ಮುಂಬೈ: ಪ್ರಸ್ತುತ ಬೆಂಗಳೂರಿನ ವಿಕ್ರಮ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ಫರಾಜ್ ಖಾನ್ಗೆ ಸಲ್ಮಾನ್ ಖಾನ್ ಚಿಕಿತ್ಸಾ ವೆಚ್ಚ ಭರಿಸುವ ಮೂಲಕ ಸಹಾಯ ಮಾಡಿದ್ದಾರೆ. 1998ರಲ್ಲಿ ಬಿಡುಗಡೆಯಾದ ಮೆಹಂದಿ ಎಂಬ ಚಿತ್ರದಲ್ಲಿ ನಟಿ ರಾಣಿ ಮುಖರ್ಜಿಯೊಂದಿಗೆ ಫರಾಜ್ ಖಾನ್ ಅಭಿನಯಿಸಿದ್ದರು. ಈ ಚಿತ್ರದ ಮೂಲಕ ಬಹಳ ಹೆಸರುವಾಸಿಯಾಗಿದ್ದರು. ಕಳೆದ ಒಂದು ವರ್ಷದಿಂದ ಫರಾಜ್ ಖಾನ್ ಹೃದಯಕ್ಕೆ ಸಂಬಂಧಿಸಿದ ಖಾಯಿಲೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಸದ್ಯ ಬೆಂಗಳೂರಿನ ವಿಕ್ರಮ್ …
Read More »Daily Archives: ಅಕ್ಟೋಬರ್ 15, 2020
ಪ್ರೀತ್ಸೇ.. ಪ್ರೀತ್ಸೇ ಅಂತ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ಬೆನ್ನು ಬಿದ್ದ ಪಾಗಲ್ ಪ್ರೇಮಿಯೊಬ್ಬ ಆಕೆಯ ಮೇಲೆ ಕತ್ತಿಯಿಂದ ದಾಳಿ
ಹೈದರಾಬಾದ್: ಪ್ರೀತ್ಸೇ.. ಪ್ರೀತ್ಸೇ ಅಂತ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ಬೆನ್ನು ಬಿದ್ದ ಪಾಗಲ್ ಪ್ರೇಮಿಯೊಬ್ಬ ಆಕೆಯ ಮೇಲೆ ಕತ್ತಿಯಿಂದ ದಾಳಿ ಮಾಡಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಆಂಧ್ರಪ್ರದೇಶದ ವಿಜಯವಾಡ ನಗರದಲ್ಲಿ ನಡೆದಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿ ದಿವ್ಯ ತೇಜಸ್ವಿನಿ (20) ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾಳೆ. ಪೊಲೀಸರು ನೀಡಿರುವ ಮಾಹಿತಿ ಅನ್ವಯ, ಕ್ರಿಸ್ತು ರಾಜಪುರಂ ಪ್ರದೇಶದ ನಿವಾಸಿಯಾಗಿರುವ ದಿವ್ಯ ತೇಜಸ್ವಿನಿ ಎಂಜಿನಿಯರಿಂಗ್ ಮೂರನೇ ವರ್ಷದ ವಿದ್ಯಾರ್ಥಿನಿಯಾಗಿದ್ದಾಳೆ. ಸ್ಥಳೀಯವಾಗಿ ಪೇಂಟಿಂಗ್ …
Read More »ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅಪಾರ ಹಾನಿ ನಾಳೆ ಕಂದಾಯ ಸಚಿವ ಆರ್. ಅಶೋಕ ಭೇಟಿ
ಬೆಂಗಳೂರು: ರಾಜ್ಯದಲ್ಲಿ ಕಳೆದ ನಾಲ್ಕು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಮಳೆ ಅಬ್ಬರಕ್ಕೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅಪಾರ ಹಾನಿಯಾಗಿದೆ. ಪ್ರವಾಹ ಪೀಡಿತ ಜಿಲ್ಲೆಗಳಿಗೆ ನಾಳೆ ಕಂದಾಯ ಸಚಿವ ಆರ್. ಅಶೋಕ ಭೇಟಿ ನೀಡಲಿದ್ದಾರೆ. ಈ ವಿಚಾರವಾಗಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕದ ಬೀದರ್, ಕಲಬುರಗಿ, ಕೊಪ್ಪಳ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಸರ್ಕಾರವು ಅಗತ್ಯ ಕ್ರಮ ಕೈಗೊಂಡಿದೆ/. ಆಯಾ ಪ್ರದೇಶದಲ್ಲಿ 43 ಕಾಳಜಿ ಕೇಂದ್ರ …
Read More »ಸಾರ್ವಜನಿಕರಿಗೆ ಮಾಸ್ಕ್ ವಿತರಿಸಿ ಪೊಲೀಸರಿಂದ ಜಾಗೃತಿ
ಹುಬ್ಬಳ್ಳಿ: ಮಾಸ್ಕ್ ಧರಿಸದೆ ಕೊರೊನಾ ತಡೆಯಲು ಸಾಧ್ಯವಿಲ್ಲ ಎಂಬುದನ್ನು ತಿಳಿಸಲು ಸ್ವತಃ ಹುಬ್ಬಳ್ಳಿ ಪೂರ್ವ ಸಂಚಾರಿ ಠಾಣೆಯ ಪಿಎಸ್ಐ ಶರಣ್ ದೇಸಾಯಿ ಹಾಗೂ ಸಿಬ್ಬಂದಿ ಬೆಳಗ್ಗೆ ಚೆನ್ನಮ್ಮ ವೃತ್ತದಲ್ಲಿ ಸಾರ್ವಜನಿಕರಿಗೆ ಮಾಸ್ಕ್ ವಿತರಿಸಿ ಜಾಗೃತಿ ಮೂಡಿಸಿದರುಕೋವಿಡ್-19 ಕುರಿತು ಅರಿವು ಕಾರ್ಯಕ್ರಮ ಏರ್ಪಡಿಸಿ, ಮಾಸ್ಕ್ ವಿತರಿಸುವ ಮೂಲಕ ಶರಣ್ ದೇಸಾಯಿ ಸಾರ್ವಜನಿಕರಿಗೆ ಅರಿವು ಮೂಡಿಸುವ ಪ್ರಯತ್ನ ಮಾಡಿದರು. ದಂಡ ಹಾಕುವುದು ನಿಮ್ಮನ್ನು ಎಚ್ಚರಿಸಲು. ಇದರ ಹೊರತು ಬೇರೆ ಉದ್ದೇಶವಿಲ್ಲ. ನಿಮ್ಮ ಆರೋಗ್ಯದ …
Read More »ಕಾರೊಂದು ಹಳ್ಳದಲ್ಲಿ ಕೊಚ್ಚಿಹೋಗಿದ್ದು 4 ಅಥವಾ 5 ಜನರು ಕಾರಿನೊಳಗೆ ಸಿಲುಕಿರುವ ಶಂಕೆ
ಶಿರಸಿ – ಸಿದ್ದಾಪುರ ತಾಲೂಕಿನ ಹೆಗ್ಗರಣಿ ಬಳಿ ಕಾರೊಂದು ಹಳ್ಳದಲ್ಲಿ ಕೊಚ್ಚಿಹೋಗಿದ್ದು 4 ಅಥವಾ 5 ಜನರು ಕಾರಿನೊಳಗೆ ಸಿಲುಕಿರುವ ಶಂಕೆ ಇದೆ. ಕೋಡನಮನೆ ಎಂಬಲ್ಲಿ ಸೇತುವೆೆಯಿಂದ ಕೆಳಗುರುಳಿದ ಕಾರು ನೀರಿನಲ್ಲೇ ಅರ್ಧ ಕಿಲೋ ಮೀಟರ್ ದೂರ ಹೋಗಿ ಬಿದ್ದಿದೆ. ಬುಧವಾರ ರಾತ್ರಿಯೇ ಘಟನೆ ನಡೆದಿದ್ದು ಗುರುವಾರ ಮಧ್ಯಾಹ್ನದ ಹೊತ್ತಿಗೆ ಬೆಳಕಿಗೆ ಬಂದಿದೆ. ಆದರೆ ಕಾರಿನ ಬಾಗಿಲುಗಳು ಇನ್ನೂ ಮುಚ್ಚಿಯೇ ಇದ್ದು ಪೊಲೀಸರು ಸ್ಥಳಕ್ಕೆ ಬಂದ ನಂತರ ನಿಖರ ಮಾಹಿತಿ …
Read More »ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಪುಟ್ಟ ಕಂದಮ್ಮನನ್ನು ರಕ್ಷಣೆ
ಯಾದಗಿರಿ: ನದಿ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಪುಟ್ಟ ಕಂದಮ್ಮನನ್ನು ರಕ್ಷಣೆ ಮಾಡಲಾಗಿದೆ. ಯಾದಗಿರಿ ಜಿಲ್ಲೆಯ ಶಹಪುರ ತಾಲೂಕಿನ ರೋಜಾ ಗ್ರಾಮದ ಬಳಿ ಈ ಘಟನೆ ನಡೆದಿದೆ. ಭೀಮಾ ನದಿ ಹಿನ್ನೀರು ಗ್ರಾಮ ನಡುಗಡ್ಡೆಯಾದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಬೋಟ್ ಮೂಲಕ ಸಂಚಾರ ಮಾಡುತ್ತಿದ್ದರು. ಹೀಗೆ ರಜಿಯಾ ಬೇಗಂ ಅವರು ಕೂಡ ತನ್ನ ಪುಟ್ಟ ಮಗುವಿನೊಂದಿಗೆ ತೆಪ್ಪದಲ್ಲಿ ತಮ್ಮ ಗ್ರಾಮಕ್ಕೆ ತೆರಳಿದ್ದಾರೆ. ಈ ವೇಳೆ ಏಕಾಏಕಿ ತೆಪ್ಪ ಅಲುಗಾಡಿ ಮಗು ರಜಿಯಾ ಅವರ …
Read More »ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯಪ್ರತಿಭೆಗಳಿಗೆ ಮಾಡಲಾದ ಅವಮಾನವಾಗಿದೆ:ಲಕ್ಷ್ಮಿ ಹೆಬ್ಬಾಳಕರ್
ಬೆಳಗಾವಿ – ಇಲ್ಲಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಪ್ರತಿಭಾವಂತ ಗೋಲ್ಡ್ ಮೆಡಲಿಸ್ಟ್ ಗಳಿಗೆ ಗೋಲ್ಡ್ ಮೆಡಲ್ ಗಳನ್ನು ನೀಡಿ ಗೌರವಿಸದೆ ವಿದ್ಯಾರ್ಥಿಗಳನ್ನು ತಿರಸ್ಕರಿಸಿ ಅವಮಾನಿಸಿದೆ ಎಂದು ಶಾಸಕರೂ, ಕೆಪಿಸಿಸಿ ರಾಜ್ಯ ವಕ್ತಾರರೂ ಆಗಿರುವ ಲಕ್ಷ್ಮಿ ಹೆಬ್ಬಾಳಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಜರುಗಿದ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಎಂಟನೇಯ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ಬೆಳಗಾವಿ ನಗರದ ನಿವಾಸಿ ಸೃಷ್ಟಿ ಗ್ಯಾನಿ ಎಂಬ ವಿದ್ಯಾರ್ಥಿನಿಯು ಇದೇ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗವನ್ನು ಮಾಡಿದ್ದು, …
Read More »ಡ್ರಗ್ಸ್ ಜಾಲಕ್ಕೆ ಸಂಬಂಸಿದಂತೆ ಕ್ರಿಕೆಟ್ ಆಟಗಾರರೊಬ್ಬರನ್ನು ಸಿಸಿಬಿ ಪೊಲೀಸರು ಸದ್ಯದಲ್ಲೇ ವಿಚಾರಣೆಗೆ ಒಳಪಡಿಸಲಿದ್ದಾರೆ.
ಬೆಂಗಳೂರು,ಅ.15- ಡ್ರಗ್ಸ್ ಜಾಲಕ್ಕೆ ಸಂಬಂಸಿದಂತೆ ಕ್ರಿಕೆಟ್ ಆಟಗಾರರೊಬ್ಬರನ್ನು ಸಿಸಿಬಿ ಪೊಲೀಸರು ಸದ್ಯದಲ್ಲೇ ವಿಚಾರಣೆಗೆ ಒಳಪಡಿಸಲಿದ್ದಾರೆ. ಈ ಆಟಗಾರ ಈಗಾಗಲೇ ಬಂಧನಕ್ಕೊಳಗಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿಯರಾದ ರಾಗಿಣಿ ಮತ್ತು ಸಂಜನಾ ಆಪ್ತ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ತನಿಖಾ ಅಧಿಕಾರಿಗಳು ಅವರನ್ನು ವಿಚಾರಣೆ ಗೊಳಪಡಿಸಲಿದ್ದಾರೆ. ಈಗಾಗಲೇ ಕೆಪಿಎಲ್ ಕ್ರಿಕೆಟ್ ತಂಡದ ಮಾಲೀಕ ಹಾಗೂ ಉದ್ಯಮಿಯೊಬ್ಬರನ್ನು ಸಿಸಿಬಿ ಪೊಲೀಸರು ವಿಚಾರಣೆಗೊಳಪಡಿಸಿ ದ್ದಾರೆ ಎಂದು ತಿಳಿದುಬಂದಿದೆ. ಅವರಿಂದ ಎರಡು ಮೊಬೈಲ್ಗಳನ್ನು ವಶಪಡಿಸಿಕೊಂಡಿರುವ ತನಿಖಾಕಾರಿಗಳು …
Read More »ಕುಂಭದ್ರೋಣ ಮಳೆಯಿಂದ ಚಿಕ್ಕೋಡಿ ಉಪ ವಿಭಾಗದ ರೈತರು ಕಂಗಾಲಾಗಿದ್ದಾರೆ.
ಚಿಕ್ಕೋಡಿ: ಬೆಳೆಗಳೆಲ್ಲವೂ ಭರಪೂರ ಬಂದಿದ್ದು, ಇನ್ನೇನು ಕಟಾವು ಮಾಡಬೇಕೆಂದು ಕೆಲ ರೈತರು ಯೋಚಿಸಿದರೆ, ಕೆಲ ರೈತರು ಫಸಲಿಗೆ ಬಂದ ಬೆಳೆಗಳನ್ನು ಕಟಾವು ಮಾಡಿ ರಾಶಿ ಮಾಡಲು ಮುಂದಾದ ಸಂದರ್ಭದಲ್ಲೇ ಕುಂಭದ್ರೋಣ ಮಳೆಯಿಂದ ಚಿಕ್ಕೋಡಿ ಉಪ ವಿಭಾಗದ ರೈತರು ಕಂಗಾಲಾಗಿದ್ದಾರೆ. ಕಳೆದ ಎರಡು-ಮೂರು ದಿನಗಳಿಂದ ಭಾರಿ ಮಳೆ ಸುರಿಯುತ್ತಿದ್ದು, ಮಳೆಯ ಜೊತೆಗೆ ಗಾಳಿಯೂ ಸಹಿತ ಜೋರಾಗಿ ಬೀಸುತ್ತಿರುವ ಪರಿಣಾಮ ಗೋವಿನ ಜೋಳ ಹಾಗೂ ಕಬ್ಬಿನ ಬೆಳೆ ನೆಲಸಮವಾಗಿವೆ. ಈ ಬಾರಿ ಮಳೆ …
Read More »ಅತ್ಯಾಚಾರಿಗಳ ಜನನಾಂಗ ಕಟ್ ಮಾಡುವಂತೆಕೂಡಲ ಸಂಗಮ ಧರ್ಮಪೀಠದ ಶ್ರೀ ಬಸವ ಪ್ರಕಾಶ ಸ್ವಾಮೀಜಿ ಆಗ್ರಹ
ಧಾರವಾಡ: ಅತ್ಯಾಚಾರಿಗಳ ಜನನಾಂಗ ಕಟ್ ಮಾಡುವಂತೆ ಬಾಗಲಕೋಟೆಯ ಕೂಡಲ ಸಂಗಮ ಧರ್ಮಪೀಠದ ಶ್ರೀ ಬಸವ ಪ್ರಕಾಶ ಸ್ವಾಮೀಜಿ ಆಗ್ರಹಿಸಿದ್ದಾರೆ. ಮಾಗಡಿ ತಾಲೂಕಿನ ಅತ್ಯಾಚಾರ ಪ್ರಕರಣ ನಡೆದ ವಿಚಾರವಾಗಿ ಧಾರವಾಡದಲ್ಲಿ ಮಾತನಾಡುವ ವೇಳೆ ಅತ್ಯಾಚಾರಿಗಳ ವಿರುದ್ಧ ಕಿಡಿಕಾರಿದ ಅವರು, ಪೊಲೀಸರು ಬಂಧಿಸೋದು, ಜಾಮೀನು ಕೊಡವುದು ಆಗಬಾರದು. ಅತ್ಯಾಚಾರಿಗಳ ಜನನಾಂಗ ಕಟ್ ಮಾಡುವ ಕಾನೂನು ಬರಬೇಕು ಎಂದರು ಈ ರೀತಿ ಮಾಡಿದರೆ ಮಾತ್ರ ಭಾರತದಲ್ಲಿ ಅತ್ಯಾಚಾರ ಕಡಿಮೆ ಆಗುತ್ತವೆ ಎಂದ ಅವರು, ಹೆಣ್ಣು …
Read More »