಿ ಇಡೀ ದೇಶಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿರುವ ನಂದಿನಿ ಕೆ.ಆರ್. ಅವರು ಇಂದು ಬಳ್ಳಾರಿ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಮೂಲತಃ ಕೋಲಾರ ಜಿಲ್ಲೆಯ ಕೆಂಬೋಡಿ ಗ್ರಾಮದವರಾದ ನಂದಿನಿ ಅವರು, 2016ರ ಬ್ಯಾಚ್ನ ಯುಪಿಎಸ್ಸಿ ಪರೀಕ್ಷೆಯಲ್ಲಿ ಟಾಪರ್ ಆಗಿ ಉತ್ತೀಣರಾಗಿದ್ದರು. ಈ ಮೂಲಕ ಇಡೀ ದೇಶದ ಗಮನ ಸೆಳೆದಿದ್ದರು. ಕಡುಬಡತನದ ಹಿನ್ನೆಲೆಯಲ್ಲಿ ಬಂದ ನಂದಿನಿ ಅವರು ಇದೀಗ ಬಳ್ಳಾರಿ ಜಿಲ್ಲಾ ಪಂಚಾಯಿತಿಯ ಮುಖ್ಯ …
Read More »ಭಾರತ ಸಮೀಕ್ಷೆಯಲ್ಲಿ ಮೂರನೇ ಸ್ವಚ್ಛ ನಗರ ಎಂಬ ಹೆಗ್ಗಳಿಕೆ ಪಾತ್ರವಾಗಿದೆ. ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮತ್ತೊಂದು ಗರಿಯನ್ನು ಮುಡಿಗೇರಿಸಿಕೊಂಡಿದೆ. ಸ್ವಚ್ಛ ಭಾರತ ಸಮೀಕ್ಷೆಯಲ್ಲಿ ಮೂರನೇ ಸ್ವಚ್ಛ ನಗರ ಎಂಬ ಹೆಗ್ಗಳಿಕೆ ಪಾತ್ರವಾಗಿದೆ. ಕೇಂದ್ರ ಸರ್ಕಾರ ನಡೆಸುವ ಸ್ವಚ್ಛ ಭಾರತ ಸರ್ವೇಕ್ಷಣೆಯಲ್ಲಿ (ಸಮೀಕ್ಷೆಯಲ್ಲಿ) ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಮೂರನೇ ಸ್ಥಾನ ಬಂದಿದೆ. ಗಣೇಶ ಚತುರ್ಥಿಯ ಮೊದಲ ದಿನ ಕೇಂದ್ರ ಸರ್ಕಾರ ಪ್ರಕಟಿಸಿರುವ ಸ್ವಚ್ಛತಾ ವರದಿಯಲ್ಲಿ ಮೈಸೂರಿಗೆ ಮೊದಲ ಸ್ಥಾನ, ತುಮಕೂರಿಗೆ …
Read More »ಕೋವಿಡ್ ಕೇರ್ ಸೆಂಟರ್ ನಲ್ಲಿ ಇರುವವರಿಗೆ ಹೋಳಿಗೆ ಊಟ:ಬಿಜೆಪಿ ಶಾಸಕ ಎಂಪಿ ರೇಣುಕಾಚಾರ್ಯ
ದಾವಣಗೆರೆ: ಕೊರೊನಾ ಸೋಂಕು ತಗುಲಿ ಕೋವಿಡ್ ಕೇರ್ ಸೆಂಟರ್ ನಲ್ಲಿ ಇರುವವರಿಗೆ ಗಣಪತಿ ಹಬ್ಬ ಮಾಡಲು ಸಾಧ್ಯವಾಗಲಿಲ್ಲ. ಹೀಗಾಗಿ ಬಿಜೆಪಿ ಶಾಸಕ ಎಂಪಿ ರೇಣುಕಾಚಾರ್ಯ ಇಂದು ಕೋವಿಡ್ ಕೇಸ್ ಸೆಂಟರ್ ನಲ್ಲಿ ಗಣಪತಿ ಹಬ್ಬವನ್ನು ಆಚರಣೆ ಮಾಡಿದ್ದಾರೆ. ದಾವಣಗೆರೆಯ ಮಾದನಬಾವಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ನಿಲಯದಲ್ಲಿರುವ ಕೋವಿಡ್ ಕೇರ್ ಸೆಂಟರಿನಲ್ಲಿ 150ಕ್ಕೂ ಹೆಚ್ಚು ಪಾಸಿಟಿವ್ ಬಂದಿರುವ ಜನರಿದ್ದು, ರೇಣುಕಾಚಾರ್ಯ ಕುಟುಂಬದ ಹಾಗೂ ಆಪ್ತರ ಜೊತೆ ಸೇರಿ ಕೋವಿಡ್ ಕೇರ್ ಸೆಂಟರ್ …
Read More »ಕೇಂದ್ರ ಸರ್ಕಾರ ಆದೇಶ ಮಾಡಿದೆ. ಆದರೂ ಕೇರಳ ಸರ್ಕಾರ ಮಾತ್ರ ಕರ್ನಾಟಕದ ಗಡಿ ಬಂದ್ ಮಾಡಿ ಉದ್ಧಟತನ ತೋರಿದೆ.
ಮಂಗಳೂರು: ದೇಶದ ಎಲ್ಲಾ ರಾಜ್ಯದ ಗಡಿಗಳನ್ನು ಓಪನ್ ಮಾಡಿ ಅಂತರ್ ರಾಜ್ಯ ಸಂಪರ್ಕಕ್ಕೆ ಅನುವು ಮಾಡಿಕೊಡಲು ಕೇಂದ್ರ ಸರ್ಕಾರ ಆದೇಶ ಮಾಡಿದೆ. ಆದರೂ ಕೇರಳ ಸರ್ಕಾರ ಮಾತ್ರ ಕರ್ನಾಟಕದ ಗಡಿ ಬಂದ್ ಮಾಡಿ ಉದ್ಧಟತನ ತೋರಿದೆ. ಮಂಗಳೂರಿನ ತಲಪಾಡಿಯಲ್ಲಿರುವ ಕೇರಳ ಗಡಿ ಚೆಕ್ ಪೋಸ್ಟ್ ನಲ್ಲಿ ಕೇರಳಕ್ಕೆ ಪ್ರವೇಶಿಸದಂತೆ ಕೇರಳ ಪೊಲೀಸರು ತಡೆಯುತ್ತಿದ್ದಾರೆ. ಕೇರಳದ ಸಿಪಿಎಂ ಸರ್ಕಾರದ ಈ ನಡೆಯಿಂದ ಗಡಿನಾಡ ಕನ್ನಡಿಗರು ಅತಂತ್ರರಾಗಿದ್ದಾರೆ. ತಕ್ಷಣ ಗಡಿಯನ್ನು ಓಪನ್ ಮಾಡಬೇಕೆಂದು …
Read More »ಕೊರೊನಾ ಸೋಂಕು ತಗುಲಿದ ಪತ್ನಿಯನ್ನು ಭೇಟಿಯಾಗಲು ಬಂದಿದ್ದ ವ್ಯಕ್ತಿ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಧಾರವಾಡ: ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೊನಾ ಸೋಂಕು ತಗುಲಿದ ಪತ್ನಿಯನ್ನು ಭೇಟಿಯಾಗಲು ಬಂದಿದ್ದ ವ್ಯಕ್ತಿ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮುತ್ತುರಾಜ್ ಶಿವಣ್ಣವರ (26) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಮುತ್ತುರಾಜ್ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದ ನಿವಾಸಿ. ಪತ್ನಿಗೆ ಸೋಂಕು ತಗುಲಿದ್ದರಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಬೆಳಗ್ಗೆ 9 ಗಂಟೆಗೆ ಪತ್ನಿ ಭೇಟಿಯಾಗಲು ಮುತ್ತುರಾಜ್ ಆಗಮಿಸಿದ್ದರು. ಈ ವೇಳೆ ಮೂರನೇ …
Read More »