Breaking News

Monthly Archives: ಆಗಷ್ಟ್ 2020

ಗಣಿ ಕಾರ್ಮಿಕನಿಗೆ ಸಿಕ್ತು 35 ಲಕ್ಷ ಮೌಲ್ಯದ ವಜ್ರ…………..

ಭೋಪಾಲ್: ಕಾರ್ಮಿಕರೊಬ್ಬನಿಗೆ 35 ಲಕ್ಷ ಮೌಲ್ಯದ ವಜ್ರಗಳು ಸಿಕ್ಕಿರುವ ಘಟನೆ ಮಧ್ಯಪ್ರದೇಶದ ಪನ್ನಾ ಜಿಲ್ಲೆಯ ವಜ್ರ ಗಣಿಯೊಂದರಲ್ಲಿ ನಡೆದಿದೆ.   ಪನ್ನಾ ವಜ್ರ ಗಣಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಸುಬಲ್ ಎಂಬವರಿಗೆ ಅಂದಾಜು 30 ಲಕ್ಷದಿಂದ 35 ಲಕ್ಷ ಮೌಲ್ಯದ ಮೂರು ವಜ್ರಗಳನ್ನು ಸಿಕ್ಕಿವೆ. 7.5 ಕ್ಯಾರೆಟ್ ನಿವ್ವಳ ತೂಕದ ಮೂರು ವಜ್ರಗಳನ್ನು ಗಣಿಯಲ್ಲಿ ಸಿಕ್ಕಿವೆ ಎಂದು ಪನ್ನಾ ಜಿಲ್ಲೆಯ ವಜ್ರಾಧಿಕಾರಿ ಆರ್.ಕೆ.ಪಾಂಡೆ ತಿಳಿಸಿದ್ದಾರೆ. ಈ ವಜ್ರಗಳನ್ನು ಕಾರ್ಮಿಕರ ಸುಬಲ್ …

Read More »

ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೇಂದ್ರಿಕೃತ ಆಮ್ಲಜನಕ ಪೂರೈಕೆ ಘಟಕಕ್ಕೆ ಚಾಲನೆ

ಮೂಡಲಗಿ : ಹೆಚ್ಚುತ್ತಿರುವ ಕೊರೋನಾ ಸೊಂಕಿನ ಹಿನ್ನೆಲೆಯಲ್ಲಿ ಸೊಂಕಿತರ ಆರೈಕೆಗಾಗಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅವಿರತವಾಗಿ ಶ್ರಮಿಸುತ್ತಿದ್ದು, ಅವರ ಜನಪರ ಕಾಳಜಿಯು ನಮ್ಮ ನಾಡಿಗೆ ಮಾದರಿಯಾಗಿದೆ ಎಂದು ತಹಶೀಲ್ದಾರ ದಿಲ್‍ಶಾದ್ ಮಹಾತ್ ಶ್ಲಾಘಿಸಿದರು. ಬುಧವಾರದಂದು ಕೊರೋನಾ ಸೊಂಕಿತರಿಗೆ ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೇಂದ್ರಿಕೃತ ಆಮ್ಲಜನಕ ಪೂರೈಕೆ ಘಟಕಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೊರೋನಾ ಸೊಂಕಿತರಿಗೆ ತಮ್ಮ ಅನನ್ಯ ಸೇವೆ ನೀಡುವ ಮೂಲಕ ಅವರ ಪ್ರೀತಿಗೆ …

Read More »

ನದಿ ತೀರದ ಗ್ರಾಮಗಳಿಗೆ ಪ್ರವಾಹ ಬೀತಿ ಸೇತುವೆಗಳು ಜಲಾವೃತ, ಸಂಚಾರ ಸ್ಥಗಿತ

ಮೂಡಲಗಿ: ಬೆಳಗಾವಿ ಜಿಲ್ಲೆ ಹಾಗೂ ಮಹಾರಾಷ್ಟ್ರದಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ಮಾರ್ಕಂಡೇಯ ನದಿಯಿಂದ ಘಟಪ್ರಭಾ ನದಿಗೆ ಗುರುವಾರದಂದು ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವದರಿಂದ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ನದಿ ತೀರದ ಗ್ರಾಮಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮಹಾರಾಷ್ಟ್ರ ಭಾಗದಲ್ಲಿ ಭಾರಿ ಮಳೆ ಮೈದುಂಬಿ ಸುರಿಯುತ್ತಿರುವ ಘಟಪ್ರಭೆ ನದಿ ಮೈದುಂಬಿ ಹರಿಯುತ್ತಿದ್ದು ಮೂಡಲಗಿ ತಾಲೂಕಿನ ಸುಣಧೋಳಿ, ಕಮ¯ದಿನ್ನಿ, ಹುಣಶ್ಯಾಳ ಪಿ.ವಾಯ್, ಢವಳೇಶ್ವರ, ಅವರಾದಿ ಹಾಗೂ ಗೋಕಾಕ ತಾಲೂಕಿನ ಉದಗಟ್ಟಿ …

Read More »

ಮಂತ್ರಾಲಯದಲ್ಲಿ ನಡೆಯುತ್ತಿರುವ ಗುರು ರಾಘವೇಂದ್ರ ಸ್ವಾಮಿಗಳ 349 ನೇ ಆರಾಧನಾ ಮಹೋತ್ಸವ

ರಾಯಚೂರು: ಮಂತ್ರಾಲಯದಲ್ಲಿ ನಡೆಯುತ್ತಿರುವ ಗುರು ರಾಘವೇಂದ್ರ ಸ್ವಾಮಿಗಳ 349 ನೇ ಆರಾಧನಾ ಮಹೋತ್ಸವಕ್ಕೆ ಇಂದು ಉತ್ತರರಾಧನೆ ಸಂಭ್ರಮದ ಮೂಲಕ ತೆರೆ ಬಿದ್ದಿದೆ.ಪ್ರತಿ ವರ್ಷ ಉತ್ತರರಾಧನೆ ದಿನ ಮಂತ್ರಾಲಯದಲ್ಲಿ ಮಹಾರಥೋತ್ಸವ ನಡೆಯುತ್ತಿತ್ತು. ಆದ್ರೆ ಈ ಬಾರಿ ಕೊರೊನಾ ಆತಂಕ ಹಿನ್ನೆಲೆ ಮಠದ ಪ್ರಾಂಗಣದಲ್ಲಿ ಮಾತ್ರ ರಥೋತ್ಸವ ನಡೆಯಿತು. ಇಂದು ವಸಂತೋತ್ಸವ, ಮೂಲರಾಮದೇವರ ಪೂಜೆ ಸೇರಿ ನಾನಾ ವಿಶೇಷ ಪೂಜೆ ಹಾಗೂ ಮಹಾಪಂಚಾಮೃತ ಅಭೀಷೇಕದೊಂದಿಗೆ ಉತ್ತರರಾಧನೆ ನಡೆಯಿತು. ಆಗಸ್ಟ್ 2 ರಿಂದ ಆರಂಭವಾದ …

Read More »

ಪ್ರವಾಹ ಸಮಸ್ಯೆ ಎದುರಾದರೆ ಅದನ್ನು ಎದುರಿಸುವ ಎಲ್ಲ ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ: ತಹಶೀಲ್ದಾರ ಪ್ರಕಾಶ ಹೂಳೆಪ್ಪಗೋಳ

ಗೋಕಾಕ: ಪ್ರವಾಹ ಸಮಸ್ಯೆ ಎದುರಾದರೆ ಅದನ್ನು ಎದುರಿಸುವ ಎಲ್ಲ ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದ್ದು ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಗೋಕಾಕ ತಹಶೀಲ್ದಾರ ಪ್ರಕಾಶ ಹೂಳೆಪ್ಪಗೋಳ ಹೇಳಿದರು. ಇಂದು ಮಾದ್ಯಮದವರೊಂದಿಗೆ ಮಾತನಾಡಿ, ಪ್ರವಾಹ ಸಮಸ್ಯೆ ಇನ್ನೂ ಎದುರಾಗಿಲ್ಲ. ಹಿರಣ್ಯಕೇಶಿ, ಮಾರ್ಕಂಡೇಯ  ನದಿಗಳಲ್ಲಿ  ನೀರು ಹೆಚ್ಚಿನ ಪ್ರಮಾಣದಲ್ಲಿ ಬರುತ್ತಿದೆ. ಮತ್ತು ಶಿರೂರು ಡ್ಯಾಂನಿಂದ  ನೀರು ಬಿಡುಗಡೆಯಾಗಿದೆ ಹೀಗಾಗಿ ನದಿಗಳು ತುಂಬಿ ಹರಿಯುತ್ತಿವೆ. ಹಿಡಕಲ್ ಜಲಾಶಯ ಇನ್ನೂ ಅರ್ಧದಷ್ಟು ಖಾಲಿಯಿದೆ. ಅದು ಭರ್ತಿಯಾಗುವರೆಗೂ ಪ್ರವಾಹ …

Read More »

ಸೊಂಕಿತರ ಆರೈಕೆಗಾಗಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅವಿರತವಾಗಿ ಶ್ರಮಿ

ಮೂಡಲಗಿ : ಹೆಚ್ಚುತ್ತಿರುವ ಕೊರೋನಾ ಸೊಂಕಿನ ಹಿನ್ನೆಲೆಯಲ್ಲಿ ಸೊಂಕಿತರ ಆರೈಕೆಗಾಗಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅವಿರತವಾಗಿ ಶ್ರಮಿಸುತ್ತಿದ್ದು, ಅವರ ಜನಪರ ಕಾಳಜಿಯು ನಮ್ಮ ನಾಡಿಗೆ ಮಾದರಿಯಾಗಿದೆ ಎಂದು ತಹಶೀಲ್ದಾರ ದಿಲ್‌ಶಾದ್ ಮಹಾತ್ ಶ್ಲಾಘಿಸಿದರು. ಬುಧವಾರದಂದು ಕೊರೋನಾ ಸೊಂಕಿತರಿಗೆ ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೇಂದ್ರಿಕೃತ ಆಮ್ಲಜನಕ ಪೂರೈಕೆ ಘಟಕಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೊರೋನಾ ಸೊಂಕಿತರಿಗೆ ತಮ್ಮ ಅನನ್ಯ ಸೇವೆ ನೀಡುವ ಮೂಲಕ ಅವರ ಪ್ರೀತಿಗೆ …

Read More »

ತಂದೆಯ ಜೊತೆ ಆಸ್ಪತ್ರೆಗೆ ಬಂದಿದ್ದ ಯುವಕ ಕಟ್ಟಡ ಮೇಲಿಂದ ಬಿದ್ದು ಸಾವ

ಬೆಳಗಾವಿ:  ತಂದೆಯ ಜೊತೆ ಆಸ್ಪತ್ರೆಗೆ ಬಂದಿದ್ದ ಯುವಕ ಕಟ್ಟಡ ಮೇಲಿಂದ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ನಗರದ ಕಡೋಲ್ಕರ್ ಗಲ್ಲಿಯಲ್ಲಿ  ಘಟನೆ ನಡೆದಿದ್ದು, ಕಟ್ಟಡ ಮೇಲಿಂದ ಯುವಕ ಬಿದ್ದಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.  ಹಿಂಡಲಗಾ ಗ್ರಾಮದ ರೋಹನ್ ಕುಪ್ಪೇಕರ್(25) ಮೃತ ದುರ್ದೈವಿ. ಕಟ್ಟಡ ಮೇಲಿಂದ ಯುವಕ ಬೀಳಲು ನಿಖರ ಕಾರಣ ಪತ್ತೆಯಾಗಿಲ್ಲ. ಪ್ರಕರಣ ಕುರಿತು ತನಿಖೆ ನಡೆಸುತ್ತಿರುವ ಪೊಲೀಸರು ಬೆಳಗಾವಿ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಯುವಕನ ಮೃತದೇಹ ರವಾನಿಸಿದ್ದಾರೆ. …

Read More »

ಪ್ರವಾಹದ ಭೀತಿ ಹೆಚ್ಚಾಗಿದ್ದು ರಮೇಶ್ ಜಾರಕಿಹೊಳಿ, ಬೆಂಗಳೂರಿನಿಂದ ಬೆಳಗಾವಿ ಜಿಲ್ಲೆಗೆ……

ಬೆಂಗಳೂರು: ಬೆಳಗಾವಿ ಜಿಲ್ಲೆಯಾದ್ಯಂತ ಮಳೆಯಿಂದ ಪ್ರವಾಹದ ಭೀತಿ ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ಕೂಡಲೇ ಜಿಲ್ಲೆಗೆ ತೆರಳುವಂತೆ ಸಿಎಂ ಬಿಎಸ್ ವೈ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿಗೆ ಸೂಚನೆ ನೀಡಿದ್ದಾರೆ. ಇಂದು ಬೆಳಗ್ಗೆ ರಮೇಶ್ ಜಾರಕಿಹೊಳಿ ಜೊತೆಗೆ ದೂರವಾಣಿಯಲ್ಲಿ ಮಾತುಕತೆ ನಡೆಸಿದ ಸಿಎಂ, ಬೆಳಗಾವಿಯಲ್ಲಿ ಯಾವುದೇ ಅನಾಹುತಗಳು ನಡೆಯಂತೆ ಎಚ್ಚರ ವಹಿಸಿ. ಸಂಪೂರ್ಣವಾಗಿ ಬೆಳಗಾವಿಯ ಮಳೆಯ ಅನಾಹುತಗಳು ನಮ್ಮ ಹಿಡಿತದಲ್ಲಿರಬೇಕು. ಪ್ರವಾಹ ಪರಿಸ್ಥಿತಿಯನ್ನು ನಾವು ನಿಯಂತ್ರಿಸಬೇಕು. ಕಂದಾಯ ಇಲಾಖೆಯ ಅಧಿಕಾರಿಗಳ ಜೊತೆಗೆ …

Read More »

ಶ್ರೀ ಕ್ಷೇತ್ರ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟ ಮುಳುಗುವ ಭೀತಿ

ಮಂಗಳೂರು: ಪಶ್ಚಿಮ ಘಟ್ಟದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟ ಮುಳುಗುವ ಭೀತಿ ಎದುರಾಗಿದೆ. ನೇತ್ರಾವತಿ ನದಿ ನೀರು ತುಂಬಿ ಹರಿಯುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಸ್ನಾನಘಟ್ಟದ ಮೇಲ್ಬಾಗದವರೆಗೂ ನೇತ್ರಾವತಿ ನದಿ ನೀರು ಬರುತ್ತಿದೆ. ಅಪಾಯದ ಮಟ್ಟ ಮೀರಿ ನೀರು ಹರಿಯುತ್ತಿರುವುದರಿಂದ ನೇತ್ರಾವತಿ ಸ್ನಾನ ಘಟ್ಟದ ಬಳಿ ಭಕ್ತರಿಗೆ ಸಂಪೂರ್ಣವಾಗಿ ನಿಷೇಧ ಹೇರಲಾಗಿದೆ. ಪಶ್ಚಿಮ ಘಟ್ಟದಲ್ಲಿ ಇದೇ ರೀತಿ ಮಳೆ ಮುಂದುವರೆದರೆ …

Read More »

ಶಾಸಕ ಎಸ್.ರಾಮಲಿಂಗಾ ರೆಡ್ಡಿ ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಹೈದರಾಬಾದ್: ಟಿಆರ್ ಎಸ್ ಪಕ್ಷದ ಶಾಸಕ ಎಸ್.ರಾಮಲಿಂಗಾ ರೆಡ್ಡಿ ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ರಾಮಲಿಂಗಾ ರೆಡ್ಡಿಯವರು ದುಬ್ಬಾಕಾ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು. 59 ವರ್ಷದ ರಾಮಲಿಂಗಾ ರೆಡ್ಡಿ ಇತ್ತೀಚೆಗೆ ಕೊಂಪಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಮೊಳಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆನಾರೋಗ್ಯ ಹಿನ್ನೆಲೆಯಲ್ಲಿ ಶಾಸಕರನ್ನು ರಾತ್ರಿ ಸುಮಾರು 2.30ಕ್ಕೆ ಗಾಚಿಬೌಲಿಯಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೆಲಂಗಾಣ ರಾಷ್ಟ್ರೀಯ ಪಕ್ಷದ ಹಿರಿಯ ನಾಯಕರಲ್ಲಿ ರಾಮಲಿಂಗಾ ರೆಡ್ಡಿ ಸಹ ಒಬ್ಬರಾಗಿದ್ದರು. ಶಾಸಕರ ಅಂತಿಮ ವಿಧಿವಿಧಾನಗಳು …

Read More »