ಹುಬ್ಬಳ್ಳಿ: ಕೊಲಂಬೋದ ಕ್ಯಾಸಿನೋಗೆ ಯಾರು ಹೋಗಿದ್ದಾರೋ ಅವರಿಗೇ ಗೊತ್ತು. ನಾನು ಹೋಗಿರಲಿಲ್ಲ. ಅಲ್ಲದೆ ಈ ಕುರಿತು ಸ್ವತಃ ಕುಮಾರಸ್ವಾಮಿಯವರೇ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಎಲ್ಲ ವಿಚಾರವನ್ನು ಅವರು ತಿಳಿಸುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಜೆಡಿಎಸ್ ಶಾಸಕರು, ಮಾಜಿ ಶಾಸಕರು ಕೊಲಂಬೋದ ಪ್ರವಾಸಕ್ಕೆ ಹೋಗಿದ್ದು ನಿಜ. ಈ ವೇಳೆ ಕ್ಯಾಸಿನೋಗೂ ಹೋಗಿರಬಹುದು. ಆದರೆ ಯಾರು ಹೋಗಿದ್ದಾರೆ ಅವರಿಗೇ …
Read More »Daily Archives: ಸೆಪ್ಟೆಂಬರ್ 12, 2020
ಈಗ ಬಿಎಸ್ವೈ ಸಿಎಂ ಆಗಿದ್ದಾರೆ. ಜಮೀರ್ ಹೇಳಿದಂತೆ ನಡೆದು ಕೊಂಡಿದ್ದಾರೆಯೇ ? ವಾಚ್ಮನ್ ಆಗಿದ್ದಾರೆಯೇ:ರೇಣುಕಾಚಾರ್ಯ
ದಾವಣಗೆರೆ, ಸೆ.12- ಶಾಸಕ ಜಮೀರ್ ಅಹಮದ್ ಚಿಲ್ಲರೆ ಗಿರಾಕಿ, ಗುಜರಿ ಗಿರಾಕಿ ಎಂದು ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಟೀಕಿಸಿದ್ದಾರೆ. ಹೊನ್ನಾಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಮೀರ್ ಹೇಳೋದೆಲ್ಲಾ ಸುಳ್ಳು. ಈ ಹಿಂದೆ ಬಿ.ಎಸ್. ಯಡಿಯೂರಪ್ಪ ಏನಾದ್ರು ಮುಖ್ಯಮಂತ್ರಿ ಆದರೆ ಅವರ ಮನೆ ವಾಚ್ಮನ್ ಆಗುತ್ತೇನೆ ಎಂದಿದ್ದರು. ಈಗ ಬಿಎಸ್ವೈ ಸಿಎಂ ಆಗಿದ್ದಾರೆ. ಜಮೀರ್ ಹೇಳಿದಂತೆ ನಡೆದು ಕೊಂಡಿದ್ದಾರೆಯೇ ? ವಾಚ್ಮನ್ ಆಗಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ. ಜಮೀರ್ಗೆ ಒಂದೇ ನಾಲಿಗೆ ಇಲ್ಲ. …
Read More »ಕ್ಯಾಸಿನೋಗೆ ನಾನೊಬ್ಬನೇ ಹೋಗಿಲ್ಲ.28 ಮಂದಿ ಶಾಸಕರು ಮತ್ತು ಕುಮಾರಸ್ವಾಮಿ ಅವರ ಜೊತೆಯೂ ಹೋಗಿದ್ದೇನೆ.
ಬೆಂಗಳೂರು,ಸೆ.12- ನಾನು ಕೊಲೊಂಬೊಗೆ ಹೋಗಿದ್ದೇನೆ. ಕ್ಯಾಸಿನೋದಲ್ಲೂ ಭಾಗವಹಿಸಿದ್ದೇನೆ. ಅದೇನೂ ಅಕ್ರಮ ಚಟುವಟಿಕೆಯಲ್ಲ. ಡ್ರಗ್ಸ್ ಜಾಲದಲ್ಲಿ ನಾನು ಭಾಗವಹಿಸಿದ್ದರೆ ನನ್ನನ್ನು ಗಲ್ಲಿಗೇರಿಸಲಿ ಎಂದು ಶಾಸಕ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಯಾಸಿನೋ ಅಕ್ರಮವಲ್ಲ. ಕೇಂದ್ರ ಸರ್ಕಾರ ಅದನ್ನು ನಿಷೇಧಿಸಿಲ್ಲ. ನಾನು ಸೇರಿದಂತೆ ಬಹಳಷ್ಟು ರಾಜಕಾರಣಿಗಳು ಜೆಡಿಎಸ್ನಲ್ಲಿದ್ದಾಗ 28 ಮಂದಿ ಶಾಸಕರು ಮತ್ತು ಕುಮಾರಸ್ವಾಮಿ ಅವರ ಜೊತೆಯೂ ಹೋಗಿದ್ದೇನೆ. ಹೋಗಬಾರದೆಂದು ಯಾವ ನಿಯಮವೂ ಇಲ್ಲ. ನಾನೇನೂ ಪಾಕಿಸ್ತಾನಕ್ಕೆ …
Read More »ಪಕ್ಷ ಸಂಘಟನೆ ಬಗ್ಗೆ ಚರ್ಚಿಸಲು ಮಾತ್ರ ಕುಮಾರ್ ಸ್ವಾಮಿ ಅವರು ಕೊಲಂಬೊ ಹೋಗಿ ದ್ರಂತೆ…
ಬೆಂಗಳೂರು, ಸೆ.12- ಜೆಡಿಎಸ್ ಪಕ್ಷದ ಗೌಪ್ಯ ಕಾರ್ಯಸೂಚಿ ಹಾಗೂ ಮುಂದಿನ ರಾಜಕೀಯ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಶಾಸಕರು ಹಾಗೂ ಪ್ರಮುಖ ನಾಯಕರೊಂದಿಗೆ ಶ್ರೀಲಂಕಾದ ಕೊಲಂಬೋಗೆ ಒಮ್ಮೆ ಪ್ರವಾಸ ಹೋಗಿದ್ದು ನಿಜ. ಆದರೆ, ಕದ್ದು ಮುಚ್ಚಿ ಕೊಲಂಬೋ ಯಾತ್ರೆ ಮಾಡಿರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಒಂದಾನೊಂದು ಕಾಲದಲ್ಲಿ ನಮ್ಮ ಪಕ್ಷದಲ್ಲಿದ್ದ ರಾಜಕಾರಣಿಯೊಬ್ಬರು ಜೆಡಿಎಸ್ ಶಾಸಕರು ಮತ್ತು …
Read More »ಡ್ರಗ್ಸ್ ಪ್ರಕರಣ ರಾಜ್ಯಾದ್ಯಂತ ತನಿಖೆ ಆಗಬೇಕು:ಸತೀಶ ಜಾರಕಿಹೊಳಿ
ಧಾರವಾಡ: ಡ್ರಗ್ಸ್ ಪ್ರಕರಣ ರಾಜ್ಯಾದ್ಯಂತ ತನಿಖೆ ಆಗಬೇಕುಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಒತ್ತಾಯಿಸಿದ್ದಾರೆ. ಡ್ರಗ್ಸ್ ವಿಚಾರವಾಗಿ ನಗರದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದ ಅವರು, ಪ್ರಕರಣ ತನಿಖೆ ಬೇಗ ಬೇಗ ಮಾಡಬೇಕಿತ್ತು.ಕೆಲವು ಕಡೆ ಒಳ್ಳೆಯ ರೀತಿಯಿಂದ ತನಿಖೆ ನಡೆದಿದೆ . ಇನ್ನೂ ಕಾಲ ಮೀರಿಲ್ಲ. ರಾಜ್ಯಾದ್ಯಂತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಆಗಬೇಕು ಎಂದರು. ಎಐಸಿಸಿ ಕಾರ್ಯಕಾರಿ ಸಮಿತಿ ಬದಲಾವಣೆ ವಿಚಾರ ಮಾತನಾಡಿ, ಕೆಲಸ ಮಾಡುವ …
Read More »ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಶನಿವಾರ ಭೇಟಿ ಮಾಡಿ ಪ್ರತಿಭಟನೆಗೆ ಬೆಂಬಲ
ಧಾರವಾಡ: ಲ್ಯಾಪ್ ಟಾಪ್ ವಿತರಿಸುವಂತೆ ವಿವಿಧ ಸೌಲಭ್ಯ ಒದಗಿಸುವಂತೆ ಆಗ್ರಹಿಸಿ ಕಳೆದ ಮೂರು ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿರುವ ಪರಿಶಿಷ್ಟ ಜಾತಿ, ಪಂಗಡ ವಿದ್ಯಾರ್ಥಿಗಳನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಶನಿವಾರ ಭೇಟಿ ಮಾಡಿ ಪ್ರತಿಭಟನೆಗೆ ಬೆಂಬಲ ಸೂಚಿಸಿದರು. ಕೊರೊನಾ ಸಂಕಷ್ಟದಿಂದಾಗಿ ಸರ್ಕಾರ ಲಾಕ್ ಡೌನ್ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಲು ವಿಳಂಬವಾಗಿದೆ. ಈ ಮೊದಲು ಲ್ಯಾಪ್ ಟ್ಯಾಪ್ ವಿತರಿಸುವುದಾಗಿ ಹೇಳಿದ ವಿವಿ, ಇದೀಗ …
Read More »15 ದಿನಕ್ಕೆ 4 ಲಕ್ಷ ಸಂಬಳ ಉಡೀಸ್ ಮಾಡುತ್ತಿದ್ದ ವೀರೇನ್ ಖನ್ನಾನ ಬಲಗೈ ಭಂಟ..!
ಬೆಂಗಳೂರು, ಸೆ.12- ತಿಂಗಳಿಗೆ 4 ಲಕ್ಷ ಸಂಬಳ ಪಡೆಯುತ್ತಿದ್ದ ಟೆಕ್ಕಿ ಆದಿತ್ಯ ಅಗರ್ವಾಲ್ ಅದನ್ನು 15 ದಿನಗಳಿಗೆ ಖಾಲಿ ಮಾಡಿಬಿಡುತ್ತಿದ್ದ ಎಂಬ ಕುತೂಹಲಕಾರಿ ಅಂಶಗಳು ಪತ್ತೆಯಾಗಿವೆ. ಡ್ರಗ್ಸ್ ಜಾಲದಲ್ಲಿ ಬಂಧಿತನಾಗಿರುವ ಸಾಫ್ಟ್ವೇರ್ ಎಂಜಿನಿಯರ್ ಆದಿತ್ಯ ಅಗರ್ವಾಲ್ ಮತ್ತೊಬ್ಬ ಕಿಂಗ್ಪಿನ್ ವೀರೇನ್ ಖನ್ನಾನ ಬಲಗೈ ಭಂಟ ಎನ್ನಲಾಗಿದೆ. ಈ ಇಬ್ಬರು ಜೀವನ ಚಿಕ್ಕದು. ಇರುವಷ್ಟು ದಿನ ಮಜಾ ಮಾಡಿ ಸಾಯಬೇಕು ಎಂಬ ಸಿದ್ಧಾಂತಕ್ಕೆ ಅಂಟಿಕೊಂಡಿದ್ದರು. ಹಾಗಾಗಿ ಇಬ್ಬರೂ ಮೋಜಿನ ಜೀವನದ ದಾಸರಾಗಿದ್ದರು. …
Read More »ಕ್ಯಾಸಿನೋ ಪಾರ್ಟಿಯಲ್ಲಿ ಸಂಜನಾ ನೃತ್ಯ – ಸಂಜನಾ ನೃತ್ಯಕ್ಕೆ ವಿಶೇಷ ಪ್ರಚಾರ
ಬೆಂಗಳೂರು: ನಾನು ಸಿನಿಮಾ ಈವೆಂಟ್ಗಾಗಿ ಶ್ರೀಲಂಕಾಕ್ಕೆ ಹೋಗಿದ್ದೆ ಅಷ್ಟೇ. ಅದು ಬಿಟ್ಟರೆ ನನಗೂ ಶ್ರೀಲಂಕಾಕ್ಕೂ ಯಾವುದೇ ನಂಟಿಲ್ಲ ಎಂದು ನಟಿ ಸಂಜನಾ ಸಿಸಿಬಿ ಪೊಲೀಸರು ಮುಂದೆ ಹೇಳುತ್ತಿದ್ದಾರೆ. ಆದರೆ ಇದೀಗ ನಟಿ ಸಂಜನಾ ಕ್ಯಾಸಿನೋದಲ್ಲಿ ಡ್ಯಾನ್ಸ್ ಮಾಡಿರುವ ವಿಡಿಯೋ ಸಿಸಿಬಿ ಪೊಲೀಸರಿಗೆ ಲಭ್ಯವಾಗಿದೆ ನಟಿ ಸಂಜನಾ ಕೊಲಂಬೋದಲ್ಲಿ ‘ಆಕ್ಸಿಜನ್’ ಡ್ಯಾನ್ಸ್ ಕೂಡ ಮಾಡಿದ್ದಾರೆ. ಕೊಲಂಬೋದ ಅನೇಕ ಕ್ಯಾಸಿನೋಗಳಲ್ಲಿ ನಟಿ ಸಂಜನಾ ಡ್ಯಾನ್ಸ್ ಮಾಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಡಿಸೆಂಬರ್, ಜನವರಿಯಲ್ಲಿ …
Read More »ಈ ಡ್ರಗ್ಸ್ ದಂಧೆಯಲ್ಲಿ ಜಮೀರ್ ಇರುವುದು ನೂರಕ್ಕೆ ನೂರು ಸತ್ಯ,32 ಮಂದಿ ರಾಜಕಾರಣಿಗಳು ಡ್ರಗ್ಸ್ ಮಾಫಿಯಾದಲ್ಲಿ: ಮುತಾಲಿಕ್
ಮಂಡ್ಯ: ನಮ್ಮ ರಾಜ್ಯದಲ್ಲಿ 32 ಮಂದಿ ರಾಜಕಾರಣಿಗಳು ಡ್ರಗ್ಸ್ ಮಾಫಿಯಾದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಪ್ರಮೋದ್ ಮುತಾಲಿಕ್, ಈ ಬಗ್ಗೆ ನನಗೆ ಮಾಹಿತಿ ಇದೆ. ಸಂಪೂರ್ಣ ಮಾಹಿತಿ ಸಮೇತ ನಾನು ಇನ್ನೊಂದು ವಾರದಲ್ಲಿ ಆ ಲಿಸ್ಟ್ ನ್ನು ಹೋಂ ಮಿನಿಸ್ಟರ್ ಗೆ ಕೊಡುತ್ತೇನೆ. ನಾನು ಹಿಟ್ ಅಂಡ್ ರನ್ ಕೆಲಸ ಮಾಡಲ್ಲ. ಆಧಾರ ಸಹಿತವಾಗಿ ನಾನು ಬರುತ್ತೇನೆ. ನಟ ನಟಿಯರ …
Read More »ಟೈಗರ್ ಗ್ಯಾಂಗ್ ಬಗ್ಗೆ ಲಖನ ಜಾರಕಿಹೋಳಿ ಹೇಳಿದ್ದೇನು… ?
ಟೈಗರ್ ಗ್ಯಾಂಗ್ ಬಗ್ಗೆ ಲಖನ ಜಾರಕಿಹೋಳಿ ಹೇಳಿದ್ದೇನು… ? ಗೋಕಾಕ:ಸುಮಾರು ದಿನಗಳಿಂದ ಸುದ್ದಿ ಯಲ್ಲಿರುವ ಟೈಗರ್ ಗ್ಯಾಂಗ್ ಬಗ್ಗೆ ಇವತ್ತು ಲಕ್ಷ್ಮಿ ನ್ಯೂಸ್ ವಾಹಿನಿ ಜೊತೆ ಮಾತನಾಡಿದ ಚಿಕ್ಕ ಸಾಹುಕಾರರು ಇಬ್ಬರು ಸಹೋದರರ ಪರ ಹೇಳಿಕೆ ನೀಡಿದ್ದಾರೆ. ಬೆಳಗಾವಿ ಯಲ್ಲಿ ನನ್ನ ಅಣ್ಣಾ ರಮೇಶ್ ಜಾರಕಿಹೊಳಿ ಹಾಗೂ ಸತೀಶ್ ಜಾರಕಿಹೊಳಿ ಅವರು ಹೇಳಿದ್ದು ಸರಿಯಿದೆ ಈ ಒಂದು ಟೈಗರ್ ಗ್ಯಾಂಗ್ ಮುಂಚೆ ಇದ್ದಿದ್ದೇ ಬೇರೆ, ಇದು ಬೇರೆ ಯಾವುದೋ ಬಿಲ್ಲಿ …
Read More »
Laxmi News 24×7