Breaking News

Daily Archives: ನವೆಂಬರ್ 25, 2020

ಪಿಕೆಪಿಎಸ್‍ಗಳು ರೈತರ ಜೀವನಾಡಿಗಳು : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ 42 ಲಕ್ಷ ರೂ. ವೆಚ್ಚದ ಕಲ್ಲೋಳಿ ಪಿಕೆಪಿಎಸ್ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ‘ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ರೈತರಿಗೆ ಕಷ್ಟಕರ ಸಮಸ್ಯೆಗಳು ಎದುರಾದಾಗ ಅವರಿಗೆ ಸಾಲ ಸೌಲಭ್ಯಗಳನ್ನು ನೀಡುವ ಮೂಲಕ ರೈತರ ಜೀವನಾಡಿಗಳು’ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಮಂಗಳವಾರ ಸಂಜೆ ತಾಲೂಕಿನ ಕಲ್ಲೋಳಿ ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಕಲ್ಲೋಳಿ ಪಿಕೆಪಿಎಸ್ 100 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿ ಈ …

Read More »

ಗೋಕಾಕ: ತಾಪಂ. ಕಚೇರಿ ಎದುರು ಕೂಲಿ ಕಾರ್ಮಿಕರ ಪ್ರತಿಭಟನೆ

ಗೋಕಾಕ : ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಉದ್ಯೋಗ ನೀಡುವಂತೆ ಒತ್ತಾಯಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ನೇತೃತ್ವದಲ್ಲಿ ಕೂಲಿ ಕಾರ್ಮಿಕರು ಇಂದು ತಾಪಂ. ಕಚೇರಿ ಎದುರು ಧರಣಿ ಕುಳಿತು ಪ್ರತಿಭಟನೆ ನಡೆಸಿದರು. ಗ್ರಾಮ ಪಂಚಾಯಿತಿಯಲ್ಲಿ ನರೇಗಾ ಕುರಿತು ಯಾವುದೇ ಮಾಹಿತಿ ನೀಡುತ್ತಿಲ್ಲ. ಅರ್ಜಿಗಳಿಗೆ ಸ್ವೀಕೃತಿ ನೀಡುವುದಿಲ್ಲ. ಕೂಲಿ ಕಾರ್ಮಿಕರು ಕೆಲಸ ನೀಡುವಂತೆ ಮನವಿ ಮಾಡಿಕೊಂಡರೆ, ಅರಣ್ಯ ಇಲಾಖೆ ಅಧಿಕಾರಿಗಳನ್ನು ಕೇಳಿ …

Read More »

ಮಾಜಿ ಗ್ರಾಮ ಪಂಚಾಯತಿ ಸದಸ್ಯನೊಬ್ಬ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಆತನಿಗೆ ಥಳಿಸಿ ,ಕಟ್ಟಿ ಹಾಕಿ ನಂತರ ಪೋಲೀಸರಿಗೆ ಒಪ್ಪಿಸಿದ್ದಾರೆ.

ಬೆಳಗಾವಿ- ದೂರದ ಮುಂಡಗೋಡದಿಂದ ಬೆಳಗಾವಿಗೆ ಹಮಾಲಿ ಕೆಲಸಕ್ಕೆಂದು ಮಾಜಿ ಗ್ರಾಮ ಪಂಚಾಯತಿ ಸದಸ್ಯನೊಬ್ಬ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎಂದು ಆರೋಪಿಸಿ,ಅತ್ಯಾಚಾರ ನಡೆಸಿದ ಆರೋಪಿಯನ್ನು ಹಿಡಿದು ಆತನಿಗೆ ಮನಬಂದಂತೆ ಥಳಿಸಿ ಸ್ಥಳಿಯರು ಆರೋಪಿಯನ್ನು ಪೋಲೀಸರಿಗೆ ಒಪ್ಪಸಿದ ಘಟನೆ ಮಾರ್ಕೆಟ್ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮುಂಡಗೋಡ ಮೂಲದ ಮಾಜಿ ಗ್ರಾಪಂ ಸದಸ್ಯ ಪರುಶರಾಮ್ ದೇಮಾಣಿ ಮಡಿವಾಳರ ಎಂಬಾತ ಬೆಳಗಾವಿಯ ರವಿವಾರ ಪೇಠೆಯಲ್ಲಿ ಹಮಾಲಿ ಕೆಲಸ ಮಾಡುತ್ತಿದ್ದ,ಮಾರ್ಕೆಟ್ ಪೋಲೀಸ್ ಠಾಣೆಯ …

Read More »

ನಾನು ಪಕ್ಷದ ನಿಷ್ಠಾವಂತೆ ಕಾರ್ಯಕರ್ತೆ, ಎರಡು ಬಾರಿ ನಿಪ್ಪಾಣಿಯಿಂದ ಗೆದ್ದಿದ್ದೇನೆ.ನನ್ನನ್ನು ಸಂಪುಟದಿಂದ ಕೈಬಿಡುವುದಿಲ್ಲ

ಬೆಂಗಳೂರು,ನ.25-ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂಪುಟದಲ್ಲಿ ನಾನು ಏಕೈಕ ಮಹಿಳಾ ಸಚಿವೆಯಾಗಿದ್ದು, ನನ್ನನ್ನು ಸಂಪುಟದಿಂದ ಕೈಬಿಡುವುದಿಲ್ಲ ಎಂಬ ವಿಶ್ವಾಸ ನನಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನನ್ನು ಯಾವ ಕಾರಣಕ್ಕಾಗಿ ಸಂಪುಟದಿಂದ ಕೈ ಬಿಡುತ್ತಾರೆ ಎಂದು ಪ್ರಶ್ನಿಸಿದ ಅವರು, ಸುದ್ದಿ ಮಾಧ್ಯಮಗಳಲ್ಲಿ ಆಗಾಗ ಇಂತಹ ವರದಿಯಾಗುತ್ತಿರುವುದು ಏಕೆ ಎಂದು ತಿಳಿಯುತ್ತಿಲ್ಲ. ಪ್ರತಿ ಬಾರಿ ಸಂಪುಟ ವಿಸ್ತರಣೆಯಾದಾಗ ನನ್ನ ಹೆಸರು ಕೇಳಿಬರುತ್ತಿದೆ. ಆದರೆ …

Read More »

ನಾಳೆ ಬೆಂಗಳೂರಲ್ಲಿ ಆಟೋ, ಟ್ಯಾಕ್ಸಿ ಸಿಗಲ್ಲ.

ಬೆಂಗಳೂರು: ನಾಳೆ ಬೆಂಗಳೂರಿನಲ್ಲಿ ರಸ್ತೆಗೆ ಇಳಿಯುವ ಎನ್ನ ಎಚ್ಚರವಾಗಿರಿ. ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ನಾಳೆ ಆಟೋ- ಟ್ಯಾಕ್ಸಿ ಚಾಲಕರು ಮುಷ್ಕರ ಕರೆ ನೀಡಿದ್ದಾರೆ. ವಾಹನಗಳ ಸಾಲಮನ್ನಾ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವ ಕುರಿತಾಗಿ 20 ಒಕ್ಕೂಟಗಳು ಸೇರಿ ನಾಳೆ ಮುಷ್ಕರಕ್ಕೆ ಕರೆ ನೀಡಿವೆ. ಬೇಡಿಕೆ ಏನು? – ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಜಾತಿವಾರು ನಿಗಮಗಳಿಂದ ನೇರ ಸಾಲ ಯೋಜನೆ ಅಡಿಯಲ್ಲಿ ಆಟೋ ಚಾಲಕರಿಗೆ 1,00 ಲಕ್ಷ ರೂ ಮತ್ತು …

Read More »

ಲ್ಯಾಂಡ್‌ಲೈನ್‌ನಿಂದ ಮೊಬೈಲಿಗೆ ಕರೆ – ಆರಂಭದಲ್ಲಿ’0′ ಒತ್ತುವುದು ಕಡ್ಡಾಯ

ನವದೆಹಲಿ: ಜನವರಿ 1 ರಿಂದ ಲ್ಯಾಂಡ್‌ಲೈನ್‌ ಫೋನಿನಿಂದ ಯಾವುದೇ ಕಂಪನಿಯ ಮೊಬೈಲ್‌ ಸಂಖ್ಯೆಗೆ ಕರೆ ಮಾಡಬೇಕಾದರೆ ಆರಂಭದಲ್ಲಿ ‘0’ ಸಂಖ್ಯೆ ಒತ್ತುವುದನ್ನು ಕಡ್ಡಾಯ ಮಾಡಲಾಗಿದೆ. ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್‌) ಲ್ಯಾಂಡ್‌ಲೈನ್‌ನಿಂದ ಮೊಬೈಲ್‌ಗೆ ಕರೆ ಮಾಡುವ ಮುನ್ನ ʼ0ʼಯನ್ನು ಡಯಲ್‌ ಮಾಡಬೇಕೆಂದು ದೂರಸಂಪರ್ಕ ಸಚಿವಾಲಯಕ್ಕೆ ಮೇ 29 ರಂದು ಶಿಫಾರಸು ಮಾಡಿತ್ತು. ನವೆಂಬರ್‌ 20 ರಂದು ಸುತ್ತೋಲೆ ಹೊರಡಿಸಿ ಟ್ರಾಯ್ ಈ‌ ಶಿಫಾರಸನ್ನು ಜಾರಿಗೆ ತರುವುದಾಗಿ ಹೇಳಿದೆ.ಗ್ರಾಹಕರು ಆರಂಭದಲ್ಲಿ …

Read More »

40 ಚೀಲದ ಬಾಸುಮತಿ ಭತ್ತದ ಬಣವೆಗೆ ದುಷ್ಕರ್ಮಿಗಳ ಬೆಂಕಿ

ಬೆಳಗಾವಿ –  ಶಿಂದೊಳ್ಳಿ ಗ್ರಾಮದ ಚಂದ್ರಗೌಡ ಬಾಬಾಗೌಡ ಪಾಟೀಲ ಇವರ ಜಮೀನಲ್ಲಿ ರಾಶಿ ಮಾಡಲು ಕೂಡಿಟ್ಟಿದ್ದ ಸುಮಾರು 40 ಚೀಲದ ಬಾಸುಮತಿ ಭತ್ತದ ಬಣವೆಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ.  ಸುವರ್ಣ ಸೌಧದ ಹಿಂದುಗಡೆ ಶೆಗಣಮಟ್ಟಿ ರಸ್ತೆಯ ಭೀಮನ ಪಾದದ ಹತ್ತಿರ ಇರುವ 138/ಬಿ ಸರ್ವೆ ನಂಬರಿನ ಜಮೀನಲ್ಲಿ ಈ ದುರ್ಘಟನೆ ನಡೆದಿದೆ.  ಎರಡು ಭತ್ತದ ಬಣವೆಗಳು ಬೆಂಕಿಗೆ ಆಹುತಿಯಾಗಿವೆ.  ಇನ್ನೇನು ರಾಶಿ ಮಾಡಬೇಕು ಎನ್ನುವಷ್ಟರಲ್ಲಿ  ತಡರಾತ್ರಿಯಲ್ಲಿ ಕಿಡಿಗೇಡಿಗಳು ಬೆಂಕಿ ಇಟ್ಟಿದ್ದಾರೆ …

Read More »

ಯಾರ ಮೇಲೂ ಇಲ್ಲದ ತನಿಖೆ ನನ್ನ ಮೇಲೆಯೇ ಯಾಕೆ? ನನ್ನ ಮೇಲೆ ನಡೆಯುತ್ತಿರುವ ತನಿಖೆ ದ್ವೇಷದ ರಾಜಕಾರಣವಲ್ಲವೇ?: ಡಿ.ಕೆ ಶಿ

ಬೆಂಗಳೂರು: ಯಾರ ಮೇಲೂ ಇಲ್ಲದ ತನಿಖೆ ನನ್ನ ಮೇಲೆಯೇ ಯಾಕೆ? ನನ್ನ ಮೇಲೆ ನಡೆಯುತ್ತಿರುವ ತನಿಖೆ ದ್ವೇಷದ ರಾಜಕಾರಣವಲ್ಲವೇ? ರಾಜ್ಯದಲ್ಲಿ ಆಸ್ತಿ ಸಂಪಾದಿಸಿರುವುದು ನಾನು ಮಾತ್ರಾನಾ? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ. ಸದಾಶಿವನಗರದ ತಮ್ಮ ನಿವಾಸದ ಬಳಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಇಡೀ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಅಕ್ರಮ ಆಸ್ತಿ ಗಳಿಕೆ ವಿಚಾರವಾಗಿ ನನ್ನ ವಿರುದ್ಧ ತನಿಖೆ ಮಾಡುವಂತೆ ಸಿಬಿಐಗೆ ಅನುಮತಿ …

Read More »

ರಮೇಶ್ ಜಾರಕಿಹೊಳಿ ಸೇರಿದಂತೆ ಇತರ ಶಾಸಕರ ವಿರುದ್ಧ ವಿಧಾನಸೌಧದಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಕಿಡಿಕಾರಿದ್ದಾರೆ.

ಬೆಂಗಳೂರು: ಮೊದಲು 105 ಶಾಸಕರು. ನಂತರ ಕಾಂಗ್ರೆಸ್, ಜೆಡಿಎಸ್‍ನಿಂದ ಬೇಸತ್ತು 17 ಜನ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ನನ್ನಿಂದಲೇ ಸರ್ಕಾರ ಬಂದಿದೆ ಅಂತಾ ಯಾರು ಹೇಳ್ತಾರೋ ಅವರು ಇದನ್ನ ಅರ್ಥ ಮಾಡಿಕೊಳ್ಳಬೇಕು ಎಂದು ಬಿಜೆಪಿಗೆ ಸೇರ್ಪಡೆಯಾಗಿ ಸರಕಾರ ರಚನೆಗೆ ಕಾರಣವಾಗಿದ್ದ ರಮೇಶ್ ಜಾರಕಿಹೊಳಿ ಸೇರಿದಂತೆ ಇತರ ಶಾಸಕರ ವಿರುದ್ಧ ವಿಧಾನಸೌಧದಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಕಿಡಿಕಾರಿದ್ದಾರೆ. ಹದಿನೇಳು ಜನರಿಂದ ಬಿಜೆಪಿ ಸರ್ಕಾರ ಬಂದಿದೆ ಎಂಬುದು ಸುಳ್ಳು. ಪಕ್ಷದ ಕಾರ್ಯಕರ್ತರ …

Read More »

ಬೆಳಗಾವಿ ಜಿಲ್ಲೆಯ 18 ಜನ ಶಾಸಕರ ಪೈಕಿ 13 ಜನ ಬಿಜೆಪಿ ಶಾಸಕರಿದ್ದಾರೆ. ಈ ಪೈಕಿ ಇದೀಗ 9 ಜನರಿಗೆ ಸರ್ಕಾರದಲ್ಲಿ ಸಚಿವ, ನಿಗಮ ಸೇರಿ ಮಹತ್ವ ಹುದ್ದೆ

ಬೆಳಗಾವಿ : ಜಿಲ್ಲೆಯ 18 ಜನ ಶಾಸಕರ ಪೈಕಿ 13 ಜನ ಬಿಜೆಪಿ ಶಾಸಕರಿದ್ದಾರೆ. ಈ ಪೈಕಿ ಇದೀಗ 9 ಜನರಿಗೆ ಸರ್ಕಾರದಲ್ಲಿ ಸಚಿವ, ನಿಗಮ ಸೇರಿ ಮಹತ್ವ ಹುದ್ದೆ ಪಡೆದುಕೊಂಡಿದ್ದಾರೆ. ಈಗ ಮತ್ತೆ ಹಾಲಿ ಹಾಗೂ ಮಾಜಿ ಶಾಸಕರಿಗೆ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನಗಳು ಒಲಿದು ಬಂದಿದ್ದು, ಬೆಳಗಾವಿ ಜಿಲ್ಲೆ. ಈಗ, ರಾಜಕೀಯ ಶಕ್ತಿ ಕೇಂದ್ರವಾಗಿ ಮಾರ್ಪಡುತ್ತಿದೆ. ಬಿ.ಎಸ್.ಯಡಿಯೂರಪ್ಪ ಸರ್ಕಾರದಲ್ಲಿ ಎಲಿಲ್ಲದ ಪ್ರಶಸ್ತ್ಯ ದೊರೆಯುತ್ತಿದೆ. ಅಂಬೇಡ್ಕರ್ ಅಭಿವೃದ್ಧಿ ನಿಗಮದ …

Read More »