ತಾರಿಹಾಳ ಗ್ರಾಮದ ಪುಟ್ಟರಾಜ ಕಳ್ಳತನ ಮಾಡುವ ವೇಳೆ ಮೇಲಿಂದ ಬಿದ್ದಿದ್ದಾನೆ. ಈತ ನಿನ್ನೆ ರಾತ್ರಿ ಕಂಠಪೂರ್ತಿ ಕುಡಿದು ಕಳ್ಳತನ ಮಾಡಲು ವಿದ್ಯಾನಗರದ ಚನ್ನಮ್ಮ ಅಪಾರ್ಟ್ಮೆಂಟ್ಗೆ ತೆರಳಿದ್ದ. ಆದರೆ ಕಾಲು ಜಾರಿ ಬಿದ್ದು ಗಾಯಗೊಂಡಿದ್ದಾನೆ. ತೀವ್ರವಾಗಿ ಗಾಯಗೊಂಡಿರುವ ಕಳ್ಳನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕುಡಿದ ಅಮಲಿನಲ್ಲಿ ಬಿದ್ದು, ಕಳ್ಳ ಜನರ ಕೈಗೆ ಸಿಕ್ಕಿಬಿದ್ದಿದ್ದಾನೆ. ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳ ಈ ಹಿಂದೆ ಎಲ್ಲೆಲ್ಲಿ ಕಳ್ಳತನ …
Read More »Daily Archives: ಸೆಪ್ಟೆಂಬರ್ 1, 2020
ಬೆಳಗಾವಿ ಜಿಲ್ಲೆಯ ಪ್ರಮುಖ ದೇವಾಲಯಗಳನ್ನು ಲಾಕ್ ಡೌನ್ ಸಡಿಲಿಕೆಯ ನಡುವೆಯೂ ಸೆ.30ರವರೆಗೆ ಬಂದ್
ಬೆಳಗಾವಿ: ಬೆಳಗಾವಿ ಜಿಲ್ಲೆಯ ಪ್ರಮುಖ ದೇವಾಲಯಗಳನ್ನು ಲಾಕ್ ಡೌನ್ ಸಡಿಲಿಕೆಯ ನಡುವೆಯೂ ಸೆ.30ರವರೆಗೆ ಬಂದ್ ಮಾಡಲಾಗಿದೆ. ಸುಪ್ರಸಿದ್ಧ ಸವದತ್ತಿ ರೇಣುಕಾ ಯಲ್ಲಮ್ಮ, ಚಿಂಚಲಿ ಮಾಯಕ್ಕ , ಜೋಗುಳಬಾವಿ ಸತ್ಯಮ್ಮ ದೇವಸ್ಥಾನಗಳಿಗೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಮುಂದುವರೆದಿದೆ. ಈ ಮೂರು ದೇವಾಲಯಗಳಿಗೂ ಮಹಾರಾಷ್ಟ್ರಾದಿಂದ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಹೀಗಾಗಿ ಕೊರೊನಾ ಹಿನ್ನೆಲೆ ಭಕ್ತರ ಹಿತದೃಷ್ಟಿಯಿಂದ ಇನ್ನೂ ಒಂದು ತಿಂಗಳವರೆಗೂ ಈ ದೇವಾಲಯಗಳ ಬಾಗಿಲು ತೆರೆಯದಂತೆ ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ …
Read More »RTE’ ಪ್ರವೇಶ : ವಿದ್ಯಾರ್ಥಿಗಳು, ಪೋಷಕರಿಗೆ ಇಲ್ಲಿದೆ ಮಹತ್ವದ ಮಾಹಿತಿ
ಬೆಂಗಳೂರು : ಶಿಕ್ಷಣ ಹಕ್ಕು ಕಾಯ್ದೆಗೆ ಸಂಬಂಧಿಸಿದಂತೆ ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯು ಮುಖ್ಯ ಮಾಹಿತಿಯೊಂದನ್ನು ನೀಡಿದ್ದು, ಆರ್ ಟಿಇ ಎರಡನೇ ಸುತ್ತಿನ ಲಾಟರಿ ಪ್ರಕ್ರಿಯೆ ಇಂದು ಮಧ್ಯಾಹ್ನ 3 ಗಂಟೆಗೆ ಶಿಕ್ಷಣ ಇಲಾಖೆ ಕಚೇರಿಗಳಲ್ಲಿ ನಡೆಯಲಿದೆ. ಆರ್ ಟಿಇ ಎರಡನೇ ಸುತ್ತಿನಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳ ಮಾಹಿತಿಯನ್ನು ನೋಂದಾಯಿತ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುತ್ತದೆ. ಅಲ್ಲದೆ, ಪಾಲಕರು ಶಿಕ್ಷಣ ಇಲಾಖೆಯ ವೆಬ್ ಸೈಟ್ ನಲ್ಲೂ http://www.schooleducation.kar.nic.in/ ನಲ್ಲಿ ಸೀಟು …
Read More »ಇಂದಿನಿಂದ ‘ಆಫ್ಲೈನ್’ನಲ್ಲಿ ಪುನರ್ಮನನ ತರಗತಿ: ಬೆಂ.ವಿ.ವಿ ಕ್ರಮ
ಬೆಂಗಳೂರು: ಪದವಿ ಮತ್ತು ಸ್ನಾತಕೋತ್ತರ ಪದವಿಯ ಅಂತಿಮ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಪಠ್ಯದ ಪುನರ್ಮನನಕ್ಕಾಗಿ ‘ರೆಗ್ಯುಲರ್ ಆಫ್ಲೈನ್’ ತರಗತಿಗಳನ್ನು ಸೆಪ್ಟೆಂಬರ್ 1ರಿಂದಲೇ ತೆಗೆದುಕೊಳ್ಳುವಂತೆ ಬೆಂಗಳೂರು ವಿಶ್ವವಿದ್ಯಾಲಯ ತನ್ನ ವ್ಯಾಪ್ತಿಯ ಕಾಲೇಜುಗಳಿಗೆ ನಿರ್ದೇಶಿಸಿದೆ. ಸೆ. 12ರಿಂದ ಪದವಿಯ 6ನೇ ಸೆಮಿಸ್ಟರ್ ಹಾಗೂ 23ರಿಂದ ಸ್ನಾತಕೋತ್ತರ ಪದವಿಯ 4ನೇ ಸೆಮಿಸ್ಟರ್ನ ಪರೀಕ್ಷೆಗಳನ್ನು ನಡೆಸಲು ವಿ.ವಿ. ದಿನಾಂಕ ನಿಗದಿಪಡಿಸಿದೆ. ಪರೀಕ್ಷೆಗೂ ಮುನ್ನ ವಿದ್ಯಾರ್ಥಿಗಳಲ್ಲಿ ಪಾಠಕ್ಕೆ ಸಂಬಂಧಿಸಿದಂತೆ ಪ್ರಶ್ನೆ, ಗೊಂದಲ, ಸಮಸ್ಯೆಗಳಿದ್ದರೆ ಪರಿಹರಿಸಿಕೊಳ್ಳಲು ಹಾಗೂ ಪಾಠಗಳ ಪುನರಾವರ್ತನೆಗೆ ಅವಕಾಶ …
Read More »ಶ್ರೀ ಸಂತೋಷ. ರ. ಜಾರಕಿಹೊಳಿಯವರಿಂದ ಪ್ರತಿಕಾ ಮಿತ್ರರಿಗೆ ಖಡಕ್ ವಾರ್ನಿಂಗ್
ಗೋಕಾಕ ನಗರದ ಎಲ್ಲಾ ಪತ್ರಿಕಾ ಮಾಧ್ಯಮದ ಮಿತ್ರ ರನ್ನ ಶ್ರೀ ಸಂತೋಷ್ ಜಾರಕಿಹೊಳಿ ಅವರು ತಮ್ಮ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಒಂದು ಔತಣ ಕೂಟಕ್ಕೆ ಕರೆದಿದ್ದರು ಇಲ್ಲಿ ಸುಮಾರು ಜನ ಕೂಡ ಭಾಗ ವಹಿಸಿದ್ದರು, ಗೋಕಾಕ ನಗರದ ಎಲ್ಲಾ ವಾರ ಪತ್ರಿಕೆ,ದಿನ ಪತ್ರಿಕೆ ,ಹಾಗೂ ಯೂಟ್ಯೂಬ್ ಚಾನಲ್ ಗಳ ವರದಿಗಾರರು ಈ ಸಭೆಯಲ್ಲಿ ಭಾಗ ವಹಿಸಿದ್ದರು, ಸಭೆಯ ಮುಖ್ಯ ಉದ್ದೇಶ ಏನಂದ್ರೆ ಎಲ್ಲರೂ ಒಂದಾಗಿ ಇರಿ ನಿಮ್ಮ , …
Read More »ಇತರರು ತಲೆಹಾಕುವುದು ಸರಿಯಲ್ಲ’: ಅರ್ಚಕ ನಾರಾಯಣ ಆಚಾರ್ ಪುತ್ರಿಯರ ವಿವಾಹ ವಿಚಾರ
ಮಡಿಕೇರಿ: ‘ತಲಕಾವೇರಿಯಲ್ಲಿ, ಗುಡ್ಡ ಕುಸಿತದಿಂದ ಮೃತಪಟ್ಟ ಕ್ಷೇತ್ರದ ಪ್ರಧಾನ ಅರ್ಚಕ ನಾರಾಯಣ ಆಚಾರ್ ಅವರ ಪುತ್ರಿಯರು ಅನ್ಯಧರ್ಮದ ಯುವಕರನ್ನು ಮದುವೆ ಆಗಿದ್ದಾರೆ. ಆದರೆ, ಅವರ ವೈಯಕ್ತಿಕ ವಿಚಾರದಲ್ಲಿ ಬೇರೆಯವರು ತಲೆಹಾಕುವುದು ಸರಿಯಲ್ಲ’ ಎಂದು ಕುಟುಂಬದ ಹಿರಿಯ ಸದಸ್ಯ ಜಯಪ್ರಕಾಶ್ ರಾವ್ ಸೋಮವಾರ ಇಲ್ಲಿ ಅಭಿಪ್ರಾಯಪಟ್ಟರು. ‘ಅನ್ಯಧರ್ಮದ ಯುವಕರನ್ನು ಮದುವೆ ಆಗಿದ್ದರೂ, ಹಿಂದೂ ಧರ್ಮದ ಆಚಾರ- ವಿಚಾರ ಪಾಲಿಸುತ್ತಾ ಬಂದಿದ್ದಾರೆ. ಮದುವೆಯಾದ ಹೆಣ್ಣುಮಕ್ಕಳು, ಮದುವೆಯಾದ ಕುಟುಂಬಕ್ಕೆ ಸೇರುತ್ತಾರೆ. ಆ ಕುಟುಂಬದ ಹೆಸರನ್ನೂ ಹೊಂದುತ್ತಾರೆ. …
Read More »ಅಕ್ಟೋಬರ್ನಲ್ಲಿ ಗ್ರಾಪಂ ಚುನಾವಣೆ? ಮೀಸಲಾತಿ ಪಟ್ಟಿ ಸಿದ್ಧ; ಕರೊನಾ ಕಾಲದ ನಿಯಮ ಪಾಲನೆಗೂ ಬದ್ಧ
ಬೆಂಗಳೂರು: ಕರೊನಾ ಕಾರಣಕ್ಕೆ ಮುಂದೂಡಲ್ಪಟ್ಟಿದ್ದ ಗ್ರಾಮ ಪಂಚಾಯಿತಿ ಚುನಾವಣೆಗೆ ಕೊನೆಗೂ ಕಾಲ ಕೂಡಿ ಬಂದಿದೆ. ರಾಜ್ಯ ಚುನಾವಣಾ ಆಯೋಗ ಅಕ್ಟೋಬರ್ ಮೊದಲ ಇಲ್ಲವೇ ಎರಡನೇ ವಾರದಲ್ಲಿ ಚುನಾವಣೆ ನಡೆಸುವ ಸಾಧ್ಯತೆಗಳಿವೆ. ರಾಜ್ಯದ 6025 ಗ್ರಾಪಂಗಳ ಪೈಕಿ ಶೇ.90ರ ಅವಧಿ ಜೂನ್-ಜುಲೈನಲ್ಲಿ ಅಂತ್ಯಗೊಂಡಿತ್ತು. ಕರೊನಾ ಉಲ್ಬಣ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಸಂವಿಧಾನದತ್ತ ಅಧಿಕಾರ ಬಳಸಿ ‘ಅಸಾಧಾರಣ ಸಂದರ್ಭ’ವೆಂದು ಪರಿಗಣಿಸಿ ಚುನಾವಣೆ ಮುಂದೂಡಿತ್ತು. ರಾಜ್ಯ ಸರ್ಕಾರ ಕೂಡ ಚುನಾವಣೆ ಮುಂದೂಡುವಂತೆ ಆಯೋಗಕ್ಕೆ ಮನವಿ ಮಾಡಿತ್ತು. …
Read More »ಕೊರೋನಾಗೆ ಬಲಿಯಾದರೆ 30 ಲಕ್ಷ ರು. ವಿಮೆ
ಬೆಂಗಳೂರು : ಕೊರೋನಾ ಸೋಂಕು ನಿಯಂತ್ರಣ ಸಂಬಂಧ ಕರ್ತವ್ಯದಲ್ಲಿ ತೊಡಗಿದ ರಾಜ್ಯದ ಗ್ರಾಮ ಪಂಚಾಯಿತಿ ನೌಕರರು ಸೋಂಕಿನಿಂದ ಸಾವನ್ನಪ್ಪಿದರೆ 30 ಲಕ್ಷ ರು. ವಿಮಾ ಪರಿಹಾರ ನೀಡಲಿದೆ ಮತ್ತು ಸೋಂಕಿಗೊಳಗಾದರೆ ಸಂಪೂರ್ಣ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿದೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ತಿಳಿಸಿದೆ. ಗ್ರಾಮಪಂಚಾಯತ್ ಬಿಲ್ ಕಲೆಕ್ಟರ್, ಕ್ಲರ್ಕ್, ಕ್ಲರ್ಕ್ ಕಮ್ ಡಾಟಾ ಎಂಟ್ರಿ ಆಪರೇಟರ್, ವಾಟರ್ಮೆನ್, ಜವಾನ ಮತ್ತು ಸ್ವಚ್ಛತಾಗಾರರು ಕೋವಿಡ್-19 ನಿಯಂತ್ರಣದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಸಾರ್ವಜನಿಕರಲ್ಲಿ ರೋಗದ ಬಗ್ಗೆ ಅರಿವು …
Read More »KPCC ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೊರೊನಾದಿಂದ ಗುಣಮುಖ : ಆಸ್ಪತ್ರೆಯಿಂದ ಡಿಸ್ಚಾರ್ಜ್
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಕೊರೋನಾ ಸೋಂಕಿನಿಂದಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇಂತಹ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಕೊರೋನಾ ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದು, ಇದೀಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ ಆಗಸ್ಟ್ 25ರಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಹೀಗಾಗಿ ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಇಂತಹ ಕೆಪಿಸಿಸಿ ಅಧ್ಯಕ್ಷ ಡಿಕೆ …
Read More »ಸ್ಥಳೀಯ ಉದ್ಯಮಿಗಳೇ ಹೂಡಿಕೆಗೆ ಮುಂದಾಗಿ: ಸಚಿವ ಶೆಟ್ಟರ
ಕಲಬುರ್ಗಿ: ‘ಕಲ್ಯಾಣ ಕರ್ನಾಟಕ ಭಾಗದಲ್ಲಿ ಉದ್ಯಮ ವಲಯ ಅಭಿವೃದ್ಧಿಗಾಗಿ ಹೂಡಿಕೆದಾರರನ್ನು ಆಕರ್ಷಿಸಬೇಕು ಎಂಬ ಬೇಡಿಕೆ ಬಹುದಿನಗಳಿಂದ ಇದೆ. ಆದರೆ, ಹೊರಗಿನವರು ಬಂದು ಹೂಡಿಕೆ ಮಾಡಲಿ ಎಂದು ಕಾಯುವುದಕ್ಕಿಂತ ಸ್ಥಳೀಯರೇ ಮುಂದೆ ಬಂದರೆ ಹೆಚ್ಚು ಪ್ರಯೋಜನವಾಗಲಿದೆ. ಯಾವುದೇ ಪ್ರದೇಶದ ಅಭಿವೃದ್ಧಿಗೆ ಸ್ಥಳೀಯ ಹೂಡಿಕೆಯ ಪಾತ್ರ ದೊಡ್ಡದು’ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ ಸಲಹೆ ನೀಡಿದರು. ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ …
Read More »