Breaking News

Daily Archives: ನವೆಂಬರ್ 13, 2020

ತಾನು ಕ್ಷಮೆ ಯಾಚಿಸುವುದಿಲ್ಲ, ದಂಡವನ್ನೂ ಪಾವತಿಸುವುದಿಲ್ಲ,:ಕುನಾಲ್ ಕಮ್ರಾ

ನವದೆಹಲಿ: ತಾನು ಕ್ಷಮೆ ಯಾಚಿಸುವುದಿಲ್ಲ, ದಂಡವನ್ನೂ ಪಾವತಿಸುವುದಿಲ್ಲ, ಸುಪ್ರೀಂಕೋರ್ಟ್ ಕಾರ್ಯವೈಖರಿ ಟೀಕಿಸಿರುವ ಟ್ವೀಟ್‍ಗಳನ್ನು ಡಿಲೀಟ್ ಮಾಡುವುದಿಲ್ಲ ಎಂದು ಸ್ಟಾಂಡ್‍ಅಪ್ ಕಾಮಿಡಿಯನ್ ಕುನಾಲ್ ಕಮ್ರಾ ಸ್ಪಷ್ಟಪಡಿಸಿದ್ದಾರೆ.   ಅರ್ನಬ್ ಗೋಸ್ವಾಮಿಗೆ ಜಾಮೀನು ನೀಡಿರುವ ಸುಪ್ರೀಂಕೋರ್ಟ್ ನಿರ್ಧಾರವನ್ನು ಕಾಮ್ರಾ ಟ್ವೀಟ್ ಮಾಡಿ ಟೀಕಿಸಿದ್ದರು. ‘ತಮಾಷೆಯ ಗೆರೆಯನ್ನು ಕಾಮ್ರಾ ದಾಟಿದ್ದಾರೆ’ ಎಂದು ಹೇಳಿದ್ದ ಅಟಾರ್ನಿ ಜನರಲ್ ವೇಣುಗೋಪಾಲ್, ಕಾಮ್ರಾ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು 8 ಮಂದಿಗೆ ಅವಕಾಶ ನೀಡಿದ್ದರು. ಕ್ಷಮಾಪಣೆ …

Read More »

ಬಿಜೆಪಿಯಲ್ಲಿ ಯಾರೂ ಶಾಸಕರಾಗಬೇಕು. ಲೋಕಸಭಾ ಸದಸ್ಯರಾಗಬೇಕು ಪ್ರಕಾಶ ಹುಕ್ಕೇರಿ ಹೇಳಿಕೆಗೆ ವಿಧಾನ ಪರಿಷತ್ ಮುಖ್ಯಸಚೇತಕ  ಮಹಾಂತೇಶ ಕವಟಗಿಮಠ ತಿರುಗೇಟು

ಚಿಕ್ಕೋಡಿ : ಸುರೇಶ ಅಂಗಡಿ ಕುಟುಂಬದವರಿಗೆ ಬೆಳಗಾವಿ ಲೋಕಸಭಾ ಟಿಕೆಟ್ ನೀಡಿದ್ರೆ , ನಾನು ಗೆಲ್ಲಿಸಲು ಪ್ರಯತ್ನಿಸುತ್ತೇನೆ ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಹೇಳಿಕೆಗೆ ವಿಧಾನ ಪರಿಷತ್ ಮುಖ್ಯಸಚೇತಕ  ಮಹಾಂತೇಶ ಕವಟಗಿಮಠ ತಿರುಗೇಟು ನೀಡಿದ್ದಾರೆ. ತಾಲ್ಲೂಕಿನ ನವಲಿಹಾಳ ಗ್ರಾಮದಲ್ಲಿ ಶುಕ್ರವಾರ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಹಿರಿಯರು. ಅವರು ತಮ್ಮ ಪಕ್ಷದಲ್ಲಿ ಯಾರು  ಅಭ್ಯರ್ಥಿಯಾಗಬೇಕು. ಯಾರನ್ನು ಲೋಕಸಭಾ ಸದಸ್ಯರಾಗಬೇಕೆಂದು ಹೇಳಿದ್ದರೇ ಅದನ್ನು ಸ್ವಾಗತಿಸುತ್ತಿದ್ದೇ. ಆದರೆ ಬಿಜೆಪಿಯಲ್ಲಿ …

Read More »

1 ಲಕ್ಷ ಲೀಟರ್ ನೀರಿನ ಸಂಗ್ರಹಣೆಯ ಸಾಮರ್ಥ್ಯವಿರುವ ಜಲಸಂಗ್ರಹಾಲಯ ಉದ್ಘಾಟನೆ: ಶಶಿಕಲಾ ಜೊಲ್ಲೆ

ಚಿಕ್ಕೋಡಿ: ಗ್ರಾಮದ ಪ್ರತಿ ಮನೆಗೂ ಶುದ್ಧ ಕುಡಿಯುವ ನೀರು ಒದಗಿಸುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ. ಕ್ಷೇತ್ರದ ಪ್ರಜೆಗಳ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಪ್ರತಿಯೊಬ್ಬರಿಗೂ ಶುದ್ಧ ಕುಡಿಯುವ ನೀರು ಲಭ್ಯವಾಗಬೇಕು ಎಂಬುದು ನನ್ನ ಗುರಿಯಾಗಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ನಿಪ್ಪಾಣಿ ಮತಕ್ಷೇತ್ರದ ಸುಳಗಾಂವ, ಆಡಿ, ಮತ್ತಿವಾಡೆ ಗ್ರಾಮದಲ್ಲಿ, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯಿಂದ ಮಂಜೂರಾದ ಸುಮಾರು 70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ, 1 ಲಕ್ಷ ಲೀಟರ್ …

Read More »

ಕೃಷಿ ಹಾಗೂ ತೋಟಗಾರಿಕಾ ಬೆಳೆಗಳ ಸಾಗುವಳಿ ವೆಚ್ಚ ಉತ್ಪಾದನೆ

ಬೆಂಗಳೂರು: ಕೃಷಿ ಹಾಗೂ ತೋಟಗಾರಿಕಾ ಬೆಳೆಗಳ ಸಾಗುವಳಿ ವೆಚ್ಚ ಉತ್ಪಾದನೆ ಪ್ರಮಾಣ, ಮಾರುಕಟ್ಟೆ ಬೆಳೆಗಳ ವಸ್ತುಸ್ಥಿತಿ ಮತ್ತು ನೂತನ ಮಾರುಕಟ್ಟೆ ಕಾಯ್ದೆಗಳ ಕುರಿತು ಸರ್ಕಾರಕ್ಕೆ ಕೃಷಿ ಬೆಲೆ ಆಯೋಗ ಹಲವು ಶಿಫಾರಸುಗಳನ್ನು ಮಾಡಿದೆ. ಬೆಳೆ ಶಿಫಾರಸು-ಉತ್ಪಾದನಾ ವೆಚ್ಚ ಕಡಿಮೆ ಮಾಡಿ, ಉತ್ಪಾದನೆ ಹೆಚ್ಚಿಸುವ ಮೂಲಕ ಆದಾಯ ಅಧಿಕಗೊಳಿಸುವುದು, ತಳಿ ಸಂಶೋಧನೆ, ಪ್ರಾತ್ಯಕ್ಷತೆ ಮತ್ತು ತರಬೇತಿ, ಹಣಕಾಸು ಮತ್ತು ಮಾನವ ಸಂಪನ್ಮೂಲದ ಆದ್ಯತೆ, ಉತ್ಪಾದನಾ ಸುಸ್ಥಿರತೆ ಮತ್ತು ಆದಾಯ ಭದ್ರತೆ, ಬೆಳೆ …

Read More »

ಮದುವೆ ಮಂಟಪಕ್ಕೆ ಮದುಮಗಳು ಬುಲೆಟ್‍ನಲ್ಲಿ ಸೋಲೋ ರೈಡ್ ಮೂಲಕ ಎಂಟ್ರಿ

ಮಂಗಳೂರು: ಮದುವೆ ಮಂಟಪಕ್ಕೆ ಮದುಮಗಳು ಬುಲೆಟ್‍ನಲ್ಲಿ ಸೋಲೋ ರೈಡ್ ಮೂಲಕ ಎಂಟ್ರಿ ಕೊಟ್ಟು ಮದುವೆಗೆ ಬಂದಿದ್ದವರನ್ನು ಹುಬ್ಬೇರಿಸುವಂತೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಸುರತ್ಕಲ್ ಮೂಲದ ಪೂಜಾ, ಆಕಾಶ್ ಎಂಬ ವರನನ್ನು ಇತ್ತೀಚೆಗೆ ಮದುವೆಯಾಗಿದ್ದಾರೆ. ಮದುವೆ ಸಮಯದಲ್ಲಿ ಮಂಟಪಕ್ಕೆ ಬುಲೆಟ್ ಮೂಲಕ ಎಂಟ್ರಿ ಕೊಟ್ಟ ಮದುಮಗಳ ವಿಡಿಯೋ ಇದೀಗ ಫುಲ್ ವೈರಲ್ ಆಗಿದೆ. ವಧು ಪೂಜಾ ಅವರಿಗೆ ಬುಲೆಟ್ ಎಂದರೆ ಸಖತ್ ಇಷ್ಟ. ಪೂಜಾ …

Read More »

ಗೆಳತಿ ನಂತ್ರ ಎನ್‍ಸಿಬಿ ವಿಚಾರಣೆಗೆ ಹಾಜರಾದ ಅರ್ಜುನ್ ರಾಂಪಾಲ್

ಮುಂಬೈ: ಬಾಲಿವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅರ್ಜುನ್ ಕಪೂರ್ ಎನ್‍ಸಿಬಿ ಅಧಿಕಾರಿಗಳ ಮುಂದೆ ಹಾಜರಾಗಿದ್ದಾರೆ. ಬೆಳಗ್ಗೆ 11.10ಕ್ಕೆ ಎನ್‍ಸಿಬಿ ಕಚೇರಿ ಆಗಮಿಸಿದ ನಟನನ್ನ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ. ಇದಕ್ಕೂ ಮುನ್ನ ಗುರುವಾರ ತಡರಾತ್ರಿ ರಾಂಪಾಲ್ ಗೆಳೆಯ ಪಾಲ್ ಬಾರ್ಟೆಲ್ ನನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಗುರುವಾರ ವಿಚಾರಣೆಗೆ ಹಾಜರಾಗಿದ್ದ ಪಾಲ್ 10 ಗಂಟೆಯ ಬಳಿಕ ಅಧಿಕಾರಿಗಳು ಬಂಧಿಸುವ ಮೂಲಕ ಶಾಕ್ ನೀಡಿದ್ದರು. ಬಂಧಿತ ಪಾಲ್ ಆಸ್ಟ್ರೇಲಿಯಾ ಮೂಲಕ ಆರ್ಕಿಟೆಕ್ಟ್ …

Read More »

ಮಾರಕ ಕೋವಿಡ್-19 ವೈರಸ್ ಹಾವಳಿಯಿಂದ ದೂರವಾಗಿರುವ ಪ್ರವಾಸಿಗರನ್ನು ಸೆಳೆಯಲು ಅನೇಕ ರಾಷ್ಟ್ರಗಳು ಹೊಸ ಹೊಸ ಮಾರ್ಗಗಳನ್ನು ಕಂಡುಕೊಂಡಿವೆ.

ಬುಡಾಪೆಸ್ಟ್, ನ.13- ಮಾರಕ ಕೋವಿಡ್-19 ವೈರಸ್ ಹಾವಳಿಯಿಂದ ದೂರವಾಗಿರುವ ಪ್ರವಾಸಿಗರನ್ನು ಸೆಳೆಯಲು ಅನೇಕ ರಾಷ್ಟ್ರಗಳು ಹೊಸ ಹೊಸ ಮಾರ್ಗಗಳನ್ನು ಕಂಡುಕೊಂಡಿವೆ. ಹಂಗೇರಿಯ ರೆಸ್ಟೋರೆಂಟ್ ಅನುಸರಿಸಿರುವ ನವ ಪರಿಕಲ್ಪನೆ ವಿಶೇಷ ಗಮನ ಸೆಳೆದಿದೆ. ಹಂಗೇರಿ ರಾಜಧಾನಿ ಬುಡಾಪೆಸ್ಟ್‍ನಲ್ಲಿರುವ ಕೊಸ್ಟೆಸ್ ಪ್ರಸಿದ್ಧ ರೆಸ್ಟೋರೆಂಟ್. ಈ ಹೋಟೆಲ್‍ಗೆ ಮಿಚೆಲಿನ್ ಸ್ಟಾರ್ ಮಾನ್ಯತೆ ಲಭಿಸಿದೆ. ಆದರೆ ಕೊರೊನಾ ಹಾವಳಿಯಿಂದಾಗಿ ಈ ರೆಸ್ಟೋರೆಂಟ್‍ಗೆ ವಿದೇಶಿ ಪ್ರವಾಸಿಗರು ಮತ್ತು ಸ್ಥಳೀಯರು ಸಂಖ್ಯೆ ಕಡಿಮೆಯಾಗಿದೆ ಇದರಿಂದಾಗಿ ಈ ಹೋಟೆಲ್ ಆದಾಯ …

Read More »

ರಾಹುಲ್‍ಗೆ ಪಾಂಡಿತ್ಯದ ಕೊರತೆ ಎಂದ ಒಬಾಮಾ……….

ನ್ಯೂಯಾರ್ಕ್, ನ.11- ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಹಿಂಜರಿಕೆ ಕಾಡುತ್ತಿದೆ. ಜೊತೆಗೆ ಪಾಂಡಿತ್ಯದ ಕೊರತೆ ಇದೆ ಎಂದು ಅಮೆರಿಕಾದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಹೇಳುವ ಮೂಲಕ ಚರ್ಚೆ ಹುಟ್ಟು ಹಾಕಿದ್ದಾರೆ. ತಮ್ಮ ರಾಜಕೀಯ ಜೀವನದ ಆತ್ಮಚರಿತ್ರೆ ಕುರಿತು ಬರೆದಿರುವ ಎ ಪ್ರಾಮಿಸ್‍ಡ್ ಲ್ಯಾಂಡ್ ಎಂಬ ಪುಸ್ತಕವೂ ಈಗ ಬಾರಿ ಚರ್ಚೆಗೆ ಗ್ರಾಸವಾಗಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕುರಿತು ಪುಸ್ತಕದಲ್ಲಿ ಕೆಲವು ಅಂಶಗಳಿದ್ದು, ರಾಹುಲ್ ಅವರಲ್ಲಿ ನಾಯಕತ್ವದ …

Read More »

ರಾಜ್ಯದಲ್ಲಿ 7 ತಿಂಗಳ ಬಳಿಕ ನ.17ರಿಂದ ವಿದ್ಯಾರ್ಥಿ ನಿಲಯಗಳು ಓಪನ್

ಬೆಂಗಳೂರು,ನ.13- ಕೋವಿಡ್-19 ಹಿನ್ನೆಲೆಯಲ್ಲಿ ಕಳೆದ ಏಳು ತಿಂಗಳಿನಿಂದ ಮುಚ್ಚಲ್ಪಟ್ಟಿದ್ದ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳು ಇದೇ 17 ( ಮಂಗಳವಾರ)ರಿಂದ ಆರಂಭವಾಗಲಿವೆ. ಪದವಿ ಕಾಲೇಜುಗಳನ್ನು ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸಿರುವ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಸಮಾಜ ಕಲ್ಯಾಣ ಇಲಾಖೆಯಿಂದ ನಿರ್ವಹಿಸಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳನ್ನು ನವೆಂಬರ್ 17ರಿಂದಲೇ ಆರಂಭಿಸಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ರಾಮುಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ …

Read More »

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಭ್ರಷ್ಟರನ್ನು ರಕ್ಷಿಸಲು ನೈಜ ಪತ್ರಕರ್ತರ ಕತ್ತು ಹಿಸುಕಲಾಗುತ್ತಿದೆ” ಎಂದು ರಾಹುಲ್ ಗಾಂಧಿ ಟ್ವೀಟ್ಟ್ ರನಲ್ಲಿ ಬಿಜೆಪಿ ವಿರುದ್ಧ ಆಕ್ರೋಶ

ನವದೆಹಲಿ: “ಬಿಜೆಪಿ ನಾಯಕರ ಭ್ರಷ್ಟಾಚಾರ ಬಯಲಿಗೆಳೆದ ಪತ್ರಕರ್ತನನ್ನು ಅನುಮಾನಾಸ್ಪದವಾಗಿ ಹತ್ಯೆ ಮಾಡಲಾಗಿದೆ. ಅವರ ಕುಟುಂಬಕ್ಕೆ ತನ್ನ ಸಂತಾಪಗಳು. ಇದು ಮಧ್ಯಪ್ರದೇಶ ಅಥವಾ ಉತ್ತರ ಪ್ರದೇಶವಿರಲಿ, ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಭ್ರಷ್ಟರನ್ನು ರಕ್ಷಿಸಲು ನೈಜ ಪತ್ರಕರ್ತರ ಕತ್ತು ಹಿಸುಕಲಾಗುತ್ತಿದೆ” ಎಂದು ರಾಹುಲ್ ಗಾಂಧಿ ಟ್ವೀಟ್ಟ್ ರನಲ್ಲಿ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎರಡು ದಿನಗಳ ಹಿಂದೆ ಕೂಡ ಈ ವಿಷಯ ಪ್ರಸ್ತಾಪಿಸಿದ್ದ ರಾಹುಲ್ ಗಾಂಧಿ, ಉತ್ತರ ಪ್ರದೇಶ ಪತ್ರಕರ್ತ ವಿನಯ್ ತಿವಾರಿ …

Read More »