ಬೆಂಗಳೂರು: ರಾಜರಾಜೇಶ್ವರಿ ನಗರದ ಉಪ ಚುನಾವಣಾ ಕಣ ರಂಗೇರುತ್ತಿದ್ದು, ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಮತ ಹಾಕುವಂತೆ ಮತದಾರರಿಗೆ ಎಲ್ಇಡಿ ಟಿ.ವಿಗಳನ್ನ ಹಂಚಲಾಗ್ತಿದೆ ಎಂಬ ಆರೋಪ ಕೇಳಿಬಂದಿದೆ. ಮುನಿರತ್ನ ಅವರ ಬೆಂಬಲಿಗ, ಮಾಜಿ ಬಿಬಿಎಂಪಿ ಸದಸ್ಯ ಜಿ.ಕೆ ವೆಂಕಟೇಶ್ ವಾರ್ಡ್ ನಂಬರ್ 37ರ ವಿ.ಆರ್. ಗಾರ್ಡನ್ನ ಖಾಸಿಂ ಸಾಬ್ ಎನ್ನುವವರಿಗೆ, ಎಲ್.ಜಿ. ಕಂಪನಿಯ ಎಲ್ಇಡಿ ಟಿವಿ ಕೊಟ್ಟಿದ್ದಾರೆ. ಟಿ.ವಿ. ಮೇಲೆ ಮುನಿರತ್ನ ಫೋಟೋ ಅಂಟಿಸಲಾಗಿದೆ. ರಾಜರಾಜೇಶ್ವರಿ ನಗರ ಕ್ಷೇತ್ರದ ಮತದಾರರಿಗೆ …
Read More »Daily Archives: ಅಕ್ಟೋಬರ್ 22, 2020
ಹತ್ರಾಸ್ ಗ್ಯಾಂಗ್ ರೇಪ್ ಪ್ರಕರಣ ಮಾಸುವ ಮುನ್ನವೇ ಇದೀಗ ಅಂತಹುದೇ ಮತ್ತೊಂದು ಘಟನೆ ಉತ್ತರ ಪ್ರದೇಶದಲ್ಲಿ 15 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ
ಉತ್ತರ ಪ್ರದೇಶ: ದೇಶವನ್ನೇ ಬೆಚ್ಚಿ ಬೀಳಿಸಿದ್ದ ಉತ್ತರಪ್ರದೇಶದ ಹತ್ರಾಸ್ ನಲ್ಲಿ ಗ್ಯಾಂಗ್ ರೇಪ್ ಪ್ರಕರಣ ಮಾಸುವ ಮುನ್ನವೇ ಇದೀಗ ಅಂತಹುದೇ ಮತ್ತೊಂದು ಘಟನೆ ಉತ್ತರ ಪ್ರದೇಶದಲ್ಲಿ ಸಂಭವಿಸಿದೆ. 15 ವರ್ಷದ ಬಾಲಕಿಯ ಮೇಲೆ ಇಬ್ಬರು ಕಾಮುಕರು ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ. ಉತ್ತರಪ್ರದೇಶದ ರಾಂಪುರ ಜಿಲ್ಲೆಯ ಕೆಮ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ ಈ ಭೀಕರ ಘಟನೆ ನಡೆದಿದ್ದು, ಬಾಲಕಿಯ ಮನೆಯಲ್ಲಿಯೇ ಮನೆ ನಿರ್ಮಾಣದ ಕೆಲಸ ಮಾಡುತ್ತಿದ್ದ ಇಬ್ಬರು ಕಟ್ಟಡ …
Read More »ದೇವಸ್ಥಾನದ ನವರಾತ್ರಿ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾದ ಮಂಗಳೂರು ಉತ್ತರ ಕ್ಷೇತ್ರದ ಮಾಜಿ ಶಾಸಕ ಮೊಯಿದ್ದೀನ್ ಬಾವಾಗೆ ಮುಂಬೈನಿಂದ ಬೆದರಿಕೆ ಕರೆ ಬಂದಿದೆ.
ಮಂಗಳೂರು: ದೇವಸ್ಥಾನದ ನವರಾತ್ರಿ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾದ ಮಂಗಳೂರು ಉತ್ತರ ಕ್ಷೇತ್ರದ ಮಾಜಿ ಶಾಸಕ ಮೊಯಿದ್ದೀನ್ ಬಾವಾಗೆ ಮುಂಬೈನಿಂದ ಬೆದರಿಕೆ ಕರೆ ಬಂದಿದೆ. ಮಂಗಳೂರು ಹೊರವಲಯದ ಬಜಪೆ ಸುಂಕದಕಟ್ಟೆ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ನವರಾತ್ರಿಯ ಪ್ರಯುಕ್ತ ಕೊಪ್ಪರಿಗೆ ಇಡುವ ಕಾರ್ಯಕ್ರಮವಿತ್ತು. ಇದಕ್ಕೆ ಕ್ಷೇತ್ರದ ಆಹ್ವಾನದಂತೆ ಮಾಜಿ ಶಾಸಕ ಮೊಯಿದ್ದೀನ್ ಬಾವಾ ಭೇಟಿ ನೀಡಿದ್ದರು. ಅದೇ ವೇಳೆ ಕೊಪ್ಪರಿಗೆ ಇಡುವ ಧಾರ್ಮಿಕ ವಿಧಿ ವಿಧಾನ ನಡೆಯುತ್ತಿತ್ತು. ಹೀಗಾಗಿ ಕ್ಷೇತ್ರಾಡಳಿತ ಮಂಡಳಿಯವರು …
Read More »ಹೊಟ್ಟೆಕಿಚ್ಚಿನಿಂದ ಸರ್ಕಾರ ಇಂದಿರಾ ಕ್ಯಾಂಟೀನ್ಗೆ ಅನುದಾನ ಕೊಟ್ಟಿಲ್ಲ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ರಾಜ್ಯ ಸರ್ಕಾರ ವಿರುದ್ಧ ವಾಗ್ದಾಳಿ
ಬೆಂಗಳೂರು: ಹೊಟ್ಟೆಕಿಚ್ಚಿನಿಂದ ಸರ್ಕಾರ ಇಂದಿರಾ ಕ್ಯಾಂಟೀನ್ಗೆ ಅನುದಾನ ಕೊಟ್ಟಿಲ್ಲ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ರಾಜ್ಯ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇಂದಿರಾ ಕ್ಯಾಂಟೀನ್ ಕುರಿತು ಟ್ವೀಟ್ ಮಾಡಿರುವ ದಿನೇಶ್ ಗುಂಡೂರಾವ್, ಇಂದಿರಾ ಕ್ಯಾಂಟೀನ್ ನಿರ್ವಹಿಸುತ್ತಿರುವ ಬಿಬಿಎಂಪಿಗೆ ಸರ್ಕಾರ ಅನುದಾನ ನೀಡದಿರುವುದು ಹೊಟ್ಟೆಕಿಚ್ಚಿನ ರಾಜಕಾರಣ. ಇಂದಿರಾ ಕ್ಯಾಂಟೀನ್ ಮುಖಾಂತರ ಬಡವರ ಹಸಿದ ಹೊಟ್ಟೆಗಳು ತುಂಬುವುದು ಬಿಜೆಪಿಗೆ ಬೇಕಾಗಿಲ್ಲ. ಹಸಿವಿನ ಸಂಕಟ ಮತ್ತು ಅನ್ನದ ಬೆಲೆ ಗೊತ್ತಿದ್ದರೆ ಕೂಡಲೆ …
Read More »ಯತ್ನಾಳ್ ಹೇಳಿಕೆಯನ್ನು ಪಕ್ಷವು ಗಂಭೀರವಾಗಿ ಪರಿಗಣಿಸಿದ್ದು, ಪಕ್ಷದಿಂದ ಅಮಾನತು ಇಲ್ಲವೇ ಉಚ್ಛಾಟನೆ
ಬೆಂಗಳೂರು,ಅ.22-ಪಕ್ಷದ ನಿಯುಮ ಉಲ್ಲಂಘಿಸಿ ನಾಯಕರ ವಿರುದ್ದ ಬಹಿರಂಗವಾಗಿಯೇ ಹೇಳಿಕೆ ನೀಡುವ ಮೂಲಕ ಮುಜುಗರ ಉಂಟುಮಾಡುತ್ತಿರುವ ಮಾಜಿ ಸಚಿವ ಹಾಗೂ ವಿಜಪುರದ ವಿಧಾನಸಭಾ ಕ್ಷೇತ್ರದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ದ ಬಿಜೆಪಿ ಶಿಸ್ತು ಕ್ರಮ ಜರಗಿಸಲು ಮುಂದಾಗಿದೆ. ಯತ್ನಾಳ್ ವಿರುದ್ದ ಕ್ರಮ ಕೈಗೊಳ್ಳದಿದ್ದರೆ, ಮುಂದಿನ ದಿನಗಳಲ್ಲಿ ಉಳಿದಿರುವವರು ಇದೇ ಹಾದಿ ತುಳಿಯಬಹುದು ಎಂಬ ಹಿನ್ನಲೆಯಲ್ಲಿ ರಾಜ್ಯ ಬಿಜೆಪಿ ಘಟಕ, ಒಂದೆರೆಡು ದಿನದಲ್ಲಿ ಅವರ ಹೇಳಿಕೆ ಕುರಿತು ನೋಟಿಸ್ ಜಾರಿ ಮಾಡಲು …
Read More »ಬೆಂಗಳೂರಿನಲ್ಲಿ ರಸ್ತೆಗಿಳಿದ ಓಲೆಕ್ಟ್ರಾ ಎಲೆಕ್ಟ್ರಿಕ್ ಬಸ್
ಬೆಂಗಳೂರು, ಅಕ್ಟೋಬರ್, 22- ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ದೇಶಿಯ ನಿರ್ಮಿತ ಓಲೆಕ್ಟ್ರಾ ಎಲೆಕ್ಟ್ರಿಕ್ ಬಸ್ ಪರೀಕ್ಷಾರ್ಥ ಸಂಚಾರಕ್ಕೆ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಇಂದು ಚಾಲನೆ ನೀಡಿದರು. ಬಿಎಂಟಿಸಿಯ ಕೇಂದ್ರ ಕಚೇರಿ ಆವರಣದಲ್ಲಿ ಈ ಬಸ್ಗೆ ಚಾಲನೆ ನೀಡಿದ ನಂತರ ವಿಧಾನಸೌಧದವರೆಗೂ ಅದೇ ಬಸ್ನಲ್ಲಿ ಪ್ರಯಾಣಿಸಿದರು. ವಿಧಾನಸೌಧದ ಆವರಣದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರು ಕೂಡ ಎಲೆಕ್ಟ್ರಿಕ್ ಬಸ್ನ್ನು ವೀಕ್ಷಣೆ ಮಾಡಿ ನಂತರ ಉಪಮುಖ್ಯಮಂತ್ರಿಯವರಿಂದ ಮಾಹಿತಿ ಪಡೆದರು.ಈ ಸಂದರ್ಭದಲ್ಲಿ ಮಾತನಾಡಿದ ಲಕ್ಷ್ಮಣ್ …
Read More »ಐಷಾರಾಮಿ ರೈಲು ಗೋಲ್ಡನ್ ಚಾರಿಯಟ್ ಪುನಃ ಸಂಚಾರ ಆರಂಭಿಸಲಿದ್ದು, ಜನವರಿಯಿಂದ ಆರಂಭ
ಬೆಂಗಳೂರು,ಅ.22- ಐಷಾರಾಮಿ ರೈಲು ಗೋಲ್ಡನ್ ಚಾರಿಯಟ್ ಪುನಃ ಸಂಚಾರ ಆರಂಭಿಸಲಿದ್ದು, ಜನವರಿಯಿಂದ ಆರಂಭವಾಗುವ ಸಂಚಾರಕ್ಕೆ ಈಗಾಗಲೇ ಮುಂಗಡ ಟಿಕೆಟ್ ಕಾಯ್ದಿರಿಸುವಿಕೆ ಪ್ರಾರಂಭವಾಗಿದೆ. ಕಳೆದ 9 ತಿಂಗಳಿನಿಂದ ಐಷಾರಾಮಿ ರೈಲು ಗೋಲ್ಡನ್ ಚಾರಿಯಟ್ ರೈಲು ಸಂಚಾರ ಸ್ಥಗಿತವಾಗಿತ್ತು. ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಹೊಸ ವಿನ್ಯಾಸ, ಸೇವೆಗಳ ಜೊತೆ ರೈಲು ಸಂಚಾರಕ್ಕೆ ಪುನಃ ಚಾಲನೆ ನೀಡಲಾಗುತ್ತಿದೆ. ಪುನಃ ಸಂಚಾರ ಆರಂಭಿಸಲಿದೆ ಐಷಾರಾಮಿ ಗೋಲ್ಡನ್ ಚಾರಿಯಟ್ಪುನಃ ಸಂಚಾರ ಆರಂಭಿಸಲಿದೆ ಐಷಾರಾಮಿ ಗೋಲ್ಡನ್ ಚಾರಿಯಟ್ ಬೆಂಗಳೂರು …
Read More »ಪ್ರಸಕ್ತ ಸಾಲಿನ ಪಿಯುಸಿ ಯ ಶೇ. 30 ರಷ್ಟು ಪಠ್ಯವನ್ನು ಕಡಿತಗೊಳಿಸಲು ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ಧರಿಸಿದೆ.
ಬೆಂಗಳೂರು: ಪ್ರಸಕ್ತ ಸಾಲಿನ ಪಿಯುಸಿ ಯ ಶೇ. 30 ರಷ್ಟು ಪಠ್ಯವನ್ನು ಕಡಿತಗೊಳಿಸಲು ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಗಳ ವಿಜ್ಞಾನ ವಿಷಯಗಳನ್ನು (ಭೌತ ವಿಜ್ಞಾನ, ರಸಾಯನ ವಿಜ್ಞಾನ, ಜೀವ ವಿಜ್ಞಾನ, ಗಣಿತ ಶಾಸ್ತ್ರ) ಹೊರತುಪಡಿಸಿ ಇತರೆ ವಿಷಯಗಳಲ್ಲಿ ಪಠ್ಯವನ್ನು ಕಡಿತಗೊಳಿಸಲು ಪಿಯು ಬೋರ್ಡ್ ನಿರ್ಧಾರ ಮಾಡಿದೆ. ಈ ಪಠ್ಯಕ್ರಮ 2020–21ನೇ ಶೈಕ್ಷಣಿಕ ವರ್ಷಕ್ಕೆ ಮಾತ್ರ ಅನ್ವಯವಾಗಲಿದೆ. ವಿಜ್ಞಾನ ವಿಷಯಗಳ ಪಠ್ಯವನ್ನು ಸಿಬಿಎಸ್ಇ ಶಿಕ್ಷಣ …
Read More »ಬೆಳಗಾವಿಯ ಸಮರ್ಥ ನಗರದಲ್ಲಿ ಮಟ್ಕಾ ಅಡ್ಡೆಯ ಮೇಲೆ ಪೊಲೀಸರು ದಾಳಿ
ಬೆಳಗಾವಿ: ಬೆಳಗಾವಿಯ ಸಮರ್ಥ ನಗರದಲ್ಲಿ ಮಟ್ಕಾ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ, 11 ಜನ ಆರೋಪಿಗಳನ್ನು ನಿನ್ನೆ ತಡರಾತ್ರಿ ಬಂಧಿಸಿದ್ದಾರೆ. 27 ಸಾವಿರ ನಗದು ಹಣ, 8 ಮೊಬೈಲ್ ಜಪ್ತಿ ಮಾಡಿದ್ದಾರೆ. ಸರ್ಫರಾಜ್ ಶಹಾಪೂರಿ(21), ದಶರಥ ಕಾಂಬಳೆ(40), ಪ್ರಕಾಶ ಮಲಸೂರೆ(64), ಬಸವರಾಜ ಪಾಟೀಲ (38), ಮಧು ನಾಯಕ(40), ಅಕ್ಷಯ ಸಾಳುಂಕೆ(24), ಅರ್ಜುನ ಜಕ್ಕಪ್ಪನ್ನವರ(28), ಖಾಜಾಹುಸೇನ ಘೋರಿ(38), ಆನಂದ ಪ್ರಭು ವೆಂಕಟಪುರ(20), ವಸಂತ ನಾಯ್ಕ(38), ಚಂದ್ರಶೇಖರ ವೆಂಕಣ್ಣವರ(39) ಬಂಧಿತರು. ಮಾರ್ಕೇಟ್ …
Read More »ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟಿಸಬೇಕು,ನಿಮ್ಮನ್ನು ಏನು ಮಾಡಬೇಕು: ಹರಕು ಬಾಯಿಈಶ್ವರಪ್ಪ ಹೇಳಿಕೆಗೆ ಅಭಿಮಾನಿ ಫೋಸ್ಟ್
ವಿಜಯಪುರ: ತಮ್ಮನ್ನು ಪಕ್ಷದಿಂದ ಉಚ್ಛಾಟಿಸಬೇಕು ಎಂಬ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ಅಭಿಮಾನಿ ಫೋಸ್ಟ್ ಮಾಡಿರುವುದನ್ನು ನಮ್ಮ ಖಾತೆಗೆ ಹಂಚಿಕೊಳ್ಳುವ ಮೂಲಕ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ತಿರುಗೇಟು ನೀಡಿದ್ದಾರೆ. ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಸಿಎಂ ಹಾಗೂ ಅವರ ಪುತ್ರ ವಿಜಯೇಂದ್ರ ವಿರುದ್ಧ ಮಾಡಿರುವ ಆರೋಪಕ್ಕೆ ನಿನ್ನೆ ಸಚಿವ ಕೆ.ಎಸ್.ಈಶ್ವರಪ್ಪ, ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟಿಸಬೇಕು ಎಂದು ಆಗ್ರಹಿಸಿದ್ದರು. ಈ ಹೇಳಿಕೆಗೆ ಖಾರವಾಗಿ ಫೇಸ್ಬುಕ್ ಮೂಲಕ ಯತ್ನಾಳ್ ಬೆಂಬಲಿಗ ಎನ್ನಲಾದ …
Read More »