Breaking News

Monthly Archives: ಅಕ್ಟೋಬರ್ 2020

ಚಿರು ಸಮಾಧಿ ಬಳಿ ಹೋಗಿ, ಸುಂದರ್​ ರಾಜ್​ ಕುಟುಂಬ ಪೂಜೆ ನೆರವೇರಿಸಲಿದ್ದಾರೆ.

ಚಿರು ಸರ್ಜಾ ಹುಟ್ಟುಹಬ್ಬದ ಹಿನ್ನೆಲೆ, ಪತ್ನಿ ಮೇಘನಾ ರಾಜ್​ ಚಿರು ಸಮಾಧಿ ಬಳಿ ಹೋಗಲು ಸಿದ್ಧತೆ ನಡೆಸುತ್ತಿದ್ದಾರೆ ಅನ್ನೋದು ತಿಳಿದು ಬಂದಿದೆ. ಚಿರು ಸಮಾಧಿ ಬಳಿ ಹೋಗಿ, ಸುಂದರ್​ ರಾಜ್​ ಕುಟುಂಬ ಪೂಜೆ ನೆರವೇರಿಸಲಿದ್ದಾರೆ. ಸದ್ಯ ಮೇಘನಾ ರಾಜ್​ ಸರ್ಜಾ ತಮ್ಮ ಜೆ.ಪಿ.ನಗರದ ಮನೆಯಲ್ಲೇ ಇದ್ದಾರೆ. ಇನ್ನು, ಇಂದು ಮೇಘನಾರಾಜ್​ಗೆ ಹೆರಿಗೆ ಅಗುವ ಊಹಾಪೋಹಗಳಿಗೆ ತಂದೆ ಸುಂದರ್ ರಾಜ್ ತೆರೆ ಎಳೆದಿದ್ದಾರೆ. ‘ಇವತ್ತು ಮೇಘನಾ ಆಸ್ಪತ್ರೆಗೆ ಅಡ್ಮಿಟ್​ ಆಗೋದಿಲ್ಲ. ನಾವೆಲ್ಲರೂ …

Read More »

ನಾಡಿನಾದ್ಯಂತ ನವರಾತ್ರಿ ಹಬ್ಬದ ಸಂಭ್ರಮ ಶುರುವಾಗಿದೆ.

ಬೆಂಗಳೂರು: ಇಂದಿನಿಂದ ನಾಡಿನಾದ್ಯಂತ ನವರಾತ್ರಿ ಹಬ್ಬದ ಸಂಭ್ರಮ ಶುರುವಾಗಿದೆ. ನವರಾತ್ರಿಯ ಮೊದಲ ದಿನದ ಹಿನ್ನೆಲೆಯಲ್ಲಿ ಬನಶಂಕರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿದೆ. ಇಂದು ತಾಯಿ ಬನಶಂಕರಿಗೆ ಅರಿಶಿನ ಕೊಂಬಿನ‌ ಅಲಂಕಾರ ಮಾಡಲಾಗಿದ್ದು ಭಕ್ತರ ಮನ ಸೆಳೆದಿದ್ದಾಳೆ. ದೇವಿಯ ದರ್ಶನ ಪಡೆಯಲು ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ರು. ದೇವಿಗೆ ತುಪ್ಪ ಹಾಗೂ ನಿಂಬೆಹಣ್ಣಿನ‌ ದೀಪ ಬೆಳಗುವ ಮೂಲಕ ಭಕ್ತರು ದೇವಿಗೆ ನಮಿಸಿದ್ರು. ದೇವಸ್ಥಾನದಲ್ಲಿ ನವರಾತ್ರಿಯ ರಂಗು ಮೇಳೈಸಿದೆ. ಕೊರೊನಾ ಹಿನ್ನೆಲೆಯಲ್ಲಿ ಎಲ್ಲಾ …

Read More »

ಸಿಗಂದೂರು ಚೌಡೇಶ್ವರಿ ಸನ್ನಿಧಿಯಲ್ಲಿ ಮಾತಿನ ಚಕಮಕಿ- ಟ್ರಸ್ಟಿ, ಅರ್ಚಕರ ಗುಂಪಿನ ನಡ್ವೆ ಘರ್ಷಣೆ

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಸಿಗಂದೂರು ಶ್ರೀ ಚೌಡೇಶ್ವರಿ ಸನ್ನಿಧಿಯಲ್ಲಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದ್ದು, ಘಟನೆಯಲ್ಲಿ ಕಚೇರಿಯ ಪೀಠೋಪಕರಣಗಳಿಗೆ ಹಾನಿ ಮಾಡಲಾಗಿದೆ. ದೇಗುಲದ ಆಡಳಿತ ಮಂಡಳಿ ಮತ್ತು ಅರ್ಚಕರ ನಡುವಿನ ಶೀತಲ ಸಮರ ಮತ್ತೊಂದು ಸ್ವರೂಪ ಪಡೆದುಕೊಂಡಿದೆ ಎಂದು ಹೇಳಲಾಗುತ್ತಿದೆ. ಪ್ರಧಾನ ಅರ್ಚಕ ಶೇಷಗಿರಿ ಭಟ್ ದೇವಸ್ಥಾನದ ಗರ್ಭಗುಡಿಯ ಮುಂದೆ ಇಂದು ಕುಟುಂಬ ಸದಸ್ಯರೊಂದಿಗೆ ಮೌನಾಚರಣೆ ಆರಂಭಿಸಿದ್ದರು. ನವರಾತ್ರಿಗೂ ಮೊದಲು ಚಂಡಿಕಾ ಹೋಮ ನಡೆಸಬೇಕು. ಟ್ರಸ್ಟಿ …

Read More »

ಕೊರೊನಾ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಫೇಲ್

ನವದೆಹಲಿ: ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು ಕೊರೊನಾ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಫೇಲ್ ಆಗಿದೆ. ಈ ಹಿನ್ನೆಲೆ ರಾಜ್ಯದ ಕೊರೊನಾ ವೈರಸ್ ನಿಯಂತ್ರಣ ಉಸ್ತುವಾರಿಗೆ ಕೇಂದ್ರ ಸರ್ಕಾರ ವಿಶೇಷ ತಂಡವನ್ನು ನಿಯೋಜಿಸಿದೆ. ಕರ್ನಾಟಕವೂ ಸೇರಿ ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಕೇರಳ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಛತ್ತೀಸಗಢ ರಾಜ್ಯಗಳಿಗೆ ಪ್ರತ್ಯೇಕ ತಜ್ಞರ ತಂಡಗಳನ್ನು ಕೇಂದ್ರ ಆರೋಗ್ಯ ಇಲಾಖೆ ನಿಯೋಜಿಸಿದೆ. ಕೇಂದ್ರದಿಂದ ನಿಯೋಜನೆಗೊಂಡಿರುವ ತಜ್ಞರ ತಂಡ ಕರ್ನಾಟಕಕ್ಕೆ …

Read More »

ಕೊಪ್ಪಳದಲ್ಲಿ ಪುನೀತ್ ರಾಜ್‍ಕುಮಾರ್ ಅಭಿನಯದ ಜೇಮ್ಸ್ ಚಿತ್ರೀಕರಣ

ಕೊಪ್ಪಳ: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಸ್ಯಾಂಡಲ್‍ವುಡ್‍ನ ಬಹುನಿರೀಕ್ಷಿತ ಚಿತ್ರ ಜೇಮ್ಸ್ ಮೂವಿಯ ಚಿತ್ರೀಕರಣ ನಾಳೆಯಿಂದ ಕಿಷ್ಕಿಂದ ಗುಡ್ಡದ ಪ್ರದೇಶದಲ್ಲಿ ನಡೆಯಲಿದೆ. ಗಂಗಾವತಿ ತಾಲೂಕಿನ ಕಿಷ್ಕಿಂದ ಭಾಗವಾಗಿರುವ ಮಲ್ಲಾಪುರ ಮತ್ತು ವಾನಭದ್ರಪ್ಪ ಗ್ರಾಮದ ನಡುವೆ ಬೃಹತ್ ಸೆಟ್ ಹಾಕಲಾಗಿದೆ. ಚಿತ್ರದ ನಾಯಕ ಪುನೀತ್ ರಾಜಕುಮಾರ್ ಮತ್ತು ತೆಲುಗಿನ ಖ್ಯಾತ ನಟ ಶ್ರೀಕಾಂತ್ ಕೂಡ ಶೂಟಿಂಗ್‍ನಲ್ಲಿ ಭಾಗಿಯಾಗಲಿದ್ದಾರೆ. ಈಗಾಗಲೇ ಮಲ್ಲಾಪುರ ಗ್ರಾಮದ ಹೊರವಲಯದ ಗುಡ್ಡ ಪ್ರದೇಶದಲ್ಲಿ ಭವ್ಯ ಸೆಟ್ ಅನ್ನು …

Read More »

ಹಾಯ್ ಹೇಗಿದ್ದೀರಾ? ಹೇಗಿದೆ ಲೈಫ್? ಭೂಮಿ ಶೆಟ್ಟಿ

ಕಿನ್ನರಿ ಧಾರಾವಾಹಿ ಹಾಗೂ ಬಿಗ್‍ಬಾಸ್ ಸೀಸನ್ 7ರ ಸ್ಪರ್ಧಿ ಭೂಮಿ ಶೆಟ್ಟಿ ಈಗ ಸಿನಿಮಾಗಳತ್ತ ಮುಖ ಮಾಡಿದ್ದಾರೆ. ಅವರ ಹೊಸ ಪ್ರಾಜೆಕ್ಟ್ ಹಾಗೂ ಬಿಗ್‍ಬಾಸ್ ನಂತರದ ಜೀವನದ ಬಗ್ಗೆ ಒಂದಿಷ್ಟು ವಿಚಾರಗಳನ್ನ ನಮ್ಮೊಂದಿಗೆ ಹಂಚಿಕೊಂಡಿದ್ದಾರೆ. • ಹಾಯ್ ಹೇಗಿದ್ದೀರಾ? ಹೇಗಿದೆ ಲೈಫ್? ನಾನು ಸೂಪರ್ ಆಗಿದ್ದೀನಿ. ಲೈಫ್ ಬೊಂಬಾಟ್ ಆಗಿದೆ. ಬಿಗ್‍ಬಾಸ್‍ನಿಂದ ಬಂದ ಮೇಲೆ ಒಂದಿಷ್ಟು ಹೊಸ ಹೊಸ ಅವಕಾಶಗಳು ಸಿಕ್ತಿವೆ. ಸದ್ಯಕ್ಕೆ ಕೊರೊನಾದಿಂದ ಪಾರಾದ್ರೆ ಸಾಕಾಗಿದೆ. • ಬಿಗ್‍ಬಾಸ್ ಮುಗಿದ ನಂತರ …

Read More »

ಭೀಮೆ, ಕೃಷ್ಣಾರ್ಭಟಕ್ಕೆ ಉತ್ತರ ಕರ್ನಾಟಕದ ಮಂದಿ ಬೆಚ್ಚಿಬಿದ್ದಿದ್ದಾರೆ.

ಕಲಬುರಗಿ: ಭೀಮೆ, ಕೃಷ್ಣಾರ್ಭಟಕ್ಕೆ ಉತ್ತರ ಕರ್ನಾಟಕದ ಮಂದಿ ಬೆಚ್ಚಿಬಿದ್ದಿದ್ದಾರೆ. ಊರಿಗೆ ಊರೇ ಮುಳುಗಡೆಯಾಗಿ, ಜನಜೀವನ ಅಯೋಮಯವಾಗಿದೆ. ಮನೆ, ಮಠ ಕಳೆದುಕೊಂಡ ಜನ ಕಣ್ಣೀರ ಹೊಳೆಯನ್ನೇ ಹರಿಸ್ತಿದ್ದಾರೆ. ಕಲಬುರಗಿಯಲ್ಲಂತೂ ಜಲರಾಕ್ಷಸ ಘನಘೋರ ಪರಿಸ್ಥಿತಿ ನಿರ್ಮಾಣ ಮಾಡಿದ್ದಾನೆ.ಹೌದು. ಉತ್ತರ ಕರ್ನಾಟಕದ ಸ್ಥಿತಿ ನಿಜಕ್ಕೂ ದುರಂತ ಅಂದ್ರೆ ತಪ್ಪಾಗಲ್ಲ. ಹಳ್ಳಿಗೆ ಹಳ್ಳಿಗಳನ್ನೇ ಮುಳುಗಿಸಿದೆ. ಮನೆಯೊಳಗೂ ನೀರು, ಹೊರಗೂ ನೀರು, ಅಕ್ಕಿ, ಗೋಧಿ, ಹೊಲ, ಗದ್ದೆ ಎಲ್ಲವೂ ನೀರುಪಾಲಾಗಿವೆ. ಕಲಬುರಗಿಯನ್ನಂತು ಮಹಾಮಳೆ ಮುಳುಗಿಸಿ ಬಿಟ್ಟಿದೆ. ರಣಭೀಕರ …

Read More »

ಕೋವಿಡ್‌ ಪರೀಕ್ಷೆ ದರವನ್ನು ಸರ್ಕಾರ ಬದಲಾಯಿಸಿದೆ. ಯಾವುದಕ್ಕೆ ಎಷ್ಟು?

ಬೆಂಗಳೂರು: ಕೋವಿಡ್‌ ಪರೀಕ್ಷೆ ದರವನ್ನು ಸರ್ಕಾರ ಬದಲಾಯಿಸಿದೆ. ಹೊಸ ದರವನ್ನು ನಿಗದಿ ಮಾಡಿ ರಾಜ್ಯ ಸರ್ಕಾರ ಆದೇಶ ಪ್ರಕಟಿಸಿದೆ. ಯಾವುದಕ್ಕೆ ಎಷ್ಟು? ಸರ್ಕಾರದಿಂದ ಗಂಟಲ ದ್ರವ ಸಂಗ್ರಹಿಸಿ ಖಾಸಗಿ ಲ್ಯಾಬಿಗೆ ಪರೀಕ್ಷೆಗೆ ಕಳುಹಿಸಿದರೆ – 400 ರೂ. ಆರ್ ಟಿ ಪಿಸಿಆರ್ ಸರ್ಕಾರದಿಂದ ಖಾಸಗಿ ಲ್ಯಾಬ್ ಗೆ ರವಾನೆ ಮಾಡಿದರೆ – 800 ರೂ. ಖಾಸಗಿಯಾಗಿ ಆರ್‌ಟಿಪಿಸಿಆರ್‌ ಪರೀಕ್ಷೆ ಮಾಡಿಕೊಂಡರೆ – 1,200 ರೂ. ಖಾಸಗಿ ಲ್ಯಾಬ್ ನವರು ಮನೆಯಿಂದ …

Read More »

ಕಾವೇರಿ ಮಾತೆ ತೀರ್ಥ ರೂಪಿಣಿಯಾಗಿ ದರ್ಶನ ನೀಡಿದ್ದಾರೆ.

ಮಡಿಕೇರಿ: ಕಾವೇರಿ ಮಾತೆ ತೀರ್ಥ ರೂಪಿಣಿಯಾಗಿ ದರ್ಶನ ನೀಡಿದ್ದಾರೆ.ಇಂದು ಬೆಳಗ್ಗೆ 7 ಗಂಟೆ 3 ನಿಮಿಷಕ್ಕೆ ಕನ್ಯಾಲಗ್ನದಲ್ಲಿ ತೀರ್ಥೋದ್ಭವವಾಗಿದೆ. ಬ್ರಹ್ಮಕುಂಡಿಕೆಯ ಬಳಿ ಗೋಪಾಲ್ ಕೃಷ್ಣ ಆಚಾರ್ ನೇ ತೃತ್ವದಲ್ಲಿ ವಿವಿಧ ಪೂಜಾ ಕೈಂಕರ್ಯ ನೆರವೇರುತ್ತಿದ್ದು, ಬ್ರಹ್ಮ ಕುಂಡಿಕೆ, ಅಗಸ್ತೇಶ್ವರ ದೇವಾಲಯ ಮತ್ತು ಭಾಗಮಂಡಲ ದೇವಾಲಯಗಳಿಗೆ ವಿದ್ಯುತ್ ದೀಪ ಮತ್ತು ಪುಷ್ಪಾಲಂಕಾರ ಮಾಡಲಾಗಿದೆ. ಕೋವಿಡ್ ಮಿತಿ ಮೀರುತ್ತಿರುವುದರಿಂದ ತೀರ್ಥೋಧ್ಭವ ಸಂದರ್ಭದಲ್ಲಿ ದೇವಾಲಯ ಅರ್ಚಕರು, ಸಿಬ್ಬಂದಿ ಮತ್ತು ಉಸ್ತುವಾರಿ ಸಚಿವರು ಹಾಗೂ ಕೆಲವೇ …

Read More »

ರಾಜ್ಯೋತ್ಸವದ ದಿನ ಕಪ್ಪು ದಿನ ಆಚರಿಸಲು,ಅನುಮತಿನೀಡುವಂತೆ,M.E.S.ಮನವಿ

ಬೆಳಗಾವಿ- ಸೋತರೂ ಮೀಸೆ ಮಣ್ಣಾಗಲಿಲ್ಲ ಎನ್ನುವಂತೆ,ಬೆಳಗಾವಿಯಲ್ಲಿ ಅಸ್ತಿತ್ವ ಕಳೆದುಕೊಂಡು,ಸಮಾಧಿ ಯಾಗಿರುವ ಮಹಾರಾಷ್ಟ್ರ ಏಕೀಕರಣ ಸಮೀತಿ ಈ ವರ್ಷ ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸಲು ಅನುಮತಿ ನೀಡುವಂತೆ ಮತ್ತೆ ಕ್ಯಾತೆ ತೆಗೆದಿದೆ. ರಾಜ್ಯದಲ್ಲಿ ಕೋವೀಡ್ ಇದೆ,ಈ ವರ್ಷ,ದಸರಾ ಉತ್ಸವ,ಕಿತ್ತೂರು ಉತ್ಸವ ಸರಳವಾಗಿ ಆಚರಿಸಲು ಸರ್ಕಾರ ನಿರ್ಧರಿದೆ.ಜೊತೆಗೆ ರಾಜ್ಯೋತ್ಸವವನ್ನು ಅತ್ಯಂತ ಸರಳವಾಗಿ ಆಚರಿಸಲು ಸರ್ಕಾರ ನಿರ್ಧರಿಸಿದ ಬೆನ್ನಲ್ಲಿಯೇ ನಿನ್ನೆ ಶುಕ್ರವಾರ ಎಂ ಈ ಎಸ್ ಮುಖಂಡರು ದೀಪಕ ದಳವಿ ಅವರ ನೇತ್ರತ್ವದಲ್ಲಿ …

Read More »