ಬೆಂಗಳೂರು : ನ.25ರಂದು ರಾಜ್ಯ ರಾಜಕಾರಣದಲ್ಲಿ ಏನೇನು ಆಗುತ್ತೆ ? ನೋಡ್ತಾಯಿರಿ ಎಂದಿದ್ದ ಶಾಸಕ ಬಸನಗೌಡ ಯತ್ನಾಳ ಹೇಳಿಕೆ ನಿಜವಾಗಲಿದಿಯಾ ? ಎಂಬ ಕುತೂಹಲ ರಾಜ್ಯ ರಾಜಕಾರಣದಲ್ಲಿ ಮೂಡಿದೆ. ಮೇಲಿನವರಿಗೂ ಯಡಿಯೂರಪ್ಪ ಸಾಕಾಗಿದ್ದಾರೆ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇನ್ನು ಬಹಳ ದಿನ ಅಧಿಕಾರದಲ್ಲಿ ಇರುವುದಿಲ್ಲ. ಮುಂದಿನ ಉತ್ತರಾಧಿಕಾರಿ ಉತ್ತರ ಕರ್ನಾಟಕದವರೇ ಆಗುತ್ತಾರೆ. ಪ್ರಧಾನಿ ಮಂತ್ರಿಗಳ ಮನಸ್ಸಿನಲ್ಲಿ ಈ ವಿಚಾರ ಬಂದಿದೆ. ಯಡಿಯೂರಪ್ಪ ಬಳಿಕ ಉತ್ತರ ಕರ್ನಾಟಕವದವರಿಗೆ ಸಿಎಂ ಮಾಡೋಣ ಎಂದಿದ್ದಾರೆ. …
Read More »Daily Archives: ನವೆಂಬರ್ 24, 2020
ಮೇಕೆದಾಟು, ಎತ್ತಿನಹೊಳೆ, ಗಟ್ಟಿ ಬಸವಣ್ಣ ಕುಡಿಯುವ ನೀರಿನ ಯೋಜನೆ ಪಡೆದುಕೊಳ್ಳಲು ರಮೇಶ್ ಜಾರಕಿಹೊಳಿ ಸೂಚನೆ
ಬೆಂಗಳೂರು : ಮೇಕೆದಾಟು, ಎತ್ತಿನಹೊಳೆ, ಗಟ್ಟಿ ಬಸವಣ್ಣ ಕುಡಿಯುವ ನೀರಿನ ಯೋಜನೆಗಳು ಮತ್ತು ಏತ ನೀರಾವರಿ ಯೋಜನೆಗಳ ಶೀಘ್ರ ಅನುಷ್ಠಾನಕ್ಕಾಗಿ ಬಾಕಿ ಇರುವ ಅರಣ್ಯ ಇಲಾಖೆಯ ಅನುಮೋದನೆಗಳನ್ನು ಕೂಡಲೇ ಪಡೆದುಕೊಳ್ಳಲು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಸೂಚನೆ ನೀಡಿದ್ದಾರೆ. ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಅರಣ್ಯ ಇಲಾಖೆಯ ತಿರುವಳಿಗಳನ್ನು ಪಡೆಯುವ ಕುರಿತು ಪ್ರಗತಿ ಪರಿಶೀಲನಾ ಸಭೆ ಯಲ್ಲಿ ಮಾತನಾಡಿದ ಸಚಿವರು, ಬಾಕಿ ಇರುವ ಪ್ರಸ್ತಾವನೆಗಳಿಗೆ ಕೂಡಲೇ ಅನುಮೋದನೆ ನೀಡಬೇಕೆಂದು ಅರಣ್ಯ …
Read More »ಪ್ರಧಾನಿ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಮಹತ್ವದ ಸಭೆ
ನವದೆಹಲಿ: ರಾಜ್ಯಗಳಲ್ಲಿ ಕೊರೊನಾ ಸ್ಥಿತಿಗತಿ ಹಾಗೂ ಕೋವಿಡ್ ಲಸಿಕೆ, ವಿತರಣೆ ಕುರಿತಾಗಿ ಸಮಗ್ರವಾಗಿ ಚರ್ಚಿಸುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಮಹತ್ವದ ಸಭೆ ನಡೆಸಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಸಿಎಂ ಗಳ ಜೊತೆ ಪ್ರಧಾನಿ ಮೋದಿ ಸಭೆ ಆರಂಭವಾಗಿದ್ದು, ಎರಡು ಹಂತಗಳಲ್ಲಿ ಸಭೆ ನಡೆಯುತ್ತಿದೆ. ಆರಂಭದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ರಾಜ್ಯಗಳಾದ ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಕೇರಳ, ರಾಜಸ್ಥಾನ ಸೇರಿದಂತೆ 8 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ …
Read More »ಸಿಎಂ ಮಾಜಿ ರಾಜಕೀಯ ಕಾರ್ಯದರ್ಶಿಯಾಗಿದ್ದ ಶಿವಶಂಕರ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ
ತಿರುವನಂತಪುರಂ:: ಕೇರಳ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಪಿಣರಾಯಿ ವಿಜಯನ್ ಅವರ ಮಾಜಿ ರಾಜಕೀಯ ಕಾರ್ಯದರ್ಶಿ ಎಂ.ಶಿವಶಂಕರ್ ಅವರನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಶಿವಶಂಕರ್ ಅವರನ್ನು ಬಂಧಿಸಿರುವ ಅಧಿಕಾರಿಗಳು ಕೋರ್ಟ್ ಮುಂದೆ ಹಾಜರುಪಡಿಸಿದ್ದು, ನ.26ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ 30 ಕೆಜಿ ಚಿನ್ನ ಸಾಗಾಟ ಪ್ರಕರಣ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು. ಪ್ರಕರಣದ ಬೆನ್ನಲ್ಲೇ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಶಿವಶಂಕರ್ ಅವರನ್ನು ವಜಾ ಮಾಡಲಾಗಿತ್ತು. ಈ …
Read More »ಪ್ರೀತಿ ಒಂದೇ ಅವರು ಸಂಪಾದಿಸಿರೋ ಆಸ್ತಿ.:ಸುಮಲತಾ ಅಂಬರೀಶ್
ಬೆಂಗಳೂರು: ಮಂಡ್ಯದ ಜನ ಅಂಬರೀಶ್ ಅವರನ್ನು ವಿಶೇಷವಾಗಿ ದೇವರಂತೆ ಪೂಜಿಸುತ್ತಿದ್ದರು. ಪ್ರೀತಿ ಒಂದೇ ಅವರು ಸಂಪಾದಿಸಿರೋ ಆಸ್ತಿ. ಜನರ ಅವರನ್ನ ಹೃದಯಲ್ಲಿ ಇಟ್ಟುಕೊಂಡು ಪೂಜಿಸ್ತಾ ಇದ್ದಾರೆ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ. ಇಂದು ಅಂಬಿ ಎರಡನೇ ವರ್ಷದ ಪುಣ್ಯತಿಥಿಯ ಪ್ರಯುಕ್ತ ಸಮಾಧಿಗೆ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂಬರೀಶ್ ಅವರು ಎಲ್ಲರನ್ನೂ ಕುಟುಂಬದ ಸದಸ್ಯರಂತೆ ನೋಡಿಕೊಳ್ಳುತ್ತಿದ್ದರು. ಎಲ್ಲರ ಪ್ರೀತಿ ಗಳಿಸಿ ಆ ಪ್ರೀತಿಯನ್ನ ಶಾಶ್ವತವಾಗಿ ಉಳಿಸಿಕೊಂಡಿದ್ದಾರೆ. …
Read More »210 ಗ್ರಾಂನ 3 ಚಿನ್ನದ ಕಿರೀಟ ಗಿಫ್ಟ್ ನೀಡಿದ ಗ್ರಾಮಸ್ಥರು
ವಿಜಯಪುರ: ಉಪಮುಖ್ಯಮಂತ್ರಿ ಗೋವಿಂದ್ ಕಾರಜೋಳ, ಮಾಜಿ ಸಚಿವ ಎಂಬಿ ಪಾಟೀಲ್ ಹಾಗೂ ಶಿವಾನಂದ್ ಪಾಟೀಲ್ ಗೆ ವಿಜಯಪುರದ ಕಾರಜೋಳ ಗ್ರಾಮಸ್ಥರು ಚಿನ್ನದ ಕಿರೀಟಗಳನ್ನು ಉಡುಗೊರೆಯಾಗಿ ನೀಡಿದ್ದಾರೆ. ಕಾರಜೋಳದಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನಾ ಸಮಾರಂಭದ ವೇಳೆ ಈ ಮೂವರಿಗೆ 210 ಗ್ರಾಂ ನ ಮೂರು ಚಿನ್ನದ ಕಿರೀಟಗಳನ್ನು ಗ್ರಾಮಸ್ಥರು ಗಿಫ್ಟ್ ಮಾಡಿದ್ದಾರೆ. ಆದರೆ ಮೂವರು ನಾಯಕರು ಕೂಡ ಚಿನ್ನದ ಕಿರೀಟ ಗಿಫ್ಟ್ ಪಡೆಯಲು ನಿರಾಕರಿಸಿದ್ದಾರೆ.ಒತ್ತಾಯ ಪೂರ್ವಕವಾಗಿ ಗ್ರಾಮಸ್ಥರು ನಾಯಕರಿಗೆ ಕಿರೀಟ ತೊಡಿಸಿದ್ದಾರೆ. …
Read More »ಯಡಿಯೂರಪ್ಪ ಈ ಹಂತಕ್ಕೆ ಇಳೀತಾರೆ ಅಂದ್ಕೊಂಡಿರ್ಲಿಲ್ಲ – ಮಗಳ ಎಂಗೇಜ್ಮೆಂಟ್ನಂದೇ ನೋಟಿಸ್ ಕೊಟ್ಟಿದ್ದಾರೆ
ಕಲಬುರಗಿ: ಒಂದು ವರ್ಷದಿಂದ ಸುಮ್ಮನೆ ಇದ್ದವರು ನನ್ನ ಮನೆಯಲ್ಲಿ ಕಾರ್ಯಕ್ರಮ ಇದ್ದಾಗಲೇ ನೋಟಿಸ್ ಕೊಡಲು ಬಂದಿದ್ದಾರೆ. ನನಗೆ ಚಳಿ ಯಾವುದು, ಮಳೆ ಯಾವುದು ಗೊತ್ತಿಲ್ಲ. ಎಲ್ಲವನ್ನೂ ಒಂದೇ ರೀತಿಯಾಗಿ ಅನುಭವಿಸಿದ್ದೇನೆ. ನನ್ನ ಮೇಲೆ ಎಫ್ಐಆರ್ ಹಾಕಿದ್ದೇ ರಾಜಕೀಯ ಪ್ರೇರಿತ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಸಿಬಿಐ ನೋಟಿಸ್ ವಿಚಾರಕ್ಕೆ ಪ್ರತಿಕ್ರಿಯಿಸಿ, ನಮ್ಮ ಮನೆಯಲ್ಲೆ ನನ್ನ ಮಗಳ ಎಂಗೆಜ್ಮೆಂಟ್ ಕಾರ್ಯಕ್ರಮ ಇದ್ದಾಗ ಮನೆ …
Read More »ಬೆಳಗಾವಿಯ ಆರ್ ಟಿ ಓ ಕಚೇರಿ ನಿರ್ಮಿಸಲು 4 ಎಕರೆ ಜಾಗೆ ಮಂಜೂರು
ಬೆಳಗಾವಿ- ಬೆಳಗಾವಿಯ ಆರ್ ಟಿ ಓ ಕಚೇರಿ ನಿರ್ಮಿಸಲು ಬೆಳಗಾವಿ ನಗರಕ್ಕೆ ಹೊಂದಿಕೊಂಡಿರುವ ಯಮನಾಪೂರ ಗ್ರಾಮದಲ್ಲಿ ನಾಲ್ಕು ಎಕರೆ ಜಾಗೆಯನ್ನು ಮಂಜೂರು ಮಾಡಿಸಲಾಗಿದೆ ಎಂದು ಬೆಳಗಾವಿ ಉತ್ತರ ಮತಕ್ಷೇತ್ರ್ ಶಾಸಕ ಅನೀಲ ಬೆನಕೆ ತಿಳಿಸಿದ್ದಾರೆ. ಬೆಳಗಾವಿಯ ಆರ್ ಟಿ ಓ ಕಚೇರಿ ಆವರಣದಲ್ಲಿ ಅಂಚೆ ಕಚೇರಿಯ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಯಮನಾಪೂರ ಗ್ರಾಮದಲ್ಲಿ ಜಾಗೆ ಮಂಜೂರು ಮಾಡಿಸುವ ಸಂಧರ್ಭದಲ್ಲಿ ಅನೇಕ ಸಮಸ್ಯೆಗಳು ಎದುರಾಗಿದ್ದವು,ಎಲ್ಲ ಸಮಸ್ಯೆಗಳನ್ನು ನಿವಾರಿಸಿ ಜಾಗೆ ಮಂಜೂರು …
Read More »ಒಕ್ಕಲಿಗರ ಅಭಿವೃದ್ಧಿ ನಿಗಮಕ್ಕೆ ಡಿಸಿಎಂ ಅಶ್ವತ್ಥನಾರಾಯಣ ಒತ್ತಾಯ
ಬೆಳಗಾವಿ: ರಾಜ್ಯ ಸರ್ಕಾರ ಲಿಂಗಾಯತ ಅಭಿವೃದ್ಧಿ ನಿಗಮ ರಚಿಸಿ 500 ಕೋಟಿ ರೂ. ಅನುದಾನ ನೀಡಿದ ಬೆನ್ನಲ್ಲಿಯೇ ಒಕ್ಕಲಿಗರ ಅಭಿವೃದ್ಧಿ ನಿಗಮವೂ ರಚಿಸಲಿ ಎಂದು ಬೆಳಗಾವಿಯಲ್ಲಿ ಉಪ ಮುಖ್ಯಮಂತ್ರಿ ಅಶ್ವತ್ಥನಾರಾಯಣ ಒತ್ತಾಯಿಸಿದ್ದಾರೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಒಕ್ಕಲಿಗರ ಅಭಿವೃದ್ಧಿ ನಿಗಮ ಆಗಬೇಕು ಎನ್ನುವ ಒತ್ತಾಯಕ್ಕೆ ನನ್ನ ಬೆಂಬಲವೂ ಇದೆ ಎಂದು ಡಿಸಿಎಂ ಹೇಳಿದರು. ಕಾಲೇಜು ಆರಂಭಕ್ಕೆ ವಿದ್ಯಾರ್ಥಿಗಳು, ಪೆÇೀಷಕರ ಒತ್ತಾಯ ಇತ್ತು ಹೀಗಾಗಿ …
Read More »ಪಂಚಾಯಿತಿ ಚುನಾವಣೆಗೆ ಬಿಜೆಪಿಯಿಂದ ಪಂಚಸೂತ್ರ
ಬೆಂಗಳೂರು, ನ.23- ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಗಂಭೀರವಾಗಿ ಪರಿಗಣಿಸಿದ್ದು, ಪಂಚರತ್ನ, ಪಂಚಸೂತ್ರ ವಿಧಾನದ ಮೂಲಕ ಜಿಲ್ಲೆಯಲ್ಲಿ ಎರಡು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ಇಂದು ನಡೆದ ಸಂಘಟನಾ ಸಭೆ ನಂತರ ಮಾತನಾಡಿದ ಅವರು, ಗ್ರಾಮ ಪಂಚಾಯತ್ ಚುನಾವಣೆ ಬರುತ್ತಿದೆ. ಕಳೆದ ಬಾರಿ ತಂದಿದ್ದ ಯೋಜನೆಯಿಂದಾಗಿ ಯಶಸ್ವಿಯಾಗಿದ್ದೆವು. ಇದೀಗ ಪಂಚರತ್ನ, ಪಂಚಸೂತ್ರ ವಿಧಾನ ತಂದಿದ್ದೇವೆ. ಒಂದೊಂದು ಸಮುದಾಯವನ್ನೂ ಗುರಿಯಾಗಿಟ್ಟು ಈ ವಿಧಾನ ಅನುಸರಿಸಲಾಗುತ್ತಿದೆ ಎಂದು …
Read More »