Breaking News

Monthly Archives: ಆಗಷ್ಟ್ 2020

ನನ್ನ ಖಾಸಾ ಸ್ನೇಹಿತರೊಬ್ಬರನ್ನು ಕಳೆದುಕೊಂಡ ನೋವು ನನಗಾಗಿದೆ :ರಮೇಶ ಜಾರಕಿಹೊಳಿ

ಗೋಕಾಕ:  ಗೋಕಾಕ್ ನಗರದ ಸಚ್ಛಾರಿತ್ರ್ಯದ ರಾಜಕಾರಣಿಯಾಗಿದ್ದ  ಗಿರೀಶ್ ಖೋತ್ ಅವರ ಅಕಾಲಿಕ ಮರಣದಿಂದ ನನ್ನ ಖಾಸಾ ಸ್ನೇಹಿತರೊಬ್ಬರನ್ನು ಕಳೆದುಕೊಂಡ ನೋವು ನನಗಾಗಿದೆ  ಎಂದು  ಸಚಿವ ರಮೇಶ ಜಾರಕಿಹೊಳಿ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. 3 ನೆಯ ಬಾರಿಗೆ ಗೋಕಾಕ್ ನಗರಸಭೆಗೆ ಆಯ್ಕೆಯಾಗಿದ್ದ ಖೋತ್ ಮಾದರಿ ಜನಪ್ರತಿನಿಧಿಯಾಗಿದ್ದರು. ಜನಾನುರಾಗಿ ಮತ್ತು  ಸರಳ, ಸ್ನೇಹಜೀವಿಯಾಗಿದ್ದ ಇವರು ನನ್ನ ರಾಜಕಾರಣದ ಪ್ರತಿ ಹೆಜ್ಜೆಯಲ್ಲೂ ನನ್ನ ಜೊತೆಗಿದ್ದರು. ಇವರ ಹಠಾತ್ ಅಗಲಿಕೆ ನನ್ನ ಮನಸ್ಸಿಗೆ ತೀವ್ರ ನೋವನ್ನು …

Read More »

ಮಹಾರಾಷ್ಟ್ರದ ಉದ್ಯಮಿ ಸಕ್ಕರೆ ಕಾರ್ಖಾನೆ ನಿರ್ಮಾಣಕ್ಕೆ ಬಂದಾಗ ಅವರಿಗೆ ನಮ್ಮ ಜನರು  ಮರಾಠಿ ಭಾಷೆಯಲ್ಲಿ ಮಾತನಾಡುವಂತೆ ಬೇಡಿಕೆ ಇಟ್ಟಿದ್ದಾರೆ.  ಇದರಲ್ಲಿ ಅನ್ಯತ ಭಾವಿಸಬಾರದು. 

ಅಥಣಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೊರೊನಾದಿಂದ ಬೇಗ ಗುಣಮುಖರಾಗಲಿ. ದೇವರು ಆರೋಗ್ಯ ದಯಪಾಲಿಸಲಿ ಎಂದು ಬೇಡಿಕೊಳ್ಳುವೆ  ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದರು. ಅಥಣಿ ಆರ್ ಟಿ ಓ ಕಚೇರಿಯ ನೂತನವಾಗಿ ವಾಹನ ನೋಂದಣಿ ಕೊಠಡಿ ಉದ್ಘಾಟಿಸಿ ಮಾತನಾಡಿದರು. ಮುಖ್ಯಮಂತ್ರಿಗಳು ಸ್ವತಃ ನನ್ನ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದವರು ಕ್ವಾರೆಂಟೈನ್ ಆಗಿ ಅಂತ ಹೇಳಿದ್ದಾರೆ. ಇತ್ತೀಚಿನ ದಿನಗಳಲ್ಲಿ ನಾನು ಅವರನ್ನು ಭೇಟಿ ನೀಡಿಲ್ಲ. ದೆಹಲಿಗೆ ಹೋಗಿಬಂದ ವಿಚಾರವನ್ನು ಅವರಿಗೆ ಸಾಮಾಜಿಕ …

Read More »

ಕೋವಿಡ್ ಸೋಂಕಿತ ಮೃತಪಟ್ಟು ಮೂರು ದಿನ ಕಳೆದರೂ ಮನೆಯವರಿಗೆ ಮಾಹಿತಿ ನೀಡಿಲ್ಲ

ಚಿಕ್ಕಬಳ್ಳಾಪುರ: ಕೋವಿಡ್ ಸೋಂಕಿತ ಮೃತಪಟ್ಟು ಮೂರು ದಿನ ಕಳೆದರೂ ಮನೆಯವರಿಗೆ ಮಾಹಿತಿ ನೀಡಿಲ್ಲ ಅಂತ ಮೃತನ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಆಕಾಶ್ ಆಸ್ಪತ್ರೆಯಲ್ಲಿ ನಡೆದಿದೆ. ಬೆಂಗಳೂರು ನಗರ ಕೆ.ಪಿ. ಆಗ್ರಹಾರದ 56 ವರ್ಷದ ವ್ಯಕ್ತಿಯೊಬ್ಬರು ಕೋವಿಡ್-19 ಸೋಂಕು ದೃಢಪಟ್ಟ ಹಿನ್ನೆಲೆ ಜುಲೈ 30 ರ ಸಂಜೆ ಗುರುವಾರದಂದು ದೇವನಹಳ್ಳಿಯ ಆಕಾಶ್ ಆಸ್ಪತ್ರೆಗೆ ಶಿಫ್ಟ್ ಆಗಿದ್ದರು. ಶುಕ್ರವಾರ ಬೆಳಗಿನ ಜಾವ ಸೋಂಕಿತ ಮೃತಪಟ್ಟಿದ್ದಾರೆ. …

Read More »

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವತಿಯನ್ನು ತಮ್ಮ ವಾಹನದಲ್ಲಿ ಕರೆತಂದು ಅಸ್ಪತ್ರೆಗೆ ದಾಖಲಿಸಿ ಸಚಿವ ಸಿಟಿ.ರವಿ ಮಾನವೀಯತೆ ಮೆರೆದಿದ್ದಾರೆ.

ಹಾಸನ: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವತಿಯನ್ನು ತಮ್ಮ ವಾಹನದಲ್ಲಿ ಕರೆತಂದು ಅಸ್ಪತ್ರೆಗೆ ದಾಖಲಿಸಿ ಸಚಿವ ಸಿಟಿ.ರವಿ ಮಾನವೀಯತೆ ಮೆರೆದಿದ್ದಾರೆ. ಹಾಸನ ಹೊರ ವಲಯದಲ್ಲಿ ದ್ವಿಚಕ್ರ ವಾಹನ ಅಪಘಾತವಾಗಿದ್ದು, ಅಪಘಾತದಲ್ಲಿ ಗಾಯಗೊಂಡ ಯುವತಿ ಪ್ರಜ್ಞಾಹೀನರಾಗಿ ಬಿದ್ದಿದ್ದರು. ಅದೇ ಮಾರ್ಗದಲ್ಲಿ ಹೋಗುತ್ತಿದ್ದ ಸಚಿವ ಸಿಟಿ.ರವಿ, ರಸ್ತೆಯಲ್ಲಿ ಜನ ಗುಂಪು ಕಟ್ಟಿರುವುದನ್ನು ಗಮನಿಸಿ ತಮ್ಮ ವಾಹನ ನಿಲ್ಲಿಸಿ ವಿಚಾರಿಸಿದ್ದಾರೆ.ಈ ವೇಳೆ ಯುವತಿ ಪ್ರಜ್ಞಾಹೀನವಾಗಿದ್ದನ್ನು ಗಮನಿಸಿದ ಸಚಿವರು ತಕ್ಷಣ ಯುವತಿಯನ್ನು ತಮ್ಮ ವಾಹನದಲ್ಲಿ ಹಾಸನದ ಹಿಮ್ಸ್ …

Read More »

ಅಯೋಧ್ಯೆಯಲ್ಲಿನ ರಾಮಮಂದಿರ ಶಿಲಾವಿನ್ಯಾಸ ಕಾರ್ಯಕ್ಕೆ ಮೂಹರ್ತ ಕೊಟ್ಟಿದ್ದ ವಿದ್ವಾಂಸ ವಿಜಯೇಂದ್ರ ಶರ್ಮಾ

ಬೆಳಗಾವಿ: ಅಯೋಧ್ಯೆಯಲ್ಲಿನ ರಾಮಮಂದಿರ ಶಿಲಾವಿನ್ಯಾಸ ಕಾರ್ಯಕ್ಕೆ ಮೂಹರ್ತ ಕೊಟ್ಟಿದ್ದ ವಿದ್ವಾಂಸ ವಿಜಯೇಂದ್ರ ಶರ್ಮಾ ಸ್ವಾಮೀಜಿ ಅವರಿಗೆ ಜೀವ ಬೆದರಿಕೆ ಕರೆ ಆಗಮಿಸುತ್ತಿವೆ ಎಂದು ತಿಳಿಸಿದ್ದಾರೆ‌. ದೇಶವೇ ನಿರೀಕ್ಷೆಯಲ್ಲಿದ್ದ ರಾಮಂದಿರ ನಿರ್ಮಾಣ ಕಾರ್ಯಕ್ಕೆ ಬೆಳಗಾವಿ ಮೂಲಕದ ವಿಜಯೇಂದ್ರ ಶರ್ಮಾ ವಿದ್ವಾಂಸರು ಶಿಲಾವಿನ್ಯಾಸಕ್ಕೆ ಮುಹೂರ್ತ ನೀಡಿದ್ದರು. ದೆಹಲಿಯಲ್ಲಿ ಶಿಲಾವಿನ್ಯಾಸಕ್ಕೆ ಸಿದ್ದತೆಗಳು ನಡೆಯುತ್ತಿವೆ. ಅ.5 ರಂದು ನಡೆಯುವ ಕಾರ್ಯಕ್ರಮಕ್ಕೆ ಎಲ್ಲ ಸಿದ್ದತೆಗಳು ನಡೆಯುತ್ತಿವೆ. ಆದ್ರೆ ಈತ್ತ ಶಿಲಾವಿನ್ಯಾಸಕ್ಕೆ ಮುಹೂರ್ತ ನೀಡಿದ್ದ ಬೆಳಗಾವಿಯ ಶಾಸ್ತ್ರಿ ನಗರದ …

Read More »

ಗೋಕಾಕ: ನಗರಸಭೆ ಸದಸ್ಯ ಗಿರೀಶ ಖೋತ್( 45) ಅಕಾಲಿಕ ಮರಣ……….

ಗೋಕಾಕ: ಮೂರು ಬಾರಿ ನಗರಸಭೆ ಸದಸ್ಯರಾಗಿ ಜನಸೇವಕರಾಗಿ ದುಡಿದಿದ್ದ  ಗಿರೀಶ ಖೋತ್ (45) ಅಕಾಲಿಕ ಮರಣ ಹೊಂದಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಬಸವನಗರದ ನಿವಾಸದಲ್ಲಿ ಅವರು ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ. 14 ನೇ ವಾರ್ಡಿನ್ ಮೂರು ಬಾರಿ ಸದಸ್ಯರಗಾಗಿ ಜನಸೇವಕರಾಗಿ ದುಡಿದಿದ್ದ ಗಿರೀಶ ಖೋತ ಅವರು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇವರ ಅಕಾಲಿಕ ಮರಣಕ್ಕೆ ಸೌಭಾಗ್ಯ ಲಕ್ಷ್ಮಿ ಚೇರ್ಮನ್ ರಾದಂತ ಶ್ರೀ ಸಂತೋಷ್ ಜಾರಕಿಹೊಳಿ ಅವರು …

Read More »

ಸಿಎಂ ಬಿ.ಎಸ್​ ಯಡಿಯೂರಪ್ಪಗೆ ಕೊರೊನಾ ಸೋಂಕು ತಗುಲಿದ ಬೆನ್ನಲ್ಲೇ ರಾಜ್ಯಪಾಲ ಡಾ. ವಜುಭಾಯ್​ ವಾಲಾ ಕೊರೊನಾ ಪರೀಕ್ಷೆ

ಬೆಂಗಳೂರು: ಸಿಎಂ ಬಿ.ಎಸ್​ ಯಡಿಯೂರಪ್ಪಗೆ ಕೊರೊನಾ ಸೋಂಕು ತಗುಲಿದ ಬೆನ್ನಲ್ಲೇ ರಾಜ್ಯಪಾಲ ಡಾ. ವಜುಭಾಯ್​ ವಾಲಾ ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಕಳೆದ ಶುಕ್ರವಾರ, ಯಡಿಯೂರಪ್ಪ ರಾಜ್ಯಪಾಲರನ್ನ ಭೇಟಿಯಾಗಿದ್ದರು. ಈ ಹಿನ್ನೆಲೆ ಸಿಎಂ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದ ವಜೂಭಾಯ್ ವಾಲಾ, ಅವರ ಆಪ್ತ ಸಹಾಯಕ ಹಾಗೂ ಏಡ್ ಡಿ ಕ್ಯಾಮ್(ಎಡಿಸಿ) ಕೊರೊನಾ ಟೆಸ್ಟ್​​ ಮಾಡಿಸಿಕೊಂಡಿದ್ದಾರೆ. ಮೂವರ ವರದಿಯಲ್ಲೂ ಕೊರೊನಾ ನೆಗೆಟಿವ್ ಬಂದಿದೆ ಎಂದು ರಾಜ್ಯಪಾಲರ ಕಚೇರಿಯಿಂದ ಅಧಿಕೃತ ಮಾಹಿತಿ ಸಿಕ್ಕಿದೆ. ರಾಜ್ಯಪಾಲರ …

Read More »

ಸಂಬಳ ಕೊಟ್ಟಿಲ್ಲ ಎಂದು ಎಂದು ಆತ್ಮ ಹತ್ಯೆ ಮಾಡಿಕೊಳ್ಳಲು ಮುಂದಾದ ಕರೋನಾ ಸೋಂಕಿತ..

ಬೆಳಗಾವಿ: ಕೊರೊನಾ ಸೋಂಕಿತನೋರ್ವ ಆಸ್ಪತ್ರೆಯ ಕಟ್ಟಡ ಏರಿ ಆತ್ಮಹತ್ಯೆ  ಬೆದರಿಕೆ ಹಾಕಿರುವ ಘಟನೆ ಗೋಕಾಕ್ ತಾಲ್ಲೂಕಿನಲ್ಲಿ ನಡೆದಿದೆ. ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಗುತ್ತಿಗೆ ಆದಾರದ ಮೇಲೆ ಕೆಲಸ ನಿರ್ವಹಿಸುತ್ತಿದ್ದ ಈತನಿಗೆ ಸೋಮವಾರ ಬೆಳಿಗ್ಗೆ ಕೊರೊನಾ ಪಾಸಿಟಿವ್ ಬಂದಿದೆ.   ಬಳಿಕ ಆಸ್ಪತ್ರೆ ಕಟ್ಟಡ ಏರಿ ಕಳೆದ 6 ತಿಂಗಳಿಂದ ವೇತನ ನೀಡಿಲ್ಲ. ಸುಮಾರು 40 ಜನರು ಕೆಲಸ ನಿರ್ವಹಿಸುತ್ತಿದ್ದೆವೆ.   ಎಲ್ಲ ಕುಟುಂಬಗಳು ಕೊರೊನಾ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿವೆ.  ಗುತ್ತಿಗೆ ಕಾರ್ಮಿಕರಿಗೆ …

Read More »

ಕನ್ನಡ ಭಾಷೆಗೆ ಅವಮಾನಿಸಿದ ಸಚಿವ ಶ್ರೀಮಂತ ಪಾಟೀಲ ಚಿವ ಸಂಪುಟದಿಂದ ಕೈಬಿಡಬೇಕ: ಕರ್ನಾಟಕ ರಕ್ಷಣಾ ವೇದಿಕೆ

ಚಿಕ್ಕೋಡಿ : ಕನ್ನಡ ಭಾಷೆಗೆ ಅವಮಾನಿಸಿದ ಸಚಿವ ಶ್ರೀಮಂತ ಪಾಟೀಲರನ್ನು ಸಚಿವ ಸಂಪುಟದಿಂದ ಕೈಬಿಡಬೇಕೆಂದು ಒತ್ತಾಯಿಸಿ ಸೋಮವಾರ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ತಹಸೀಲ್ದಾರ ಮುಖಾಂತರ ಸರಕಾರಕ್ಕೆ ಮನವಿ ಸಲ್ಲಿಸಿದರು. ಅಥಣಿ ತಾಲೂಕಿನ ಬಾಳಿಗೇರಿ ಗ್ರಾಮದಲ್ಲಿ ಈಚೆಗೆ ನಡೆದ ಸಕ್ಕರೆ ಕಾರ್ಖಾನೆಯ ಅಡಿಗಲ್ಲು ಸಮಾರಂಭದ ವೇದಿಕೆಯಲ್ಲಿ ಮರಾಠಿ ನಾಮಫಲಕ ಹಾಕುವ ಜತೆಗೆ ಸಚಿವ ಶ್ರೀಮಂತ ಪಾಟೀಲರು ಕನ್ನಡ ಭಾಷೆ ಮರೆತು ಮರಾಠಿಯಲ್ಲಿಯೇ ಮಾತನಾಡಿದ್ದಾರೆ.  ಇದು ಕನ್ನಡಿಗರಿಗೆ ನೋವುಂಟು ಮಾಡಿದ್ದಾರೆ. ಮರಾಠಿ …

Read More »

ಗೋಕಾಕ:ನಗರಸಭೆ ಸದಸ್ಯ ಗಿರೀಶ ಖೋತ್ (55) ಅಕಾಲಿಕ ಮರಣ ಹೊಂದಿದ್ದಾರೆ.

ಗೋಕಾಕ: ಮೂರು ಬಾರಿ ನಗರಸಭೆ ಸದಸ್ಯರಾಗಿ ಜನಸೇವಕರಾಗಿ ದುಡಿದಿದ್ದ  ಗಿರೀಶ ಖೋತ್ (55) ಅಕಾಲಿಕ ಮರಣ ಹೊಂದಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಬಸವನಗರದ ನಿವಾಸದಲ್ಲಿ ಅವರು ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ. 14 ನೇ ವಾರ್ಡಿನ್ ಮೂರು ಬಾರಿ ಸದಸ್ಯರಗಾಗಿ ಜನಸೇವಕರಾಗಿ ದುಡಿದಿದ್ದ ಗಿರೀಶ ಖೋತ ಅವರು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.  

Read More »