Breaking News

Daily Archives: ಅಕ್ಟೋಬರ್ 14, 2020

RR ನಗರಕ್ಕೆ BJP ಅಭ್ಯರ್ಥಿ ನಾನೇ: ಚುನಾವಣೆ ಹೊಸ್ತಿಲಲ್ಲಿ ಹೀಗಂದಿದ್ದು ಯಾರು?

ಬೆಂಗಳೂರಿನ ರಾಜರಾಜೇಶ್ವರಿನಗರ ಕ್ಷೇತ್ರಕ್ಕೆ ನಾನೇ ಅಭ್ಯರ್ಥಿ! ಇಲ್ಲಿ ಯಾವ ಬಂಡೆ, ಕಲ್ಲು ಇಲ್ಲ ಎಂದು ಸಚಿವ ಆರ್.ಅಶೋಕ್ ಹೇಳಿದ್ದಾರೆ. ಬಿಜೆಪಿ ಅಭ್ಯರ್ಥಿ ಮುನಿರತ್ನ ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಆರ್.ಅಶೋಕ್, ಪಕ್ಷದ ಅಧಿಕೃತ ಅಭ್ಯರ್ಥಿ ಮುನಿರತ್ನಗೆ ಶಕ್ತಿ ತುಂಬಲು ಹೀಗೆ ಹೇಳಿರುವುದಾಗಿ ತಿಳಿದುಬಂದಿದೆ. ಜೊತೆಗೆ ತನ್ಮೂಲಕ ಪ್ರತಿಪಕ್ಷದ ಪಾಳಯಕ್ಕೆ ಖಡಕ್ ಸಂದೇಶವನ್ನೂ ರವಾನಿಸಿರುವುದಾಗಿ ಬಿಜೆಪಿ ನಾಯಕರು ಅಭಿಪ್ರಾಯಪಟ್ಟಿದ್ದಾರೆ. ಮುನಿರತ್ನ ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಕಂದಾಯ ಸಚಿವ ಅಶೋಕ್ ಅವರು …

Read More »

7 ಬಾರಿಯ ಸಂಸದ ಕೆ.ಹೆಚ್. ಮುನಿಯಪ್ಪ ರಾಜ್ಯ ರಾಜಕಾರಣಕ್ಕೆ? ಕ್ಷೇತ್ರ ಯಾವುದು?

ಕೋಲಾರ: ನಿರಂತರವಾಗಿ 1991ರಿಂದ ಕಾಂಗ್ರೆಸ್​ ಪಕ್ಷದ ವತಿಯಿಂದ ಲೋಕಸಭೆಗೆ ಆಯ್ಕೆಯಾಗುತ್ತಾ ಬಂದಿರುವ ಅದರೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎದುರು ಪರಾಜಯಗೊಂಡ ಕೆ.ಹೆಚ್. ಮುನಿಯಪ್ಪ ಇದೀಗ ರಾಜ್ಯ ರಾಜಕಾರಣಕ್ಕೆ ಬರಲು ಒಲವು ತೋರಿದ್ದಾರೆ ಎನ್ನುತ್ತಿವೆ ಪಕ್ಷದ ಮೂಲಗಳು. ಕ್ಷೇತ್ರ ಯಾವುದು, ಡಿಕೆಶಿ ಮಾಸ್ಟರ್ ಪ್ಲ್ಯಾನ್​ ಏನು? ಕೇಂದ್ರದ ಮಾಜಿ ಸಚಿವ, 72 ವರ್ಷದ ಕೆ.ಎಚ್. ಮುನಿಯಪ್ಪ ರಾಜ್ಯ ರಾಜಕಾರಣದತ್ತ ಮರಳಲು ಕೆಪಿಸಿಸಿ ಅಧ್ಯಕ್ಷ್ಯ ಡಿಕೆ ಶಿವಕುಮಾರ್ ಒತ್ತಾಯ ಕಾರಣ ಎನ್ನಲಾಗಿದೆ. …

Read More »

ಪ್ರವಾಹದಲ್ಲಿ ಸಿಲುಕಿದ್ದ ಮೂವರು ಬಿಹಾರಿ ಕಾರ್ಮಿಕರ ರಕ್ಷಣೆ.. ಯಾವೂರಲ್ಲಿ?

ಕಲಬುರಗಿ: ಚಂದ್ರಂಪಳ್ಳಿ ಜಲಾಶಯದಿಂದ ಅಪಾರ ಪ್ರಮಾಣದ ನೀರು ಬಿಡುಗಡೆಯಾದ ಹಿನ್ನೆಲೆಯಲ್ಲಿ ಪ್ರವಾಹದಲ್ಲಿ ಸಿಲುಕಿದ್ದ ಮೂವರು ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ. ಚಿಂಚೋಳಿ ತಾಲೂಕಿನ ಐನೊಳ್ಳಿ ಗ್ರಾಮದ ಬಳಿ ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ಕೆಲಸದ ಸ್ಥಳದಲ್ಲೇ ಬಿಹಾರ ಮೂಲದ ಮೂವರು ಕಾರ್ಮಿಕರು ಶೆಡ್ ನಿರ್ಮಿಸಿಕೊಂಡಿದ್ದರು. ಆದರೆ ಶೆಡ್​ಗೆ ಏಕಾಏಕಿ ಮಳೆ ನೀರು ನುಗ್ಗಿ ಪ್ರವಾಹಕ್ಕೆ ಸಿಲುಕಿಕೊಂಡಿದ್ದರು. ಬಳಿಕ ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಮೂವರು ಕಾರ್ಮಿಕರ …

Read More »

ಮನೆಗೆ ನುಗ್ಗಿದ ಮಳೆ ನೀರು.. ವಿದ್ಯುತ್ ಪ್ರವಹಿಸಿ ಮಲಗಿದ್ದಲ್ಲೇ ಅಜ್ಜಿ ಸಾವು

ಕಲಬುರಗಿ: ಜಿಲ್ಲೆಯಾದ್ಯಂತ ಧಾರಕಾರ ಮಳೆ ಸುರಿಯುತ್ತಿದೆ. ವರುಣನ ಆರ್ಭಟಕ್ಕೆ ಸುಂದರ ನಗರದಲ್ಲಿ ಅಜ್ಜಿ ಬಲಿಯಾಗಿದ್ದಾಳೆ. ಭೀಮಾಬಾಯಿ (96) ಮೃತಪಟ್ಟ ವೃದ್ಧೆ. ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಮನೆಯಲ್ಲಿ ಮಲಗಿದ್ದ ಅಜ್ಜಿ ಜೀವ ಕಳೆದುಕೊಂಡಿದ್ದಾರೆ. ಕಣ್ಣು ತೆರೆದು ನೋಡುವಷ್ಟರಲ್ಲಿ ವಿದ್ಯುತ್ ಸ್ಪರ್ಶಿಸಿ ಯಮನ ಪಾದ ಸೇರಿದ್ದಾರೆ. ಮಳೆಯಿಂದಾಗಿ ಮನೆಯೊಳಗೆ ಮಳೆ ನೀರು ಹೊಕ್ಕಿತ್ತು. ಈ ವೇಳೆ ನೀರಿನೊಂದಿಗೆ ವಿದ್ಯುತ್ ಸಹ ಪ್ರವೇಶಿಸಿ ಅಜ್ಜಿ ಮಲಗಿದ್ದಲ್ಲೆ ಮೃತಪಟ್ಟಿದ್ದಾರೆ. ಅಜ್ಜಿಯ ಮನೆ ಶೇಕಡಾ ಅರ್ಧದಷ್ಟು …

Read More »

ತಂದೆ ತಾಯಿ ಜೊತೆ ಜಗಳವಾಡ್ತಿದ್ದ ಅಣ್ಣ: ಬೇಸತ್ತು ಹತ್ಯೆ ಮಾಡಿದ ತಮ್ಮ

ಹಾವೇರಿ: ಜಿಲ್ಲೆ ಬ್ಯಾಡಗಿ ತಾಲೂಕಿನ ಬುಡಪನಹಳ್ಳಿ ಗ್ರಾಮದಲ್ಲಿ ತಮ್ಮನೇ ಅಣ್ಣನನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 22 ವರ್ಷ ನಾಗರಾಜ ಗೊರವರ ಹತ್ಯೆಯಾದ ಅಣ್ಣ. ದಿಳ್ಳೆಪ್ಪ ಗೊರವರ (20) ಹತ್ಯೆ ಮಾಡಿದ ಸೋದರ. ಕಾರಣ ಏನು?: ಅಣ್ಣ ನಾಗರಾಜ ನಿತ್ಯ ಕುಡಿದು ಬಂದು ತಂದೆ ತಾಯಿ ಜೊತೆ ಜಗಳವಾಡ್ತಿದ್ದ. ತಂದೆ ತಾಯಿಗೆ ಅಣ್ಣ ನೀಡ್ತಿದ್ದ ಕಿರಿಕಿರಿಯಿಂದ ಬೇಸತ್ತು ತಮ್ಮ ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ. ಅಣ್ಣನ ಹತ್ಯೆ ಮಾಡಿದ …

Read More »

ನಗರದಲ್ಲಿ ವಿದೇಶಿ ಘಾಟು, 8 ಬಾಕ್ಸ್‌ಗಳಲ್ಲಿದ್ದ 1,59,800 ವಿದೇಶಿ ಸಿಗರೇಟು ವಶ

ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ ಮೌಲ್ಯದ ವಿದೇಶಿ ಸಿಗರೇಟುಗಳನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಖಚಿತ ಮಾಹಿತಿ ಆಧರಿಸಿ ಪರಿಶೀಲನೆ ನಡೆಸಿದ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳ ತಂಡ ಶಾರ್ಜಾನಿಂದ ವಿಮಾನದಲ್ಲಿ ಬಂದ 8 ಬಾಕ್ಸ್​ಗಳು ಪತ್ತೆಯಾಗಿವೆ. ಆರಂಭಿಕ ಅಂತದ ಪರಿಶೀಲನೆ ವೇಳೆ ಸಿಕ್ಕ ಬಾಕ್ಸ್​ಗಳನ್ನು X-ray scan ಗೆ ಒಳಪಡಿಸಿದಾಗ ಅದರಲ್ಲಿ ಲಕ್ಷಾಂತರ ಮೌಲ್ಯದ ಸಿಗರೇಟ್​ ಇರುವುದು ಗೊತ್ತಾಗಿದೆ.ಬಾಕ್ಸ್​ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಸಿಗರೇಟ್ ಬಂಡಲ್​ಗಳು ಪತ್ತೆಯಾಗಿವೆ. …

Read More »

ಅಬ್ಬಾ! ಇದೆಷ್ಟು ದೊಡ್ಡ ಕುಂಬಳಕಾಯಿ ಗೊತ್ತಾ?

ಕ್ಯಾಲಿಫೋರ್ನಿಯಾ: ವಿಶ್ವದಾದ್ಯಂತ ಆವರಿಸಿರುವ ಮಹಾಮಾರಿ ಕೊರೊನಾದಿಂದ ಜನ ಸಾಕಷ್ಟು ಕಷ್ಟು ನೋವುಗಳನ್ನು ಅನುಭವಿಸುತ್ತಿದ್ದಾರೆ. ಈ ನಡುವೆ ಲಾಕ್​ಡೌನ್ ಸಮಯವನ್ನು ಬಳಸಿಕೊಂಡು ಅದರ ಪ್ರಯೋಜನ ಪಡೆದವರೂ ಸಹ ಸಾಕಷ್ಟು ಮಂದಿ.  ಇದೇ ರೀತಿ ಇಲೊಬ್ಬ ವ್ಯಕ್ತಿ ತನ್ನ ಸಮಯ ಪರಿಶ್ರಮದಿಂದ 2,350 ಪೌಂಡ್ ತೂಕದ ಕುಂಬಳಕಾಯಿಯನ್ನು ಬೆಳೆಸಿದ್ದಾನೆ. ಸದ್ಯ ಇದು ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ನಡೆದ ಹಾಫ್ ಮೂನ್ ಬೇ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ತಂದುಕೊಟ್ಟಿದೆ. ತೋಟಗಾರಿಕಾ ಶಿಕ್ಷಕನಾಗಿರುವ 40 ರ ಹರೆಯದ …

Read More »

ಪ್ರೀತಿಸಿದವಳನ್ನೇ ಕೊಲ್ಲಲು ಯತ್ನಿಸಿ.. ಜೈಲು ಸೇರಿದ ಪ್ರಿಯಕರ

ದೇವನಹಳ್ಳಿ: ಪ್ರೀತಿ ಮಧುರ, ತ್ಯಾಗ ಅಮರ ಅನ್ನೋ ಮಾತಿದೆ. ಆದರೆ ಇತ್ತೀಚಿನ ಯುವಕರು ಪ್ರೀತಿಗಾಗಿ ಪ್ರಾಣ ತೆಗೆಯಲೂ ಸಹ ಹಿಂದೆ ಮುಂದೆ ನೋಡಲ್ಲ. ತಮ್ಮ ಪ್ರೀತಿ ಸಿಗದಿದ್ದರೇ ಸಾಯಿಸಲೂ ಸಿದ್ದ, ಸಾಯಲೂ ಸಿದ್ದ ಅನ್ನುವಂತಿದ್ದಾರೆ. ನಿನ್ನೆ ಹೈದರಾಬಾದ್​ನಲ್ಲೂ ಪಾಗಲ್ ಪ್ರೇಮಿಯೊಬ್ಬ ಯುವತಿ ಪ್ರೀತಿ ನಿರಾಕರಿಸಿದಕ್ಕೆ ಆಕೆಯನ್ನು ಸುಟ್ಟು ಚಿಕಿತ್ಸೆ ಫಲಿಸದೇ ಆತನೂ ಸತ್ತ ಘಟನೆ ನಡೆದಿತ್ತು. ಅದೇ ಮಾದರಿಯಲ್ಲಿ ಇಲ್ಲೊಬ್ಬ ಪ್ರೇಮಿ ತಾನು ಪ್ರೀತಿಸಿದ ನವವಿವಾಹಿತೆಯನ್ನು ಪಾಳು ಬಿದ್ದ ಬಾವಿಗೆ …

Read More »

ನದಿ ತೀರದಲ್ಲಿ ಸಿಕ್ಕಿದ್ದ 28 -30 ವರ್ಷದ ಯುವಕನ ಶವ ದೊಡ್ಡ ಕಥೆಯೊಂದನ್ನು ಬಿಚ್ಚಿಟ್ಟಿದೆ.

ಅಥಣಿ – ಅಕ್ಟೋಬರ್ 5ರಂದು ಅಥಣಿ ತಾಲೂಕಿನ ಕೃಷ್ಣಾ ನದಿ ತೀರದಲ್ಲಿ ಸಿಕ್ಕಿದ್ದ 28 -30 ವರ್ಷದ ಯುವಕನ ಶವ ದೊಡ್ಡ ಕಥೆಯೊಂದನ್ನು ಬಿಚ್ಚಿಟ್ಟಿದೆ. ಶವವೊಂದೇ ಸಿಕ್ಕಿದ್ದರೆ ಅಷ್ಟೊಂದು ಕುತೂಹಲ ಹುಟ್ಟಿಸುತ್ತಿರಲಿಲ್ಲವೇನೋ… ಶವದ ಪ್ಯಾಂಟ್ ಕಿಸೆಯಲ್ಲಿ ಇತ್ತು 77 ಲಕ್ಷ ರೂ. ಮೌಲ್ಯದ ಬಂಗಾರದ ಗಟ್ಟಿಗಳು. ಶವ ಪತ್ತೆಯಾದ ತಕ್ಷಣ ಅದರ ಜೊತೆಯಲ್ಲಿದ್ದ ಬ್ಯಾಂಕ್ ಅಕೌಂಟ್ ಮಾಹಿತಿ ಅಧರಿಸಿ, ಆದಾರ ಕಾರ್ಡ್ ಪತ್ತೆ ಮಾಡಿದ ಅಥಣಿ ಪೊಲೀಸರು ನೇರವಾಗಿ ಮಹಾರಾಷ್ಟ್ರದ …

Read More »

50 ವರ್ಷಗಳಿಂದ ತಿರುಗಿ ನೋಡದ ಸರ್ಕಾರ, ಸ್ವತಃ ಖರ್ಚಿನಲ್ಲಿಯೇ ರಸ್ತೆ ನಿರ್ಮಿಸಿಕೊಂಡ ಗ್ರಾಮಸ್ಥರು..!

ತಿಪಟೂರು , – ಕಳೆದ 50 ವರ್ಷಗಳಿಂದಲೂ ಸರ್ಕಾರದಿಂದ ಅಭಿವೃದ್ಧಿಪಡಿಸದ ರಸ್ತೆಯನ್ನು ಗ್ರಾಮಸ್ಥರೆಲ್ಲರೂ ಸೇರಿ ಅಭಿವೃದ್ಧಿಪಡಿಸಿ ಮಾದರಿ ರಸ್ತೆಯನ್ನು ನಿರ್ಮಾಣ ಮಾಡಿ ಜನಪ್ರತಿನಿಗಳ ನಿರ್ಲಕ್ಷ್ಯವನ್ನು ಎತ್ತಿ ಹಿಡಿದಿದ್ದಾರೆ. ತಾಲ್ಲೂಕಿನ ಮತ್ತಿಹಳ್ಳಿ ಗ್ರಾಮ ಪಂಚಾಯತಿಯ ವ್ಯಾಪ್ತಿಯ ಮತ್ತಿಹಳ್ಳಿ ಗ್ರಾಮದ ಕೆರೆಯ ಹಿಂಭಾಗದಿಂದ ಚಿಕ್ಕಬಿದರೆ ಗ್ರಾಮಕ್ಕೆ ಸಂಪರ್ಕಿಸುವ ಸುಮಾರು 1.5 ಕಿ.ಮೀ.ರಸ್ತೆಯನ್ನು ಒಂದು ಲಕ್ಷ ರೂಗಳ ಸ್ವತಃ ಖರ್ಚಿನಲ್ಲಿಯೇ ಗ್ರಾಮಸ್ಥರು ಅಭಿವೃದ್ಧಿಪಡಿಸಿದ್ದಾರೆ. ರಸ್ತೆಯೂ ಹಿಂದೆ ಕಾಲುದಾರಿಯಲ್ಲಿ ಸಂಚರಿಸಲು ಸಾಧ್ಯವಾಗದಂತಹ ಸ್ಥಿತಿಯಲ್ಲಿತ್ತು. ಈ ರಸ್ತೆಯೂ …

Read More »