Breaking News

Daily Archives: ನವೆಂಬರ್ 27, 2020

ಯಡಿಯೂರಪ್ಪ ಅವರಿಗೆ ಭಾರೀ ಹಿನ್ನಡೆಯಾಗಿದೆ. ಪಕ್ಷದ ಅನುಮತಿ ಇಲ್ಲದೆ ಪ್ರಮುಖ ತೀರ್ಮಾನಗಳನ್ನು ತೆಗೆದುಕೊಂಡರೆ ನಾವು ಕೈ ಕಟ್ಟಿ ಸುಮ್ಮನೆ ಕೂರುವುದಿಲ್ಲ

ಬೆಂಗಳೂರು,ನ.27- ವೀರಶೈವ ಲಿಂಗಾಯಿತ ಸಮುದಾಯವನ್ನು ಹಿಂದುಳಿದ ವರ್ಗಗಳ ಮೀಸಲಾತಿ(ಒಬಿಸಿ) ಪಟ್ಟಿಗೆ ಸೇರ್ಪಡೆ ಮಾಡಲು ಮುಂದಾಗಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರ ವೇಗಕ್ಕೆ ಕೇಂದ್ರ ಬಿಜೆಪಿ ವರಿಷ್ಠರು ಬ್ರೇಕ್ ಹಾಕಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ದೂರವಾಣಿ ಮೂಲಕ ಸಿಎಂ ಯಡಿಯೂರಪ್ಪನವರ ಜೊತೆ ಚರ್ಚೆ ನಡೆಸಿ, ಯಾವುದೇ ಕಾರಣಕ್ಕೂ ರಾಷ್ಟ್ರೀಯ ನಾಯಕರ ಜೊತೆ ಚರ್ಚ ಮಾಡದೆ ಇಂತಹ ಪ್ರಮುಖ ನಿರ್ಧಾರ ತೆಗೆದುಕೊಳ್ಳುವುದು ಸರಿಯಲ್ಲ ಎಂದು ಆಕ್ಷೇಪಿಸಿದ ಕಾರಣ ಲಿಂಗಾಯಿತ ಸಮುದಾಯವನ್ನು …

Read More »

ಖಾಸಗಿ ಶಾಲೆಗಳು ನಡೆಸುತ್ತಿರುವ ಆನ್‍ಲೈನ್ ಶಿಕ್ಷಣ ಮುಂದುವರೆಯಲಿದೆ. ಯಾವುದೇ ಕಾರಣಕ್ಕೂ ಅದು ಸ್ಥಗಿತಗೊಳ್ಳುವುದಿಲ್

ಬೆಂಗಳೂರು,ನ.27- ಖಾಸಗಿ ಶಾಲೆಗಳು ನಡೆಸುತ್ತಿರುವ ಆನ್‍ಲೈನ್ ಶಿಕ್ಷಣ ಮುಂದುವರೆಯಲಿದೆ. ಯಾವುದೇ ಕಾರಣಕ್ಕೂ ಅದು ಸ್ಥಗಿತಗೊಳ್ಳುವುದಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಅನ್ಬುಕುಮಾರ್ ಭರವಸೆ ನೀಡಿದ್ದಾರೆ. ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಜತೆ ಇಂದು ಸಭೆ ನಡೆಸಿದ ಅವರು, ಹಲವಾರು ವಿಷಯಗಳ ಕುರಿತು ಚರ್ಚೆ ನಡೆಸಿದರು. ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಶಾಲೆಗಳು ಮುಚ್ಚಿದ್ದು, ಖಾಸಗಿ ಶಾಲೆಗಳು ತಮ್ಮ ವಿದ್ಯಾರ್ಥಿಗಳಿಗೆ ಆನ್‍ಲೈನ್‍ನಲ್ಲಿ ಬೋಧನೆ ಮಾಡುತ್ತಿವೆ. ಶುಲ್ಕ ಕಟ್ಟದೇ ಇರುವ ವಿದ್ಯಾರ್ಥಿಗಳಿಗೆ …

Read More »

ರಮೇಶ್ ಜಾರಕಿಹೊಳಿ ಅವರ ಸತತ ಪ್ರಯತ್ನ 750 ಕೋಟಿ ರೂ.ಅನುದಾನ ನೀಡಲು ಒಪ್ಪಿಗೆ ನೀಡಿದ ಕೇಂದ್ರ ಸರ್ಕಾರ

ಹೊಸದಿಲ್ಲಿ: ಅಣೆಕಟ್ಟೆಗಳ ಪುನಶ್ಚೇತನ ಹಾಗೂ ಸುಧಾರಣಾ ಯೋಜನೆಗಳ ಅನುದಾನದಲ್ಲಿ ಕರ್ನಾಟಕ ಹಲವು ಅಣೆಕಟ್ಟೆಗಳ ಸಬಲೀಕರಣಕ್ಕೆ ಕೇಂದ್ರ ಸರ್ಕಾರ 750 ಕೋಟಿ ರೂ.ಅನುದಾನ ನೀಡಲು ಒಪ್ಪಿಗೆ ನೀಡಿದೆ. ರಾಜ್ಯ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ಸತತ ಪ್ರಯತ್ನದ ಹಿನ್ನೆಲೆಯಲ್ಲಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಈ ಅನುದಾನ ಬಿಡುಗಡೆ ಮಾಡಲು ಒಪ್ಪಿಕೊಂಡಿದ್ದಾರೆ. ಕೇಂದ್ರ ಜಲಶಕ್ತಿ ಆಯೋಗವು ದೇಶದ ಪ್ರಮುಖ ಅಣೆಕಟ್ಟೆಗಳ ಸಬಲೀಕರಣಕ್ಕಾಗಿ ವಿಶ್ವಬ್ಯಾಂಕ್ ನೆರವಿನ ಡ್ರಿಪ್ …

Read More »

ಸಾನಿಧ್ಯ ವಹಿಸಿದ್ದ ಸ್ಥಳೀಯ ವಿಜಯ ಸಿದ್ಧೇಶ್ವರ ಸ್ವಾಮನ್ನಿಕೇರಿ : 50 ಲಕ್ಷ ರೂ. ವೆಚ್ಚದ ಸಮುದಾಯ ಭವನಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಕರ್ನಾಟಕ ನೀರಾವರಿ ನಿಗಮದಿಂದ ಸಮುದಾಯ ಭವನಕ್ಕೆ ಅನುದಾನ ಬಿಡುಗಡೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಈ ಭಾಗದಲ್ಲಿ ಮನ್ನಿಕೇರಿ ಮಹಾಂತಲಿಂಗೇಶ್ವರ ದೇವಸ್ಥಾನವು ಇತಿಹಾಸದಿಂದ ಕೂಡಿದ್ದು, ಅಪಾರ ಭಕ್ತ ಸಮೂಹವನ್ನು ಆಕರ್ಷಿಸುತ್ತಿರುವ ಮಠವಾಗಿದೆ. ಸಮುದಾಯ ಭವನ ನಿರ್ಮಾಣದಿಂದಾಗಿ ಮದುವೆ, ಮುಂಜೆ ಮುಂತಾದ ಧಾರ್ಮಿಕ ಕಾರ್ಯಕ್ರಮಗಳಿಗೆ ಅನುಕೂಲವಾಗಲಿದೆ ಎಂದು ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಮನ್ನಿಕೇರಿ ಗ್ರಾಮದ ಹೊರವಲಯದಲ್ಲಿರುವ ಮಹಾಂತಲಿಂಗೇಶ್ವರ ದೇವಸ್ಥಾನದ ಬಳಿ ಬುಧವಾರ ದಂದು ಕರ್ನಾಟಕ ನೀರಾವರಿ ನಿಗಮದ 50 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಿರುವ ಸಮುದಾಯ …

Read More »

ಯಡಿಯೂರಪ್ಪ ಮತ್ತೊಂದು ಅಧಿವಗೆ ಸಿಎಂ ಆಗುವ ಆಸೆ ಹೊಂದಿಲ್ಲ: ಪರಮಶಿವಯ್ಯ

ಬೆಂಗಳೂರು, ನ.27- ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮತ್ತೊಂದು ಅಧಿವಗೆ ಸಿಎಂ ಆಗುವ ಆಸೆ ಹೊಂದಿಲ್ಲ. ಹಾಗಾಗಿ ಅವರು ಓಲೈಕೆ ರಾಜಕಾರಣ ಮಾಡುವ ಅಗತ್ಯ ಇಲ್ಲ ಎಂದು ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮದ ಅಧ್ಯಕ್ಷ ಪರಮಶಿವಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುದೀರ್ಘ ಅವಯವರೆಗೂ ಯಡಿಯೂರಪ್ಪ ರಾಜಕೀಯದಲ್ಲಿದ್ದಾರೆ. ಅಧಿಕಾರದ ಕೊನೆಯ ದಿನಗಳಲ್ಲಿ ಸಮಾಜಕ್ಕೆ ಒಳ್ಳೆಯದನ್ನು ಮಾಡಬೇಕು ಎಂಬ ಆಸೆ ಅವರದು. ಹಾಗಾಗಿ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿದ್ದಾರೆ. ಇದನ್ನು ಓಲೈಕೆ ರಾಜಕಾರಣ …

Read More »

ಪೊಲೀಸ್ ಇಲಾಖೆ ಆಧುನಿಕರಣಕ್ಕೆ ಮುಂದಿನ ಬಜೆಟ್‍ನಲ್ಲಿ 100 ಕೋಟಿಗಳ ಅನುದಾನ:B.S.Y.

ಬೆಂಗಳೂರು,ನ.27- ಪೊಲೀಸ್ ಇಲಾಖೆ ಆಧುನಿಕರಣಕ್ಕೆ ಮುಂದಿನ ಬಜೆಟ್‍ನಲ್ಲಿ 100 ಕೋಟಿಗಳ ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ. ಮಡಿವಾಳದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಪೊಲೀಸ್ ಸಮುದಾಯ ಭವನ ಹಾಗೂ ನ್ಯಾಯ ವಿಜ್ಞಾನ ಪ್ರಯೋಗಾಲಯ ನಿರ್ದೇಶಲಾಯದ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ ಪೊಲೀಸ್ ವ್ಯವಸ್ಥೆ ಅತ್ಯುತ್ತಮವಾಗಿದೆ. ಅದನ್ನು ಇನ್ನಷ್ಟು ಶಸಕ್ತಗೊಳಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಈ ಪ್ರಯೋಗಾಲಯದ ಪ್ರಯೋಜನ ಸಮಾಜಕ್ಕೆ ದೊರೆಯಲಿ ಎಂದು ಆಶೀಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಗೃಹ …

Read More »

ಮಾಸ್ಕ್ ಹಾಕದವರಿಂದ ಪೊಲೀಸರು ಸುಮಾರು ಅರ್ಧ ಕೋಟಿಗೂ ಅಧಿಕ ದಂಡ ವಸೂಲಿ ಮಾಡಲಾಗಿದೆ:ಡಿಸಿಪಿ ಗೀತಾ ಪ್ರಸನ್ನ

ಮೈಸೂರು: ಮಾಸ್ಕ್ ಹಾಕದವರಿಂದ ಪೊಲೀಸರು ಸುಮಾರು ಅರ್ಧ ಕೋಟಿಗೂ ಅಧಿಕ ದಂಡ ವಸೂಲಿ ಮಾಡಲಾಗಿದೆ ಎಂದು ಮೈಸೂರು ಸಂಚಾರ ಮತ್ತು ಅಪರಾಧ ವಿಭಾಗದ ಡಿಸಿಪಿ ಗೀತಾ ಪ್ರಸನ್ನ ಮಾಹಿತಿ ನೀಡಿದ್ದಾರೆ. ಸಂಚಾರಿ ನಿಯಮ ಉಲ್ಲಂಘನೆ ದಂಡದ ಜೊತೆ ಮಾಸ್ಕ್ ದಂಡ ಸೇರಿ ಇದೂವರೆಗೆ 56,77,950 ಲಕ್ಷ ದಂಡ ವಸೂಲಿ ಮಾಡಲಾಗಿದೆ. ಈ ಮೂಲಕ ಮೈಸೂರು ಪೊಲೀಸರು ಮಾಸ್ಕ್ ದಂಡಾಸ್ತ್ರ ಉಪಯೋಗಿಸಿ ಯಶಸ್ವಿಯಾಗಿದ್ದಾರೆ. ಪೊಲೀಸರು ಮೊದಲು ರಸ್ತೆ ರಸ್ತೆಗಳಲ್ಲಿ ಜಾಗೃತಿ ಮೂಡಿಸುತ್ತಾರೆ. …

Read More »

ಇನ್ನೂ ಎಂಟು ದಿನ ವಿನಯ್ ಕುಲಕರ್ಣಿಯವರಿಗೆ ಜೈಲೇ ಗತಿ

ಧಾರವಾಡ: ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಡಿಸೆಂಬರ್ 4ಕ್ಕೆ ಮುಂದೂಡಿದೆ. ಈ ಮೂಲಕ ಇನ್ನೂ ಎಂಟು ದಿನ ವಿನಯ್ ಕುಲಕರ್ಣಿಯವರಿಗೆ ಜೈಲೇ ಗತಿಯಾಗಿದೆ. ಇಂದು ವಿನಯ್ ಕುಲಕರ್ಣಿ ಪರ ವಕೀಲರು ಧಾರವಾಡದ ಮೂರನೇ ಹೆಚ್ಚುವರಿ ಸೆಷನ್ ಕೋರ್ಟ್ ಗೆ ಜಾಮೀನು ಅರ್ಜಿ ಸಲ್ಲಿಸಿದ್ದು, ಅರ್ಜಿಯ ವಿಚಾರಣೆಯನ್ನು ಕೋರ್ಟ್ ಡಿ.4ಕ್ಕೆ ಮುಂದೂಡಿದೆ. ಈ ಹಿಂದೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಕೀಲರು ವಾಪಸ್ ಪಡೆದಿದ್ದರು. ಇದೀಗ ಹೊಸ …

Read More »

2020ನೇ ಸಾಲಿನ  ‘ವೀರ ಕನ್ನಡಿಗ ಪ್ರಶಸ್ತಿ’ಗೆ  ಬೆಳಗಾವಿ  ಜ್ಯೂನಿಯರ್ ಶಿವರಾಜ್ ಕುಮಾರ್ ( ಇಸ್ಮಾಯಿಲ್ ಪೀರಜಾದೆ) ಆಯ್ಕೆಯಾಗಿದ್ದಾರೆ.

ಬೆಂಗಳೂರು :  ಹೂ ಅಲ್ ಶಿಫಹ ವನೌಷಧಿಕ ಆಯುರ್ವೇದ ವೈದ್ಯ ಪರಿಷತ್ ಹಾಗೂ ಜನಕಲ್ಯಾಣ ಟ್ರಸ್ಟ್, ಹಾಗೂ  ಕರ್ನಾಟಕದ ದಲಿತ ಹಿಂದುಳಿದ ಅಲ್ಪಸಂಖ್ಯಾತರ ಸಂಘರ್ಷ ಸಮಿತಿ ಸಹಯೋಗದಲ್ಲಿ 2020ನೇ ಸಾಲಿನ  ‘ವೀರ ಕನ್ನಡಿಗ ಪ್ರಶಸ್ತಿ’ಗೆ  ಬೆಳಗಾವಿ  ಜ್ಯೂನಿಯರ್ ಶಿವರಾಜ್ ಕುಮಾರ್ ( ಇಸ್ಮಾಯಿಲ್ ಪೀರಜಾದೆ) ಆಯ್ಕೆಯಾಗಿದ್ದಾರೆ. ರಾಯಚೂರು ಜಿಲ್ಲೆಯ ಲಿಂಗಸುಗೂರಿನ ಗುರುಭವನ ಸಂಭಾಣಗದಲ್ಲಿ ಇದೇ 29ರಂದು ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.  2020 ನೇ ಸಾಲಿನ ಪ್ರಶಸ್ತಿಗೆ  ಹತ್ತು …

Read More »

ನಟಿ ಕಂಗನಾ ರಣಾವತ್ ಅವರುಕೆಜಿಎಫ್ ಅಧೀರ ಸಂಜಯ್ ದತ್ ಅವರನ್ನು ಭೇಟಿ

ಹೈದರಾಬಾದ್: ಸದ್ಯ ಸುದ್ದಿಯಲ್ಲಿರುವ  ಬಾಲಿವುಡ್ ನಟಿ ಕಂಗನಾ ರಣಾವತ್ ಅವರು ಕೆಜಿಎಫ್ ಅಧೀರ ಸಂಜಯ್ ದತ್ ಅವರನ್ನು ಭೇಟಿಯಾಗಿದ್ದಾರೆ.ಹೌದು. ಇಂದು ಬೆಳಗ್ಗೆ ಭೇಟಿಯಾಗಿರುವ ಕಂಗನಾ ಸಂಜಯ್ ದತ್ ಅವರನ್ನು ನೋಡಿ ಅಚ್ಚರಿಯೊಂದಿಗೆ ಖುಷಿಯಾಗಿದ್ದಾರೆ. ಅಲ್ಲದೆ ಅವರ ಆರೋಗ್ಯ ಇನ್ನಷ್ಟು ವೃದ್ಧಿಸಲು ಪ್ರಾರ್ಥೊಸೋಣ ಎಂದು ತಿಳಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಕಂಗನಾ, ಹೈದರಾಬಾದ್‍ನ ಹೋಟೆಲಿನಲ್ಲಿ ತಂಗಿರುವ ಸುದ್ದಿ ತಿಳಿದು ನಾನು ಇಂದು ಬೆಳಗ್ಗೆ ಸಂಜು ಅವರನ್ನು ನೋಡಲು ತೆರಳಿದೆ. ಈ …

Read More »