Breaking News

Daily Archives: ಸೆಪ್ಟೆಂಬರ್ 10, 2020

ನಿಯಮ ಮೀರಿ ಹೆಚ್ಚು ನೆರವಿಗೆ ಕೇಂದ್ರಕ್ಕೆ ರಾಜ್ಯ ಮನವಿ

ಬೆಂಗಳೂರು : ರಾಜ್ಯದಲ್ಲಿ ನೆರೆಯಿಂದ 8,071 ಕೋಟಿ ರು. ಅಂದಾಜು ಹಾನಿಯಾಗಿದ್ದು, ಎಸ್‌ಡಿಆರ್‌ಎಫ್‌ ನಿಯಮಗಳ ಅನ್ವಯ 628.7 ಕೋಟಿ ರು. ಅನುದಾನ ಮಾತ್ರ ಬರುತ್ತದೆ. ಇದು ಸಾಕಾಗುವುದಿಲ್ಲ. ಈ ಬಾರಿ ಹೆಚ್ಚುವರಿ ಹಣ ಬಿಡುಗಡೆ ಮಾಡುವಂತೆ ಕೇಂದ್ರದ ನೆರೆ ಅಧ್ಯಯನ ತಂಡಕ್ಕೆ ಮನವಿ ಮಾಡಿದ್ದೇವೆ ಎಂದು ಕಂದಾಯ ಸಚಿವ ಆರ್‌. ಅಶೋಕ್‌ ಹೇಳಿದ್ದಾರೆ. ಅಲ್ಲದೆ, ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಉಂಟಾಗುತ್ತಿರುವ ನೆರೆ ಹಾನಿ ನಿಯಂತ್ರಿಸಲು ಪ್ರವಾಹ ಮುನ್ಸೂಚನೆ ಹಾಗೂ ಪ್ರತಿಕ್ರಿಯೆಗಾಗಿ …

Read More »

ರಾಣಿ  ಚನ್ನಮ್ಮ ವಿಶ್ವ ವಿದ್ಯಾಲಯ ಹಿರೇಬಾಗೇವಾಡಗೆ ಸ್ಥಳಾಂತರ

ಭೂತರಾಮನಹಟ್ಟಿ, ಹಿರೇಬಾಗೇವಾಡಿ ಎರಡು ಕಡೆ ವಿವಿ ಕಾರ್ಯಚಟುವಟಿಕೆ ಹೆಚ್ಚುವರಿ ಕಟ್ಟಡಕ್ಕಾಗಿ  ಹಿರೇಬಾಗೇವಾಡಿಗೆ ಸ್ಥಳಾಂತರ ಅಭಿವೃದ್ದಿ ದೃಷ್ಠಿಯಿಂದ ಈ ನಿರ್ಧಾರ ಬೆಳಗಾವಿ: ರಾಣಿ  ಚನ್ನಮ್ಮ ವಿಶ್ವ ವಿದ್ಯಾಲಯ ಹಿರೇಬಾಗೇವಾಡಗೆ ಸ್ಥಳಾಂತರ ವಿಚಾರವಾಗಿ  ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ  ಸತೀಶ ಜಾರಕಿಹೊಳಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ಯಾವುದೇ ರೀತಿಯ ಧಕ್ಕೆಯಾಗುವುದಿಲ್ಲ.   ಸದ್ಯ ಭೂತರಾಮನಹಟ್ಟಿಯಲ್ಲಿರುವ ವಿಶ್ವ ವಿದ್ಯಾಲಯ  ಅರಣ್ಯ ಪ್ರದೇಶದ ಜಾಗದ ಅಧೀನದಲ್ಲಿರುವುದಿಂದ ಹೆಚ್ಚುವರಿ ಕಟ್ಟಡ, ಮತ್ತೀತರ ಚಟುವಟಿಕೆ ನಡೆಸಲು ಸಾಧ್ಯವಾಗುತ್ತಿಲ್ಲ. …

Read More »

ಪ್ರಶಾಂತ್ ಸಂಬರಗಿ ವಿರುದ್ಧ ಜಮೀರ್ ದೂರು………….

ಬೆಂಗಳೂರು: ಸ್ಯಾಂಡಲ್‍ವುಡ್ ಡ್ರಗ್ ಮಾಫಿಯಾ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡಿ ಸುದ್ದಿಯಲ್ಲಿರುವ ಪ್ರಶಾಂತ್ ಸಂಬರಗಿ ವಿರುದ್ಧ ಶಾಸಕ ಜಮೀರ್ ಅಹ್ಮದ್ ದೂರು ದಾಖಲಿಸಿದ್ದಾರೆ. ಚಾಮರಾಜ ಪೇಟೆ ಪೊಲೀಸ್ ಠಾಣೆಯಲ್ಲಿ ಜಮೀರ್ ದೂರು ದಾಖಲಿಸಿದ್ದು, ಪೊಲೀಸರು ದೂರಿನ ಆಧಾರದ ಅನ್ವಯ ಎನ್‍ಸಿಆರ್ ದಾಖಲಿಸಿಕೊಂಡಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಅಲ್ಲದೇ ಮಾಧ್ಯಮಗಳಲ್ಲಿ ಬಂದ ಸಂಬರಗಿ ಅವರ ಮಾತಿನ ವಿಡಿಯೋಗಳನ್ನು ತಮ್ಮ ದೂರಿನೊಂದಿಗೆ ಜಮೀರ್ ಸಾಕ್ಷಿಯಾಗಿ ನೀಡಿದ್ದಾರೆ. ಸಂಬರಗಿ ವಿರುದ್ಧ 100 ಕೋಟಿ ರೂ …

Read More »

ಕರ್ನಾಟಕ ಚಲನಚಿತ್ರ ವಾಣಿಕ್ಯ ಮಂಡಳಿ ಮತ್ತು ಕಲಾವಿದರು ಸೇರಿ ಇಂದು ಸಿಎಂ ಭೇಟಿ

ಬೆಂಗಳೂರು: ಡ್ರಗ್ಸ್ ಪ್ರಕರಣದ ಬಗ್ಗೆ ಈಗ ನಾವು ಮಾತನಾಡುವುದು ಸರಿಯಲ್ಲ ಎಂದು ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಅವರು ಹೇಳಿದ್ದಾರೆ.ಕರ್ನಾಟಕ ಚಲನಚಿತ್ರ ವಾಣಿಕ್ಯ ಮಂಡಳಿ ಮತ್ತು ಕಲಾವಿದರು ಸೇರಿ ಇಂದು ಸಿಎಂ ಅವರನ್ನು ಭೇಟಿ ಮಾಡಿ ಚಿತ್ರರಂಗದ ಸಮಸ್ಯೆ ಬಗ್ಗೆ ಮಾತನಾಡಿದರು. ಈ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಶಿವಣ್ಣ, ಡ್ರಗ್ ವಿಚಾರದಲ್ಲಿ ಈಗಲೇ ಮಾತನಾಡುವುದು ಬಹುಬೇಗ ಎನಿಸುತ್ತದೆ ಎಂದು ಹೇಳಿದರು ಈಗ ಆ ವಿಚಾರ ನಮ್ಮ ಬಳಿ ಇಲ್ಲ. ಸಂಬಂಧಪಟ್ಟ …

Read More »

ಡ್ರಗ್‌ ಪೆಡ್ಲರ್‌ ಲೂಮ್‌ ಪೆಪ್ಪರ್‌ ಸಾಂಬಾ ಎಲ್ಲ ಆರೋಪಿಗಳಿಗೆ ಚೈನ್‌ ಲಿಂಕ್‌,ಆರೋಪಿಗಳ ಜೊತೆಗೆ ಲೂಮ್ ಪೆಪ್ಪರ್ ನೇರ ಸಂಪರ್ಕ

ಬೆಂಗಳೂರು: ಡ್ರಗ್ಸ್ ಮಾಫಿಯಾ ಪ್ರಕರಣದ 7ನೇ ಆರೋಪಿಯಾಗಿರುವ ಸೆನೆಗಲ್‌ ದೇಶದ ಪ್ರಜೆ ಡ್ರಗ್‌ ಪೆಡ್ಲರ್‌ ಲೂಮ್‌ ಪೆಪ್ಪರ್‌ ಸಾಂಬಾ ಎಲ್ಲ ಆರೋಪಿಗಳಿಗೆ ಚೈನ್‌ ಲಿಂಕ್‌ ಆಗಿರುವ ವಿಚಾರ ಸಿಸಿಪಿ ವಿಚಾರಣೆ ವೇಳೆ ಗೊತ್ತಾಗಿದೆ ಹೌದು. ಸೆರೆ ಸಿಕ್ಕ ಆರಂಭದಲ್ಲಿ “ಐ ದೋಂತ್ ನೋ ಇಂಗ್ಲಿಷ್” ನನಗೆ ಆಫ್ರಿಕನ್‌ ಭಾಷೆ ಬಿಟ್ಟರೆ ಬೇರೆ ಯಾವುದೇ ಭಾಷೆ ಬರುವುದಿಲ್ಲ ಎಂದು ಸಾಂಬಾ ಹೇಳಿದ್ದ. ಪ್ರಕರಣದಲ್ಲಿ ಈತನ ಪಾತ್ರ ದೊಡ್ಡದಿದೆ ಎಂದು ತಿಳಿದಿದ್ದ ಪೊಲೀಸರಿಗೆ …

Read More »

ಸಾಹಸಮಯ ಫೋಟೋಶೂಟ್ ವರನ ಕೈಯಿಂದ ಜಾರಿದ ವಧು ಫೋಟೋಗೆ ಟ್ವಿಸ್ಟ್

ವಾಷಿಂಗ್ಟನ್: ಇತ್ತೀಚೆಗೆ ವೆಡ್ಡಿಂಗ್ ಫೋಟೋಶೂಟ್ ಟ್ರೆಂಡ್ ಆಗಿದೆ. ವಧು-ವರ ಇಬ್ಬರೂ ವಿಭಿನ್ನವಾಗಿ ಫೋಟೋಶೂಟ್ ಮಾಡಿಸಿಕೊಳ್ಳುತ್ತಾರೆ. ಇದೀಗ ವಧುಯೊಬ್ಬಳು ಸುಮಾರು 1,900 ಅಡಿ ಎತ್ತರದ ಬಂಡೆಯ ಅಂಚಿನಲ್ಲಿ ತೂಗಾಡುವ ರೀತಿಯಲ್ಲಿ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. ಅಮೆರಿಕದ ಅರ್ಕಾನ್ಸಾಸ್ ಮೂಲದ ರಿಯಾನ್ ಮೈಯರ್ಸ್ (30) ಮತ್ತು ಪತ್ನಿ ಸ್ಕೈ (28) ವೆಡ್ಡಿಂಗ್ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. ಈ ಜೋಡಿ ಅದ್ಧೂರಿಯಾಗಿ ಮದುವೆಯಾಗಲು ಪ್ಲಾನ್ ಮಾಡಿದ್ದರು. ಆದರೆ ಕೊರೊನಾ ಹಿನ್ನೆಲೆ ಲಾಕ್‍ಡೌನ್ ನಿರ್ಬಂಧಗಳಿಂದಾಗಿ ಅದು ಸಾಧ್ಯವಾಗಿಲ್ಲ. ಕೊನೆಗೆ …

Read More »

ಆಟಿಕೆಗಳಂತೆ ಕೊಚ್ಚಿ ಹೋಯ್ತು ಬೈಕುಗಳು –

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಎರಡನೇ ದಿನವೂ ರಾತ್ರಿ ಮಳೆ ಮುಂದುವರೆದಿದೆ. ಬುಧವಾರ ರಾತ್ರಿ ಸತತವಾಗಿ ಸುರಿದ ಮಳೆಗೆ ಮನೆ, ಅಪಾರ್ಟ್‍ಮೆಂಟ್‍ಗಳು ಜಲಾವೃತವಾಗಿವೆ. ಜನರು ಹೊರ ಬರುವುದಕ್ಕೂ ಕಷ್ಟ ಪಡುವ ಸ್ಥಿತಿ ನಿರ್ಮಾಣವಾಗಿದೆ. ಬುಧವಾರ ಮಳೆಗೆ ಪೂರ್ತಿ ಜಲಾವೃತವಾಗಿದ್ದ ಹೊರಮಾವು ನಗರಕ್ಕೆ ರಾತ್ರಿ ಸುರಿದ ಮಳೆ ಜಲದಿಗ್ಬಂಧನ ಹಾಕಿದೆ. ಆರ್‍ಆರ್ ನಗರದಲ್ಲಿ ರಾಜಕಾಲುವೆ ಒಡೆದುಕೊಂಡು ಮನೆಗಳಿಗೆ ನೀರು ನುಗ್ಗಿದೆ. ಬೈಕುಗಳು ಕೊಚ್ಚಿಕೊಂಡು ಹೋಗಿವೆ. ಚೊಕ್ಕಸಂದ್ರ, ಶಿವಾನಂದ ಸರ್ಕಲ್, ಪೀಣ್ಯ, ದಾಸರಹಳ್ಳಿ ಮತ್ತು …

Read More »

ಹುಬ್ಬಳ್ಳಿ ರೈಲ್ವೇ ನಿಲ್ದಾಣಕ್ಕೆ ಸಿದ್ದಾರೂಢರ ಹೆಸರು ನಾಮಕರಣ

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ರೈಲ್ವೆ ನಿಲ್ದಾಣಕ್ಕೆ ಉತ್ತರ ಕರ್ನಾಟಕ ಭಾಗದ ಆರಾಧ್ಯ ದೈವ ಹೂಬಳ್ಳಿಯ ಸಿದ್ದಾರೂಢ ಸ್ವಾಮೀಜಿ ಅವರ ಹೆಸರನ್ನು ನಾಮಕರಣ ಮಾಡುವಂತೆ ಕೇಂದ್ರ ಗೃಹ ಇಲಾಖೆಯಿಂದ ರಾಜ್ಯ ಕಂದಾಯ ಇಲಾಖೆಗೆ ಆದೇಶದ ಪ್ರತಿ ರವಾನೆ ಮಾಡಲಾಗಿದೆ. ಕೇಂದ್ರ ಸಚಿವರಾದ ಅಮಿತ್ ಶಾ ಹಾಗೂ ಪಿಯೂಷ್ ಗೋಯಲ್ ಅವರಿಗೆ ಟ್ವಿಟರ್ ಮೂಲಕ ಕೇಂದ್ರ ರೈಲ್ವೇ ಖಾತೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿಯವರು ಅಭಿನಂದನೆ ಸಲ್ಲಿಸಿದ್ದಾರೆ. ಹುಬ್ಬಳ್ಳಿ ಜನರ ಬಹುನಿರೀಕ್ಷಿತ ಬೇಡಿಕೆಯಲ್ಲಿ …

Read More »

ರೌಡಿಸಂನಿಂದ ಮೆರೆದಿದ್ದ ಕುಟುಂಬ ಈಗ ಗಾಂಜಾ ಘಾಟಿನಲ್ಲಿ

ಕೋಲಾರ: ಅವರೆಲ್ಲಾ ಒಂದು ಕಾಲದಲ್ಲಿ ಚಿನ್ನದ ನೆಲದಲ್ಲಿ ರೌಡಿಸಂ ಹೆಸರಲ್ಲಿ ನೆತ್ತರು ಹಸಿದ್ದವರು, ಆದರೆ ಕಳೆದ ಎರಡು ದಶಕಳಿಂದ ರೌಡಿಸಂನಿಂದ ದೂರ ಉಳಿದಿದ್ದವರು ಏನು ಮಾಡುತ್ತಿದ್ದರು ಅನ್ನೋ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ರೌಡಿಸಂನಿಂದ ಮೆರೆದಿದ್ದ ಕುಟುಂಬ ಈಗ ಗಾಂಜಾ ಘಾಟಿನಲ್ಲಿ ಮುಳುಗಿರುವ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಜಿಲ್ಲೆ ಕೆಜಿಎಫ್ ನಗರದ ಕೃಷ್ಣಗಿರಿ ಲೈನ್‍ನಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಸುಮಾರು 186 ಕೆ.ಜಿ.ಯಷ್ಟು ಗಾಂಜಾವನ್ನ ವಶಕ್ಕೆ ಪಡೆದಿದ್ದಾರೆ. …

Read More »

ಯುವತಿಯರಿಬ್ಬರು ಮದುವೆ ಆಗುವ ಮೂಲಕ ಪೋಷಕರಿಗೆ ಶಾಕ್

ಪಾಟ್ನಾ: ಯುವತಿಯರಿಬ್ಬರು ಮದುವೆ ಆಗುವ ಮೂಲಕ ಪೋಷಕರಿಗೆ ಶಾಕ್ ನೀಡಿರುವ ಘಟನೆ ಬಿಹಾರದ ಬೇತಿಯಾ ಜಿಲ್ಲೆಯಲ್ಲಿ ನಡೆದಿದೆ. ಒಂದೇ ಲಿಂಗದವರು ಮದುವೆಗಳು ನಗರ ಪ್ರದೇಶಗಳಲ್ಲಿ ನಡೆದಿರೋದು ಆಗಾಗ್ಗೆ ವರದಿಯಾಗುತ್ತಿದ್ದವು. ಗ್ರಾಮೀಣ ಭಾಗದಲ್ಲಿ ಸಲಿಂಗಿಗಳ ಮದುವೆ ನೋಡಿ ಗ್ರಾಮಸ್ಥರು ಆಶ್ಚರ್ಯ ಚಕಿತರಾಗಿದ್ದಾರೆ. ಬೇತಿಯಾ ನಗರದ ಇಶರತ್ (ಪತ್ನಿ), ರಾಮನಗರದ ನಿವಾಸಿ ನಗ್ಮಾ ಖಾತೂನ್ (ಪತಿ) ಮದುವೆಯಾದ ಜೋಡಿ. ಆದ್ರೆ ಕುಟುಂಬಸ್ಥರು ಇಬ್ಬರ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರಿಂದ ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿತ್ತು. …

Read More »